Homeಮುಖಪುಟನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’...

ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ಕೋಮು ರಾಜಕಾರಣದ ಆಯಾಮವನ್ನು ‘ದಿ ವೈರ್‌‌’ ವರದಿ ಬಯಲಿಗೆಳೆದಿದೆ. (ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.)

- Advertisement -
- Advertisement -

(ಇದು ‘ಎಲ್ಲರ ಕನ್ನಡ’ದ ಪ್ರಾಯೋಗಿಕ ವರದಿಯಾಗಿದೆ)

ದ್ವೇಶವನ್ನು ವ್ಯವಸ್ತಿತವಾಗಿ ಹರಡಲೆಂದೇ ಬಿಜೆಪಿ ತನ್ನದೇ ಆದ ಅಪ್ಲಿಕೇಶನ್‌ ಚಾಲ್ತಿಗೆ ತಂದಿರುವ ಆತಂಕಕಾರಿ ವಿಶಯವನ್ನು ದಿ ವೈರ್‌ ಸುದ್ದಿ ಜಾಲತಾಣ ಹೊರಗೆಳೆದಿದೆ. ಆಯುಶ್ಮಾನ್‌ ಕೌಲ್‌ ಹಾಗೂ ದೇವೇಶ್‌ ಕುಮಾರ್‌ ಮಾಡಿರುವ ವಿಶೇಶ ವರದಿಯು ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿದೆ. ತನ್ನ ರಾಜಕೀಯ ವಿರೋದಿಗಳ ವಿರುದ್ದ ದ್ವೇಶ ಹರಡಲು, ಅವರಿಗೆ ಕಿರುಕುಳ ನೀಡಲು ಈ ಅಪ್ಲಿಕೇಶನ್‌ಗಳು ಬಳಕೆಯಾಗುತ್ತಿವೆ ಎಂಬ ವಿಚಾರವನ್ನು ‘ದಿ ವೈರ್‌’ ವರದಿ ಬಯಲಿಗೆಳೆದಿದೆ.

ಆರತಿ ಶರ್‍ಮಾ ಎಂಬವರು 2020ರ ಏಪ್ರಿಲ್‌ ತಿಂಗಳಲ್ಲಿ ಬಿಜೆಪಿ ಐಟಿ ಸೆಲ್‌ ವಿರುದ್ದ ಅಸಮಾದಾನ ಹೊರಹಾಕಿ ಸರಣಿ ಟ್ವೀಟ್ ಮಾಡಿದ್ದರು. ಅದರ ಜಾಡು ಹಿಡಿದು ಹೊರಟ ದಿ ವೈರ್‌‌, ಬಿಜೆಪಿ ಐಟಿ ಸೆಲ್‌ ಚಾಲ್ತಿಗೆ ತಂದಿದ್ದ ಟೆಕ್‌ ಪಾಗ್‌ (Tek Fog) ಎಂಬ ಅಪ್ಲಿಕೇಶನ್‌ ಮಾಡುತ್ತಿದ್ದ ಕಾರ್‍ಯವೈಕರಿಯನ್ನು ಹೊರಗೆಡವಿದೆ.

Tek Fog ಅಪ್ಲಿಕೇಶನ್ ಮೂಲಕ ಆಡಳಿತ ರೂಡ ಬಿಜೆಪಿಯ ವಿರೋದಿ ರಾಜಕೀಯ ಪಕ್ಷಗಳನ್ನು ಟೀಕಿಸಲು, ಸರ್ಕಾರವನ್ನು ವಿಮರ್‍ಶಿಸುವವರ ವಿರುದ್ದ ವ್ಯಕ್ತಿಗತ ಟ್ರಾಲ್ ಮಾಡಲು ಸ್ವಯಂಚಾಲಿತ ತಂತ್ರಗ್ನಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರತಿ ಶರ್‍ಮಾ ಅವರ ಸರಣಿ ಟ್ವೀಟ್‌ನಲ್ಲಿ ಹೇಳಲಾಗಿತ್ತು.

