Homeಮುಖಪುಟಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌...

ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

- Advertisement -
- Advertisement -

ಬುಧವಾರದಂದು ಪ್ರಧಾನಿ ಮೋದಿ ಪಂಜಾಬ್‌ಗೆ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಉಂಟಾದ ಭದ್ರತಾ ಲೋಪ ಪ್ರಕರಣದ ಹಿನ್ನಲೆಯಲ್ಲಿ, ಕನ್ನಡದ ಸುದ್ದಿ ವಾಹಿನಿ ‘ನ್ಯೂಸ್‌ ಫಸ್ಟ್‌ ಕನ್ನಡ’ ಸುದ್ದಿಯೊಂದನ್ನು ಮಾಡಿದೆ. ಒಂದು ವರ್ಷ ಹಿಂದೆಯೆ ಪ್ರಧಾನಿಯ ಕೊಲೆಗೆ ಸಂಚು ನಡೆದಿತ್ತೆ? ಎಂದು ಪ್ರಶ್ನಿಸಿ ಊಹಾಪೋಹಗಳ ಮೇಲೆ ವರದಿಯೊಂದನ್ನು ಶುಕ್ರವಾರ ಬಿತ್ತರಿಸಿದೆ.

‘ನ್ಯೂಸ್‌ ಫಸ್ಟ್‌ ಕನ್ನಡ’ ತನ್ನ ಸುದ್ದಿಯನ್ನು ಒಂದೂವರೆ ವರ್ಷದ ಹಳೆಯ ಅನಿಮೇಷನ್‌ ವಿಡಿಯೊ ಹಾಡಿನ ಆಧಾರದ ಮೇಲೆ ಮಾಡಿದೆ ಎಂಬುವುದು ವಿಶೇಷವಾಗಿದೆ. ಮಾಧ್ಯಮವು ತಾನು ಮಾಡಿದ ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: 100 ಕ್ಕೂ ಹೆಚ್ಚು ಅಪರಿಚಿತರ ವಿರುದ್ಧ ಎಫ್‌ಐಆರ್

ಒಟ್ಟು 13:19 ಸೆಕೆಂಡ್‌ ಈ ವಿಡಿಯೊ ಸುದ್ದಿ ಇದ್ದು, ಆಂಕರ್‌ಗಳು ‘ಪ್ರಧಾನಿ ಮೇಲೆ ದಾಳಿಗೆ 2020 ರಲ್ಲೇ ಸಂಚು ನಡೆದಿತ್ತಾ?’ ಎಂದು ಪ್ರಶ್ನಿಸುತ್ತಲೇ ಪ್ರಾರಂಭಿಸುತ್ತಾರೆ. ನಂತರ ‘ಮೋದಿ ಮೇಲೆ ದಾಳಿ ಸಂಚಿನ ಸ್ಪೋಟಕ ವಿಡಿಯೊ ಬಹಿರಂಗ’, ‘ಫಿರೋಜ್‌ಪುರ ಬ್ರಿಡ್ಜ್‌ ಮೇಲೆ ದಾಳಿಗೆ ಮಾಡಿದ್ರಾ ಪ್ಲಾನ್?’, ‘ದಾಳಿಗೆ ರೂಪಿಸಿದ್ದ ಅನಿಮೇಷನ್‌ ವಿಡಿಯೊ’, ‘1 ನಿಮಿಷ 7 ಸೆಕೆಂಡ್‌‌ನ ಅನಿಮೇಷನ್‌ ವಿಡಿಯೊ’, ‘2020 ರ ಡಿಸೆಂಬರ್‌ನಲ್ಲಿ ವಿಡಿಯೊ ಬಿಡುಗಡೆ’, ‘ಘಟನೆ ನಡೆದ ಫಿರೋಝ್‌ಪುರದಿಂದಲೇ ದೃಶ್ಯ ತಯಾರಾಗಿದೆ’, ‘ಮೋದಿಯನ್ನು ಸುತ್ತುವರೆಯಲು 2020 ರಲ್ಲೇ ಪ್ರೀಪ್ಲಾನ್’ ಎಂದು ನಿರೂಪಕಿಯು ಹೇಳುತ್ತಾ, ನಂತರ ಅನಿಮೇಷನ್‌ನ ಒಂದೊಂದೇ ದೃಶ್ಯಗಳನ್ನು ತಮ್ಮ ವಿಡಿಯೊದಲ್ಲಿ ತೋರಿಸುತ್ತಾರೆ.

