Homeಪುಸ್ತಕ ವಿಮರ್ಶೆ’ಸಾವಿತ್ರಿಬಾಯಿ ಫುಲೆ ಮತ್ತು ನಾನು’: ಶೋಷಿತ ಶಬರಿಗಳ ಕಥನಗಳಿಗೆ ಕನ್ನಡಿ

’ಸಾವಿತ್ರಿಬಾಯಿ ಫುಲೆ ಮತ್ತು ನಾನು’: ಶೋಷಿತ ಶಬರಿಗಳ ಕಥನಗಳಿಗೆ ಕನ್ನಡಿ

- Advertisement -
- Advertisement -

ಶೌಚಾಲಯದಂತಹ ಕನಿಷ್ಟ ಮೂಲಸೌಕರ್ಯಗಳೂ ಇಲ್ಲದ ಒಂದು ಹಳ್ಳಿಯಲ್ಲಿ ಬದುಕುತ್ತಿರುವ, ನಗರದ ಕಲ್ಪನೆಯೇ ಇಲ್ಲದ ತಳಸಮುದಾಯದ ಒಬ್ಬ ಹುಡುಗಿ ಶಬರಿ ತನ್ನ ಸಾಹಸದಿಂದ ನಗರದ ಒಂದು ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರವೇಶ ಪಡೆದು, ಆನಂತರ ಆ ಶಿಕ್ಷಣ ಸಂಸ್ಥೆಯಲ್ಲಿ ಎದುರಾಗುವ ಅವಮಾನ, ನಿರ್ಲಕ್ಷ್ಯ, ಏಕಾಂಗಿತನದಂತಹ ಸವಾಲುಗಳ ನಡುವೆ ಕುಗ್ಗಿ, ಮತ್ತೆ ಎದ್ದುನಿಂತು ಅಂದುಕೊಂಡಿದ್ದನ್ನು ಸಾಧಿಸಿ, ಒಬ್ಬ ಆಕ್ಟಿವಿಸ್ಟ್ ಆದ ಪ್ರಗತಿಯ ಹಾದಿಯನ್ನು ’ಸಾವಿತ್ರಿಬಾಯಿ ಫುಲೆ ಮತ್ತು ನಾನು’ ಎಂಬ ಕಥನ (ಕಿರು ಕಾದಂಬರಿ) ನಿರೂಪಿಸುತ್ತದೆ.

