Homeಕರ್ನಾಟಕಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?

ಬಲಪಂಥೀಯರು ನೀಡಿದ ನಿರೂಪಣೆಯನ್ನು ಎಲ್ಲರೂ ಒಪ್ಪಿಕೊಂಡು ಮದುವೆ ಮನೆಯ ಮೇಲೆ ಮುಗಿಬಿದ್ದಿದ್ದಾರೆ

- Advertisement -
- Advertisement -

ಮದುಮಗನನ್ನು ಟ್ರೋಲ್‌‌‌‌ ಮಾಡಬೇಕು ಎಂದು ಆತನ ಸ್ನೇಹಿತರು ಮಾಡಿರುವ ತಮಾಷೆಯ ಘಟನೆಯ ವಿಡಿಯೋವೊಂದು ವೈರಲ್ ಆದ ತಕ್ಷಣವೇ ಕೊರಗಜ್ಜನಿಗೆ ಅವಮಾನ ಎಂಬುದಾಗಿ ಎಲ್ಲಡೆ ವರದಿಯಾಯಿತು. ಜೊತೆಗೆ ಕೋಮು ವೈಷ್ಯಮದ ಘಟನೆಯಾಗಿ ಮಾರ್ಪಟ್ಟಿದಲ್ಲದೆ ಇದನ್ನು ಬಳಸಿಕೊಳ್ಳಲು ಹಲವು ಸಂಘಟನೆಗಳು ಮುಂದಾಗಿವೆ. ಆದರೆ ವಿಡಿಯೋಗೂ ಕೊರಗಜ್ಜನಿಗೂ ಸಂಬಂಧವೇ ಇಲ್ಲ ಎಂದು ಮದುಮಗನ ಕಡೆಯವರು ನೋವು ತೋಡಿಕೊಂಡಿದ್ದಾರೆ.

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೆ ರಾತ್ರಿ ಮದುಮಗನ ಸ್ನೇಹಿರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಅದರಂತೆ ಅಂದೇ ರಾತ್ರಿ ಉಪ್ಪಳದಿಂದ ಮದುಮಗ ಮತ್ತು ಅವರ ಸ್ನೇಹಿತರು ಆಗಮಿಸಿದ್ದರು. ಈ ವೇಳೆ ಮದುಮಗನ ಸ್ನೇಹಿತರು ಮದುಮಗನನ್ನು ತಮಾಷೆ ಮಾಡುವ ಉದ್ದೇಶದಿಂದ, ಆತನಿಗೆ ಹರಿದ ಟಿಶರ್ಟ್ ಧರಿಸುವಂತೆ ಮಾಡಿ, ತಲೆಗೆ ಮಟ್ಟಳೆ ಹಾಕಿ, ಸೊಂಟದ ಸುತ್ತ ಒಂದಷ್ಟು ಸೊಪ್ಪುಗಳನ್ನು ಸುತ್ತಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಣ್ಣ ಎರಚಿ ಹಾಡು ಹಾಡಿ ಖುಷಿ ಪಟ್ಟಿದ್ದರು.

ಇದನ್ನೂ ಓದಿ:ಕೊರಗರ ಮೇಲೆ ಪೊಲೀಸ್ ಹಲ್ಲೆ ಪ್ರಕರಣ: ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಏಕೆ ಸುಮ್ಮನಿದ್ದಾರೆ? -ಸಿಪಿಎಂ ಪ್ರಶ್ನೆ

ಇದರ ನಂತರ, ವಧುವಿನ ಕಡೆಯವರ ಔತಣಕೂಟದಲ್ಲಿ ಭಾಗವಹಿಸಿ, ಆಹಾರವನ್ನು ಸ್ವೀಕರಿಸಿ ಅವರು ತೆರಳಿದ್ದರು. ಆದರೆ, ಮದುಮಗನನ್ನು ತಮಾಷೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಈ ವಿಡಿಯೊವನ್ನು ತುಳುನಾಡಿನಲ್ಲಿ ಆರಾಧಿಸುವ ‘ಕೊರಗಜ್ಜ’ ಎಂಬ ದೈವಕ್ಕೆ ಅವಮಾನ ಮಾಡಲಾಗಿದೆ ಎಂದು ಬಲಪಂಥೀಯರು ವೈರಲ್ ಮಾಡಿದ್ದರು.

