Homeಮುಖಪುಟಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಒಕ್ಕೂಟ ಸರ್ಕಾರ ಪರವಾನಗಿ ಸ್ಥಗಿತ ಮಾಡಿದ್ದರಿಂದ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (FCRA)ಯನ್ನು ಶನಿವಾರ ಪುನಃಸ್ಥಾಪಿಸಲಾಗಿದೆ. ಕಳೆದ ಎರಡು ವಾರಗಳಿಂದ ‘ಪ್ರತಿಕೂಲ ವಿಷಯ’ಗಳನ್ನು ಉಲ್ಲೇಖಿಸಿ ಒಕ್ಕೂಟ ಸರ್ಕಾರವು ಸಂಸ್ಥೆಯ ನವೀಕರಣದ ವಿನಂತಿಯನ್ನು ನಿರಾಕರಿಸಿತ್ತು.

ಪರವಾನಗಿ ಇಲ್ಲದೆ ಇರುವುದರಿಂದಾಗಿ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಒಕ್ಕೂಟ ಸರ್ಕಾರವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಸುದ್ದಿ ಸಂಸ್ಥೆ ANI, ‘ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಪರವಾನಗಿಯನ್ನು ಮರುಸ್ಥಾಪಿಸಲಾಗಿದೆ’ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

FCRA ಪರವಾನಗಿಯನ್ನು ಮತ್ತೇ ಪುನಃಸ್ಥಾಪಿಸಿದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಸಂಸದ ಡೆರೆಕ್ ಒ’ಬ್ರೇನ್, “56 ಇಂಚಿನ ಶಕ್ತಿಗಿಂತ ಪ್ರೀತಿಯ ಶಕ್ತಿ ಪ್ರಬಲವಾಗಿದೆ” ಎಂದು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

“ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗಾಗಿ FCRA ನೋಂದಣಿ ಮತ್ತೆ ಮಾಡಲಾಗಿದೆ. ‘ಪ್ರತಿಕೂಲ ವಿಷಯ’ಗಳು ಹಲವರಿಗೆ ಕಿರುಕುಳ ನೀಡಿತು, ಆದರೆ ಅದು ಎರಡು ವಾರಗಳಲ್ಲಿ ಕಣ್ಮರೆಯಾಯಿತು. ಪ್ರೀತಿಯ ಶಕ್ತಿಯು 56 ಇಂಚಿನ ಶಕ್ತಿಗಿಂತ ಪ್ರಬಲವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿ, “ಮಿಷನರೀಸ್ ಆಫ್ ಚಾರಿಟಿಗೆ ಎಫ್‌ಸಿಆರ್‌ಎ ಮತ್ತೆ ಅನುಮೋದನೆ ನೀಡಿದೆ. ಸಾರ್ವಜನಿಕ ಅಭಿಪ್ರಾಯ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆಯಿಂದಾಗಿ ಇದು ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಚಾರಿಟಿಯ FCRA ಪರವಾನಗಿ ವಿವಾದ ಬ್ರಿಟನ್ ಸಂಸತ್ತಿನಲ್ಲೂ ಗುರುವಾರ ಸದ್ದು ಮಾಡಿತ್ತು. “ಚಾರಿಟಿಯ ಖಾತೆಗಳಿಗೆ FCRA ಯಾಕೆ ನಿರಾಕರಿಸಲಾಗಿದೆ, ಇದರ ಬಗ್ಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಭಾರತ ಸರ್ಕಾರವನ್ನು ಕೇಳಬೇಕು” ಎಂದು ಅಲ್ಲಿನ ಸಂಸದರು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದನ್ನೂ ಓದಿ:ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ಕ್ರಿಸ್‌ಮಸ್ ದಿನದಂದು ಹಿಂತೆಗೆದುಕೊಳ್ಳಲಾಗಿತ್ತು. ಇದನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ವ್ಯಾಪಕವಾಗಿ ಖಂಡಿಸಿದ್ದರು.

ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಎಂದು ಗೃಹ ಸಚಿವಾಲಯ ಹೇಳಿತ್ತು. ಆದರೆ ಸಚಿವಾಲಯವು ಇದಕ್ಕೆ ವಿವರಗಳನ್ನು ನೀಡಿರಲಿಲ್ಲ. ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಚಾರಿಟಿಯ ಖಾತೆಗಳು ಸ್ಥಗಿತಗೊಂಡಿದ್ದವು.

ಕಳೆದ ವಾರ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ಭಾರತದಲ್ಲಿನ 12,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಚಾರಿಟಬಲ್ ಸಂಸ್ಥೆಗಳು ಅವಧಿ ಮುಗಿದ ನಂತರ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಪರವಾನಗಿ ಇಲ್ಲದ ಸಂಸ್ಥೆಗಳ ಪಟ್ಟಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಆಕ್ಸ್‌ಫ್ಯಾಮ್ ಇಂಡಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆಮದರ್‌ ಥೆರೇಸಾ ಮದರ್‌ ಥರೇಸಾ ಮದರ್‌ ಥೆರೇಸಾ ಮದರ್‌ ಥರೆಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...