Homeಕರ್ನಾಟಕ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ಕೊರಗರ ಮೇಲೆ ಲಾಠಿ ಚಾರ್ಜ್‌ ಆದಾಗ ಮೌನವಾಗಿದ್ದ ಹಿಂದುತ್ವವಾದಿ ಸಂಘಟನೆಗಳನ್ನು ಸಮುದಾಯದ ಮುಖಂಡರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಕೊರಗಜ್ಜನಿಗೆ ಅವಮಾನವಾಗಿದೆ ಎಂದು ಸಂಘ ಪರಿವಾರದವರು ವಿವಾದ ಸೃಷ್ಟಿಸುತ್ತಿದ್ದಾರೆ. ಆದರೆ ಕೊರಗರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿ, ಸಂತ್ರಸ್ತರ ಮೇಲೆಯೇ ಪ್ರಕರಣ ದಾಖಲಿಸಿದಾಗ ಇವರು ಎಲ್ಲಿದ್ದರು?” ಎಂಬ ಪ್ರಶ್ನೆಯನ್ನು ಕೊರಗ ಮುಖಂಡರು ಕೇಳುತ್ತಿದ್ದಾರೆ.

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೇ ರಾತ್ರಿ ಮದುಮಗನ ಸ್ನೇಹಿತರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಆ ವೇಳೆ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಲಾಗಿದೆ ಎಂದು ವಿವಾದ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೊರಗ ಮುಖಂಡರ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ:ಕೊರಗರ ಮೇಲೆ ಪೊಲೀಸ್ ಹಲ್ಲೆ ಪ್ರಕರಣ: ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಏಕೆ ಸುಮ್ಮನಿದ್ದಾರೆ? -ಸಿಪಿಎಂ ಪ್ರಶ್ನೆ

ಇಷ್ಟಾದ ಮೇಲೆ ಮದುಮಗ ವಿಡಿಯೊ ಮೂಲಕ ಕ್ಷಮೆಯನ್ನೂ ಯಾಚಿಸಿದ್ದಾರೆ. “ಯಾವುದೇ ಜಾತಿ, ಸಮುದಾಯಕ್ಕೆ ಅವಮಾನ ಮಾಡಬೇಕೆಂದು ಈ ರೀತಿ ಮಾಡಿಲ್ಲ. ಈ ಘಟನೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ” ಎಂದು ತಿಳಿಸಿದ್ದಾರೆ. (ಘಟನೆಯ ವರದಿ ಇಲ್ಲಿ ಓದಬಹುದು)

ಈ ಘಟನೆಯನ್ನು ಕೋಮು ಧ್ರುವೀಕರಣಕ್ಕೆ ಬಳಸಲು ಯತ್ನಿಸುತ್ತಿರುವ ಸಂಬಂಧ ಕೊರಗ ಸಮುದಾಯದ ಜನರು ಸಂಘಪರಿವಾರವನ್ನು ಪ್ರಶ್ನಿಸಿದ್ದಾರೆ. ಕೊರಗಜ್ಜನಿಗೆ ಅವಮಾನವಾಗಿದೆ ಎಂದು ಹಿಂದುತ್ವವಾದಿಗಳು ವಿವಾದ ಸೃಷ್ಟಿಸುತ್ತಿರುವುದರ ಹಿಂದಿನ ಉದ್ದೇಶವೇನು ಎಂದು ಕೇಳುತ್ತಿದ್ದಾರೆ. ಕೊರಗರ ಮೇಲೆ ಇತ್ತೀಚೆಗೆ ಲಾಠಿಚಾರ್ಜ್‌ ಆದಾಗ ಇವರು ಮೌನವಾಗಿದ್ದೇಕೆ ಎನ್ನುತ್ತಿದ್ದಾರೆ.

ಇತ್ತೀಚೆಗೆ ಕೋಟಾದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಬಳಸಿದ್ದಕ್ಕೆ ಅಲ್ಲಿನ ಕೊರಗ ಸಮುದಾಯದ ಮೇಲೆ ಪೊಲೀಸರು ಪ್ರಹಾರ ನಡೆಸಿದ್ದರು. ಇಂತಹ ಹೀನ ಕೃತ್ಯ ಎಸಗಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು. ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿತು.

ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಲಾಗಿದೆ ಎಂಬ ಆರೋಪಗಳು ಬಂದಿವೆ. ಇಷ್ಟೆಲ್ಲ ಆದರೂ ಹಿಂದುತ್ವವಾದಿ ಸಂಘಟನೆಗಳು ಘಟನೆಯನ್ನು ಖಂಡಿಸಲಿಲ್ಲ. ಕೊರಗರ ಆರಾಧ್ಯ ದೈವದ ಹೆಸರಲ್ಲಿ ಈಗ ವಿವಾದ ಸೃಷ್ಟಿಸುತ್ತಿರುವವರು ಕೊರಗರ ಮೇಲೆ ಹಲ್ಲೆಯಾದಾಗ ಎಲ್ಲಿ ಹೋಗಿದ್ದರು ಎಂಬ ಪ್ರಶ್ನೆಯನ್ನು ಕೇಳಬೇಕಾಗುತ್ತದೆ.

ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶೀಲಾ ನಾಡಾ ಅವರು, “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈಗ ವಿವಾದ ಆಗಿರುವ ಘಟನೆಯಲ್ಲಿ ಅವರು ತಮಾಷೆಯಾಗಿ ಮಾಡಿದ್ದಾರೋ ಅಥವಾ ಕೊರಗಜ್ಜನಿಗೆ ಅವಮಾನ ಮಾಡಲು ಮಾಡಿದ್ದಾರೋ ತನಿಖೆ ನಡೆಯಲಿ. ಕೊರಗಜ್ಜನ ವೇಷ ಹಾಕಿ ಮದುಮಗನಿಗೆ ಮೆರವಣಿಗೆ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಒಂದು ವೇಳೆ ಅವರು ಉದ್ದೇಶ ಪೂರ್ವಕವಾಗಿ ಕೊರಗಜ್ಜನ ವೇಷ ಹಾಕಿ ಅವಮಾನಿಸಿದ್ದರೆ ಅದು ತಪ್ಪು, ಹಾಗಾಗಿದ್ದರೆ ಅವರಿಗೆ ಶಿಕ್ಷೆ ಆಗಬೇಕು. ಆದರೆ ಈ ಘಟನೆಯನ್ನು ಧರ್ಮಾಧಾರಿತವಾಗಿ ನೋಡಲಾಗುತ್ತಿದೆ. ಕೊರಗಜ್ಜನ ವೇಷವನ್ನು ಹಾಕಿದ್ದಕ್ಕೆ ಬಂಧಿಸುವುದಾದರೆ, ಎಲ್ಲಾ ಕಡೆಯು ಬಂಧಿಸಬೇಕಾಗಿತ್ತಲ್ಲವೆ? ಆದರೆ ಇಲ್ಲಿ ಅದಾಗುತ್ತಿಲ್ಲ, ಇಲ್ಲಿ ಮುಸ್ಲಿಮರನ್ನು ಗುರಿ ಮಾಡಲಾಗುತ್ತಿದೆ. ಹಾಗಾಗಿಯೆ ಧರ್ಮ ನಿಂದನೆ, ದೈವ ನಿಂದನೆ ಎಂದು ಬಿಂಬಿಸಿ ದೊಡ್ಡ ಸುದ್ದಿ ಮಾಡಲಾಗುತ್ತಿದೆ. ಈಗ ನಡೆಯುತ್ತಿರುವ ಬೆಳವಣಿಗೆಯ ಮುಖ್ಯ ಉದ್ದೇಶ ಒಂದು ಧರ್ಮವನ್ನು ಗುರಿ ಮಾಡುವುದು ಬಿಟ್ಟರೆ ಬೇರೇನೂ ಅಲ್ಲ” ಎನ್ನುತ್ತಾರೆ ಸುಶೀಲಾ.

