Homeಮುಖಪುಟಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಒಕ್ಕೂಟ ಸರ್ಕಾರ ಪರವಾನಗಿ ಸ್ಥಗಿತ ಮಾಡಿದ್ದರಿಂದ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (FCRA)ಯನ್ನು ಶನಿವಾರ ಪುನಃಸ್ಥಾಪಿಸಲಾಗಿದೆ. ಕಳೆದ ಎರಡು ವಾರಗಳಿಂದ ‘ಪ್ರತಿಕೂಲ ವಿಷಯ’ಗಳನ್ನು ಉಲ್ಲೇಖಿಸಿ ಒಕ್ಕೂಟ ಸರ್ಕಾರವು ಸಂಸ್ಥೆಯ ನವೀಕರಣದ ವಿನಂತಿಯನ್ನು ನಿರಾಕರಿಸಿತ್ತು.

ಪರವಾನಗಿ ಇಲ್ಲದೆ ಇರುವುದರಿಂದಾಗಿ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಒಕ್ಕೂಟ ಸರ್ಕಾರವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಸುದ್ದಿ ಸಂಸ್ಥೆ ANI, ‘ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಪರವಾನಗಿಯನ್ನು ಮರುಸ್ಥಾಪಿಸಲಾಗಿದೆ’ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

FCRA ಪರವಾನಗಿಯನ್ನು ಮತ್ತೇ ಪುನಃಸ್ಥಾಪಿಸಿದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಸಂಸದ ಡೆರೆಕ್ ಒ’ಬ್ರೇನ್, “56 ಇಂಚಿನ ಶಕ್ತಿಗಿಂತ ಪ್ರೀತಿಯ ಶಕ್ತಿ ಪ್ರಬಲವಾಗಿದೆ” ಎಂದು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

“ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗಾಗಿ FCRA ನೋಂದಣಿ ಮತ್ತೆ ಮಾಡಲಾಗಿದೆ. ‘ಪ್ರತಿಕೂಲ ವಿಷಯ’ಗಳು ಹಲವರಿಗೆ ಕಿರುಕುಳ ನೀಡಿತು, ಆದರೆ ಅದು ಎರಡು ವಾರಗಳಲ್ಲಿ ಕಣ್ಮರೆಯಾಯಿತು. ಪ್ರೀತಿಯ ಶಕ್ತಿಯು 56 ಇಂಚಿನ ಶಕ್ತಿಗಿಂತ ಪ್ರಬಲವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿ, “ಮಿಷನರೀಸ್ ಆಫ್ ಚಾರಿಟಿಗೆ ಎಫ್‌ಸಿಆರ್‌ಎ ಮತ್ತೆ ಅನುಮೋದನೆ ನೀಡಿದೆ. ಸಾರ್ವಜನಿಕ ಅಭಿಪ್ರಾಯ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆಯಿಂದಾಗಿ ಇದು ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಚಾರಿಟಿಯ FCRA ಪರವಾನಗಿ ವಿವಾದ ಬ್ರಿಟನ್ ಸಂಸತ್ತಿನಲ್ಲೂ ಗುರುವಾರ ಸದ್ದು ಮಾಡಿತ್ತು. “ಚಾರಿಟಿಯ ಖಾತೆಗಳಿಗೆ FCRA ಯಾಕೆ ನಿರಾಕರಿಸಲಾಗಿದೆ, ಇದರ ಬಗ್ಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಭಾರತ ಸರ್ಕಾರವನ್ನು ಕೇಳಬೇಕು” ಎಂದು ಅಲ್ಲಿನ ಸಂಸದರು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದನ್ನೂ ಓದಿ:ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ಕ್ರಿಸ್‌ಮಸ್ ದಿನದಂದು ಹಿಂತೆಗೆದುಕೊಳ್ಳಲಾಗಿತ್ತು. ಇದನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ವ್ಯಾಪಕವಾಗಿ ಖಂಡಿಸಿದ್ದರು.

ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಎಂದು ಗೃಹ ಸಚಿವಾಲಯ ಹೇಳಿತ್ತು. ಆದರೆ ಸಚಿವಾಲಯವು ಇದಕ್ಕೆ ವಿವರಗಳನ್ನು ನೀಡಿರಲಿಲ್ಲ. ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಚಾರಿಟಿಯ ಖಾತೆಗಳು ಸ್ಥಗಿತಗೊಂಡಿದ್ದವು.

ಕಳೆದ ವಾರ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ಭಾರತದಲ್ಲಿನ 12,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಚಾರಿಟಬಲ್ ಸಂಸ್ಥೆಗಳು ಅವಧಿ ಮುಗಿದ ನಂತರ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಪರವಾನಗಿ ಇಲ್ಲದ ಸಂಸ್ಥೆಗಳ ಪಟ್ಟಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಆಕ್ಸ್‌ಫ್ಯಾಮ್ ಇಂಡಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆಮದರ್‌ ಥೆರೇಸಾ ಮದರ್‌ ಥರೇಸಾ ಮದರ್‌ ಥೆರೇಸಾ ಮದರ್‌ ಥರೆಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...