Homeಮುಖಪುಟಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

ಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ತೀವ್ರ ಕಸರತ್ತು ನಡೆಸುತ್ತಿವೆ. ಇಂತಹ ಸಮಯದಲ್ಲಿ ಬಿಜೆಪಿ ಶಾಸಕನೊಬ್ಬ ವೇದಿಕೆ ಮೇಲಿರುವಾಗಲೇ ಅಲ್ಲಿಗೆ ಬಂದ ರೈತನೊಬ್ಬ ಶಾಸಕನ ಕೆನ್ನೆಗೆ ಬಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉನ್ನಾವೋದ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲಿದ್ದಾಗ ವಯಸ್ಸಾದ ರೈತನೊಬ್ಬ ಕೆನ್ನೆಗೆ ಬಾರಿಸಿದ್ದಾನೆ. ಕೂಡಲೇ ಅಲ್ಲಿದ್ದವರು ರೈತನನ್ನು ವೇದಿಕೆಯಿಂದ ಹೊರಗೆ ಎಳೆದುಕೊಂಡು ಹೋಗಿದ್ದಾರೆ. ಈ 21 ಸೆಕೆಂಡ್‌ಗಳ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧ ಜನ ಸಿಟ್ಟುಗೊಂಡಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.

ಈ ವಿಡಿಯೋವನ್ನು ಪೋಸ್ಟ್ ಮಾಡಿರುವ ಸಮಾಜವಾದಿ ಪಕ್ಷವು “ಬಿಜೆಪಿ ಶಾಸಕ ಪಂಕಜ್ ಗುಪ್ತಾ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ರೈತನೊಬ್ಬ ಅವರ ಕಪಾಳಕ್ಕೆ ಬಾರಿಸಿದ್ದಾರೆ. ಇದು ಕೇವಲ ಶಾಸಕನಿಗೆ ಮಾತ್ರವಲ್ಲ ಯೋಗಿ ಆದಿತ್ಯನಾಥ್‌ರವರ ಕೆಟ್ಟ ಆಡಳಿತ, ಕೆಟ್ಟ ನೀತಿಗಳು ಮತ್ತು ಸರ್ವಾಧಿಕಾರಕ್ಕೆ ಬಿದ್ದ ಹೊಡೆತವಾಗಿದೆ” ಎಂದು ಬರೆದಿದೆ.

ರೈತ ತನ್ನ ಹಸು ಕಳೆದುಹೋಗಿದ್ದರ ಬಗ್ಗೆ ಪೊಲೀಸ್ ಸೇರಿದಂತೆ ಶಾಸಕನಿಗೆ ದೂರು ಕೊಟ್ಟಿದ್ದ. ಆದರೆ ಅದನ್ನು ಹುಡುಕಲು ಯಾರೂ ಸಹಾಯ ಮಾಡಲಿಲ್ಲ. ಹಾಗಾಗಿ ಕೋಪದಲ್ಲಿ ಶಾಸಕನ ಕಪಾಳಕ್ಕೆ ಬಾರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಘಟನೆ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಶಾಸಕ ಪಂಕಜ್ ಗುಪ್ತಾ ಪ್ರತಿಕ್ರಿಯಿಸಿದ್ದು, “ಅವರು ಕೇವಲ ನನ್ನ ಗದ್ದ ಮುಟ್ಟಿ ಮುದ್ದು ಮಾಡಿದರು ಅಷ್ಟೇ. ಆದರೆ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಪ್ರಕರಣವನ್ನು ತಿರುಚುತ್ತಿವೆ” ಎಂದು ಆರೋಪಿಸಿದ್ದಾರೆ.

ಅಲ್ಲದೆ ಶಾಸಕರು ತಮಗೆ ಕಪಾಳ ಮೋಕ್ಷ ಮಾಡಿದ ರೈತರನೊಟ್ಟಿಗೆ ಕುಳಿತು ಪತ್ರಿಕಾಗೋಷ್ಠಿ ಸಹ ನಡೆಸಿದ್ದಾರೆ. ಅಲ್ಲಿ ಪತ್ರಕರ್ತರೊಬ್ಬರು ನೀವು ಪ್ರೀತಿಯಿಂದ ಮಾಡಿದ್ದೀರಿ ಎಂದು ಹೇಳುತ್ತಿದ್ದೀರಿ, ಆದರೆ ಅದರಿಂದ ತಪ್ಪು ಸಂದೇಶ ಹೋಗಿದೆಯಲ್ಲ ಎಂದು ರೈತನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ರೈತನು “ನಾನು ಶಾಸಕನಿಗೆ ಹೊಡೆದಿಲ್ಲ. ನಾನು ಅವರ ಹತ್ತಿರ ಬಂದು ಬೇಟಾ (ಮಗ) ಎಂದು ಸಂಬೋಧಿಸಿ ಏನೋ ಕೇಳಿದೆ” ಎಂದಿದ್ದಾರೆ.

ಆಗ ಮಧ್ಯಪ್ರವೇಸಿಸಿದ ಶಾಸಕ ಪಂಕಜ್ ಗುಪ್ತಾ, “ವಾಸ್ತವ ಸಂಗತಿ ಏನೆಂದರೆ, ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಘಟನೆಯನ್ನು ತಿರುಚಿದ್ದಾರೆ. ಈ ರೈತನಿಗೆ ನನ್ನ ಜೊತೆ ಯಾವುದೇ ಸಮಸ್ಯೆ ಇಲ್ಲ, ರೈತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇದ್ದಾರೆ ಎಂದು ತೋರಿಸಲು ವಿರೋಧ ಪಕ್ಷಗಳು ಬಯಸಿದ್ದಾರೆ. ಇವರು ನನ್ನ ತಂದೆಯಂತೆ, ಅವರು ಇದನ್ನು ಹಿಂದೆಯೂ ಮಾಡುತ್ತಿದ್ದರು” ಎಂದು ರೈತನ ಕುರಿತು ಮಾತನಾಡಿದ್ದಾರೆ.


ಇದನ್ನೂ ಓದಿ: ಬುಲ್ಲಿ ಬಾಯ್‌‌ ವಿಕೃತಿಯ ಬಳಿಕ ‘ಟ್ರೇಡ್‌’ ‘ರಾಯ್ತಾಸ್‌’ ಗುಂಪುಗಳ ನಡುವಿನ ಬಲಪಂಥೀಯ ಭಿನ್ನತೆ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...