Homeಮುಖಪುಟಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

- Advertisement -
- Advertisement -

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ ನಡೆ ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿಯ ಬಹುರೂಪಿ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲಗಳೂ ಇವೆ. ಇದರ ನಡುವೆ ರಂಗಾಯಣ ನಿರ್ದೇಶಕರು ತನ್ನ ನಿಲುವನ್ನು ವಿರೋಧಿಸುವವರನ್ನೆಲ್ಲ ರಂಗಾಯಣದಿಂದ ಹೊರದೂಡುತ್ತಿರುವುದು ಹೊಸ ವಿದ್ಯಮಾನ.

ಈಗಾಗಲೇ ಸುಮಾರು ಹತ್ತು ಪ್ರದರ್ಶನಗಳನ್ನು ಕಂಡಿರುವ ಎಸ್‌.ಎಲ್‌.ಭೈರಪ್ಪ ಅವರ ‘ಪರ್ವ’ ಕಾದಂಬರಿಯ ರಂಗರೂಪಕ್ಕೆ ಮತ್ತೊಮ್ಮೆ ಹೊಸ ಕಲಾವಿದರನ್ನು ಕರೆದಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

“ರಂಗಾಯಣದ ರಂಗಶಿಕ್ಷಣ ಹಾಗೂ ಇತರೆ ರಂಗಶಿಕ್ಷಣ ಕೇಂದ್ರಗಳಲ್ಲಿ ತರಬೇತಿ ಪಡೆದ, ನಾಟಕ ತಂಡಗಳಲ್ಲಿ ಅಭಿನಯಿಸಿ ಅನುಭವವಿರುವ ಕಲಾವಿದರಿಗೆ ಆದ್ಯತೆ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಕಲಾವಿದರು ಸ್ವವಿವರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ” ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಪ್ರಕಟಣೆ ನೀಡಿದ್ದಾರೆ.

ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ

ಆದರೆ ರಂಗಾಯಣ ಅಂಗಳದ ಒಳಸುದ್ದಿ ಬೇರೆಯೇ ಇದೆ. ಬಹುರೂಪಿ ವಿಚಾರವಾಗಿ ಎದ್ದ ವಿವಾದದ ಬಳಿಕ ತನ್ನ ಸೈದ್ಧಾಂತಿಕ ವಿರೋಧಿಗಳನ್ನು ರಂಗಾಯಣ ಅಂಗಳದಿಂದ ಹೊರಹಾಕಲು ರಂಗಾಯಣ ನಿರ್ದೇಶಕರು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ರಂಗಾಯಣವನ್ನು ಕಟ್ಟಿದ ಹಿರಿಯ ಕಲಾವಿದರನ್ನು ಹೊರಹಾಕುವ ಅಥವಾ ಮೂಲೆಗುಂಪು ಮಾಡುವ ಕೆಲಸವನ್ನು ನಿರ್ದೇಶಕರು ಮಾಡುತ್ತಿದ್ದಾರೆ ಎಂದು ‘ನಾನುಗೌರಿ.ಕಾಂ’ಗೆ ಮೂಲಗಳು ತಿಳಿಸಿವೆ.

ಹಿರಿಯ ಕಲಾವಿದರಾದ ಹುಲುಗಪ್ಪ ಕಟ್ಟೀಮನಿ, ವಿನಾಯಕ್‌ ಭಟ್‌ ಹಾಸಣಗಿ, ರಾಮು ಅವರು ನಿವೃತ್ತಿಯ ಬಳಿಕವೂ ‘ಪರ್ವ’ ನಾಟಕದಲ್ಲಿ ಭಾಗಿಯಾಗಿ ಪಾತ್ರಗಳನ್ನು ನಿರ್ವಹಿಸಿದ್ದರು. ಬಹುರೂಪಿ ವಿವಾದದ ಬಳಿಕ ಈ ಹಿರಿಯ ಕಲಾವಿದರು ನಿರ್ದೇಶಕರ ನಡೆಯನ್ನು ವಿರೋಧಿಸಿದ್ದರು. ಹೀಗಾಗಿ ಇವರನ್ನು ‘ಪರ್ವ’ ನಾಟಕದಿಂದ ಹೊರಗಿಡಲು ನಿರ್ದೇಶಕರು ನಿರ್ಧರಿಸಿದ್ದಾರೆ ಎಂಬ ಆರೋಪಗಳು ಬಂದಿವೆ. ಹಿರಿಯ ಕಲಾವಿದರೊಂದಿಗೆ ‘ನಾನುಗೌರಿ.ಕಾಂ’ ಮಾತನಾಡಿದಾಗ ಈ ಸುದ್ದಿಯನ್ನು ಅಲ್ಲಗಳೆಯಲಿಲ್ಲ.