ವಾಸ್ತವದಲ್ಲಿ ನಿರೂಪಕಿ ಹೇಳುವ ಹಲವು ಪ್ರಮುಖ ವಿಚಾರಗಳಿಗೆ ಯಾವುದೇ ಆಧಾರ ಇಲ್ಲ. ಮೊದಲ ವಾಕ್ಯದಿಂದಲೇ ಅವುಗಳನ್ನು ಒಂದೊಂದಾಗಿ ಗಮನಿಸುತ್ತಾ ಬರೋಣ.

‘ಪ್ರಧಾನಿ ಮೇಲೆ ದಾಳಿಗೆ 2020 ರಲ್ಲೇ ಸಂಚು ನಡೆದಿತ್ತಾ?’, ‘ಫಿರೋಜ್‌ಪುರ ಬ್ರಿಡ್ಜ್‌ ಮೇಲೆ ದಾಳಿಗೆ ಮಾಡಿದ್ರಾ ಪ್ಲಾನ್?’ ಎಂದು ಪ್ರಶ್ನಿಸುತ್ತಾರೆ. ಪ್ರಧಾನಿ ಮೋದಿ ಮೇಲೆ ಯಾರಾದರೂ ದಾಳಿ ಮಾಡುವ ಸಂಚು ನಡೆಸಿದ್ದರೆ, ಅಂಥವರು ಇಷ್ಟೊತ್ತಿಗೆ ಜೈಲಲ್ಲಿ ಇರಬೇಕಾಗಿತ್ತು. ಆದರೆ ಒಂದು ವರ್ಷ ಕಳೆದು ಕೂಡಾ ಬಹಿರಂಗ ಆಗುವುದಿಲ್ಲ ಎಂದಾದರೆ, ನಮ್ಮ ದೇಶದ ಗುಪ್ತಚರ ಇಲಾಖೆ ಮೇಲೆ ಸಂಶಯ ಪಡಬೇಕಾಗುತ್ತದೆ. ಒಟ್ಟಿನಲ್ಲಿ ನಿರೂಪಕಿಯು ಇಲ್ಲಿ ಪ್ರಶ್ನೆಯೊಂದನ್ನು ವೀಕ್ಷಕರಿಗೆ ಕೇಳುತ್ತಾರೆ.

‘ಮೋದಿ ಮೇಲೆ ದಾಳಿ ಸಂಚಿನ ಸ್ಪೋಟಕ ವಿಡಿಯೊ ಬಹಿರಂಗ’ ಎಂದು ಹೇಳುವ ನಿರೂಪಕಿಯೂ ಅನಿಮೇಷನ್‌ ವಿಡಿಯೊವನ್ನು ತೋರಿಸುತ್ತಾರೆ. ಆದರೆ ಈ ವಿಡಿಯೊ ಸ್ಪೋಟಕ ವಿಡಿಯೊ ಅಲ್ಲ. ಈ ರೀತಿಯ ಹಲವಾರು ವಿಡಿಯೊಗಳು ಯೂಟ್ಯೂಬ್‌ನಲ್ಲಿ ಸಿಗುತ್ತವೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು. ಈ ರೀತಿಯ ರಾಜಕೀಯ ಅನಿಮೇಷನ್‌ಗಳನ್ನು ದೇಶದ ಪ್ರಮುಖ ರಾಜಕೀಯ ನಾಯಕರ ವಿರುದ್ದ ಅವರ ವಿರೋಧಿಗಳು ಮಾಡುತ್ತಲೇ ಬಂದಿದ್ದಾರೆ. ಈ ರೀತಿಯ ವಿಡಿಯೊ ಬಗ್ಗೆ ಕೆಲವರು ಆಕ್ಷೇಪಗಳನ್ನು ಎತ್ತಿದ್ದಾರೆ. ಇವುಗಳನ್ನು ರಚಿಸಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆಯೆ ಇಲ್ಲವೆ ಎಂಬ ಮಾಹಿತಿ ನಾನುಗೌರಿ.ಕಾಂಗೆ ಸಿಕ್ಕಿಲ್ಲ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ಆರೋಪ: ಹೊಸ ವಿಡಿಯೊ ವೈರಲ್ ನೊಂದಿಗೆ ಮತ್ತಷ್ಟು ಪ್ರಶ್ನೆಗಳು

