Homeಕರ್ನಾಟಕಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

- Advertisement -
- Advertisement -

ಶವಸಂಸ್ಕಾರ ಮಾಡಲು ಸ್ಮಶಾನವಿಲ್ಲ ಎಂದು ಆರೋಪಿಸಿ ಶವವನ್ನಿಟ್ಟು ಪ್ರತಿಭಟನೆ ಮಾಡಿರುವ ಘಟನೆ ಸರಗೂರು ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಆಲನಹಳ್ಳಿ ಹಾಡಿಯಲ್ಲಿ ನಡೆದಿದೆ.

ಕಾಡು ಕುರುಬ ಜನಾಂಗದ ವ್ಯಕ್ತಿಯೊಬ್ಬರು ಗುರುವಾರ ತೀರಿಕೊಂಡಿದ್ದರು. ಆದರೆ ಶವ ಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದೆ ಪರದಾಡಿದರು. ಈ ಕುರಿತು ಮಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ.

ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿಯ ಸದಸ್ಯ ಬೆಟ್ಟಸ್ವಾಮಿ ಮಾತನಾಡಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, “ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆಯನ್ನು ಹಾಡಿ ಜನರು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಸ್ತೆ ಇಲ್ಲ. ಹೆಣ ಹೂಳಲು ಜಾಗವಿಲ್ಲ. ಬರೀ ಆಶ್ವಾಸನೆಗಳನ್ನಷ್ಟೇ ಅಧಿಕಾರಿಗಳು ನೀಡುತ್ತಾರೆ. ಹಾಡಿಯ ಜನರು ಅರಣ್ಯ ಒತ್ತುವರಿ ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ. ಆದರೆ ಅರಣ್ಯ ಇಲಾಖೆಯವರು ತಂತಿ ಹಾಕಿದ್ದಾರೆ. ಹಾಡಿ ಜನರು ಅವುಗಳನ್ನು ದಾಟಿ ಹೋಗಬೇಕು. ಹೀಗಾಗಿ ಸರ್ಕಾರ ಈ ದೃಶ್ಯವನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ಈ ಕಾಡು ಕುರುಬ ಜನರಿಗೆ ಸ್ಮಶಾನ ಜಾಗವನ್ನು ನೀಡಿ, ಅಲ್ಲಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು” ಎಂದು ಬೆಟ್ಟಸ್ವಾಮಿ ಆಗ್ರಹಿಸಿದ್ದಾರೆ.

ಸ್ಮಶಾನ ಜಾಗವನ್ನು ನೀಡದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗುವುದು. ಈ ದೃಶ್ಯವನ್ನು ನೋಡಿದ ಕೂಡಲೇ ತಹಶೀಲ್ದಾರ್‌‌ ಅವರು ಈ ಜಾಗವನ್ನು ಹದ್ದುಬಸ್ತು ಮಾಡಿ ಸರಿಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಕೇಳಿದ್ದಾರೆ.

ಆಲನಹಳ್ಳಿ ಹಾಡಿಯಷ್ಟೇ ಅಲ್ಲದೇ ಸರಗೂರು ತಾಲ್ಲೂಕಿನ ಹಲವು ಹಾಡಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಮೂಲಗಳು ತಿಳಿಸಿದೆ.

ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಸರಗೂರು ತಹಸೀಲ್ದಾರ್‌ ಚೆಲುವರಾಜು ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ನಮ್ಮೊಂದಿಗೆ ಮಾತನಾಡಿದ ಅವರು, “ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೆನು. ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ” ಎಂದು ತಿಳಿಸಿದರು.

ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೆ ಸಮಸ್ಯೆ ಇದೆ ಎಂಬುದರ ಬಗ್ಗೆ ಕೇಳಿದಾಗ, “ಸರ್ಕಾರಿ ಜಮೀನು ಎಲ್ಲಿದಿಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನಕ್ಕೆ ಜಾಗವಿರದ ಕಡೆ ಭೂಮಿಯನ್ನು ಖರೀದಿಸುತ್ತಿದ್ದೇವೆ. ಸನ್ಮಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...