“ರಂಗಭೂಮಿ ಯಾವುದೋ ಒಂದು ಪಂಥಕ್ಕೆ ಸೀಮಿತವಾಗಬಾರದು. ರಂಗಭೂಮಿ ಎಡವೂ ಹೌದು, ಬಲವೂ ಹೌದು. ಚರ್ಚೆಗಳಾಗಲಿ. ಆದರೆ ಹಿರಿಯ ಕಲಾವಿದರನ್ನು ಪರಿಗಣಿಸದೆ ಬಹುರೂಪಿ ವಿಚಾರವಾಗಿ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧವಿದೆ. ಇದನ್ನು ವ್ಯಕ್ತಪಡಿಸಿದ ಬಳಿಕ ಹಿರಿಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ರಂಗಾಯಣವನ್ನು ಮೂವತ್ತು ವರ್ಷಗಳ ಕಾಲ ಕಟ್ಟಿದ ಕಲಾವಿದರು ತಮ್ಮ ಅಭಿಪ್ರಾಯವನ್ನು ಹೇಳಬಾರದೆ” ಎಂದು ಕೇಳುತ್ತಾರೆ ರಂಗಾಯಣ ಹಿರಿಯ ಕಲಾವಿದ ವಿನಾಯಕ ಭಟ್ ಹಾಸಣಗಿ.

ರಂಗಾಯಣದ ಮತ್ತೊಬ್ಬ ಹಿರಿಯ ಕಲಾವಿದರಾದ ರಾಮು ಅವರು, “ನಮ್ಮನ್ನು ಪರ್ವ ನಾಟಕದಿಂದ ಕೈಬಿಡುತ್ತಾರೆಂಬ ಸುದ್ದಿ ಬಂದಿದೆ. ಅಧಿಕೃತವಾಗಿ ಯಾವುದೇ ಸೂಚನೆಯನ್ನು ನಿರ್ದೇಶಕರು ನೀಡಿಲ್ಲ. ಆದರೆ ಅಡ್ಡಂಡ ಕಾರ್ಯಪ್ಪ ಅವರ ವರ್ತನೆಗಳು ಬಹಳ ಬೇಸರ ತಂದಿದ್ದು, ಅವರು ಪರ್ವ ನಾಟಕಕ್ಕೆ ಕರೆದರೂ ನಾನು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. (ಹುಲುಗಪ್ಪ ಕಟ್ಟೀಮನಿಯವರು ಕರೆ ಸ್ವೀಕರಿಸಲಿಲ್ಲ).

ಬಹುರೂಪಿ ಅತಿಥಿಗಳ ವಿಚಾರವಾಗಿ ಧ್ವನಿ ಎತ್ತಿದವರಲ್ಲಿ ಪರ್ವ ಕಿರಿಯ ಕಲಾವಿದರೂ ಸೇರಿದ್ದಾರೆ. ಅದರ ಮುಂದುವರಿದ ಭಾಗವಾಗಿ ದನಿ ಎತ್ತಿದ ಕಿರಿಯ ಕಲಾವಿದನೊಬ್ಬನನ್ನು ‘ಪರ್ವ’ ನಾಟಕದಿಂದ ಕೈಬಿಡಲಾಗಿದೆ.

ಪರ್ವ ನಾಟಕದ ಕಿರಿಯ ಕಲಾವಿದರು ಬರೆದಿದ್ದ ಪತ್ರ

ರಂಗಾಯಣದಿಂದ ಹೊರಬಿದ್ದ ಕಿರಿಯ ಕಲಾವಿದ ಅನುರಾಗ್‌‌ ತಮ್ಮ ಬೇಸರವನ್ನು ಹೇಳಿಕೊಂಡಿದ್ದಾರೆ. “ಕಿರಿಯ ಕಲಾವಿದರ ನಿಲುವನ್ನು ಸಹಿಸದ ನಿರ್ದೇಶಕರು ‘ಪರ್ವ’ ನಾಟಕದಿಂದ ತೆಗೆದು ಹಾಕಲಾಗುವುದೆಂದು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ಕಿರಿಯ ಕಲಾವಿದರು ಬರೆದ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿತ್ತು. ಮಾಧ್ಯಮಗಳಿಗೆ ಪತ್ರವನ್ನು ರವಾನಿಸಿದ್ದರಿಂದ ನನ್ನನ್ನು ಹೊರಗಿಡಲಾಗಿದೆ. ನಾನು ಎರಡು ವರ್ಷಗಳಿಂದ ರಂಗಾಯಣದಲ್ಲಿ ಕೆಲಸ ಮಾಡುತ್ತಿದ್ದೆ” ಎಂದರು ಅನುರಾಗ್‌.