‘ದಾಳಿಗೆ ರೂಪಿಸಿದ್ದ ಅನಿಮೇಷನ್‌ ವಿಡಿಯೊ’ ಎಂದು ಮಾಧ್ಯಮವೂ ನೇರವಾಗಿ ಹೇಳುತ್ತದೆ. ಆದರೆ ದಾಳಿಗೆ ಬೇಕಾಗಿ ಅನಿಮೇಷನ್ ರೂಪಿಸಲಾಗಿದೆ ಎಂದು ದೇಶದ ಯಾವುದೇ ತನಿಖಾ ಸಂಸ್ಥೆಯೂ ಹೇಳಿಕೆ ನೀಡಿಲ್ಲ. ಒಂದು ವೇಳೆ ಪ್ರಧಾನಿ ಮೇಲೆ ದಾಳಿ ಮಾಡಲು ರೂಪಿಸಿದ್ದ ಅನಿಮೇಷನ್‌ ಇದು ಎಂದು ಆಗಿದ್ದರೆ, ಒಂದು ವರ್ಷದ ಹಿಂದೆಯೆ ಸುದ್ದಿಯಾಗಿರುತ್ತಿತ್ತು. ಆದರೆ ಅಂತಹ ಯಾವುದೇ ಸುದ್ದಿ ನಮಗೆ ಲಭ್ಯವಾಗಿಲ್ಲ. ಜೊತೆಗೆ ಇದನ್ನು ರಚಿಸಿದವರು ಜೈಲಲ್ಲಿ ಇರಬೇಕಾಗಿತ್ತು.

‘1 ನಿಮಿಷ 7 ಸೆಕೆಂಡ್‌‌ನ ಅನಿಮೇಷನ್‌ ವಿಡಿಯೊ’, ‘2020 ರ ಡಿಸೆಂಬರ್‌ನಲ್ಲಿ ವಿಡಿಯೊ ಬಿಡುಗಡೆ’ ಎಂದು ನಿರೂಪಕಿ ಹೇಳುತ್ತಾರೆ. ಈ ವಿಡಿಯೊ 2020 ಡಿಸೆಂಬರ್‌ ಅಲ್ಲಿ ಅ‌ಪ್ಲೋಡ್ ಆಗಿದೆ ಎಂಬುವುದು ನಿಜವಾದರೂ, DHAKKA GAMING ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಈ ವಿಡಿಯೊ 3:2 ಸೆಕೆಂಡ್‌ ಇದೆ. BP Shorts ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಈ ವಿಡಿಯೊ 3:32 ಸೆಕೆಂಡ್‌ ಇದೆ.

‘ಘಟನೆ ನಡೆದ ಫಿರೋಝ್‌ಪುರದಿಂದಲೇ ದೃಶ್ಯ ತಯಾರಾಗಿದೆ’. ಈ ಹೇಳಿಕೆಗೂ ಯಾವುದೇ ಆಧಾರವನ್ನು ಮಾಧ್ಯಮವೂ ನೀಡಿಲ್ಲ. ಆದರೆ ಈ ವಿಡಿಯೊವನ್ನು ಪೂರ್ತಿ ಅಪ್ಲೋಡ್ ಮಾಡಿರುವ ಮೇಲಿನ ಎರಡು ಚಾನೆಲ್‌ನಲ್ಲಿ ಅದು ಇಂತಹ ಜಾಗದಿಂದ ಅಪ್ಲೋಡ್ ಮಾಡಲಾಗಿದೆ ಎಂದು ವಿಡಿಯೊದಲ್ಲಿ ಉಲ್ಲೇಖ ಮಾಡಿಲ್ಲ. ಒಂದು ಚಾನೆಲ್ ತನ್ನ ಲೊಕೇಷನ್ ಅಮೆರಿಕಾ ಎಂದು ಹೇಳಿಕೊಂಡರೆ, ಇನ್ನೊಂದು ಭಾರತ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ:ಭದ್ರತಾ ಲೋಪ: ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್, ಪಂಜಾಬ್ ಸರ್ಕಾರದಿಂದ ತನಿಖಾ ತಂಡ…10 ಪಾಯಿಂಟ್ಸ್‌‌

