Homeಮುಖಪುಟಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

- Advertisement -
- Advertisement -

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಿಗೆ ವಿಧಾನಸಭಾ ಚುನಾವಣೆಗೆ ಕೊನೆಗೂ ದಿನಾಂಕ ನಿಗಧಿಯಾಗಿದೆ. ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಮಾರ್ಚ್ 07ರವರೆಗೆ 7 ಹಂತಗಳಲ್ಲಿ ಈ ಐದು ರಾಜ್ಯಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಮಾರ್ಚ್ 10 ರಂದು ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದೆ.

ಮೊದಲ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

ಜನವರಿ 14 ರಿಂದ ನಾಮಪತ್ರ ಪಕ್ರಿಯೆ ಆರಂಭ ಚುನಾವಣೆ ಫೆಬ್ರವರಿ 10 ರಂದು.

ಎರಡನೇ ಹಂತ (ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡಗಳಲ್ಲಿ ನಡೆಯಲಿದೆ)

ಜನವರಿ 21 ರಿಂದ ನಾಮಪತ್ರ ಪಕ್ರಿಯೆ ಆರಂಭವಾಗಲಿದ್ದು ಚುನಾವಣೆ ಫೆಬ್ರವರಿ 14 ರಂದು.

ಮೂರನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

25 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 20 ರಂದು.

ನಾಲ್ಕನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

27 ಜನವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 23 ಫೆಬ್ರವರಿ

5ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

1 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಫೆಬ್ರವರಿ 27 ರಂದು.

6ನೇ ಹಂತ ( ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಮಾತ್ರ)

4ನೇ ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಚುನಾವಣೆ ಮಾರ್ಚ್ 3 ರಂದು.

7ನೇ ಹಂತ (ಉತ್ತರ ಪ್ರದೇಶದಲ್ಲಿ ಮಾತ್ರ)

10 ಫೆಬ್ರವರಿಯಿಂದ ನಾಮಪತ್ರ ಪಕ್ರಿಯೆ ಮಾರ್ಚ್ 07 ರಂದು.

ಫಲಿತಾಂಶ: 10 ಮಾರ್ಚ್

ಪಂಜಾಬ್, ಗೋವಾ ಉತ್ತರಾಖಂಡ ರಾಜ್ಯಗಳು ಒಂದೇ ಹಂತದಲ್ಲಿ ಅಂದರೆ ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿವೆ. ಮಣಿಪುರ ಎರಡು ಹಂತಗಳಲ್ಲಿ ಮತ್ತು ಉತ್ತರ ಪ್ರದೇಶವು 7 ಹಂತಗಳಲ್ಲಿ ಚುನಾವಣೆ ಎದುರಿಸಲಿದೆ.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಉಲ್ಲಂಘಿಸಿದವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೋವಿಡ್ ಕಾರಣಕ್ಕೆ ಮತದಾನದ ಸಮಯವನ್ನು ಒಂದು ಗಂಟೆ ಹೆಚ್ಚಳ ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ನಾಮಪತ್ರ ಸಲ್ಲಿಸುವ ಅವಕಾಶ ನೀಡಲಾಗಿದ್ದು, ಕೋವಿಡ್ ಕಾರಣಕ್ಕೆ ನೇರವಾಗಿ ನಾಮಪತ್ರ ಸಲ್ಲಿಸುವ ಬದಲು ಆನ್‌ಲೈನ್‌ ಮೂಲಕ ಸಲ್ಲಿಸಬಹುದು ಎಂದರು. ಜೊತೆಗೆ ಚುನಾವಣಾ ರ್ಯಾಲಿಗಳನ್ನು, ಪ್ರಚಾರವನ್ನು ಆದಷ್ಟು ಆನ್‌ಲೈನ್ ಮೂಲಕ ಮಾಡಲು ಮನವಿ ಮಾಡಿದರು.

ರೋಡ್ ಶೋ, ಪಾದಯಾತ್ರೆಗಳನ್ನು, ಸೈಕಲ್ ಬೈಕ್ ರ್ಯಾಲಿಗಳನ್ನು, ಚುನಾವಣಾ ಪ್ರಚಾರ ಸಭೆಗಳನ್ನು ಜನವರಿ 15ರವರೆಗೂ ನಡೆಸಬಾರದು ಎಂದು ಆಯೋಗ ತಾಕೀತು ಮಾಡಿದೆ. ನಂತರ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಮನೆ ಮನೆ ಪ್ರಚಾರಕ್ಕೆ ಕೇವಲ 05 ಜನರಿಗೆ ಮಾತ್ರ ಅವಕಾಶವಿರುತ್ತದೆ. ಫಲಿತಾಂಶದ ನಂತರ ವಿಜಯೋತ್ಸವ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮತ ಎಣಿಕೆ ಕೇಂದ್ರಕ್ಕೆ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಖ್ಯ ಚುನಾವಣಾಧಿಕಾರಿ ಸುಶೀಲ್ ಚಂದ್ರರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿವು ಜವಾಬ್ದಾರಿಯನ್ನು ಚುನಾವಣಾ ಆಯೋಗಕ್ಕೆ ಸಂವಿಧಾನ ನೀಡಿದೆ. ಕಳೆದ ಎರಡು ವರ್ಷದಿಂದ ಕೋವಿಡ್ ಕಾರಣಕ್ಕೆ ಇದು ಸರಿಯಾಗಿ ನಡೆಸಲಾಗುತ್ತಿಲ್ಲ. ಮುಂದಿನ ಚುನಾವಣೆಗಳಿಗೆ ಸಮರ್ಪಕ ಪ್ರೊಟೋಕಾಲ್ ಅಳವಡಿಸಲಾಗುವುದು” ಎಂದರು.

