Homeಪುಸ್ತಕ ವಿಮರ್ಶೆ’ಸಾವಿತ್ರಿಬಾಯಿ ಫುಲೆ ಮತ್ತು ನಾನು’: ಶೋಷಿತ ಶಬರಿಗಳ ಕಥನಗಳಿಗೆ ಕನ್ನಡಿ

’ಸಾವಿತ್ರಿಬಾಯಿ ಫುಲೆ ಮತ್ತು ನಾನು’: ಶೋಷಿತ ಶಬರಿಗಳ ಕಥನಗಳಿಗೆ ಕನ್ನಡಿ

- Advertisement -
- Advertisement -

ಶೌಚಾಲಯದಂತಹ ಕನಿಷ್ಟ ಮೂಲಸೌಕರ್ಯಗಳೂ ಇಲ್ಲದ ಒಂದು ಹಳ್ಳಿಯಲ್ಲಿ ಬದುಕುತ್ತಿರುವ, ನಗರದ ಕಲ್ಪನೆಯೇ ಇಲ್ಲದ ತಳಸಮುದಾಯದ ಒಬ್ಬ ಹುಡುಗಿ ಶಬರಿ ತನ್ನ ಸಾಹಸದಿಂದ ನಗರದ ಒಂದು ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರವೇಶ ಪಡೆದು, ಆನಂತರ ಆ ಶಿಕ್ಷಣ ಸಂಸ್ಥೆಯಲ್ಲಿ ಎದುರಾಗುವ ಅವಮಾನ, ನಿರ್ಲಕ್ಷ್ಯ, ಏಕಾಂಗಿತನದಂತಹ ಸವಾಲುಗಳ ನಡುವೆ ಕುಗ್ಗಿ, ಮತ್ತೆ ಎದ್ದುನಿಂತು ಅಂದುಕೊಂಡಿದ್ದನ್ನು ಸಾಧಿಸಿ, ಒಬ್ಬ ಆಕ್ಟಿವಿಸ್ಟ್ ಆದ ಪ್ರಗತಿಯ ಹಾದಿಯನ್ನು ’ಸಾವಿತ್ರಿಬಾಯಿ ಫುಲೆ ಮತ್ತು ನಾನು’ ಎಂಬ ಕಥನ (ಕಿರು ಕಾದಂಬರಿ) ನಿರೂಪಿಸುತ್ತದೆ.