ಇದರ ನಂತರ ಈ ವಿಡಿಯೊ ಕೋಮು ಆಯಾಮದೊಂದಿಗೆ ಮತ್ತಷ್ಟು ವೈರಲ್ ಆಗಿತ್ತು. ಈ ಘಟನೆಯನ್ನು ಬಳಸಿಕೊಂಡ ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತರು ಸಾಲೆತ್ತೂರಿನಲ್ಲಿರುವ ವಧುವಿನ ಮನೆಯ ಬಳಿ ತೆರಳಿ ಗಲಾಟೆ ಮಾಡಿದ್ದರು. ಜೊತಗೆ ವಧುವಿನ ತಂದೆ, ಸಹೋದರ ಮತ್ತು ವರನ ಸ್ನೇಹಿತರ ವಿರುದ್ದ ವಿಟ್ಲ ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಿಸಿದ್ದಾರೆ. ಇದೀಗ ಮದುಮಗನ ಕಡೆಯ ಇಬ್ಬರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ ಎಂದು ನಾನುಗೌರಿ.ಕಾಂ ಮೂಲವೊಂದು ಹೇಳಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ವಧುವಿನ ಸಂಬಂಧಿಯೊಬ್ಬರು, “ಮದುಮಗ ಮತ್ತು ಆತನ ಸ್ನೇಹಿತರು ತಮಾಷೆ ಮಾಡುವ ಉದ್ದೇಶದಿಂದ, ಮದುಮಗನಿಗೆ ಸೊಪ್ಪುಗಳನ್ನು ಕಟ್ಟಿ, ಮುಖಕ್ಕೆ ಕಪ್ಪು ಬಣ್ಣಬಳಿದು ಕಾಡು ಮನುಷ್ಯನ ರೀತಿಯಲ್ಲಿ ತಯಾರುಗೊಳಿಸಿದ್ದರು. ಇದನ್ನು ಮದುಮಗನನ್ನು ತಮಾಷೆ ಮಾಡುವ ಉದ್ದೇಶದಿಂದ ಮಾತ್ರ ಮಾಡಿದ್ದಾರೆ. ಕೊರಗಜ್ಜನನ್ನು ಅವಮಾನಿಸಲು ಮಾಡಿರುವುದು ಅಲ್ಲವೇ ಅಲ್ಲ, ಅಂತಹದ್ದೊಂದು ಆಲೋಚನೆಯೂ ಇರಲಿಲ್ಲ. ಆದರೆ ವಿಡಿಯೊ ಕೋಮು ಆಯಾಮದೊಂದಿಗೆ ವೈರಲ್‌ ಆಗತೊಡಗಿದೆ” ಎಂದು ಬೇಸರ ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಕೊರಗರ ಮೇಲೆಯೆ ಪ್ರಕರಣ: ಬಿಜೆಪಿಯ ಗುಪ್ತ ಅಜೆಂಡವೇ ಎಂದ ಸಿದ್ದರಾಮಯ್ಯ

ವಧುವಿನ ಸೋದರ ಮಾವ ಮಾತನಾಡಿ, “ಯುವಕರು ತಮಾಷೆಗೆಂದು ಮಾಡಿರುವ ವಿಡಿಯೊ ಕೋಮು ಆಧಾರದಲ್ಲಿ ಹರಿದಾಡುತ್ತಿದೆ. ಅದು ಕೊರಗಜ್ಜನ ವೇಷವು ಅಲ್ಲ, ಅವರನ್ನು ಅವಮಾನಿಸಲು ಮಾಡಿದ್ದೂ ಅಲ್ಲ. ಈ ಬಗ್ಗೆ ಮದುಮಗನ ಸ್ನೇಹಿತರು ಕೂಡಾ ಅದನ್ನೇ ಹೇಳಿದ್ದು, ಒಂದು ವೇಳೆ ಅವರು ಮಾಡಿರುವುದರಲ್ಲಿ ಯಾರದ್ದಾದರು ಭಾವನೆಗೆ ಧಕ್ಕೆ ಆಗಿದ್ದರೆ ಕ್ಷಮೆ ಕೂಡಾ ಕೇಳಲಿದ್ದಾರೆ. ಶೀಘ್ರದಲ್ಲೇ ಈ ಬಗ್ಗೆ ವಿಡಿಯೊ ಸಂದೇಶವು ನಿಮಗೆ ನೀಡುತ್ತೇವೆ” ಎಂದು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಘಟನೆಯನ್ನು ಬಳಸಿಕೊಂಡು ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕೋಮು ಆಧಾರದಲ್ಲಿ ಒಡೆಯಲು ಪ್ರಯತ್ನಿಸುತ್ತಿದೆ ಎಂದು ಸಾಲೆತ್ತೂರಿನ ನಾಗರೀಕರೊಬ್ಬರು ಹೇಳಿದ್ದಾರೆ.