ಈ ಟ್ವಿಟರ್ ಕಾತೆಯನ್ನು ಸಂಪರ್ಕಿಸಿರುವ ದಿ ವೈರ್ ತಂಡಕ್ಕೆ ಅಪ್ಲಿಕೇಶನ್ ನಿರ್‍ವಹಿಸುವ ರಹಸ್ಯ ಕೆಲಸಗಳ ಕುರಿತು ಮಾಹಿತಿ ದೊರೆತಿದ್ದು, ಬಿಜೆಪಿ ಪರವಾಗಿರುವ ವಾಟ್ಸಪ್ ಗುಂಪುಗಳನ್ನು ರಚಿಸುವುದು, ಐಟಿ ಸೆಲ್ ಉದ್ಯೋಗಿಗಳಿಗೆ ಟ್ರೆಂಡಿಂಗ್‌ ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿಕೊಡುವುದು, ವಿರೋದಿಗಳನ್ನು ಗುರಿಮಾಡಿಸಲು ವಿಶಯಗಳನ್ನು ಕೊಡುವುದು ಮೊದಲಾದ ಹಲವು ಕೆಲಸವನ್ನು ಈ ಆಪ್ ಮೂಲಕ ನಿರ್‍ವಹಿಸಲಾಗುತ್ತಿತ್ತು ಎನ್ನಲಾಗಿದೆ.

“2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಸರ್‍ಕಾರಿ ಉದ್ಯೋಗ ನೀಡುವುದಾಗಿ ಆಮಿಶಗಳನ್ನು ನೀಡಲಾಗಿತ್ತು” ಎಂಬ ಆರೋಪವನ್ನೂ ಆ ಟ್ವಿಟ್ಟರ್ ಕಾತೆ ಮಾಡಿತ್ತು. ಹೀಗಾಗಿ ಅಸಮಾದಾನಗೊಂಡು ಕಾತೆಯಲ್ಲಿ ಬೇಸರ ವ್ಯಕ್ತಪಡಿಸಲಾಗಿತ್ತು.

ಎರಡು ವರ್‍ಶಗಳ ಕಾಲ ತನಿಕೆ ನಡೆಸಿರುವ ದಿ ವೈರ್‌ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. ಈ ಆಪ್‌ ಒಂದು ಪಕ್ಶದಪರ ಹೇಗೆ ಕೆಲಸ ಮಾಡಿದೆ ಎನ್ಬುದನ್ನು ವೈರ್‌ ವಿಶ್ಲೇಶಿಸಿದೆ.

1. ಟ್ವಿಟ್ಟರ್‌‌ನ ‘ಟ್ರೆಂಡಿಂಗ್‌’ ಫೇಸ್‌ಬುಕ್‌ನ ಟ್ರೆಂಡ್‌ ವಿಬಾಗವನ್ನು ಹೈಜಾಕ್‌ ಮಾಡುವುದು:

ಇದರ ಅರ್ತವೇನು?

ಅಪ್ಲಿಕೇಶನ್ ಆಪರೇಟರ್‌ಗಳೇ ವ್ಯಕ್ತಿಗಳು ಅತವಾ ಗುಂಪುಗಳ ಟ್ವೀಟ್‌ಗಳನ್ನು, ಪೋಸ್ಟ್‌ಗಳನ್ನು ‘ತಂತಾನೇ- ರೀಟ್ವೀಟ್’ ಅಥವಾ ‘ತಂತಾನೇ- ಹಂಚಿಕೊಳ್ಳಬಹುದು. ಆಪರೇಟರ್‌ಗಳು ವಾಸ್ತವದಲ್ಲಿ ಇರುವುದಕ್ಕಿಂತ ಅತಿರೇಕದ ನಿರೂಪಣೆ ಹಾಗೂ ರಾಜಕೀಯ ಅಬಿಯಾನವು ಕಾಣಿಸಿಕೊಳ್ಳುವಂತೆ ನೋಡಿಕೊಳ್ಳುವುದು.

ಸಮಸ್ಯೆಯೇನು?

ಯಾವುದು ನಿಯಂತ್ರಿಸಲ್ಪಡುತ್ತಿದೆ ಯಾವುದು ನಿಜವಾಗಿದೆ ಎಂಬುದನ್ನು ತಿಳಿಯದಂತಾಗುತ್ತೇವೆ. ಸದ್ಯದ ಟ್ರೆಂಡ್‌ಗಳನ್ನು ಬುಡಮೇಲು ಮಾಡಿ ಕೆಲವು ಗುಂಪುಗಳ, ಕೆಲವು ವ್ಯಕ್ತಿಗಳನ್ನು ಗುರಿಮಾಡಲಾಗುತ್ತದೆ. ಕಿರುಕುಳ ನೀಡಲಾಗುತ್ತದೆ.