ಶಬರಿಯ ಈ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಪಿತೃಪ್ರಧಾನ ವ್ಯವಸ್ಥೆಯಲ್ಲಿ ಕೆಳಜಾತಿಯ ಹೆಣ್ಣು, ಜಾತಿಯ ಕಾರಣಕ್ಕೆ ಮಾತ್ರವಲ್ಲದೆ ಹೆಣ್ಣೆಂಬ ಕಾರಣವೂ ಸೇರಿ ಇನ್ನೂ ಹೆಚ್ಚು ತುಳಿಯಲ್ಪಟ್ಟವಳಾಗಿದ್ದಾಳೆ. ಈ ವ್ಯವಸ್ಥೆಯು ’ಮಾದರಿ ಹೆಣ್ಣು’ ಎಂದರೆ ಹೀಗೇ ಎಂದು ಶತಮಾನಗಳಿಂದ ಬಿಂಬಿಸಿದೆ. ಈ ಗುಂಪಿಗೆ ಸೇರಲು ಸೋ ಕಾಲ್ಡ್ ಮಾನದಂಡಗಳೆನಿಸಿಕೊಂಡಿರುವ ಮೇಲ್ಜಾತಿ, ಬಿಳಿಬಣ್ಣ, ಶುದ್ಧ ಭಾಷೆ, ಬಣ್ಣಬಣ್ಣದ ಬಟ್ಟೆ ಈ ಯಾವುವೂ ಶಬರಿಯ ಬಳಿಯಿಲ್ಲ. ತಳಜಾತಿಯಿಂದ ಬಂದ ಅವಳು ನಗರವನ್ನೇ ನೋಡಿರದ, ಕಪ್ಪು ಬಣ್ಣದ, ಜಿಡ್ಡು ಮುಖದ, ಇಂಗ್ಲಿಷ್ ಬಾರದ, ಮೀಸಲಾತಿಯಿಂದ ಮುಂದೆಬಂದ ಹುಡುಗಿ. ಅವಳನ್ನು ಪ್ರತ್ಯೇಕಿಸಲು ಈ ವ್ಯವಸ್ಥೆಗೆ ಇದಕ್ಕಿಂತ ಹೆಚ್ಚಿನ ಕಾರಣಗಳು ಬೇಕೇ? ಧರ್ಮ, ಜಾತಿ, ಲಿಂಗ, ಭಾಷೆ, ಬಣ್ಣ, ಆಹಾರ, ಉಡುಗೆ ಇತ್ಯಾದಿಯಾಗಿ ಯಾವುದೋ ಒಂದು ಭಿನ್ನತೆಯ ಕಾರಣಕ್ಕೆ ಎಲ್ಲರಿಂದಲೂ, ಎಲ್ಲಾ ಕಡೆಯೂ ಹೊರಗಿಡುವಿಕೆ ಕ್ರೌರ್ಯದ ಪರಮಾವಧಿ. ಈ ಕ್ರೌರ್ಯ ಅಂತಿಂತದ್ದಲ್ಲಾ. ಇದು ಒಂದು ವ್ಯಕ್ತಿತ್ವವನ್ನೇ ಕೊಂದುಬಿಡುತ್ತದೆ. ಶಬರಿ ಈ ಪ್ರತ್ಯೇಕತೆಯಿಂದ ಖಿನ್ನತೆಗೊಳಗಾಗಿ ಇನ್ನು ಇಲ್ಲಿ ಬದುಕುಳಿಯುವುದು ಅಸಾಧ್ಯವೆಂದು ನಿರ್ಧರಿಸಿ ಆತ್ಮಹತ್ಯೆಯ ಬಗ್ಗೆ ಯೋಚಿಸುವಾಗ ಅವಳಿಗೆ ಸಿಕ್ಕ ಸಾವಿತ್ರಿಬಾಯಿ ಫುಲೆಯವರ ಡೈರಿಯು ಬದುಕಲು ಸ್ಫೂರ್ತಿ ತುಂಬುತ್ತದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದು ಅಪರಾಧವಾಗಿದ್ದ ಕಾಲದಲ್ಲಿ, ಜ್ಯೋತಿಬಾ ಫುಲೆಯವರ ಬೆಂಬಲದಿಂದ ಶಿಕ್ಷಣ ಪಡೆದು, ಇಡೀ ಸಮಾಜದ, ಕುಟುಂಬದ ಅಡಚಣೆಗಳ ನಡುವೆಯೂ ಭಾರತದಲ್ಲೇ ಮೊದಲಬಾರಿಗೆ ಹೆಣ್ಣು ಮಕ್ಕಳಿಗೆ, ದಲಿತರಿಗೆ, ದಮನಿತರಿಗೆ ಶಾಲೆಯನ್ನು ತೆರೆದ ಸಾವಿತ್ರಿಬಾಯಿ ಫುಲೆಯವರ ಸಾಧನೆ ಶಬರಿಗೆ ತಾನು ಮಾಡಬೇಕಿರುವ ಕರ್ತವ್ಯವನ್ನು, ತನಗಿರುವ ಜವಾಬ್ದಾರಿಯನ್ನು ಎಚ್ಚರಿಸುತ್ತದೆ. ಇದರಿಂದ ಶಬರಿಯ ಆತ್ಮಸ್ಥೈರ್ಯ ಹೆಚ್ಚುತ್ತದೆ. ತನ್ನ ಗುರಿಯು ಸ್ಪಷ್ಟವಾಗುತ್ತದೆ. ಆದರೆ, ಅದನ್ನು ಸಾಧಿಸಲು ಹೊರಟ ಶಬರಿ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಶತಮಾನಗಳಿಂದ ತಳಸಮುದಾಯದ ಜನರನ್ನು ಗುಲಾಮರನ್ನಾಗಿ ದುಡಿಸಿಕೊಂಡ ಈ ವ್ಯವಸ್ಥೆಗೆ ಕೆಳಜಾತಿಯ, ಅದರಲ್ಲೂ ಹೆಣ್ಣೊಬ್ಬಳ ಆತ್ಮವಿಶ್ವಾಸ ನೆಮ್ಮದಿ ಕೆಡಿಸದಿರಲು ಸಾಧ್ಯವೇ? ಇಲ್ಲಿ ಹೆಣ್ಣೊಬ್ಬಳನ್ನು ತನ್ನ ಸ್ಥಾನದಿಂದ ಮೇಲೇಳದಂತೆ ತಡೆಯಲು ಬೇಕಾದ ಎಲ್ಲಾ ನೀಚ ಕ್ರೌರ್ಯಗಳನ್ನೂ ಎಸಗಲಾಗುತ್ತದೆ ಎಂಬುದಕ್ಕೆ ಅವಳನ್ನು ಕಾರಿನಲ್ಲಿ ಅಪಹರಿಸಿ ಕಿರುಕುಳ ಕೊಟ್ಟು ಬೆದರಿಸಿದ ಘಟನೆ ಒಂದು ದುರಂತ ಉದಾಹರಣೆಯಾಗಿ, ಸಾಂಕೇತಿಕವಾಗಿ ಚಿತ್ರಿಸಲಾಗಿದೆ.