ಕೋವಿಡ್ ರಕ್ಷಣೆ ಚುನಾವಣೆ, ಮುಕ್ತು ಚುನಾವಣೆ ಅತಿ ಹೆಚ್ಚಿನ ಮತದಾರರು ಭಾಗವಹಿಸುವಂತೆ ಮಾಡುವುದಕ್ಕಾಗಿ ಕಳೆದ 6 ತಿಂಗಳಿನಿಂದ ಚುನಾವಣಾ ಆಯೋಗ ಕೆಲಸ ಮಾಡಿದ್ದೇವೆ ಎಂದರು. ಎಲ್ಲಾ ರಾಜ್ಯಗಳಿಗೆ ಭೇಟಿ ಮಾಡಿ ರಾಜಕೀಯ ಪಕ್ಷಗಳು ಮತ್ತು ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿದ್ದೇವೆ ಎಂದು ತಿಳಿಸಿದರು.

ಗೋವಾದ 40 ಸ್ಥಾನಗಳಿಗೆ, ಮಣಿಪುರದ 60 ಕ್ಷೇತ್ರಗಳಿಗೆ, ಉತ್ತರಾಖಂಡದ 70 ಕ್ಷೇತ್ರಗಳಿಗೆ, ಪಂಜಾಬ್‌ನ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 403 ಸ್ಥಾನಗಳಿಗೆ ಸೇರಿ ಒಟ್ಟು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಪಂಜಾಬ್, ಉತ್ತರಪ್ರದೇಶ ಮತ್ತು ಉತ್ತರಾಖಂಡದ ಅಭ್ಯರ್ಥಿಗಳು ಚುನಾವಣಾ ಪ್ರಚಾರಕ್ಕಾಗಿ ಗರಿಷ್ಠ 40 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು. ಗೋವಾ ಮತ್ತು ಮಣಿಪುರದ ಅಭ್ಯರ್ಥಿಗಳು ಗರಿಷ್ಠ 28 ಲಕ್ಷ ರೂಗಳವರೆಗೆ ಖರ್ಚು ಮಾಡಬಹುದು ಎಂದು ಆಯೋಗ ತಿಳಿಸಿದೆ.

ಜನವರ 07ರ ಮಾಹಿತಿಯಂತೆ ಈ ಐದು ರಾಜ್ಯಗಳಲ್ಲಿ 15 ಕೋಟಿ ಜನರು ಮೊದಲ ಡೋಸ್ ಲಸಿಕೆ ಮತ್ತು ಸುಮಾರು 9 ಕೋಟಿ ಜನರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಆಯೋಗ ಮಾಹಿತಿ ನೀಡಿದೆ.

ಗೋವಾ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 15 ರಂದು ಮುಕ್ತಾಯಗೊಳ್ಳಲಿದೆ. ಮಣಿಪುರ ವಿಧಾನಸಭೆಯ ಅಧಿಕಾರಾವಧಿಯು ಮಾರ್ಚ್ 19 ರಂದು ಮುಕ್ತಾಯಗೊಳ್ಳಲಿದ್ದು, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆಯ ಚುನಾವಣೆಯು ಮಾರ್ಚ್ 23ರವರೆಗೆ ಮತ್ತು ಯುಪಿ ವಿಧಾನಸಭೆಯ ಅಧಿಕಾರಾವಧಿಯು ಮೇ 14 ರವರೆಗೆ ಇರುತ್ತದೆ.

2022ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಒಂದು ಅಥವಾ ಎರಡು ತಿಂಗಳು ಮೂಂದೂಡಬೇಕೆಂದು ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ಮನವಿ ಮಾಡಿತ್ತು. ಅಲ್ಲದೆ ರಾಜ್ಯದಲ್ಲಿ ಚುನಾವಣಾ ರ್ಯಾಲಿಗಳನ್ನು ಸಹ ರದ್ದುಗೊಳಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದೆ. ಹೆಚ್ಚುತ್ತಿರುವ ಒಮೈಕ್ರಾನ್ ಪ್ರಕರಣಗಳು ತೀವ್ರಥರನಾದ ಮೂರನೇ ಅಲೆಗೆ ಕಾರಣವಾಗಬಹುದು ಎಂಬ ಕಾರಣದಿಂದ ಈ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು.


ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಐಐಎಂ ವಿದ್ಯಾರ್ಥಿಗಳು,…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...