“ವಧುವಿನ ಕಡೆಯವರು ನೀಡುವ ಔತಣಕೂಟವಾದ ‘ತಾಳ’ದ ಸಮಯದಲ್ಲಿ ಸಾಮಾನ್ಯವಾಗಿ ಮದುಮಗನನ್ನು ತಮಾಷೆ ಮಾಡುವುದು ನಡೆಯುತ್ತದೆ. ಕೆಲವೊಮ್ಮೆ ಇದು ಅತಿರೇಕಕ್ಕೆ ಹೋಗಿ ಅಪಾಯವನ್ನು ಮೈಮೇಲೆ ಎಳೆದುಕೊಂಡಿದ್ದೂ ಇದೆ. ಆದರೆ ಈ ಘಟನೆಯಲ್ಲಿ ಯಾರನ್ನೂ ಅವಮಾನಿಸುವ ಹಾಗೆ ನಡೆದುಕೊಂಡಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿದಾಡಿದ ನಂತರ ಬಲಪಂಥೀಯರು ನೀಡಿದ ನಿರೂಪಣೆಯನ್ನು ಎಲ್ಲರೂ ಒಪ್ಪಿಕೊಂಡು ಮದುವೆ ಮನೆಯ ಮೇಲೆ ಮುಗಿಬಿದ್ದಿದ್ದಾರೆ. ಆದರೆ ಅಲ್ಲಿ ಕೊರಗಜ್ಜನನ್ನು ಅವಮಾನಿಸುವ ಯಾವುದೂ ನಡೆದಿದ್ದಲ್ಲ. ಮದುವೆ ಮನೆಯಲ್ಲಿ ಎಲ್ಲರೂ ಖುಷಿಯಲ್ಲಿ ಇರುವಾಗ ಇನ್ನೊಬ್ಬರ ಭಾವನೆಗೆ ಯಾರಾದರು ಧಕ್ಕೆ ತರುತ್ತಾರೆಯೆ?” ಎಂದು ಪ್ರಶ್ನಿಸಿದ್ದಾರೆ.

ಘಟನೆಯ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶಿಲಾ ನಾಡಾ ಅವರು, “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಂಗಳೂರು: ಆದಿವಾಸಿ ಕೊರಗ ಜನಾಂಗದ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