ಇಷ್ಟೆಲ್ಲಾ ಅಡಚಣೆಗಳ ಮಧ್ಯೆಯೂ ಶಬರಿ ಕುಸಿಯದೆ, ತನ್ನ ಔಪಚಾರಿಕ ಶಿಕ್ಷಣದ ಪಡೆಯುವುದರ ಜೊತೆಗೆ, ಶೋಷಿಸುವವರ ಮಧ್ಯೆ ಬದುಕಿ ಜಯಿಸುವ ಸಾಮರ್ಥ್ಯವನ್ನು ಕಲಿತುಕೊಂಡು ತನ್ನ ಗುರಿ ಮುಟ್ಟುತ್ತಾಳೆ. ಅಂತ್ಯಗೊಳಿಸಬೇಕೆಂದುಕೊಂಡಿದ್ದ ಬದುಕನ್ನು ಅರ್ಥಪೂರ್ಣವಾಗಿ ಜೀವಿಸಿ ತನ್ನ ಹೋರಾಟದಲ್ಲಿ ಗೆದ್ದ ಅವಳ ಹೋರಾಟದ ಹಾದಿ ನಮ್ಮಂತಹ ಸಾವಿರಾರು ಶಬರಿಗಳಿಗೆ ಸ್ಫೂರ್ತಿ.