ವೈರ್‌ಗೆ ಸಿಕ್ಕಿರುವ ಆಧಾರ

#CongressAgainstLabourers, #कर्मयोगी ಟ್ರೆಂಡಿಂಗ್‌ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗುವ ಮೊದಲು ಒದಗಿಸಲಾದ ಮೂಲಗಳು ಅನುಮಾನಾಸ್ಪದ, ಅನದಿಕೃತವಾಗಿದ್ದು ಆನ್‌ಲೈನ್‌ ವೇದಿಕೆಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ.

2. ನಿಶ್ಕ್ರಿಯ ವಾಟ್ಸ್‌ಆಪ್‌‌ ಖಾತೆಗಳ ಪಿಶಿಂಗ್‌ (ಪಾಸ್‌ವರ್ಡ್‌ಗಳು ಮತ್ತು ಕ್ರೆಡಿಟ್ ಕಾರ್ಡ್ ಸಂಕ್ಯೆಗಳಂತಹ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲು ವ್ಯಕ್ತಿಗಳನ್ನು ಪ್ರೇರೇಪಿಸುವ ಸಲುವಾಗಿ ಪ್ರತಿಶ್ಟಿತ ಕಂಪನಿಗಳಿಂದ ಇಮೇಲ್‌ಗಳನ್ನು ಕಳುಹಿಸುವ ಮೋಸದ ಅಬ್ಯಾಸ):

ಇದರ ಅರ್ತವೇನು?

ಆಪ್ ಆಪರೇಟರ್‌ಗಳು ಕಾಸಗಿ ವ್ಯಕ್ತಿಯ ‘ನಿಶ್ಕ್ರಿಯ’ ವಾಟ್ಸ್‌ಅಪ್‌‌ ಕಾತೆಗಳನ್ನು ಹೈಜಾಕ್ ಮಾಡಬಹುದು. ‘ಪದೇ ಪದೇ ಸಂಪರ್‍ಕಿಸುವ’ ಅತವಾ ‘ಎಲ್ಲಾ ಸಂಪರ್‍ಕಗಳಿಗೆ’ ಸಂದೇಶ ಕಳುಹಿಸಲು ಕಾಸಗಿ ವ್ಯಕ್ತಿಯ ಪೋನ್‌ ನಂಬರ್‌ಗಳನ್ನು ಬಳಸಬಹುದು.

ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಸಂಪರ್‍ಕ ಪಟ್ಟಿಯನ್ನು ಟೆಕ್ ಪಾಗ್ ಅಪ್ಲಿಕೇಶನ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮುಂದೆ ನಡೆಸಬಹುದಾದ ಕಿರುಕುಳ ಮತ್ತು ಟ್ರೋಲಿಂಗ್ ಅಬಿಯಾನಗಳಿಗೆ ಬಳಸಲಾಗುತ್ತದೆ.

ನಾನೇಕೆ ಚಿಂತೆಪಡಬೇಕು?

ಇದು ನಿಮ್ಮ ಕಾಸಗಿತನದ ಹಕ್ಕನ್ನು ಉಲ್ಲಂಗಿಸಿದೆ.

ವೈರ್‌ಗೆ ಲಭ್ಯವಾದ ಆಧಾರ

ವಾಟ್ಸ್‌ಅಪ್‌ನ ಶೋಶಣೆಯ ರಿಯಲ್‌ ಟೈಮ್‌ ತೋರಿಸಲು ಮೂಲವನ್ನು ಕೇಳಲಾಯಿತು. ಪ್ರಾತಿಕ್ಷಿಕೆಯ ಮೂಲಕ ಹೈಜಾಕ್‌ ಮಾಡುವ ರೀತಿಯನ್ನು ದೃಡಪಡಿಸಿಕೊಳ್ಳಲಾಗಿದೆ.

3. ಉದ್ದೇಶಿತ ಕಿರುಕುಳಕ್ಕಾಗಿ ಕಾಸಗಿ ನಾಗರಿಕರ ಡೇಟಾಬೇಸ್ ಬಳಸುವುದು

ಇದರ ಅರ್ತವೇನು?

ಕಾಸಗಿ ನಾಗರಿಕರ ಉದ್ಯೋಗ, ದರ್ಮ, ಬಾಷೆ, ವಯಸ್ಸು, ಲಿಂಗ, ರಾಜಕೀಯ ಒಲವು ಅಷ್ಟೇ ಅಲ್ಲದೆ ಚರ್ಮದ ಬಣ್ಣ, ಸ್ತನದ ಗಾತ್ರದಂತಹ ದೈಹಿಕ ಗುಣಲಕ್ಷಣಗಳಿಗೆ ಅನುಗುಣವಾಗಿಯೂ ಡೇಟ್‌‌ಬೇಸ್‌ ಅನ್ನು ವರ್ಗೀಕರಿಸಲಾಗಿದೆ.

