Homeಕರ್ನಾಟಕನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನಮ್ಮ ನೀರು ನಮ್ಮ ಹಕ್ಕು ಘೋಷಣೆಯೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯನ ಮಕ್ಕಳು ನಾವು. ಹೋರಾಟವನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

- Advertisement -
- Advertisement -

“ನಮ್ಮ ನೀರು ನಮ್ಮ ಹಕ್ಕು” ಘೋಷಣೆಯೊಂದಿಗೆ ಪ್ರದೇಶ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಿತು. ಕನಕಪುರ ತಾಲ್ಲೂಕಿನ ‘ಸಂಗಮ’ದಿಂದ ಬೆಂಗಳೂರಿನವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ಅಧಿಕೃತವಾಗಿ ಚಾಲನೆ ಪಡೆಯಿತು.

ಕಾವೇರಿ ನದಿಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಪೂಜೆ ಸಲ್ಲಿಸಿದರು. ಕಾವೇರಿ ನದಿಯಲ್ಲಿ ಮಿಂದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಪಾದಯಾತ್ರೆಯನ್ನು ಉದ್ಘಾಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರು ಮಾತನಾಡಿ, “ಈ ಯೋಜನೆಯು ಬೆಂಗಳೂರಿಗೆ ಕುಡಿಯುವ ನೀರು ಕೊಡುತ್ತದೆ. ಹಲವು ಹಳ್ಳಿಗಳಿಗೆ ನೀರು ಕೊಡುತ್ತದೆ. ನಾಲ್ಕು ನೂರು ಮೆಗಾವ್ಯಾಟ್ ವಿದ್ಯುತ್‌ ಶಕ್ತಿ ಉತ್ಪಾದಿಸಬಹುದು. ಇದೊಂದು ದೊಡ್ಡ ಕೆಲಸ. ಈ ಯೋಜನೆಯ ವೆಚ್ಚ 9,000 ಕೋಟಿ ರೂ.ಗಳು. ಇಂತಹದೊಂದು ದೊಡ್ಡ ಕೆಲಸವನ್ನು ಕಾಂಗ್ರೆಸ್‌ ಸರ್ಕಾರ ಪ್ರಾರಂಭಿಸಿತ್ತು” ಎಂದರು.

ಎಂ.ಬಿ.ಪಾಟೀಲ ಅವರು ನೀರಾವರಿ ಸಚಿವರಾಗಿದ್ದಾಗ ಈ ಯೋಜನೆ ರೂಪ ಪಡೆಯಿತು. ಡಿ.ಕೆ.ಶಿವಕುಮಾರ್‌ ಅವರು ನೀರಾವರಿ ಸಚಿವರಾಗಿದ್ದಾಗ ಮತ್ತಷ್ಟು ಸ್ಪಷ್ಟತೆ ಪಡೆಯಿತು. ಕರ್ನಾಟಕ ರಾಜ್ಯದ ಎಲ್ಲ ಜನತೆಯು ಈ ಯೋಜನೆಗೆ ಸಂಪೂರ್ಣವಾದ ಬೆಂಬಲವನ್ನು ಕೊಡುತ್ತದೆ. ಇದು ಎಲ್ಲರಿಗೂ ಬೇಕಾದ ಯೋಜನೆಯಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಾಗಾಗಿ ಪದೇ ಪದೇ ಕಚ್ಚಾಡುತ್ತಿದ್ದೇವೆ. 67 ಟಿಎಂಸಿ ನೀರು ಸಂಗ್ರಹಿಸುವ ಯೋಜನೆಯ ಪ್ರಯತ್ನಕ್ಕಾಗಿ ಕಾಂಗ್ರೆಸ್‌ ನಾಯಕರನ್ನು ಅಭಿನಂದಿಸುವೆ. ಈ ಯೋಜನೆ ಕಾರ್ಯಗತವಾಗುವವರೆಗೂ ಬಿಡಬಾರದು. ಈ ಛಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರಲ್ಲಿ ಇದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಾಲ್ಕೈದು ದಿನ ಪಾದಯಾತ್ರೆ ನಡೆಯಲಿದೆ. ಆರೋಗ್ಯ ಕಾಪಾಡಿಕೊಳ್ಳಿ. ಕೋವಿಡ್ ಸೂಚನೆಯನ್ನು ಪಾಲನೆ ಮಾಡಿರಿ. ನಮ್ಮ ವಿರುದ್ಧ ಏನಾದರೂ ಹೇಳಿಕೊಳ್ಳುವಂತಹದ್ದು ಆಗಬಾರದು. ಮಾಸ್ಕ್‌ ಧರಿಸಬೇಕು. ದೈಹಿಕ ಅಂತ ಕಾಪಾಡಿಕೊಂಡು ಸಾಗಬೇಕು. ಹೋರಾಟದ ಕ್ರೆಡಿಟ್‌ ಕಾಂಗ್ರೆಸ್‌ ನಾಯಕರಿಗೆ ಹೋಗುತ್ತದೆ ಎಂದು ಭಾವಿಸಿ ಈ ಹೋರಾಟವನ್ನು ವಿಫಲ ಮಾಡಲು ಯತ್ನಿಸುತ್ತಿದೆ. ಆದರೆ ಈ ಹೋರಾಟವನ್ನು ಯಶಸ್ವಿಗೊಳಿಸಬೇಕು.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತನಾಡಿ, “ನಾಲ್ಕೈದು ವರ್ಷಗಳಲ್ಲಿ 260 ಟಿಎಂಸಿ ನೀರು ಹೆಚ್ಚುವರಿಯಾಗಿ ಸಮುದ್ರಕ್ಕೆ ಹೋಗಿದೆ. ಮಳೆಗಾಲದಲ್ಲಿ ಹೆಚ್ಚು ನೀರನ್ನು ನಾವು ಶೇಖರಣೆ ಮಾಡಿಕೊಳ್ಳುತ್ತೇವೆ. ಕುಡಿಯಲು ಬೆಂಗಳೂರಿಗೆ ನೀಡುತ್ತೇವೆ. ತಮಿಳುನಾಡಿನಲ್ಲಿ ನೀರಿಲ್ಲದಿದ್ದಾಗ ಅವರಿಗೂ ನೀಡುತ್ತೇವೆ. ಎರಡು ರಾಜ್ಯಕ್ಕೂ ಈ ಯೋಜನೆ ಸೂಕ್ತವಾಗಿದೆ” ಎಂದು ವಿವರಿಸಿದರು.