“ಇವರಿಗೆ ನಿಜವಾಗಿಯೂ ಕೊರಗಜ್ಜ ಮತ್ತು ಅವರ ಮಕ್ಕಳಾದ ಕೊರಗರ ಮೇಲೆ ಗೌರವ, ಕಾಳಜಿ ಇದ್ದರೆ, ಕೊರಗಜ್ಜನ ವೇಷ ಹಾಕುವಂತಹ ಎಲ್ಲವನ್ನೂ ಖಂಡಿಸಬೇಕು. ತುಳುನಾಡಿನ ಪ್ರತಿಯೊಂದು ಕೋಲದಲ್ಲಿ ಕೊರಗಜ್ಜನನ್ನು ಎಷ್ಟು ಕೆಟ್ಟದಾಗಿ ಬಿಂಬಿಸುತ್ತಾರೆ, ಅದನ್ನು ತಡೆಯಲಿ. ಇತ್ತೀಚೆಗೆ ಕೊಟಾದಲ್ಲಿ ನಡೆದ ಘಟನೆಯಲ್ಲಿ ಕೊರಗರ ಮೇಲೆಯೇ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಅದರ ಬಗ್ಗೆ ಇವರು ಯಾರೂ ಮಾತನಾಡುತ್ತಿಲ್ಲ. ಈಗ ನಡೆಯುತ್ತಿರುವ ಬೆಳವಣಿಗೆಯ ಮುಖ್ಯ ಉದ್ದೇಶ ಒಂದು ಧರ್ಮವನ್ನು ಗುರಿ ಮಾಡುವುದು ಬಿಟ್ಟರೆ ಬೇರೇನೂ ಇಲ್ಲ. ಕೊರಗರ ಮೇಲೆ ಹಲ್ಲೆಯಾದಾಗ ಇವರು ಮಾತನಾಡುವುದಿಲ್ಲ, ಕೊರಗರನ್ನು ಮ್ಯಾನುವಲ್ ಸ್ಕಾವೆಂಜ್‌ಗೆ ಇಳಿಸುವಾಗ ಅದರ ಬಗ್ಗೆ ಇವರು ಧ್ವನಿ ಎತ್ತುವುದಿಲ್ಲ. ಆದರೆ ಈಗ ಘಟನೆಯೊಂದನ್ನು ಬಳಸಿಕೊಂಡಿರುವ ಈ ಕೋಮುವಾದಿ ಶಕ್ತಿಗಳು ಮಾಡುತ್ತಿರುವುದು ಬೂಟಾಟಿಕೆ ಮಾತ್ರ” ಎನ್ನುತ್ತಾರೆ ಕೊರಗ ಮುಖಂಡರು.

ಕೊರಗ ಸಮುದಾಯದ ಮತ್ತೊಬ್ಬ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದು ತಿಳಿಸಿದರು.

“ಅದರಲ್ಲೂ ಮದುಮಗ ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿದ್ದಾನೋ ಎಂದು ನನಗೆ ಗೊತ್ತಿಲ್ಲ. ಅವರು ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಲ್ಲ ಎಂದೇ ನಾನು ಭಾವಿಸಿದ್ದೇನೆ. ಯಾಕೆಂದರೆ ಅವರಿಗೆ ಇದರ ಕಲ್ಪನೆ ಇದೆಯೆಂದು ನನಗೆ ಅನಿಸುತ್ತಿಲ್ಲ. ಆದರೆ ಈ ವಿವಾದ ಮಾಡುವುದರ ಹಿಂದೆ ಯಾರು ಇದ್ದಾರೆ ಮತ್ತು ಅವರು ಯಾಕಾಗಿ ಇದ್ದಾರೆ ಎಂಬುವುದನ್ನು ಕೂಡಾ ನೋಡಬೇಕಾಗಿದೆ. ಈ ರೀತಿಯ ಭಾವನಾತ್ಮಕ ವಿಷಯವನ್ನು ಕೊರಗರ ಮುಗ್ಧತೆಯನ್ನು ದುರುಪಯೋಗ ಬಳಸಿಕೊಳ್ಳದೆ ಯಾರ ಭಾವನೆಗೂ ಧಕ್ಕೆ ಬರದಂತೆ ಸಮಸ್ಯೆಯನ್ನು ಬಗೆಹರಿಸಬೇಕು. ಘಟನೆಯನ್ನು ಕೋಮು ಆಧಾರದಲ್ಲಿ ವಿಭಜಿಸಬಾರದು. ವಿಡಿಯೊವನ್ನು ನೋಡುವಾಗ ಅದರಲ್ಲಿರುವ ಭಾಷೆ ಕೊರಗಜ್ಜನನ್ನು ಅವಮಾನಿಸುವ ಹಾಗೆ ಕಾಣುತ್ತಿಲ್ಲ. ಮುಟ್ಟಾಲೆ ಧರಿಸಿದ ಕೂಡಲೇ ಅದು ಕೊರಗಜ್ಜ ಎಂದು ಹೇಳುವುದು ಕೂಡಾ ಸರಿಯಲ್ಲ. ಈ ವಿಷಯದಲ್ಲಿ ಯಾವುದೇ ರೀತಿಯಲ್ಲಿ ದ್ವೇಷ ಹುಟ್ಟದ ಹಾಗೆ, ತಪ್ಪಾಗಿದ್ದರೆ ಮನವರಿಗೆ ಮಾಡಿ, ಅವುಗಳನ್ನು ತಿದ್ದಿ ಸೌಹಾರ್ದಯುತವಾಗಿ ಬಗೆಹರಿಸಬೇಕು” ಎಂದರು.


ಇದನ್ನೂ ಓದಿರಿ: ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...