Homeಚಳವಳಿದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ...

ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

- Advertisement -
- Advertisement -

ದೇಶದಲ್ಲಿ ನಡೆಯುತ್ತಿರುವ ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಗುಂಪು ಬಹಿರಂಗ ಪತ್ರ ಬರೆದಿದೆ.

ದ್ವೇಷದ ಭಾಷಣ ಮತ್ತು ಜಾತಿ ಆಧಾರಿತ ಹಿಂಸಾಚಾರ ವಿಷಯಗಳ ಬಗ್ಗೆ ಪ್ರಧಾನಿ ಮೌನವಾಗಿರುವುದು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತಿದೆ ಎಂದು ವಿದ್ಯಾರ್ಥಿಗಳು, ಅಧ್ಯಾಪಕರು ಪತ್ರದಲ್ಲಿ ಹೇಳಿದ್ದಾರೆ.

ಈ ಬಹಿರಂಗ ಪತ್ರಕ್ಕೆ ಐಐಎಂ-ಅಹಮದಾಬಾದ್ ಮತ್ತು ಐಐಎಂ-ಬೆಂಗಳೂರಿನ 13 ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿದಂತೆ 183 ಮಂದಿ ಸಹಿ ಮಾಡಿದ್ದಾರೆ.

ಇತ್ತೀಚಿಗೆ ಉತ್ತರಾಖಂಡದ ಹರಿದ್ವಾರದ ಧರ್ಮ ಸಂಸದ್ ಕಾರ್ಯಕ್ರಮದ ವೇಳೆ ನಡೆದ ದ್ವೇಷ ಭಾಷಣಗಳ ಹಿನ್ನೆಲೆಯಲ್ಲಿ ಪತ್ರ ಬರೆಯಲಾಗಿದೆ. ಹರಿದ್ವಾರದಲ್ಲಿ ನಡೆದ ಕಾರ್ಯಕ್ರಮದ ವೇಳೆ ಕೆಲವು ಹಿಂದೂ ಧಾರ್ಮಿಕ ಮುಖಂಡರು ಮುಸ್ಲಿಮರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದರು. ಜೊತೆಗೆ ಮುಸ್ಲೀಮರ ನರಮೇಧಕ್ಕೆ ಕರೆ ನೀಡಿದ್ದರು.

ಇದನ್ನೂ ಓದಿ: ಹರಿದ್ವಾರ ’ಧರ್ಮ ಸಂಸದ್’ ದ್ವೇಷ ಭಾಷಣ: ತನಿಖೆ ನಡೆಸಲು ಎಸ್‌ಐಟಿ ರಚನೆ

“ಧರ್ಮ, ಜಾತಿ ಗುರುತುಗಳ ಆಧಾರದ ಮೇಲೆ ಸಮುದಾಯಗಳ ವಿರುದ್ಧ ದ್ವೇಷದ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಕರೆ ನೀಡುವುದು ಸ್ವೀಕಾರಾರ್ಹವಲ್ಲ. ಭಾರತೀಯ ಸಂವಿಧಾನವು ಗೌರವಯುತವಾಗಿ ಧರ್ಮವನ್ನು ಆಚರಿಸುವ ಹಕ್ಕನ್ನು ನೀಡಿದ್ದರೂ ಸಹ ದೇಶದಲ್ಲಿ ಭಯದ ವಾತಾವರಣ ಇದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ದೇಶದಲ್ಲಿ ಈಗ ಭಯದ ವಾತಾವರಣವಿದೆ. ಇತ್ತೀಚಿನ ದಿನಗಳಲ್ಲಿ ಚರ್ಚ್‌ಗಳು ಸೇರಿದಂತೆ ಪೂಜಾ ಸ್ಥಳಗಳನ್ನು ಧ್ವಂಸ ಮಾಡಲಾಗುತ್ತಿದೆ. ಮುಸ್ಲಿಂ ಸಹೋದರ ಸಹೋದರಿಯರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಳ್ಳುವಂತೆ ಕರೆ ನೀಡಲಾಗುತ್ತಿದೆ. ಇದೆಲ್ಲವನ್ನೂ ಯಾವುದೇ ಭಯವಿಲ್ಲದೆ, ನಿರ್ಭಯದಿಂದ ಮಾಡಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಐವರು ಪ್ರಾಧ್ಯಾಪಕರು ಈ ಪತ್ರವನ್ನು ರಚಿಸಿದ್ದಾರೆ. ಐಐಎಂನ ಅಧ್ಯಾಪಕ ಪ್ರತೀಕ್ ರಾಜ್ (ಸಹಾಯಕ ಪ್ರಾಧ್ಯಾಪಕ ಸ್ಟ್ರಾಟಜಿ), ದೀಪಕ್ ಮಾಲ್ಘಾನ್ (ಸಹ ಪ್ರಾಧ್ಯಾಪಕರು, ಸಾರ್ವಜನಿಕ ನೀತಿ), ದಾಲ್ಹಿಯಾ ಮಣಿ (ಸಹ ಪ್ರಾಧ್ಯಾಪಕರು, ‌ಉದ್ಯಮಶೀಲತೆ), ರಾಜಲಕ್ಷ್ಮಿ ವಿ ಮೂರ್ತಿ (ಸಹ ಪ್ರಾಧ್ಯಾಪಕರು, ಡಿಸಿಷನ್ ಸೈನ್ಸ್), ಹೇಮಾ ಸ್ವಾಮಿನಾಥನ್ (ಸಹ ಪ್ರಾಧ್ಯಾಪಕರು, ಸಾರ್ವಜನಿಕ ನೀತಿ) ಇವರ ಜೊತೆಗೆ ಪ್ರಮುಖ ಪರಿಸರ ಅರ್ಥಶಾಸ್ತ್ರಜ್ಞರಾದ ಮಾಲ್ಘಾನ್ ಕೂಡ ಸೇರಿದ್ದಾರೆ.

ಹರಿದ್ವಾರದಲ್ಲಿ ನಡೆದ ‘ಧರ್ಮ ಸಂಸದ್’ ವೇಳೆ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.


ಇದನ್ನೂ ಓದಿ: ಹರಿದ್ವಾರದ ದ್ವೇಷ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮಕ್ಕಾಗಿ ಸುಪ್ರೀಂಕೋರ್ಟ್‌ಗೆ ಪತ್ರ ಬರೆದ 76 ಖ್ಯಾತ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sariyada krama kai golla beku inta Desha Drohi savvi Danakke bele illa evaga jatty Darma anta muslim krichan anta martiddare Narendra modi Desha vannu marta eddane sarkara yechet koldeku intavaru Desha Drohi

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...