Homeಮುಖಪುಟಚುನಾವಣಾ ದಿನಾಂಕ ಘೋಷಣೆ: ಉತ್ತರ ಪ್ರದೇಶದ ನಾಲ್ಕು ಪ್ರಮುಖ ಪಕ್ಷಗಳ ಫಸ್ಟ್ ರಿಯಾಕ್ಷನ್ ಏನು?

ಚುನಾವಣಾ ದಿನಾಂಕ ಘೋಷಣೆ: ಉತ್ತರ ಪ್ರದೇಶದ ನಾಲ್ಕು ಪ್ರಮುಖ ಪಕ್ಷಗಳ ಫಸ್ಟ್ ರಿಯಾಕ್ಷನ್ ಏನು?

ಮಾರ್ಚ್ 10 ರಂದು ಬಿಜೆಪಿ ಮುಕ್ತ ಎಂದ ಕಾಂಗ್ರೆಸ್ - ಉತ್ತರ ಪ್ರದೇಶ ಬದಲಾಗಲಿದೆ ಎಂದ SP

- Advertisement -
- Advertisement -

ಬಹುನೀರಿಕ್ಷಿತ ಪಂಚರಾಜ್ಯ ಚುನಾವಣೆಗೆ ಕೊನೆಗೂ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆದು ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ. ಈಗ ಎಲ್ಲರ ಕಣ್ಣು ಬಹುದೊಡ್ಡ ರಾಜ್ಯ ಉತ್ತರ ಪ್ರದೇಶದ ಮೇಲೆ ನೆಟ್ಟಿದೆ. ಈ ನಿಟ್ಟಿನಲ್ಲಿ ಉತ್ತರಪ್ರದೇಶದ ಅಧಿಕಾರದ ಮೇಲೆ ಕಣ್ಣಿಟ್ಟಿರುವ ಪ್ರಮುಖ ನಾಲ್ಕು ಪಕ್ಷಗಳ ಮೊದಲ ಪ್ರತಿಕ್ರಿಯೆ ಇಲ್ಲಿದೆ.

ಡಬಲ್ ಇಂಜಿನ್ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ

ಪ್ರಜಾಪ್ರಭುತ್ವದ ಮಹಾ ಹಬ್ಬದಲ್ಲಿ ರಾಜ್ಯ ಚುನಾವಣೆಯ ದಿನಾಂಕ ಘೋಷಣೆಗೆ ಸ್ವಾಗತ, ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಆಧಾರದ ಮೇಲೆ ಜನತಾ ಜನಾರ್ದನರ ಆಶೀರ್ವಾದದೊಂದಿಗೆ ಭಾರತೀಯ ಜನತಾ ಪಕ್ಷವು ಭರ್ಜರಿ ಬಹುಮತದೊಂದಿಗೆ ಸರ್ಕಾರವನ್ನು ರಚಿಸಲು ಸಾಧ್ಯವಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಎಎನ್‌ಐ ಜೊತೆ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಜನರು ಮತ್ತೊಮ್ಮೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶ ಬದಲಾಗಲಿದೆ – ಸಮಾಜವಾದಿ ಪಕ್ಷ

ಮಾರ್ಚ್ 10 ರಂದು ಇಂಕ್ವಿಲಾಬ್ ಮೆರವಣಿಗೆ ನಡೆಯಲಿದೆ, ಉತ್ತರ ಪ್ರದೇಶ ಬದಲಾಗಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ತಮ್ಮ ಪಕ್ಷದ 2022ರಲ್ಲಿ ಸೈಕಲ್ (ಸಮಾಜವಾದಿ ಪಕ್ಷದ ಚಿಹ್ನೆ) ಅಧಿಕಾರಕ್ಕೆ ಎಂಬ ಹ್ಯಾಷ್‌ಟ್ಯಾಗ್ ಸಹ ಬಳಸಿದ್ದಾರೆ.

ಉತ್ತರ ಪ್ರದೇಶ ಹೋರಾಡುತ್ತದೆ ಮತ್ತು ಗೆಲ್ಲುತ್ತದೆ – ಕಾಂಗ್ರೆಸ್

ಮಾರ್ಚ್ 10 ರಂದು ಉತ್ತರ ಪ್ರದೇಶದ ಯುವಕರು, ರೈತರು, ಮಹಿಳೆಯರು, ಕಾರ್ಮಿಕರು, ವ್ಯಾಪಾರಿಗಳು ಮತ್ತು ಸಾಮಾನ್ಯ ಜನರ ವಿಜಯಯಾತ್ರೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಯುವಕರು, ರೈತರು, ಮಹಿಳೆಯರು, ಕಾರ್ಮಿಕರು, ವ್ಯಾಪಾರಿಗಳು ಮತ್ತು ಸಾಮಾನ್ಯ ಜನರ ಹಕ್ಕುಗಳಿಗಾಗಿ ಹೋರಾಡಲಿದೆ. ಯುಪಿ ಹೋರಾಡುತ್ತದೆ ಮತ್ತು ಗೆಲ್ಲುತ್ತದೆ ಎಂದು ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಅದೇ ರೀತಿಯಾಗಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ ಶ್ರೀನಿವಾಸ್‌ರವರು ಮಾರ್ಚ್ 10 ರಂದು ಬಿಜೆಪಿ ಮುಕ್ತವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ನೀತಿ ಸಂಹಿತೆ ಪಾಲಿಸಲಿ – ಬಿಎಸ್‌ಪಿ

ಮುಕ್ತ, ನ್ಯಾಯಸಮ್ಮತ, ಸುಗಮ ಮತ್ತು ಶಾಂತಿಯುತ ಚುನಾವಣೆ ನಡೆಯಬೇಕು. ಬಿಜೆಪಿ ಹೊಸ ತಂತ್ರಗಳನ್ನು ಅನುಸರಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವುದನ್ನು ನಿಲ್ಲಿಸಬೇಕು. ಚುನಾವಣೆಯು ಪ್ರಜಾಪ್ರಭುತ್ವದ ಹಬ್ಬವಾಗಿದೆ. ವಿಶೇಷವಾಗಿ ಬಡವರು, ಕಾರ್ಮಿಕರು ಮತ್ತು ದುಡಿಯುವ ಜನರು ಚುನಾವಣೆಯೆಡೆಗೆ ಬಹಳ ಉತ್ಸುಕರಾಗಿದ್ದಾರೆ, ಅವರ ಭಾವನೆಗಳು ಮತ್ತು ಹಕ್ಕುಗಳನ್ನು ಎಲ್ಲ ರೀತಿಯಲ್ಲೂ ರಕ್ಷಿಸಬೇಕು. ಇಂದಿನಿಂದಲೇ ಅನ್ವಯವಾಗುವ ಪಕ್ಷದ ಶಿಸ್ತು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಕ್ಷದ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭ್ಯರ್ಥಿಗಳಿಗೆ ಬಿಎಸ್‌ಪಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದು ಪಕ್ಷದ ಮುಖ್ಯಸ್ಥೆ ಮಯಾವತಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಡೇಟ್‌ ಫಿಕ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...