ಶಬರಿಯ ಈ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ. ಪಿತೃಪ್ರಧಾನ ವ್ಯವಸ್ಥೆಯಲ್ಲಿ ಕೆಳಜಾತಿಯ ಹೆಣ್ಣು, ಜಾತಿಯ ಕಾರಣಕ್ಕೆ ಮಾತ್ರವಲ್ಲದೆ ಹೆಣ್ಣೆಂಬ ಕಾರಣವೂ ಸೇರಿ ಇನ್ನೂ ಹೆಚ್ಚು ತುಳಿಯಲ್ಪಟ್ಟವಳಾಗಿದ್ದಾಳೆ. ಈ ವ್ಯವಸ್ಥೆಯು ’ಮಾದರಿ ಹೆಣ್ಣು’ ಎಂದರೆ ಹೀಗೇ ಎಂದು ಶತಮಾನಗಳಿಂದ ಬಿಂಬಿಸಿದೆ. ಈ ಗುಂಪಿಗೆ ಸೇರಲು ಸೋ ಕಾಲ್ಡ್ ಮಾನದಂಡಗಳೆನಿಸಿಕೊಂಡಿರುವ ಮೇಲ್ಜಾತಿ, ಬಿಳಿಬಣ್ಣ, ಶುದ್ಧ ಭಾಷೆ, ಬಣ್ಣಬಣ್ಣದ ಬಟ್ಟೆ ಈ ಯಾವುವೂ ಶಬರಿಯ ಬಳಿಯಿಲ್ಲ. ತಳಜಾತಿಯಿಂದ ಬಂದ ಅವಳು ನಗರವನ್ನೇ ನೋಡಿರದ, ಕಪ್ಪು ಬಣ್ಣದ, ಜಿಡ್ಡು ಮುಖದ, ಇಂಗ್ಲಿಷ್ ಬಾರದ, ಮೀಸಲಾತಿಯಿಂದ ಮುಂದೆಬಂದ ಹುಡುಗಿ. ಅವಳನ್ನು ಪ್ರತ್ಯೇಕಿಸಲು ಈ ವ್ಯವಸ್ಥೆಗೆ ಇದಕ್ಕಿಂತ ಹೆಚ್ಚಿನ ಕಾರಣಗಳು ಬೇಕೇ? ಧರ್ಮ, ಜಾತಿ, ಲಿಂಗ, ಭಾಷೆ, ಬಣ್ಣ, ಆಹಾರ, ಉಡುಗೆ ಇತ್ಯಾದಿಯಾಗಿ ಯಾವುದೋ ಒಂದು ಭಿನ್ನತೆಯ ಕಾರಣಕ್ಕೆ ಎಲ್ಲರಿಂದಲೂ, ಎಲ್ಲಾ ಕಡೆಯೂ ಹೊರಗಿಡುವಿಕೆ ಕ್ರೌರ್ಯದ ಪರಮಾವಧಿ. ಈ ಕ್ರೌರ್ಯ ಅಂತಿಂತದ್ದಲ್ಲಾ. ಇದು ಒಂದು ವ್ಯಕ್ತಿತ್ವವನ್ನೇ ಕೊಂದುಬಿಡುತ್ತದೆ. ಶಬರಿ ಈ ಪ್ರತ್ಯೇಕತೆಯಿಂದ ಖಿನ್ನತೆಗೊಳಗಾಗಿ ಇನ್ನು ಇಲ್ಲಿ ಬದುಕುಳಿಯುವುದು ಅಸಾಧ್ಯವೆಂದು ನಿರ್ಧರಿಸಿ ಆತ್ಮಹತ್ಯೆಯ ಬಗ್ಗೆ ಯೋಚಿಸುವಾಗ ಅವಳಿಗೆ ಸಿಕ್ಕ ಸಾವಿತ್ರಿಬಾಯಿ ಫುಲೆಯವರ ಡೈರಿಯು ಬದುಕಲು ಸ್ಫೂರ್ತಿ ತುಂಬುತ್ತದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದು ಅಪರಾಧವಾಗಿದ್ದ ಕಾಲದಲ್ಲಿ, ಜ್ಯೋತಿಬಾ ಫುಲೆಯವರ ಬೆಂಬಲದಿಂದ ಶಿಕ್ಷಣ ಪಡೆದು, ಇಡೀ ಸಮಾಜದ, ಕುಟುಂಬದ ಅಡಚಣೆಗಳ ನಡುವೆಯೂ ಭಾರತದಲ್ಲೇ ಮೊದಲಬಾರಿಗೆ ಹೆಣ್ಣು ಮಕ್ಕಳಿಗೆ, ದಲಿತರಿಗೆ, ದಮನಿತರಿಗೆ ಶಾಲೆಯನ್ನು ತೆರೆದ ಸಾವಿತ್ರಿಬಾಯಿ ಫುಲೆಯವರ ಸಾಧನೆ ಶಬರಿಗೆ ತಾನು ಮಾಡಬೇಕಿರುವ ಕರ್ತವ್ಯವನ್ನು, ತನಗಿರುವ ಜವಾಬ್ದಾರಿಯನ್ನು ಎಚ್ಚರಿಸುತ್ತದೆ. ಇದರಿಂದ ಶಬರಿಯ ಆತ್ಮಸ್ಥೈರ್ಯ ಹೆಚ್ಚುತ್ತದೆ. ತನ್ನ ಗುರಿಯು ಸ್ಪಷ್ಟವಾಗುತ್ತದೆ. ಆದರೆ, ಅದನ್ನು ಸಾಧಿಸಲು ಹೊರಟ ಶಬರಿ ಬೆದರಿಕೆಗಳನ್ನು ಎದುರಿಸಬೇಕಾಗುತ್ತದೆ. ಶತಮಾನಗಳಿಂದ ತಳಸಮುದಾಯದ ಜನರನ್ನು ಗುಲಾಮರನ್ನಾಗಿ ದುಡಿಸಿಕೊಂಡ ಈ ವ್ಯವಸ್ಥೆಗೆ ಕೆಳಜಾತಿಯ, ಅದರಲ್ಲೂ ಹೆಣ್ಣೊಬ್ಬಳ ಆತ್ಮವಿಶ್ವಾಸ ನೆಮ್ಮದಿ ಕೆಡಿಸದಿರಲು ಸಾಧ್ಯವೇ? ಇಲ್ಲಿ ಹೆಣ್ಣೊಬ್ಬಳನ್ನು ತನ್ನ ಸ್ಥಾನದಿಂದ ಮೇಲೇಳದಂತೆ ತಡೆಯಲು ಬೇಕಾದ ಎಲ್ಲಾ ನೀಚ ಕ್ರೌರ್ಯಗಳನ್ನೂ ಎಸಗಲಾಗುತ್ತದೆ ಎಂಬುದಕ್ಕೆ ಅವಳನ್ನು ಕಾರಿನಲ್ಲಿ ಅಪಹರಿಸಿ ಕಿರುಕುಳ ಕೊಟ್ಟು ಬೆದರಿಸಿದ ಘಟನೆ ಒಂದು ದುರಂತ ಉದಾಹರಣೆಯಾಗಿ, ಸಾಂಕೇತಿಕವಾಗಿ ಚಿತ್ರಿಸಲಾಗಿದೆ.