‘ಮೋದಿಯನ್ನು ಸುತ್ತುವರೆಯಲು 2020 ರಲ್ಲೇ ಪ್ರೀಪ್ಲಾನ್’ ಎಂಬ ವಾಕ್ಯಕ್ಕೂ ಚಾನೆಲ್‌ ಯಾವುದೇ ಆಧಾರ ನೀಡಿಲ್ಲ. ವಾಸ್ತವದಲ್ಲಿ ರೈತ ಹೋರಾಟವನ್ನು ಮುನ್ನಡೆಸಿದ್ದ ಕಿಸಾನ್ ಮೋರ್ಚಾ ನಾಯಕರು, “ಪ್ರಧಾನಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಯಾವುದೇ ಯೋಜನೆ ಇರಲಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಪೂರ್ವನಿರ್ಧರಿತ ವೇಳಾಪಟ್ಟಿಯಂತೆ, ಜನವರಿ 5 ರಂದು ಪಂಜಾಬ್‌ನ ಪ್ರತಿ ಜಿಲ್ಲೆ ಮತ್ತು ತಹಸಿಲ್ ಕೇಂದ್ರ ಕಚೇರಿಗಳಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲಾಯಿತು. ಫಿರೋಜ್‌ಪುರ ಜಿಲ್ಲಾ ಕೇಂದ್ರಕ್ಕೆ ತೆರಳದಂತೆ ಕೆಲ ರೈತರನ್ನು ಪೊಲೀಸರು ತಡೆದಾಗ ಹಲವು ಕಡೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಇವುಗಳಲ್ಲಿ ಪ್ರಧಾನಿಯವರ ಬೆಂಗಾವಲು ಪಡೆ ಬಂದು ನಿಲ್ಲಿಸಿ ಹಿಂತಿರುಗಿದ ಪೈರಾಯನ ಮೇಲ್ಸೇತುವೆಯೂ ಇತ್ತು. ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಪ್ರಧಾನಿ ಬೆಂಗಾವಲು ಪಡೆ ಹಾದು ಹೋಗುತ್ತದೆ ಎಂಬ ಖಚಿತ ಮಾಹಿತಿ ಇರಲಿಲ್ಲ. ಪ್ರಧಾನಿ ವಾಪಸಾದ ಬಳಿಕ ಮಾಧ್ಯಮಗಳಿಂದ ಈ ಮಾಹಿತಿ ಸಿಕ್ಕಿದೆ. ಪ್ರತಿಭಟನಾ ನಿರತ ರೈತರು ಪ್ರಧಾನಿ ಬೆಂಗಾವಲು ಪಡೆ ಕಡೆಗೆ ಹೋಗಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ. ಇದು ಶುಕ್ರವಾರ ವೈರಲ್‌ ಆದ ಹೊಸ ವಿಡಿಯೊ ಮೂಲಕ ಸಾಬೀತಾಗಿದೆ. ಬಿಜೆಪಿ ಧ್ವಜದೊಂದಿಗೆ ‘ನರೇಂದ್ರ ಮೋದಿ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಗುಂಪು ಮಾತ್ರ ಆ ಬೆಂಗಾವಲು ಪಡೆಯ ಬಳಿ ತಲುಪಿತ್ತು” ಎಂದು ಕಿಸಾನ್ ಮೋರ್ಚಾ ಹೇಳಿದೆ.