ಮೀಸಲಾತಿ ಮತ್ತು ಅದನ್ನು ಪಡೆಯುತ್ತಿರುವವರ ಕುರಿತು ಮೇಲ್ಜಾತಿಗಳಲ್ಲಿ ಅಸಹನೆ, ಕೇಡಿನ ಮನೋಭಾವ ಹಾಗೂ ತಾತ್ಸಾರ ಇಂದಿಗೂ ಪ್ರಸ್ತುತವಾಗಿದೆ ಹಾಗು ಬೆಳೆಯುತ್ತಲೇ ಇದೆ. ಮೀಸಲಾತಿಯ ಬಗೆಗಿನ ಇಂತಹ ಕುತ್ಸಿತ ನೋಟಗಳಿಂದಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾದಂಬರಿಯ ಶಬರಿಯಂತೆಯೇ ನಾವೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ತಪ್ಪದೇ ಶೋಷಣೆಯನ್ನು ಅನುಭವಿಸಿರುವುದು ವಾಸ್ತವ. ನಾವ್ಯಾರೂ ಈ ಅವಮಾನದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಮೀಸಲಾತಿಯ ನಿಜವಾದ ಅರ್ಥ ಎಲ್ಲರಿಗೂ ತಿಳಿಯಬೇಕಿದೆ. ನಿಮಗೆ ಮೀಸಲಾತಿಯನ್ನು ಪಡೆಯುತ್ತಿರುವವರ ಬಗ್ಗೆ ಅಸೂಯೆ, ದ್ವೇಷ ಇದ್ದರೆ ಅಥವಾ ಮೀಸಲಾತಿಯಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ ಎಂಬ ನಿಲುವಿದ್ದರೆ ಅಥವಾ ಈಗ ಜಾತಿಯೆಂಬುದೇ ಇಲ್ಲ, ಮೀಸಲಾತಿಯನ್ನು ಬಡತನದ ಆಧಾರದ ಮೇಲೆ ನೀಡಬೇಕು ಎಂಬೆಲ್ಲಾ ತಕರಾರುಗಳಿದ್ದರೆ ಈ ಪುಸ್ತಕ ನಿಮ್ಮೆಲ್ಲಾ ತಕರಾರುಗಳಿಗೆ ಸ್ಪಷ್ಟನೆ ಕೊಡುತ್ತದೆ. ಈ ಕಥನವು ಮೇಲ್ಜಾತಿಯಲ್ಲಿ ಹುಟ್ಟಿದವರು ತಮ್ಮ ಜಾತಿಯ ಕಾರಣಕ್ಕೆ ಪಡೆಯುವ ಎಲ್ಲಾ ರೀತಿಯ ಸಾಮಾಜಿಕ ಬಂಡವಾಳಗಳನ್ನು ಮನಗಾಣಿಸಿ, ಮೀಸಲಾತಿ ಯಾಕೆ ಬೇಕು ಎಂಬುದನ್ನೂ ಅರ್ಥ ಮಾಡಿಸುತ್ತದೆ. ಜೊತೆಗೆ, ಶಿಕ್ಷಿತರಾದ ನಮ್ಮ ಜವಾಬ್ದಾರಿಗಳೇನು, ನಾವೇಗೆ ಸಂಘಟಿತರಾಗಬೇಕು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಿಂದ, ಹಳ್ಳಿಗಳಿಂದ ನಗರಕ್ಕೆ ಬರುವ ದಲಿತ, ದಮನಿತ ವಿದ್ಯಾರ್ಥಿನಿ/ವಿದ್ಯಾರ್ಥಿಯು ನಗರದ ಉಳ್ಳವರ ಮಧ್ಯೆ ಏಕಾಂಗಿಯಾಗಿ ಪ್ರತ್ಯೇಕಗೊಳ್ಳುವುದನ್ನು ತಡೆಯಲು ನಾವು ಮಾಡಬೇಕಾದ ಕರ್ತವ್ಯಗಳೇನು ಎಂಬುದನ್ನೂ ಹೇಳುತ್ತದೆ.

ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ನೆರವಾಗುವ ಈ ಪುಸ್ತಕವನ್ನು ಕೊಟ್ಟ ಸಂಗೀತಾ ಮುಳೆಯವರಿಗೆ ಹಾಗೂ ಅದನ್ನು ಕನ್ನಡಕ್ಕೆ ತಂದಿರುವ ಕೆಸ್ತಾರ ವಿ ಮೌರ್ಯ ಮತ್ತು ವಿಕಾಸ್ ಆರ್ ಮೌರ್ಯರವರಿಗೆ
ಅಭಿನಂದನೆಗಳು.

ಕಾವ್ಯ .ಸಿ

ಕಾವ್ಯ .ಸಿ
ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕಾವ್ಯ ಸದ್ಯಕ್ಕೆ ಬೆಂಗಳೂರು ನಿವಾಸಿ. ದಲಿತ-ಬಹುಜನ ಚಳವಳಿ ಮತ್ತು ಸ್ತ್ರೀವಾದಿ ಚಿಂತನೆಗಳ ಬಗ್ಗೆ ಆಸಕ್ತಿ ಹೊಂದಿದ್ದಾರೆ.


ಇದನ್ನೂ ಓದಿ: ನೊಂದವರ ಘನತೆಗೆ ಮಾರ್ಗ ತೋರಿದ ಸಾವಿತ್ರಿಬಾಯಿ ಫುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದಗಳು ಮೇಡಂ ನಿಮ್ಮ ಲೇಖನ ತುಂಬಾ ಚೆನ್ನಾಗಿದೆ.
    ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.
    ಜೈ ಸಾವಿತ್ರಿಬಾಯಿ ಫುಲೆ 🌹
    ಜೈ ಭೀಮ್ 🙏

    💯ಮಾರುತಿ ಕೆಳಗೇರಿ 🙏

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...