Homeಕರ್ನಾಟಕಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ - 3,800 ಬಂದನ

ಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ – 3,800 ಬಂದನ

ಎಲ್ಲರ ಕನ್ನಡ ಚರ್‍ಚೆಯ ಬಾಗವಾಗಿ ಮಾಡಲಾಗಿರುವ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣಗಳ ಬಳಕೆಯನ್ನು ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಇಂದನ ಬೆಲೆಗಳ ಹೆಚ್ಚಳವನ್ನು ವಿರೋದಿಸಿ ಕಜಕಿಸ್ತಾನದಲ್ಲಿ ನಡೆದ ಪ್ರತಿಬಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಜಕಿಸ್ತಾನದ ಹಲವೆಡೆ ತುರ್‍ತುಪರಿಸ್ತಿತಿ ಜಾರಿಗೊಳಿಸಲಾಗಿದೆ.

ಪ್ರತಿಬಟನೆಯು ಸರ್ಕಾರಿ ವಿರೋದಿ ಗಲಬೆಯಾಗಿ ಮಾರ್‍ಪಟ್ಟಿದ್ದು, ಬಳಿಕ ನಡೆದ ಗರ್ಶಣೆಯಲ್ಲಿ 26 ಪ್ರತಿಬಟನಾಕಾರರು, ಪೊಲೀಸ್ ಮತ್ತು ಬದ್ರತಾ ಪಡೆಗಳ 18 ಜನರು ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ಬಂದೂಕಿನ ದಾಳಿ ಮತ್ತು ಸಾವುನೋವುಗಳ ಸಂಕ್ಯೆ ಇನ್ನೂ ಹೆಚ್ಚಿನದಾಗಿರಬಹುದು ಎಂದು ಹೇಳಲಾಗುತ್ತಿದೆ. 3,800ಕ್ಕೂ ಹೆಚ್ಚು ಜನರನ್ನು ಬಂದಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಗಟನೆಯಲ್ಲಿ ಒಬ್ಬ ಪೊಲೀಸ್ ಅದಿಕಾರಿಯ ಶಿರಚ್ಚೇದ ಮಾಡಿರುವುದಾಗಿಯೂ ವರದಿಯಾಗಿದೆ.

ಬುದವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ‌ಅದ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಬಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದರು. ಹಲವು ಸರಕಾರಿ ಕಚೇರಿಗಳಿಗೆ ಪ್ರತಿಬಟನಾಕಾರರು ಬೆಂಕಿ ಹಚ್ಚಿದ್ದರು.

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್‍ಬೆಕ್‌‌ ತಿಳಿಸಿದ್ದಾರೆ. ಕಜಕಿಸ್ತಾನ್‌ ಅದ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಬದಲ್ಲಿ ಪ್ರತಿಬಟನಾಕಾರರನ್ನು ಸಮಾದಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಟಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇಡೀ ದೇಶದಲ್ಲಿ ಎರಡು ವಾರಗಳ ಕಾಲ ತುರ್‍ತು ಪರಿಸ್ತಿತಿಯನ್ನು ಗೋಶಿಸಿದ್ದಾರೆ.

ದೇಶದ್ರೋಹ ಶಂಕೆಯ ಮೇಲೆ ಗುಪ್ತಚರ ಸಂಸ್ಥೆಯ ಮಾಜಿ ಮುಕ್ಯಸ್ತರನ್ನು ಬಂದಿಸಲಾಗಿದೆ. ರಾಶ್ಟ್ರೀಯ ಬದ್ರತಾ ಸಮಿತಿ (ಕೆಎನ್‌ಬಿ) ಮಾಜಿ ಮುಕ್ಯಸ್ತ ಕರೀಮ್ ಮಾಸಿಮೊವ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ತನಿಕೆಗೆ ಒಳಪಡಿಸಿದ ಬಳಿಕ ಅವರನ್ನು ಬಂದಿಸಿರುವುದಾಗಿ ಕೆಎನ್‌ಬಿ ಹೇಳಿದೆ.

“ದೇಶದ್ರೋಹ ಅಪರಾದ ಎಸಗಿರುವ ಶಂಕೆಯ ಮೇಲೆ, ಕೆಎನ್‌ಬಿಯ ಮಾಜಿ ಅದ್ಯಕ್ಷ ಕೆ.ಕೆ. ಮಾಸಿಮೊವ್ ಅವರನ್ನು ಬಂದಿಸಲಾಯಿತು. ಇತರರೊಂದಿಗೆ ಅವರನ್ನು ತಾತ್ಕಾಲಿಕ ಬಂದನದಲ್ಲಿ ಇರಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಹಿಂಸಾಚಾರದ ಬಳಿಕ ಶುಕ್ರವಾರ ಕಜಕಿಸ್ತಾನ್‌ನ ಪ್ರಮುಕ ನಗರಗಳ ಬೀದಿಗಳನ್ನು ಬದ್ರತಾ ಪಡೆಗಳು ಹಿಡಿತಕ್ಕೆ ತೆಗೆದುಕೊಂಡಿವೆ. ರಶ್ಯಾದ ಬೆಂಬಲಿತ ಅದ್ಯಕ್ಶ ಕಾಸಿಮ್-ಜೊಮಾರ್ಟ್ ಟೊಕಾಯೆವ್ ಅವರು ದೇಶಾದ್ಯಂತ ದಂಗೆಯನ್ನು ಹತ್ತಿಕ್ಕಲು ಸೇನೆಗೆ ಆದೇಶಿಸಿದ್ದಾರೆ. ಬಂದೂಕು ಜಳುಪಿಸಲು ಅವಕಾಶ ನೀಡಿದ್ದಾರೆ.

ಅಶಾಂತಿಯನ್ನು ಹತ್ತಿಕ್ಕಲು ಸೇನೆಯನ್ನು ಆಹ್ವಾನಿಸಿದ ನಂತರ ಕಜಕಿಸ್ತಾನದಲ್ಲಿ ರಶ್ಯಾದ ಪ್ರಬಾವವನ್ನು ಕಡಿಮೆ ಮಾಡುವುದು ಕಷ್ಟಕರವೆಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಶುಕ್ರವಾರ ಎಚ್ಚರಿಸಿದ್ದಾರೆ.

“ಇತ್ತೀಚಿನ ಇತಿಹಾಸದಲ್ಲಿ ಒಂದು ಪಾಟವಿದೆ. ಒಮ್ಮೆ ರಶ್ಯನ್ನರು ನಿಮ್ಮ ಮನೆಗೆ ಬಂದರೆ, ಅವರನ್ನು ಹೊರಗೆ ಕಳುಹಿಸುವುದು ತುಂಬಾ ಕಶ್ಟವಾಗುತ್ತದೆ” ಎಂದು ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...