ನಾನೇಕೆ ಚಿಂತಿಸಬೇಕು?

ವಿಶುವಲ್‌ ಪುರಾವೆ

ವೈರ್‌ ಹೇಗೆ ಕಚಿತಪಡಿಸಿಕೊಂಡಿದೆ?

ಅಪ್ಲಿಕೇಶನ್‌ನಲ್ಲಿ ತೋರಿಸಲಾದ ಉದ್ದೇಶಿತ ಗುಂಪುಗಳಲ್ಲಿ ಒಂದಾದ ‘ಮಹಿಳಾ ಪತ್ರಕರ್‍ತರಿಗೆ’ ಕಳುಹಿಸಲಾದ ಪ್ರತ್ಯುತ್ತರಗಳನ್ನು ಮೇಲ್ವಿಚಾರಣೆ ಮಾಡಲಾಗಿದೆ.

ಈ ರೀತಿಯಾಗಿ ಈ ವರದಿ ಪ್ರಕಟಗೊಂಡ ನಂತರ ದೊಡ್ಡ ಚರ್ಚೆಗಳು ಆರಂಬವಾಗಿವೆ. ಬಿಜೆಪಿಯು ಚುನಾವಣೆಯ ಹೊಸ್ತಿಲಲ್ಲಿ ಎಂತಹ ಹೀನಕೃತ್ಯಕ್ಕಿಳಿದಿದೆ ಎಂದು ಹಲವರು ವಿರೋದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಛತ್ತೀಸ್‌ಗಡ: ಗ್ರಾಮಸ್ಥರಿಂದ ಮುಸ್ಲಿಮರನ್ನು ಬಹಿಷ್ಕರಿಸುವ ಪ್ರತಿಜ್ಞೆ ಮಾಡಿಸಿದ ದುಷ್ಕರ್ಮಿಗಳು; ತನಿಖೆಗೆ ಪೊಲೀಸ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ‘ಎಲ್ಲರ ಎಂದರೆ ಮಹಾಪ್ರಾಣ ಅಕ್ಕರಗಳನ್ನು ಬಳಸದಿರುವುದೊಂದೇ ಅಲ್ಲ.
    ಆದಶ್ಟು ಕನ್ನಡ ಬೇರಿನ ಪದಗಳನ್ನು ಬಳಸುವುದು.
    ಮೇಲುನೋಟಕ್ಕೆ “ವಿಜಾತಿಯ” ಒತ್ತಕ್ಶರ” ಗಳಿಲ್ಲದ ಪದಗಳು.
    ಎತ್ತಗೆ:
    ದ್ವೇಶ…ಹಗೆತನ

    ಪ್ರತ್ಯುತ್ತರ..ಮರುಹೇಳಿಕೆ/ ಮರುಉತ್ತರ
    ಹೀನಕೃತ್ಯ..ಕೇಡುಕಿನ ಕೆಲಸ
    ….

  2. ಎಲ್ಲರ ಕನ್ನಡ ಎಂದರೆ, ಕೇವಲ ಮಹಾಪ್ರಾಣ ಗಳನ್ನು ಕಯ್ಬಿಡುವುದಲ್ಲ.
    ಹೆಚ್ಚು ಕನ್ನಡ ಬೇರಿನ ಪದಗಳ ಬಳಕೆ.
    ಎತ್ತುಗೆ,
    ಹೀನಕೃತ್ಯ..ಕೆಡುಕಿನ ಕೆಲಸ.
    ಕನ್ನಡಪದಗಳಲ್ಲಿ ವಿಜಾತಿಯ ಒತ್ತಕ಼್ಶರ ಇರುವುದಿಲ್ಲ.

  3. ದನ್ಯವಾದಗಳು
    “ಹ್ಯಾಶ್‌ಟ್ಯಾಗ್‌ಗಳನ್ನು ರಚಿಸಿಕೊಡುವುದು, ವಿರೋಧಿಗಳನ್ನು”….ಇಲ್ಲಿ ಒಂದೇ ಒಂದು ಮಹಾಪ್ರಾಣ ನುಸುಳಿದೆ. ದಯವಿಟ್ಟು ತಿದ್ದಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...