ಹದಿಮೂರು ನಿಮಿಷ ಈ ಸುದ್ದಿ ವಿಡಿಯೊದಲ್ಲಿ ‘ನ್ಯೂಸ್‌ ಫಸ್ಟ್‌ ಕನ್ನಡ’ ಈ ಅನಿಮೇಷನ್‌ ರೀತಿಯಲ್ಲೇ ನಡೆದಿದೆ ಎಂದು ಹೇಳುತ್ತಾರೆ. ಇದರ ನಂತರ ಈ ಅನಿಮೇಷನ್‌ ಅನ್ನು ಚಾನೆಲ್‌ನ ಮತ್ತೊಬ್ಬರು ವಿಶ್ಲೇಷಣೆ ಮಾಡುತ್ತಾರೆ.

ಇದನ್ನೂ ಓದಿ:ಪಂಜಾಬ್‌ ಭದ್ರತಾ ಲೋಪ ವಿವಾದ; ಪತ್ರಕರ್ತೆಯೊಬ್ಬರ ಹಲವು ಪ್ರಶ್ನೆಗಳು!

ಅವರು ಕೂಡಾ ನಿರೂಪಕಿ ಈ ಹಿಂದೆ ಹೇಳಿದ್ದ ಅದೇ ವಿಷಯವನ್ನು ಮತ್ತೊಮ್ಮೆ ಹೇಳುತ್ತಾರೆ. ವಿಶ್ಲೇಷಣೆ ಮಾಡುತ್ತಾ, “ಅನಿಮೇಷನ್‌ನಲ್ಲಿ ಪ್ರಧಾನಿಯನ್ನು ತಡೆದಾಗ ಭದ್ರತೆಗೆ ಇದ್ದ ವ್ಯಕ್ತಿಗಳು ಓಡಿ ಹೋಗುತ್ತಾರೆ. ಹಾಗೆಯೆ ಇಲ್ಲಿ ಕೂಡಾ ನಡೆಯುತ್ತದೆ. ಪ್ರಧಾನಿಯ ಭದ್ರತೆಗೆ ಇದ್ದ ಎಸ್‌ಪಿಜಿಯನ್ನು ಬಿಟ್ಟರೆ, ಪಂಜಾಬಿ ಪೊಲೀಸರು ಎಲ್ಲಿದ್ದರು?” ಎಂದು ಪ್ರಶ್ನಿಸುತ್ತಾ, “ಪಂಜಾಬಿ ಪೊಲೀಸರು ಪ್ರತಿಭಟನಾಕಾರರೊಂದಿಗೆ ಸೇರಿ ಚಹಾ ಕುಡಿತಾ ಇರುತ್ತಾರೆ. ಅವರು ಬ್ರಿಡ್ಜ್‌ ಮೇಲೆ ಚಾಯ್ ಪೆ ಚರ್ಚಾ ನಡೆಸುತ್ತಾ ಇರುತ್ತಾರೆ” ಎಂದು ನಿರೂಪಕ ಸ್ವತಃ ನೋಡಿದಂತೆ ಹೇಳುತ್ತಾರೆ.

ಆದರೆ ವಾಸ್ತವದಲ್ಲಿ ಪಂಜಾಬಿ ಪೊಲೀಸರು ಅಲ್ಲಿಯೇ ಇದ್ದರು. ಒಂದು ವೇಳೆ ಅವರು ಪ್ರತಿಭಟನಾಕಾರರೊಂದಿಗೆ ಚಹಾ ಸೇವಿಸುತ್ತಿದ್ದರೆ ಅಥವಾ ಪ್ರಧಾನಿಯನ್ನು ಬಿಟ್ಟು ಓಡಿ ಹೋಗಿದ್ದರೆ ಅದು ದೊಡ್ಡ ಸುದ್ದಿಯಾಗಿರುತ್ತಿತ್ತು. ಆದರೆ ಈ ರೀತಿಯಾಗಿ ಎಲ್ಲಿಯೂ ಸುದ್ದಿಯಾಗಿಲ್ಲ. ಜೊತೆಗೆ ಚಹಾದೊಂದಿಗೆ ಚರ್ಚೆಯೂ ನಡೆಸುತ್ತಿರಲಿಲ್ಲ. ಘಟನೆ ನಡೆದಾಗ ಎಸ್‌ಪಿಜಿ ಕಮಾಂಡೋಗಳು ಪ್ರಧಾನಿಯ ಕಾರಿನ ಸುತ್ತಲೆ ಇದ್ದರು. ಯಾಕೆಂದರೆ ಅವರು ಪ್ರಧಾನಿಯ ರಕ್ಷಣೆಗೆಂದೇ ಇರುವ ಪಡೆಯಾಗಿದ್ದು, ಅವರು ಪ್ರಧಾನಿಯನ್ನು ಬಿಟ್ಟು ಕದಲುವ ಹಾಗೆಯೆ ಇಲ್ಲ.