ಇಷ್ಟೆಲ್ಲಾ ಅಡಚಣೆಗಳ ಮಧ್ಯೆಯೂ ಶಬರಿ ಕುಸಿಯದೆ, ತನ್ನ ಔಪಚಾರಿಕ ಶಿಕ್ಷಣದ ಪಡೆಯುವುದರ ಜೊತೆಗೆ, ಶೋಷಿಸುವವರ ಮಧ್ಯೆ ಬದುಕಿ ಜಯಿಸುವ ಸಾಮರ್ಥ್ಯವನ್ನು ಕಲಿತುಕೊಂಡು ತನ್ನ ಗುರಿ ಮುಟ್ಟುತ್ತಾಳೆ. ಅಂತ್ಯಗೊಳಿಸಬೇಕೆಂದುಕೊಂಡಿದ್ದ ಬದುಕನ್ನು ಅರ್ಥಪೂರ್ಣವಾಗಿ ಜೀವಿಸಿ ತನ್ನ ಹೋರಾಟದಲ್ಲಿ ಗೆದ್ದ ಅವಳ ಹೋರಾಟದ ಹಾದಿ ನಮ್ಮಂತಹ ಸಾವಿರಾರು ಶಬರಿಗಳಿಗೆ ಸ್ಫೂರ್ತಿ.

