Homeಮುಖಪುಟಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಿಗೆ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದೆ. ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಮಾರ್ಚ್ 07ರವರೆಗೆ 7 ಹಂತಗಳಲ್ಲಿ ಈ ಐದು ರಾಜ್ಯಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಮಾರ್ಚ್ 10 ರಂದು ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದೆ.

ಮೊದಲ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

ಜನವರಿ 14 ರಿಂದ ನಾಮಪತ್ರ ಪಕ್ರಿಯೆ ಆರಂಭ ಚುನಾವಣೆ ಫೆಬ್ರವರಿ 10 ರಂದು.

ಎರಡನೇ ಹಂತ (ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡಗಳಲ್ಲಿ ನಡೆಯಲಿದೆ)

ಜನವರಿ 21 ರಿಂದ ನಾಮಪತ್ರ ಪಕ್ರಿಯೆ ಆರಂಭವಾಗಲಿದ್ದು ಚುನಾವಣೆ ಫೆಬ್ರವರಿ 14 ರಂದು.

ಮೂರನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

25 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 20 ರಂದು.

ನಾಲ್ಕನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

27 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 23 ಫೆಬ್ರವರಿ

5ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

1 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 27 ರಂದು.

6ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

4ನೇ ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಮಾರ್ಚ್ 3 ರಂದು.

7ನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

10 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಮಾರ್ಚ್ 07 ರಂದು.

ಫಲಿತಾಂಶ: 10 ಮಾರ್ಚ್

ಪಂಜಾಬ್, ಗೋವಾ ಉತ್ತರಾಖಂಡ ರಾಜ್ಯಗಳು ಒಂದೇ ಹಂತದಲ್ಲಿ ಅಂದರೆ ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿವೆ. ಮಣಿಪುರ ಎರಡು ಹಂತಗಳಲ್ಲಿ ಮತ್ತು ಉತ್ತರ ಪ್ರದೇಶವು 7 ಹಂತಗಳಲ್ಲಿ ಚುನಾವಣೆ ಎದುರಿಸಲಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಕಾರಣಕ್ಕೆ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ನೀಡಲಾಗಿದ್ದು, ಕೋವಿಡ್ ಕಾರಣಕ್ಕೆ ನೇರವಾಗಿ ನಾಮಪತ್ರ ಸಲ್ಲಿಸುವ ಬದಲು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದರು. ಜೊತೆಗೆ ಚುನಾವಣಾ ರ್ಯಾಲಿಗಳನ್ನು, ಪ್ರಚಾರವನ್ನು ಆದಷ್ಟು ಆನ್‌ಲೈನ್ ಮೂಲಕ ಮಾಡಲು ಮನವಿ ಮಾಡಿದರು.

ರೋಡ್ ಶೋ, ಪಾದಯಾತ್ರೆಗಳನ್ನು, ಸೈಕಲ್ ಬೈಕ್ ರ್ಯಾಲಿಗಳನ್ನು, ಚುನಾವಣಾ ಪ್ರಚಾರ ಸಭೆಗಳನ್ನು ಜನವರಿ 15ರವರೆಗೂ ನಡೆಸಬಾರದು ಎಂದು ಆಯೋಗ ತಾಕೀತು ಮಾಡಿದೆ. ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಮನೆ ಮನೆ ಪ್ರಚಾರಕ್ಕೆ ಕೇವಲ 05 ಜನರಿಗೆ ಮಾತ್ರ ಅವಕಾಶವಿರುತ್ತದೆ. ಫಲಿತಾಂಶದ ನಂತರ ವಿಜಯೋತ್ಸವ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಕೇಂದ್ರಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಸುಶೀಲ್ ಚಂದ್ರರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿವು ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ಸಂವಿಧಾನ ನೀಡಿದೆ. ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಇದು ಸರಿಯಾಗಿ ನಡೆಸಲಾಗುತ್ತಿಲ್ಲ. ಮುಂದಿನ ಚುನಾವಣೆಗಳಿಗೆ ಸಮರ್ಪಕ ಪ್ರೊಟೋಕಾಲ್ ಅಳವಡಿಸಲಾಗುವುದು” ಎಂದರು.

ಕೋವಿಡ್ ರಕ್ಷಣೆ ಚುನಾವಣೆ, ಮುಕ್ತು ಚುನಾವಣೆ ಅತಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಮಾಡುವುದಕ್ಕಾಗಿ ಕಳೆದ 6 ತಿಂಗಳಿನಿಂದ ಚುನಾವಣಾ ಆಯೋಗ ಕೆಲಸ ಮಾಡಿದ್ದೇವೆ ಎಂದರು. ಎಲ್ಲಾ ರಾಜ್ಯಗಳಿಗೆ ಭೇಟಿ ಮಾಡಿ ರಾಜಕೀಯ ಪಕ್ಷಗಳು ಮತ್ತು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದೇವೆ ಎಂದು ತಿಳಿಸಿದರು.

ಗೋವಾದ 40 ಸ್ಥಾನಗಳಿಗೆ, ಮಣಿಪುರದ 60 ಕ್ಷೇತ್ರಗಳಿಗೆ, ಉತ್ತರಾಖಂಡದ 70 ಕ್ಷೇತ್ರಗಳಿಗೆ, ಪಂಜಾಬ್‌ನ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 403 ಸ್ಥಾನಗಳಿಗೆ ಸೇರಿ ಒಟ್ಟು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಪಂಜಾಬ್, ಉತ್ತರಪ್ರದೇಶ ಮತ್ತು ಉತ್ತರಾಖಂಡದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಗರಿಷ್ಠ 40 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು. ಗೋವಾ ಮತ್ತು ಮಣಿಪುರದ ಅಭ್ಯರ್ಥಿಗಳು ಗರಿಷ್ಠ 28 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು ಎಂದು ಆಯೋಗ ತಿಳಿಸಿದೆ.

ಜನವರ 07ರ ಮಾಹಿತಿಯಂತೆ ಈ ಐದು ರಾಜ್ಯಗಳಲ್ಲಿ 15 ಕೋಟಿ ಜನರು ಮೊದಲ ಡೋಸ್ ಲಸಿಕೆ ಮತ್ತು ಸುಮಾರು 9 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಯ ಚುನಾವಣೆಯು ಮಾರ್ಚ್ 23ರವರೆಗೆ ಮತ್ತು ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.


ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು,…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...