Homeಕರ್ನಾಟಕಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ - 3,800 ಬಂದನ

ಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ – 3,800 ಬಂದನ

ಎಲ್ಲರ ಕನ್ನಡ ಚರ್‍ಚೆಯ ಬಾಗವಾಗಿ ಮಾಡಲಾಗಿರುವ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣಗಳ ಬಳಕೆಯನ್ನು ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಇಂದನ ಬೆಲೆಗಳ ಹೆಚ್ಚಳವನ್ನು ವಿರೋದಿಸಿ ಕಜಕಿಸ್ತಾನದಲ್ಲಿ ನಡೆದ ಪ್ರತಿಬಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಜಕಿಸ್ತಾನದ ಹಲವೆಡೆ ತುರ್‍ತುಪರಿಸ್ತಿತಿ ಜಾರಿಗೊಳಿಸಲಾಗಿದೆ.

ಪ್ರತಿಬಟನೆಯು ಸರ್ಕಾರಿ ವಿರೋದಿ ಗಲಬೆಯಾಗಿ ಮಾರ್‍ಪಟ್ಟಿದ್ದು, ಬಳಿಕ ನಡೆದ ಗರ್ಶಣೆಯಲ್ಲಿ 26 ಪ್ರತಿಬಟನಾಕಾರರು, ಪೊಲೀಸ್ ಮತ್ತು ಬದ್ರತಾ ಪಡೆಗಳ 18 ಜನರು ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ಬಂದೂಕಿನ ದಾಳಿ ಮತ್ತು ಸಾವುನೋವುಗಳ ಸಂಕ್ಯೆ ಇನ್ನೂ ಹೆಚ್ಚಿನದಾಗಿರಬಹುದು ಎಂದು ಹೇಳಲಾಗುತ್ತಿದೆ. 3,800ಕ್ಕೂ ಹೆಚ್ಚು ಜನರನ್ನು ಬಂದಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಗಟನೆಯಲ್ಲಿ ಒಬ್ಬ ಪೊಲೀಸ್ ಅದಿಕಾರಿಯ ಶಿರಚ್ಚೇದ ಮಾಡಿರುವುದಾಗಿಯೂ ವರದಿಯಾಗಿದೆ.

ಬುದವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ‌ಅದ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಬಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದರು. ಹಲವು ಸರಕಾರಿ ಕಚೇರಿಗಳಿಗೆ ಪ್ರತಿಬಟನಾಕಾರರು ಬೆಂಕಿ ಹಚ್ಚಿದ್ದರು.

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್‍ಬೆಕ್‌‌ ತಿಳಿಸಿದ್ದಾರೆ. ಕಜಕಿಸ್ತಾನ್‌ ಅದ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಬದಲ್ಲಿ ಪ್ರತಿಬಟನಾಕಾರರನ್ನು ಸಮಾದಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಟಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇಡೀ ದೇಶದಲ್ಲಿ ಎರಡು ವಾರಗಳ ಕಾಲ ತುರ್‍ತು ಪರಿಸ್ತಿತಿಯನ್ನು ಗೋಶಿಸಿದ್ದಾರೆ.

ದೇಶದ್ರೋಹ ಶಂಕೆಯ ಮೇಲೆ ಗುಪ್ತಚರ ಸಂಸ್ಥೆಯ ಮಾಜಿ ಮುಕ್ಯಸ್ತರನ್ನು ಬಂದಿಸಲಾಗಿದೆ. ರಾಶ್ಟ್ರೀಯ ಬದ್ರತಾ ಸಮಿತಿ (ಕೆಎನ್‌ಬಿ) ಮಾಜಿ ಮುಕ್ಯಸ್ತ ಕರೀಮ್ ಮಾಸಿಮೊವ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ತನಿಕೆಗೆ ಒಳಪಡಿಸಿದ ಬಳಿಕ ಅವರನ್ನು ಬಂದಿಸಿರುವುದಾಗಿ ಕೆಎನ್‌ಬಿ ಹೇಳಿದೆ.

“ದೇಶದ್ರೋಹ ಅಪರಾದ ಎಸಗಿರುವ ಶಂಕೆಯ ಮೇಲೆ, ಕೆಎನ್‌ಬಿಯ ಮಾಜಿ ಅದ್ಯಕ್ಷ ಕೆ.ಕೆ. ಮಾಸಿಮೊವ್ ಅವರನ್ನು ಬಂದಿಸಲಾಯಿತು. ಇತರರೊಂದಿಗೆ ಅವರನ್ನು ತಾತ್ಕಾಲಿಕ ಬಂದನದಲ್ಲಿ ಇರಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಹಿಂಸಾಚಾರದ ಬಳಿಕ ಶುಕ್ರವಾರ ಕಜಕಿಸ್ತಾನ್‌ನ ಪ್ರಮುಕ ನಗರಗಳ ಬೀದಿಗಳನ್ನು ಬದ್ರತಾ ಪಡೆಗಳು ಹಿಡಿತಕ್ಕೆ ತೆಗೆದುಕೊಂಡಿವೆ. ರಶ್ಯಾದ ಬೆಂಬಲಿತ ಅದ್ಯಕ್ಶ ಕಾಸಿಮ್-ಜೊಮಾರ್ಟ್ ಟೊಕಾಯೆವ್ ಅವರು ದೇಶಾದ್ಯಂತ ದಂಗೆಯನ್ನು ಹತ್ತಿಕ್ಕಲು ಸೇನೆಗೆ ಆದೇಶಿಸಿದ್ದಾರೆ. ಬಂದೂಕು ಜಳುಪಿಸಲು ಅವಕಾಶ ನೀಡಿದ್ದಾರೆ.

ಅಶಾಂತಿಯನ್ನು ಹತ್ತಿಕ್ಕಲು ಸೇನೆಯನ್ನು ಆಹ್ವಾನಿಸಿದ ನಂತರ ಕಜಕಿಸ್ತಾನದಲ್ಲಿ ರಶ್ಯಾದ ಪ್ರಬಾವವನ್ನು ಕಡಿಮೆ ಮಾಡುವುದು ಕಷ್ಟಕರವೆಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಶುಕ್ರವಾರ ಎಚ್ಚರಿಸಿದ್ದಾರೆ.

“ಇತ್ತೀಚಿನ ಇತಿಹಾಸದಲ್ಲಿ ಒಂದು ಪಾಟವಿದೆ. ಒಮ್ಮೆ ರಶ್ಯನ್ನರು ನಿಮ್ಮ ಮನೆಗೆ ಬಂದರೆ, ಅವರನ್ನು ಹೊರಗೆ ಕಳುಹಿಸುವುದು ತುಂಬಾ ಕಶ್ಟವಾಗುತ್ತದೆ” ಎಂದು ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...