ಮೀಸಲಾತಿ ಮತ್ತು ಅದನ್ನು ಪಡೆಯುತ್ತಿರುವವರ ಕುರಿತು ಮೇಲ್ಜಾತಿಗಳಲ್ಲಿ ಅಸಹನೆ, ಕೇಡಿನ ಮನೋಭಾವ ಹಾಗೂ ತಾತ್ಸಾರ ಇಂದಿಗೂ ಪ್ರಸ್ತುತವಾಗಿದೆ ಹಾಗು ಬೆಳೆಯುತ್ತಲೇ ಇದೆ. ಮೀಸಲಾತಿಯ ಬಗೆಗಿನ ಇಂತಹ ಕುತ್ಸಿತ ನೋಟಗಳಿಂದಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಕಾದಂಬರಿಯ ಶಬರಿಯಂತೆಯೇ ನಾವೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ತಪ್ಪದೇ ಶೋಷಣೆಯನ್ನು ಅನುಭವಿಸಿರುವುದು ವಾಸ್ತವ. ನಾವ್ಯಾರೂ ಈ ಅವಮಾನದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಮೀಸಲಾತಿಯ ನಿಜವಾದ ಅರ್ಥ ಎಲ್ಲರಿಗೂ ತಿಳಿಯಬೇಕಿದೆ. ನಿಮಗೆ ಮೀಸಲಾತಿಯನ್ನು ಪಡೆಯುತ್ತಿರುವವರ ಬಗ್ಗೆ ಅಸೂಯೆ, ದ್ವೇಷ ಇದ್ದರೆ ಅಥವಾ ಮೀಸಲಾತಿಯಿಂದಾಗಿ ಪ್ರತಿಭಾವಂತರಿಗೆ ಅನ್ಯಾಯವಾಗುತ್ತಿದೆ ಎಂಬ ನಿಲುವಿದ್ದರೆ ಅಥವಾ ಈಗ ಜಾತಿಯೆಂಬುದೇ ಇಲ್ಲ, ಮೀಸಲಾತಿಯನ್ನು ಬಡತನದ ಆಧಾರದ ಮೇಲೆ ನೀಡಬೇಕು ಎಂಬೆಲ್ಲಾ ತಕರಾರುಗಳಿದ್ದರೆ ಈ ಪುಸ್ತಕ ನಿಮ್ಮೆಲ್ಲಾ ತಕರಾರುಗಳಿಗೆ ಸ್ಪಷ್ಟನೆ ಕೊಡುತ್ತದೆ. ಈ ಕಥನವು ಮೇಲ್ಜಾತಿಯಲ್ಲಿ ಹುಟ್ಟಿದವರು ತಮ್ಮ ಜಾತಿಯ ಕಾರಣಕ್ಕೆ ಪಡೆಯುವ ಎಲ್ಲಾ ರೀತಿಯ ಸಾಮಾಜಿಕ ಬಂಡವಾಳಗಳನ್ನು ಮನಗಾಣಿಸಿ, ಮೀಸಲಾತಿ ಯಾಕೆ ಬೇಕು ಎಂಬುದನ್ನೂ ಅರ್ಥ ಮಾಡಿಸುತ್ತದೆ. ಜೊತೆಗೆ, ಶಿಕ್ಷಿತರಾದ ನಮ್ಮ ಜವಾಬ್ದಾರಿಗಳೇನು, ನಾವೇಗೆ ಸಂಘಟಿತರಾಗಬೇಕು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಿಂದ, ಹಳ್ಳಿಗಳಿಂದ ನಗರಕ್ಕೆ ಬರುವ ದಲಿತ, ದಮನಿತ ವಿದ್ಯಾರ್ಥಿನಿ/ವಿದ್ಯಾರ್ಥಿಯು ನಗರದ ಉಳ್ಳವರ ಮಧ್ಯೆ ಏಕಾಂಗಿಯಾಗಿ ಪ್ರತ್ಯೇಕಗೊಳ್ಳುವುದನ್ನು ತಡೆಯಲು ನಾವು ಮಾಡಬೇಕಾದ ಕರ್ತವ್ಯಗಳೇನು ಎಂಬುದನ್ನೂ ಹೇಳುತ್ತದೆ.

ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ನೆರವಾಗುವ ಈ ಪುಸ್ತಕವನ್ನು ಕೊಟ್ಟ ಸಂಗೀತಾ ಮುಳೆಯವರಿಗೆ ಹಾಗೂ ಅದನ್ನು ಕನ್ನಡಕ್ಕೆ ತಂದಿರುವ ಕೆಸ್ತಾರ ವಿ ಮೌರ್ಯ ಮತ್ತು ವಿಕಾಸ್ ಆರ್ ಮೌರ್ಯರವರಿಗೆ
ಅಭಿನಂದನೆಗಳು.

ಕಾವ್ಯ .ಸಿ

ಕಾವ್ಯ .ಸಿ
ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕಾವ್ಯ ಸದ್ಯಕ್ಕೆ ಬೆಂಗಳೂರು ನಿವಾಸಿ. ದಲಿತ-ಬಹುಜನ ಚಳವಳಿ ಮತ್ತು ಸ್ತ್ರೀವಾದಿ ಚಿಂತನೆಗಳ ಬಗ್ಗೆ ಆಸಕ್ತಿ ಹೊಂದಿದ್ದಾರೆ.


ಇದನ್ನೂ ಓದಿ: ನೊಂದವರ ಘನತೆಗೆ ಮಾರ್ಗ ತೋರಿದ ಸಾವಿತ್ರಿಬಾಯಿ ಫುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಧನ್ಯವಾದಗಳು ಮೇಡಂ ನಿಮ್ಮ ಲೇಖನ ತುಂಬಾ ಚೆನ್ನಾಗಿದೆ.
    ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.
    ಜೈ ಸಾವಿತ್ರಿಬಾಯಿ ಫುಲೆ 🌹
    ಜೈ ಭೀಮ್ 🙏

    💯ಮಾರುತಿ ಕೆಳಗೇರಿ 🙏

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...