ಈ ಕುರಿತು ಅನುರಾಗ್‌ ಅವರು ರಂಗಾಯಣದ ಕಿರಿಯ ಕಲಾವಿದರನ್ನು ಉದ್ದೇಶಿಸಿ ಪತ್ರವನ್ನೂ ಬರೆದಿದ್ದಾರೆ. “ಒಂದು ಪಕ್ಷಕ್ಕೆ ನಿಷ್ಠರಾಗಿರುವ ಅತಿಥಿಗಳು ಬಹುರೂಪಿಗೆ ಬೇಡ ಎಂದೆನಿಸಿದಾಗ ನಾವೆಲ್ಲ ಒಟ್ಟಿಗೆ ಕೂತು ತಾನೇ ಪತ್ರ ಬರೆದಿದ್ದೆವು. ನೀವುಗಳು ಎಲ್ಲರೂ ಓದಿ ತಾನೇ ಪತ್ರಕ್ಕೆ ಸಹಿ ಹಾಕಿದ್ದು. ಆಗ ನಿಮ್ಮಲ್ಲಿ ಇದ್ದ ಪ್ರಶ್ನಿಸುವ ಗುಣ ಮತ್ತು ನಿಮ್ಮ ವ್ಯಕ್ತಿತ್ವ ಈಗ ಎಲ್ಲಿ ಹೋಯಿತು? ಆಗ ನಿಮ್ಮಲ್ಲಿ ಇದ್ದ ಒಗ್ಗಟ್ಟು ಈಗ ಎಲ್ಲಿ ಹೋಯಿತು? ಈಗ ಎಲ್ಲಿ ಕಳೆದುಹೋದಿರಿ?” ಎಂದು ಅನುರಾಗ್‌ ಪ್ರಶ್ನಿಸಿದ್ದಾರೆ.

“ರಂಗಾಯಣದ ಗೇಟಿನ ಮುಂದೆ ಒಂದಿಷ್ಟು ಪ್ರೇಕ್ಷಕರನ್ನು ಹವ್ಯಾಸಿ ರಂಗ ತಂಡದವರು ತಡೆದರೆಂದೂ ಕಾರ್ಯಪ್ಪನವರ ಮೇಲೆ ಮಸಿ ಬಳೆಯುವ ಕೆಲಸ ಆಗುತ್ತಿದೆ ಎಂದೂ ಪತ್ರಿಕಾ ಹೇಳಿಕೆ ಕೊಟ್ಟಿದ್ದೀರಿ. ಗೇಟಿನ ಮುಂದೆ ನನ್ನ ತಂಡದವರೂ ಇದ್ದರು. ತಾಲೀಮು ಮಾಡಲು ಬಂದಿದ್ದರು. ಕಾರ್ಯಪ್ಪನವರು ಪೊಲೀಸರಿಗೆ ಯಾರನ್ನೂ ಒಳಗೆ ಬಿಡಬೇಡ ಎಂದು ಹೇಳಿದ ಮೇಲೆ ಅವರಿಗೆ ಪ್ರೇಕ್ಷಕರು ಯಾರು, ಬೇರೆ ತಂಡದವರು ಯಾರು ಎಂದು ಹೇಗೆ ಗೊತ್ತಾಗಬೇಕು? ನೀವೇನು ಪ್ರತ್ಯಕ್ಷವಾಗಿ ಪ್ರೇಕ್ಷಕರನ್ನು ತಡೆಯುವುದನ್ನು ನೋಡಿದಿರಾ? ನೀವು ಮಾಡುತ್ತಿರುವುದೇನು? ಯಾರನ್ನು ಒಲೈಸುವುದಕ್ಕೆ ಹೊರಟಿದ್ದೀರಿ? ಈಗ ನೀವು ಕೊಡುತ್ತಿರುವ ಅಸಂಬದ್ಧ ಹೇಳಿಕೆಗಳಿಂದ ನಿಮ್ಮ ಭವಿಷ್ಯ ಭದ್ರವಾಗುತ್ತದೆಯೇ ? ಇನ್ನೊಂದೆರಡು ತಿಂಗಳು, ಅನಂತರ ಮತ್ತೆ ರಂಗ ಕಾಯಕ ಅರಸುತ್ತಾ ಹೋಗಲೇಬೇಕು. ರಂಗಾಯಣವೇ ಶಾಶ್ವತ ಅಲ್ಲ. ನಿಮ್ಮನ್ನು ಅವರೇನು ಕಾಯಂ ಮಾಡುವುದಿಲ್ಲ. ಕಾರ್ಯಪ್ಪನವರು ಇಷ್ಟು ದಿನ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡರು ಎನ್ನುತ್ತೀರಿ, ಕೈತುಂಬಾ ಸಂಬಳ ಕೊಟ್ಟರು ಎನ್ನುತ್ತೀರಿ. ಆ ಸಂಬಳ ನಾನೂ ಪಡೆದಿದ್ದೇನೆ. ಆದರೆ ಅದು ಸರ್ಕಾರದ ಹಣ ಅವರ ಸ್ವಂತದ್ದಲ್ಲ” ಎಂದು ತನ್ನ ಸ್ನೇಹಿತರಿಗೆ ಅನುರಾಗ್‌ ತಿಳಿಸಿದ್ದಾರೆ.

ರಂಗಾಯಣದಿಂದ ಒಬ್ಬ ಮಹಿಳಾ ಸಿಬ್ಬಂದಿಯನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳೂ ಬಂದಿವೆ. ಈ ಕುರಿತು ಅಧಿಕೃತ ಮಾಹಿತಿ ದೊರೆತ್ತಿಲ್ಲ.


ಇದನ್ನೂ ಓದಿರಿ: ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...