Homeಮುಖಪುಟ‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

‘ಟೆಕ್‌ ಫಾಗ್‌’ ಪ್ರಕರಣ: ಸುಪ್ರಿಂಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಪ್ರಮುಖ ಸಾಮಾಜಿಕ ಮಾಧ್ಯಮಗಳನ್ನು ಹೈಜಾಕ್ ಮಾಡಲು ಮತ್ತು ಎನ್‌ಕ್ರಿಪ್ಟ್ ಮಾಡಿದ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌‌ಗಳನ್ನು ಬೈಪಾಸ್ ಮಾಡಲು ಬಿಜೆಪಿಯು “ಟೆಕ್ ಫಾಗ್” ಎಂಬ ರಹಸ್ಯವಾದ ಅಪ್ಲಿಕೇಶನ್ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೇಂದ್ರ ಸರ್ಕಾರದಿಂದ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಬರಬೇಕು. ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಸ್ಥಿಕೆ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

ಬಿಜೆಪಿಯು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಸಂದೇಶಗಳನ್ನು ಮತ್ತು ಕಾರ್ಯಸೂಚಿಯನ್ನು ಹೆಚ್ಚಿಸಿಕೊಳ್ಳಲು, ಮಹಿಳಾ ಪತ್ರಕರ್ತರು ಸೇರಿದಂತೆ ಬಲಪಂಥೀಯ ರಾಜಕಾರಣದ ವಿರುದ್ಧ ಇರುವವರನ್ನು ಟಾರ್ಗೆಟ್‌ ಮಾಡಲು ಈ ಅಪ್ಲಿಕೇಶನ್ ಬಳಸಲಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರಿನಾಥೆ ಆರೋಪಿಸಿದ್ದಾರೆ.

ದಿ ವೈರ್‌ನ ಎರಡು ವರ್ಷಗಳ ತನಿಖೆಯು ರಹಸ್ಯ ಅಪ್ಲಿಕೇಶನ್‌ನ ಕಾರ್ಯನಿರ್ವಹಣೆಯನ್ನು ಬಹಿರಂಗಪಡಿಸಿದೆ. ಟ್ವಿಟರ್‌‌ನ ‘ಟ್ರೆಂಡಿಂಗ್’ ವಿಭಾಗವನ್ನು ಮತ್ತು ಫೇಸ್‌ಬುಕ್‌ನಲ್ಲಿನ ‘ಟ್ರೆಂಡ್’ ಅನ್ನು ಹೈಜಾಕ್ ಮಾಡಬಹುದು, ‘ನಿಷ್ಕ್ರಿಯ’ ವಾಟ್ಸ್‌ಅಪ್‌‌ ಖಾತೆಗಳನ್ನು ಉದ್ದೇಶಿತ ಕಿರುಕುಳಕ್ಕಾಗಿ ಬಳಸಬಹುದು ಎಂಬುದನ್ನು ತನಿಖಾ ವರದಿ ಹೊರಹಾಕಿದೆ.

“ಸರ್ಕಾರವು ನಿಸ್ಸಂಶಯವಾಗಿ ಟೆಕ್ ಫಾಗ್‌ನೊಂದಿಗೆ ಕೈಜೋಡಿಸಿದೆ. ಬಿಜೆಪಿ ವಿಶೇಷವಾಗಿ ಟೆಕ್ ಫಾಗ್‌ನೊಂದಿಗಿದೆ. ಆದರೆ ಭಾರತದ ಐಟಿ ಮತ್ತು ದೂರಸಂಪರ್ಕ ಸಚಿವರು ಏನು ಮಾಡುತ್ತಿದ್ದಾರೆ? ಸಮಸ್ಯೆ ಎಷ್ಟು ಗಂಭೀರವಾಗಿದ್ದರೂ ಸಚಿವಾಲಯ ಏಕೆ ಎಚ್ಚೆತ್ತುಕೊಂಡಿಲ್ಲ?” ಸುಪ್ರಿಯಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

