Homeಕರ್ನಾಟಕಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ತಡೆಯಲು ರಾಮನಗರದಲ್ಲಿ ಮಾತ್ರ ನಿಷೇದಾಜ್ಞೆ: ಸಿದ್ದರಾಮಯ್ಯ

- Advertisement -
- Advertisement -

ರಾಮನಗರ ಜಿಲ್ಲೆಗೆ ಸೀಮಿತವಾಗಿ ಸರ್ಕಾರ 144 ಸೆಕ್ಷನ್ ಹೇರಿರುವುದು ಏನಾದರೂ ಮಾಡಿ ನಮ್ಮ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂಬ ದುರುದ್ದೇಶವನ್ನು ತೋರಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ಈ ಸರ್ಕಾರ ನಮ್ಮ ಮೇಲೆ ಏನು ಕ್ರಮ ಜರುಗಿಸುತ್ತದೋ ಜರುಗಿಸಲಿ. ನಾವು ಎಲ್ಲವನ್ನು ಎದುರಿಸಲು ಸಿದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿ ಇದ್ದಾರೆ. ನಾವು ಕೊರೊನಾ ನಿಯಮಗಳನ್ನು ಅನುಸರಿಸಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ಮೇಲೆ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು, ಅದನ್ನು ಸರ್ಕಾರ ಮಾಡಲಿ. ನಾವು ಅದನ್ನು ಎದುರಿಸಲು ತಯಾರಾಗಿದ್ದೇವೆ. ನಾವು ಕಾನೂನನ್ನು ಗೌರವಿಸುತ್ತೇವೆ, ಆದರೂ ಅವರು ನಮ್ಮನ್ನು ಬಂಧಿಸುತ್ತಾರೆ ಎಂದರೆ ಬಂಧಿಸಲಿ ಎಂದು ತಿಳಿಸಿದ್ದಾರೆ.

ಮೇಕೆದಾಟು ಬಳಿ 144 ಸೆಕ್ಷನ್ ಜಾರಿಯಿದೆಯೋ ಇಲ್ಲವೋ ನನಗೆ ಗೊತ್ತಿಲ್ಲ. ಹಾಗೇನಾದರೂ ಜಾರಿ ಮಾಡಿದ್ದರೆ ನಾಲ್ಕೇ ಜನ ಪಾದಯಾತ್ರೆ ಮಾಡ್ತೇವೆ. ನಮ್ಮ ಪಾದಯಾತ್ರೆ ಘೋಷಣೆಯಾಗಿ ಎರಡು ತಿಂಗಳಾಯ್ತು. ವಾರಾಂತ್ಯದ ಲಾಕ್ ಡೌನ್ ಘೋಷಣೆ ಆಗಿದ್ದು ಮೊನ್ನೆ ಮೊನ್ನೆ. ಅದೂ ಅಲ್ಲದೆ ರಾಮನಗರ ಜಿಲ್ಲೆಯಲ್ಲಿ ಮಾತ್ರ 144 ಸೆಕ್ಷನ್ ಯಾಕೆ? ಬೇರೆ ಜಿಲ್ಲೆಯಲ್ಲಿ ಏಕಿಲ್ಲ? ಇದು ಏನಾದರೂ ಮಾಡಿ ಪಾದಯಾತ್ರೆ ತಡೆಯಬೇಕು ಎಂಬ ಅವರ ದುರುದ್ದೇಶವನ್ನು ತೋರಿಸುತ್ತದೆ. ರಾಮನಗರದಲ್ಲಿ ಗೆಸ್ಟ್ ಹೌಸ್ ಗಳು ಸಿಗದಂತೆ ನಿರ್ಬಂಧ ಹೇರಲಾಗಿದೆ. ಇದಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಜೊತೆ ಸಂಧಾನ ಮಾಡೋಕೇನಿದೆ? ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಕಳೆದಿದೆ. ಅವತ್ತಿಂದ ಏನು ಮಾಡ್ತಿದ್ದಾರೆ. ಕಾವೇರಿ ಜಲ ವಿವಾದ ಇತ್ಯರ್ಥವಾಗಿದ್ದು 2018ರ ಫೆಬ್ರವರಿಯಲ್ಲಿ. ಅದಾದಮೇಲೆ ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ಒಂದು ಸಾಮಾನ್ಯ ವರ್ಷದಲ್ಲಿ ಇಷ್ಟು ನೀರು ಬಿಡೋಣ. ಆದರೆ ಈಗ ಹೆಚ್ಚು ಮಳೆಯಾದ ಕಾರಣ ನೀರು ಸಮುದ್ರಕ್ಕೆ ಹೋಗಿ ವ್ಯರ್ಥವಾಗುತ್ತಿದೆ. ಒಂದು ಜಲಾಶಯ ನಿರ್ಮಾಣ ಮಾಡಿ ವ್ಯರ್ಥವಾಗುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದು ಎಂದು ವಿವರಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಯಾಕೆ ಯೋಜನೆ ಜಾರಿ ಮಾಡಿಲ್ಲ? ಈಗ ಸುಪ್ರೀಂ ಕೋರ್ಟ್, ಕಾವೇರಿ ಜಲ ಪ್ರಾಧಿಕಾರ, ಹಸಿರು ನ್ಯಾಯಾಧೀಕರಣ ಎಲ್ಲಿಯೂ ಯೋಜನೆ ಜಾರಿ ಮಾಡದಂತೆ ತಡೆ ನೀಡಿಲ್ಲ. ಎರಡೂ ಕಡೆ ಬಿಜೆಪಿಯವರ ಸರ್ಕಾರವೇ ಇದೆ, ಅಣೆಕಟ್ಟು ನಿರ್ಮಾಣಕ್ಕೆ ಬೇರಾವ ತೊಂದರೆ ಇದೆ ಹೇಳಲಿ. ಈ ಸರ್ಕಾರ ಪರಿಸರ ಇಲಾಖೆಯ ಅನುಮತಿ ಪಡೆಯಲು ಯಾವತ್ತಾದರೂ ಒತ್ತಾಯ ಮಾಡಿದೆಯಾ? ಒಂದು ಪರಿಸರ ಒಪ್ಪಿಗೆ ಪತ್ರ ಪಡೆಯಲು ಎರಡೂವರೆ ವರ್ಷ ಬೇಕಾ? ಸಿದ್ದರಾಮಯ್ಯ ಅವರ ಸರ್ಕಾರ ಏನೂ ಮಾಡಿಲ್ಲ ಎಂದು ಇದಕ್ಕೆ ರಾಜಕೀಯ ಬಣ್ಣ ಬಳಿಯಲು ನೋಡುತ್ತಿದ್ದಾರೆ. ನಾವಿದ್ದಾಗಲೇ ಯೋಜನೆ ಜಾರಿ ಪ್ರಕ್ರಿಯೆ ಆರಂಭವಾಗಿದ್ದು, ಡಿ.ಪಿ.ಆರ್. ಸಿದ್ಧಪಡಿಸಿ ಕೇಂದ್ರದ ಅನುಮತಿಗೆ ಕಳುಹಿಸಿದ್ದು ಎಂದು ಮಾಹಿತಿ ನೀಡಿದ್ದಾರೆ.

