Homeಕರ್ನಾಟಕಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

- Advertisement -
- Advertisement -

ಶವಸಂಸ್ಕಾರ ಮಾಡಲು ಸ್ಮಶಾನವಿಲ್ಲ ಎಂದು ಆರೋಪಿಸಿ ಶವವನ್ನಿಟ್ಟು ಪ್ರತಿಭಟನೆ ಮಾಡಿರುವ ಘಟನೆ ಸರಗೂರು ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಆಲನಹಳ್ಳಿ ಹಾಡಿಯಲ್ಲಿ ನಡೆದಿದೆ.

ಕಾಡು ಕುರುಬ ಜನಾಂಗದ ವ್ಯಕ್ತಿಯೊಬ್ಬರು ಗುರುವಾರ ತೀರಿಕೊಂಡಿದ್ದರು. ಆದರೆ ಶವ ಸಂಸ್ಕಾರ ಮಾಡಲು ಸರಿಯಾದ ಜಾಗವಿಲ್ಲದೆ ಪರದಾಡಿದರು. ಈ ಕುರಿತು ಮಾಡಿರುವ ವಿಡಿಯೊ ಈಗ ವೈರಲ್‌ ಆಗಿದೆ.

ತಾಲೂಕಿನ ಬಿ. ಮಟಕೆರೆ ಗ್ರಾಮಪಂಚಾಯತಿಯ ಸದಸ್ಯ ಬೆಟ್ಟಸ್ವಾಮಿ ಮಾತನಾಡಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, “ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆಯನ್ನು ಹಾಡಿ ಜನರು ಎದುರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ರಸ್ತೆ ಇಲ್ಲ. ಹೆಣ ಹೂಳಲು ಜಾಗವಿಲ್ಲ. ಬರೀ ಆಶ್ವಾಸನೆಗಳನ್ನಷ್ಟೇ ಅಧಿಕಾರಿಗಳು ನೀಡುತ್ತಾರೆ. ಹಾಡಿಯ ಜನರು ಅರಣ್ಯ ಒತ್ತುವರಿ ಜಾಗದಲ್ಲಿ ಶವಸಂಸ್ಕಾರ ಮಾಡಬೇಕಾಗಿದೆ. ಆದರೆ ಅರಣ್ಯ ಇಲಾಖೆಯವರು ತಂತಿ ಹಾಕಿದ್ದಾರೆ. ಹಾಡಿ ಜನರು ಅವುಗಳನ್ನು ದಾಟಿ ಹೋಗಬೇಕು. ಹೀಗಾಗಿ ಸರ್ಕಾರ ಈ ದೃಶ್ಯವನ್ನು ನೋಡಿಯಾದರೂ ಎಚ್ಚೆತ್ತುಕೊಳ್ಳಬೇಕು. ಈ ಕಾಡು ಕುರುಬ ಜನರಿಗೆ ಸ್ಮಶಾನ ಜಾಗವನ್ನು ನೀಡಿ, ಅಲ್ಲಿಗೆ ಸಮರ್ಪಕ ರಸ್ತೆ ನಿರ್ಮಿಸಿಕೊಡಬೇಕು” ಎಂದು ಬೆಟ್ಟಸ್ವಾಮಿ ಆಗ್ರಹಿಸಿದ್ದಾರೆ.

ಸ್ಮಶಾನ ಜಾಗವನ್ನು ನೀಡದಿದ್ದರೆ ಮುಂದಿನ ದಿನಗಳಲ್ಲಿ ತಹಶೀಲ್ದಾರ್‌ ಕಚೇರಿಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗುವುದು. ಈ ದೃಶ್ಯವನ್ನು ನೋಡಿದ ಕೂಡಲೇ ತಹಶೀಲ್ದಾರ್‌‌ ಅವರು ಈ ಜಾಗವನ್ನು ಹದ್ದುಬಸ್ತು ಮಾಡಿ ಸರಿಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಾಡಿ ಮಹಿಳೆಯೊಬ್ಬರು ಮಾತನಾಡಿ, “ನಮಗೆ ಬಾಳ ತೊಂದ್ರಿ ಕೊಡ್ತಾರ. ಈ ಸೋಲರ್‌ ತಂತಿ ಇರಕೂಡದು ಇಲ್ಲಿ. ನಾವು ಹಿಂಗೆ ತಂದು ಮಡಿಕಂಡು, ಅವರು ತಗೀಗಂಟ ಹಿಂಗೆ ಕಾಯ್ಕೊಂಡು ನಿಂತಿರ್‍ಬೇಕು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಡಿಯ ಪುರುಷರೊಬ್ಬರು ಮಾತನಾಡಿ, “ಹಿರಿಯರ ಕಾಲದಲ್ಲಿ ನಡೆದಂತೆಯೇ ಈಗಲೂ ನಡೆಯಬೇಕು. ಬರೋಕೆ ನಮಗೆ ಜಾಗ ಇಲ್ಲ. ಸರ್ಕಾರ ನಮಗೆ ಏನು ಮಾಡಿಕೊಟ್ಟಿದೆ?” ಎಂದು ಕೇಳಿದ್ದಾರೆ.

ಆಲನಹಳ್ಳಿ ಹಾಡಿಯಷ್ಟೇ ಅಲ್ಲದೇ ಸರಗೂರು ತಾಲ್ಲೂಕಿನ ಹಲವು ಹಾಡಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿವೆ ಎಂದು ಮೂಲಗಳು ತಿಳಿಸಿದೆ.

ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಸರಗೂರು ತಹಸೀಲ್ದಾರ್‌ ಚೆಲುವರಾಜು ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ನಮ್ಮೊಂದಿಗೆ ಮಾತನಾಡಿದ ಅವರು, “ಆಲನಹಳ್ಳಿ ಹಾಡಿಗೆ ಇಂದು ಭೇಟಿ ನೀಡಿದ್ದೆನು. ಸ್ಮಶಾನಕ್ಕಾಗಿ ಜಾಗವನ್ನು ಗುರುತು ಮಾಡಿದ್ದೇವೆ. ಸರ್ಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದೇವೆ. ಸರ್ಕಾರ ಮಂಜೂರು ಮಾಡಿ ಕಳುಹಿಸಲಿದೆ” ಎಂದು ತಿಳಿಸಿದರು.

ಸರಗೂರು ತಾಲ್ಲೂಕಿನ ಉಳಿದ ಹಾಡಿಗಳಲ್ಲೂ ಇದೆ ಸಮಸ್ಯೆ ಇದೆ ಎಂಬುದರ ಬಗ್ಗೆ ಕೇಳಿದಾಗ, “ಸರ್ಕಾರಿ ಜಮೀನು ಎಲ್ಲಿದಿಯೋ ಅಲ್ಲಿ ಗುರುತು ಮಾಡಿ ಸಾರ್ವಜನಿಕ ಸ್ಮಶಾನಗಳನ್ನು ಮಾಡುತ್ತೇವೆ. ಹಾಡಿ ಜನರು ಅಲ್ಲಿಯೇ ಶವಸಂಸ್ಕಾರ ಮಾಡಬೇಕಾಗುತ್ತದೆ. ಸ್ಮಶಾನಕ್ಕೆ ಜಾಗವಿರದ ಕಡೆ ಭೂಮಿಯನ್ನು ಖರೀದಿಸುತ್ತಿದ್ದೇವೆ. ಸನ್ಮಾನದ ಸಮಸ್ಯೆ ತಲೆದೋರದಂತೆ ಕ್ರಮವಹಿಸಲಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಮ್ಮೆ ಹುಟ್ಟಿ ಬರಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...