ಆದರೆ ಪಂಜಾಬಿ ಪೊಲೀಸರು ಕೂಡಾ ಅಲ್ಲೇ ಇದ್ದರು ಎಂದು ರಾಷ್ಟ್ರೀಯ ಮಾಧ್ಯಮಗಳು ಮಾಡಿದ ಸುದ್ದಿಯಲ್ಲಿ ಕಾಣಬಹುದು.

ಇದನ್ನೂ ಓದಿ:ಪಂಜಾಬ್: ಪ್ರಧಾನಿ ಕಾರ್ಯಕ್ರಮ ರದ್ದು; ಏನಂತಾರೆ ನೆಟ್ಟಿಗರು?

ವಾಸ್ತವದಲ್ಲಿ, ಶುಕ್ರವಾದಂದು ಘಟನೆಯ ಸಮಯದಲ್ಲಿ ಮಾಡಲಾಗಿರುವ ಹೊಸ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಪ್ರಧಾನಿ ಮೋದಿಯ ಕಾರು ಫ್ಲೈಓವರ್‌ನಲ್ಲಿ ನಿಂತಿರುವಾಗ, ಅವರ ಕಾರಿನ ತೀರಾ ಹತ್ತಿರದಲ್ಲೇ ಒಂದಷ್ಟು ಜನರು ಬಿಜೆಪಿ ಧ್ವಜವನ್ನು ಬೀಸುತ್ತಾ, ಘೋಷಣೆ ಕೂಗುವುದನ್ನು ಕಾಣಬಹುದು.

ಘಟನೆ ನಡೆದಾಗ ಪ್ರತಿಭಟನಾ ನಿರತ ರೈತರು ಪ್ರಧಾನಿಯನ್ನು ತಡೆದಿದ್ದಾರೆ ಎಂದು ಮಾಧ್ಯಮಗಳು ಬುಧವಾರ ಸುದ್ದಿ ಮಾಡಿದ್ದವು. ಆದರೆ ಡಿಜಿಟಲ್‌ ಮಾಧ್ಯಮಗಳು, ಪ್ರಧಾನಿಯ ಕಾರಿನ ತೀರಾ ಹತ್ತಿರದಲ್ಲಿ ಇದ್ದ ಗುಂಪು ರೈತರ ಗುಂಪಲ್ಲ, ಬಿಜೆಪಿ ಕಾರ್ಯಕರ್ತರಾಗಿದ್ದು ಅವರ ಕೈಯ್ಯಲ್ಲಿ ಇದ್ದಿದ್ದು ಬಿಜೆಪಿ ಧ್ವಜ ಎಂದು ಸ್ಪಷ್ಟವಾಗಿ ತೋರಿಸಿದ್ದವು.