“ಈಗ ವಿವಾದ ಆಗಿರುವ ಘಟನೆಯಲ್ಲಿ ಅವರು ತಮಾಷೆಯಾಗಿ ಮಾಡಿದ್ದಾರೋ ಅಥವಾ ಕೊರಗಜ್ಜನಿಗೆ ಅವಮಾನ ಮಾಡಲು ಮಾಡಿದ್ದಾರೋ ತನಿಖೆ ನಡೆಯಲಿ. ಕೊರಗಜ್ಜನ ವೇಷ ಹಾಕಿ ಮದುಮಗನಿಗೆ ಮೆರವಣಿಗೆ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಒಂದು ವೇಳೆ ಅವರು ಉದ್ದೇಶ ಪೂರ್ವಕವಾಗಿ ಕೊರಗಜ್ಜನ ವೇಷ ಹಾಕಿ ಅವಮಾನಿಸಿದ್ದರೆ ಅದು ತಪ್ಪು, ಹಾಗಾಗಿದ್ದರೆ ಅವರಿಗೆ ಶಿಕ್ಷೆ ಆಗಬೇಕು. ಆದರೆ ಈ ಘಟನೆಯನ್ನು ಧರ್ಮಾಧಾರಿತವಾಗಿ ನೋಡಲಾಗುತ್ತಿದೆ. ಕೊರಗಜ್ಜನ ವೇಷವನ್ನು ಹಾಕಿದ್ದಕ್ಕೆ ಬಂಧಿಸುವುದಾದರೆ, ಎಲ್ಲಾ ಕಡೆಯು ಬಂಧಿಸಬೇಕಾಗಿತ್ತಲ್ಲವೆ?. ಆದರೆ ಇಲ್ಲಿ ಅದಾಗುತ್ತಿಲ್ಲ, ಇಲ್ಲಿ ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ. ಹಾಗಾಗಿಯೆ ಧರ್ಮ ನಿಂದನೆ, ದೈವ ನಿಂದನೆ ಎಂದು ಬಿಂಬಿಸಿ ದೊಡ್ಡ ಸುದ್ದಿ ಮಾಡಲಾಗುತ್ತಿದೆ. ಈಗ ನಡೆಯುತ್ತಿರುವ ಬೆಳವಣಿಗೆಯ ಮುಖ್ಯ ಉದ್ದೇಶ ಒಂದು ಧರ್ಮವನ್ನು ಗುರಿ ಮಾಡುವುದು ಬಿಟ್ಟರೆ ಬೇರೇನೂ ಅಲ್ಲ” ಎಂದು ಸುಶಿಲಾ ಅವರು ಹೇಳಿದ್ದಾರೆ.

ಕೊರಗ ಸಮುದಾಯದ ಮತ್ತೊಬ್ಬ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದಿದ್ದಾರೆ.

ಅದರಲ್ಲೂ ಮದುಮಗ ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿದ್ದಾನೋ ಎಂದು ನನಗೆ ಗೊತ್ತಿಲ್ಲ. ಅವರು ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಲ್ಲ ಎಂದೇ ನಾನು ಭಾವಿಸಿದ್ದೇನೆ. ಯಾಕೆಂದರೆ ಅವರಿಗೆ ಇದರ ಕಲ್ಪನೆ ಇದೆಯೆಂದು ನನಗೆ ಅನಿಸುತ್ತಿಲ್ಲ. ಆದರೆ ಈ ವಿವಾದ ಮಾಡುವುದರ ಹಿಂದೆ ಯಾರು ಇದ್ದಾರೆ ಮತ್ತು ಅವರು ಯಾಕಾಗಿ ಇದ್ದಾರೆ ಎಂಬುವುದನ್ನು ಕೂಡಾ ನೋಡಬೇಕಾಗಿದೆ. ಈ ರೀತಿಯ ಭಾವನಾತ್ಮಕ ವಿಷಯವನ್ನು ಕೊರಗರ ಮುಗ್ಧತೆಯನ್ನು ದುರುಪಯೋಗ ಮಾಡಿಕೊಳ್ಳದೆ ಯಾರ ಭಾವನೆಗೂ ಧಕ್ಕೆ ಬರದಂತೆ ಸಮಸ್ಯೆಯನ್ನು ಬಗೆಹರಿಸಬೇಕು. ಘಟನೆಯನ್ನು ಕೋಮು ಆಧಾರದಲ್ಲಿ ವಿಭಜಿಸಬಾರದು. ವಿಡಿಯೊವನ್ನು ನೋಡುವಾಗ ಅದರಲ್ಲಿರುವ ಭಾಷೆ ಕೊರಗಜ್ಜನನ್ನು ಅವಮಾನಿಸುವ ಹಾಕೆ ಕಾಣುತ್ತಿಲ್ಲ. ಮುಟ್ಟಾಲೆ ಧರಿಸಿದ ಕೂಡಲೇ ಅದು ಕೊರಗಜ್ಜ ಎಂದು ಹೇಳುವುದು ಕೂಡಾ ಸರಿಯಲ್ಲ. ಈ ವಿಷಯದಲ್ಲಿ ಯಾವುದೆ ರೀತಿಯಲ್ಲಿ ದ್ವೇಷ ಹುಟ್ಟದ ಹಾಗೆ, ತಪ್ಪಾಗಿದ್ದರೆ ಮನವರಿಗೆ ಮಾಡಿ, ಅವುಗಳನ್ನು ತಿದ್ದಿ ಸೌಹಾರ್ದಯುತವಾಗಿ ಬಗೆಹರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಎಸಗಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...