ಪತ್ರಕರ್ತರು ಮತ್ತು ರಾಜಕಾರಣಿಗಳು ಸೇರಿದಂತೆ ಜನರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಬಳಸುವ ಬಗ್ಗೆ ಸರ್ಕಾರವು ಮೌನವಾಗಿದೆ. ಸುಪ್ರೀಂ ಕೋರ್ಟ್ ಪೆಗಾಸಸ್‌‌ ವಿವಾದವನ್ನು ವಿಚಾರಣೆ ಮಾಡುತ್ತಿದೆ ಎಂದಿರುವ ಅವರು, ಟೆಕ್‌ ಫಾಗ್‌ ಪ್ರಕರಣವನ್ನೂ ಹೀಗೆಯೇ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

“ನಾನು ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸುತ್ತೇನೆ. ಸುಪ್ರಿಂ ಕೋರ್ಟ್ ಈಗಾಗಲೇ ಪೆಗಾಸಸ್ ವಿಷಯವನ್ನು ಪರಿಶೀಲಿಸುತ್ತಿದೆ. ಈ ವರದಿಯು ಭಾರತೀಯ ನಾಗರಿಕರನ್ನು ‌ಟಾರ್ಗೆಟ್‌ ಮಾಡಿದೆ. ನಮ್ಮ ಪ್ರಜಾಪ್ರಭುತ್ವದ ತಳಹದಿಯನ್ನೇ ಘಾಸಿಗೊಳಿಸುವುದರಿಂದ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ನೋಡಬೇಕು” ಅವರು ಹೇಳಿದ್ದಾರೆ.

“ಭಾರತದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಹಕ್ಕು ಅಥವಾ ಸ್ವಾತಂತ್ರ್ಯ ಯಾರಿಗೂ ಇರಬಾರದು ಎಂಬ ಕಾರಣಕ್ಕಾಗಿ ನಾನು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು. ಇದರ ಹಿಂದೆ ಇರುವವರನ್ನು ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾದ ಕೆಲವು ಪದಾಧಿಕಾರಿಗಳು ಈ ಅಪ್ಲಿಕೇಷನ್‌‌ನ ಭಾಗವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿಯು ಈ ವಿಷಯದ ಬಗ್ಗೆ ಸ್ಪಷ್ಟವಾಗಿರಬೇಕು ಎಂದು ತಿಳಿಸಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಯುವ ಮೊರ್ಚಾದ ನಾಯಕರೊಬ್ಬರು, ಬಿಜೆಪಿ ಆ್ಯಪ್ ಬಳಸಿರುವುದನ್ನು ನಿರಾಕರಿಸಿದ್ದಾರೆ.

ಕರೋನವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ವಿಧಿಸಿದ ನಂತರ ಕಾಂಗ್ರೆಸ್‌ ಪಕ್ಷವು ಕಾರ್ಮಿಕರೊಂದಿಗೆ ನಿಂತಿತು. ಆಗ ಹ್ಯಾಶ್‌ಟ್ಯಾಗ್ ಬಳಸಿ ಕಾಂಗ್ರೆಸ್ ಅನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲು ಟೆಕ್‌ ಫಾಗ್‌ ಅಪ್ಲಿಕೇಷನ್‌‌ ಬಳಸಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಆರೋಪಿಸಿದ್ದಾರೆ.

ತಬ್ಲೀಘಿ ಜಮಾತ್‌ನ ಮೇಲೆಯೂ ವ್ಯವಸ್ಥಿತ ದಾಳಿಯನ್ನು ಟೆಕ್ ಫಾಗ್ ಮಾಡಿದೆ. ಆದ್ದರಿಂದ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಯಾಕೆಂದರೆ ಇದು ಭಾರತದ ಪ್ರಜಾಪ್ರಭುತ್ವದ ಅಡಿಪಾಯಕ್ಕೆ ನೋವುಂಟು ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್ ಅವರು ರಹಸ್ಯ ಅಪ್ಲಿಕೇಶನ್ ಕುರಿತ ಚರ್ಚೆಗಾಗಿ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯನ್ನು ಕೇಳಿದ್ದಾರೆ. ಟೆಕ್‌ ಫಾಗ್‌ ವಿಷಯವು ಗಂಭೀರವಾಗಿದ್ದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...