ಇದನ್ನೂ ಓದಿ:ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ಇಷ್ಟೇ ಅಲ್ಲದೆ, ಶುಕ್ರವಾರ ಬಿಡುಗಡೆಯಾದ ವಿಡಿಯೊದಲ್ಲಿ, ಬಿಜೆಪಿಯ ಧ್ವಜದೊಂದಿಗೆ ಪ್ರಧಾನಿಯ ಕಾರಿಗಿಂತ ಕೆಲವೇ ಮೀಟರ್‌ ಅಂತರದಲ್ಲಿ ನಿಂತು ಧ್ವಜವನ್ನು ಬೀಸುತ್ತಾ ನರೇಂದ್ರ ಮೋದಿ ಜಿಂದಾಬಾದ್‌ ಎಂದು ಘೋಷಣೆ ಕೂಗುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಎರಡು ರಸ್ತೆಗಳಿರುವ ಫ್ಲೈಓವರ್‌ನಲ್ಲಿ ಒಂದು ರಸ್ತೆಯಲ್ಲಿ ಪ್ರಧಾನಿಯ ಕಾರು ಮತ್ತು ಅವರ ಬೆಂಗಾವಲು ಇದ್ದು, ಇನ್ನೊಂದು ರಸ್ತೆಯಲ್ಲಿ ಜನರು ಘೋಷಣೆ ಕೂಗುತ್ತಿದ್ದಾರೆ. ಈ ರಸ್ತೆಯಲ್ಲಿ ಬಸ್ಸು ಮತ್ತು ಇತರ ವಾಹನ ನಿಂತಿರುವುದು ಕೂಡಾ ಕಾಣುತ್ತದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಪಂಜಾಬ್‌ ಮುಖ್ಯಮಂತ್ರಿ ಚನ್ನಿ ಅವರು, “ರಾಜ್ಯ ಸರ್ಕಾರದಿಂದ ಯಾವುದೆ ಲೋಪ ಆಗಿಲ್ಲ. ಆದರೆ ಪ್ರಧಾನಿ ಮೋದಿ ಅವರು ರಸ್ತೆ ಮೂಲಕ ತೆರಳಲಿದ್ದಾರೆ ಎಂದು ನಿಗದಿಯಾಗಿರಲಿಲ್ಲ. ಪ್ರಧಾನಿ ಮೋದಿ ಜೀವಕ್ಕೆ ಯಾವುದೇ ಬೆದರಿಕೆ ಇಲ್ಲ. ಒಬ್ಬ ಪಂಜಾಬಿಯಾಗಿ ಅವರ ಜೀವವನ್ನು ರಕ್ಷಿಸಲು ನಾನು ಜೀವ ಪಣಕ್ಕಿಡಲೂ ಸಿದ್ದ” ಎಂದು ಹೇಳಿದ್ದರು.

ರೈತರ ಹೋರಾಟ ಶುರುವಾದ ದಿನದಿಂದಲೂ ಮುಖ್ಯವಾಹಿನಿ ಮಾಧ್ಯಮಗಳು ರೈತರ ವಿರುದ್ಧ ವರದಿಗಳನ್ನು ಮಾಡುತ್ತಲೇ ಬಂದಿವೆ. ಮಾಧ್ಯಮಗಳು ಪ್ರಭುತ್ವವನ್ನು ಓಲೈಸುವ ಕೆಲಸವನ್ನು ಮಾಡುತ್ತಲೇ ಬಂದಿವೆ. ಒಂದು ವರ್ಷ ಕಾಲ ಮಳೆ, ಬಿಸಿಲೆನ್ನದೆ ಶಾಂತಿಯುತವಾಗಿ ಹೋರಾಟ ಮಾಡಿದ ರೈತರ ಕುರಿತು ಬರೆಯುವಾಗ, ವರದಿ ಮಾಡುವಾಗ ಮಾಧ್ಯಮಗಳಿಗೆ ಎಚ್ಚರಿಕೆ ಇರಬೇಕಲ್ಲವೇ? ಸುಮಾರು 700 ರೈತರು ಹೋರಾಟದಲ್ಲಿ ಜೀವಕಳೆದುಕೊಂಡಿದ್ದಾರೆ. ಗಾಂಧಿ ಮಾರ್ಗದಲ್ಲಿ ನಡೆದು ಸರ್ಕಾರವನ್ನು ಮಣಿಸಿದ್ದಾರೆ. ಇಂತಹ ರೈತರ ಕುರಿತು ವರದಿ ಮಾಡುವಾಗ ಮಾಧ್ಯಮಗಳು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಲ್ಲವೇ?

ಇದನ್ನೂ ಓದಿ:ಪಂಜಾಬ್ ಕೋರ್ಟ್ ಸ್ಪೋಟ ಪ್ರಕರಣಕ್ಕೆ ತಿರುವು: ಮೃತಪಟ್ಟ ಮಾಜಿ ಪೊಲೀಸ್ ಆರೋಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...