ಈ ಸರ್ಕಾರ ಏನು ಮಾಡಿದೆ ಹೇಳಲಿ. ತಾವು ಏನನ್ನು ಮಾಡದೆ ನಮ್ಮ ಮೇಲೆ ಆರೋಪ ಮಾಡೋದಕ್ಕೆ ಅರ್ಥ ಇಲ್ಲ. ಹಿಂದೆ ಯಡಿಯೂರಪ್ಪ, ಸದಾನಂದಗೌಡರು, ಜಗದೀಶ್ ಶೆಟ್ಟರ್ ಅವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದರಲ್ಲ ಆಗೇನು ಮಾಡಿದ್ರು? ಈಗಿನ ಸರ್ಕಾರ ಏನು ಮಾಡಿದೆ? ಸರ್ಕಾರ ಅನುಮತಿ ನೀಡುತ್ತಾ, ನಮ್ಮ ಬಂಧನ ಮಾಡುತ್ತಾ ಗೊತ್ತಿಲ್ಲ. ಹದಿನೈದು ಜನ ಇದ್ರೂ ಅದು 144 ಸೆಕ್ಷನ್‌ನ ಮೀರಿದಂತೆಯೇ ಆಗುತ್ತೆ. ಐದು ಜನಕ್ಕಿಂತ ಜಾಸ್ತಿ ಸೇರಬಾರದು ಎಂದು ನಿಯಮ ಹೇಳುತ್ತೆ. ಹದಿನೈದು ಜನಕ್ಕೆ ಅನುಮತಿ ಏಕೆ? ಹಿಂದಿನ ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ ಎನ್ನೋಕೆ ಬಿಜೆಪಿ ಅಧಿಕಾರಕ್ಕೆ ಬಂದಿರೋದ? ತಾವೇನು ಮಾಡಿದ್ದಾರೆಂದು ಜನರಿಗೆ ಹೇಳಬೇಕಲ್ವಾ? ಎಂದು ಕೇಳಿದರು.

ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ಅವರು ಹತಾಶೆಯಿಂದ ಏನೇನೋ ಹೇಳ್ತಾರೆ, ಅದಕ್ಕೆಲ್ಲ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...