ಈ ಯೋಜನೆಯ ಕುರಿತು ತರಕಾರು ತೆಗೆಯಲು ಯಾವುದೇ ದಾಖಲಾತಿ, ಆಧಾರಗಳಿಲ್ಲ. ತಮಿಳುನಾಡಿದವರು ಕ್ಯಾತೆ ತೆಗೆದಯುವುದು ಸರಿ, ಇವರು (ಬಿಜೆಪಿಯವರು) ಯಾಕೆ ಅವರ ಜೊತೆ ಸೇರಿಕೊಂಡಿದ್ದಾರೆ. ಅಣ್ಣಾ ಮಲೈ (ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ) ಕರ್ನಾಟಕದಲ್ಲಿ ಇದ್ದ ಅಧಿಕಾರಿ. ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೆಂಬಲ ನೀಡುವುದು ಏನನ್ನು ಸೂಚಿಸುತ್ತದೆ. ನಿಮ್ಮ ಶಕ್ತಿಯನ್ನು ವಿಸ್ತರಿಸಲು ಅಲ್ಲಿಗೆ ಸಪೋರ್ಟ್ ಮಾಡುತ್ತೀರಿ. ಈ ಯೋಜನೆ ಮಾಡಬಾರದು ಎಂಬುದು ಬಿಜೆಪಿಯ ಉದ್ದೇಶವಾಗಿದೆ. ಇದು ಕನ್ನಡ ನಾಡಿಗೆ ಮಾಡುವ ದ್ರೋಹ ಅಲ್ಲವಾ? ಅದಕ್ಕಾಗಿ ಈ ಪಾದಯಾತ್ರೆ ಮಾಡಬಾರದಾ? ಎಂದು ಪ್ರಶ್ನಿಸಿದರು.

“ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳಿ, ಗ್ಲೌಸ್ ಹಾಕಿಕೊಳ್ಳಿ. ಸ್ಯಾನಿಟೈಸ್ ಮಾಡಿಕೊಳ್ಳಿ. ಮಾಸ್ಕ್‌ ಹಾಕಿಕೊಳ್ಳದವರನ್ನು ವಾಪಸ್‌ ಕಳಿಸುತ್ತೇವೆ. ಸರ್ಕಾರದ ನಿಯಮಗಳಿಗೆ ಗೌರವ ಕೊಡಬೇಕು. ಆ ಜವಾಬ್ದಾರಿಯನ್ನು ನಿರ್ವಹಿಸಿ ಮುನ್ನಡೆಯಬೇಕು” ಎಂದು ಸೂಚಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು “ಕಾವೇರಿ ಹೋರಾಟಕ್ಕೆ ಜಯವಾಗಲಿ”, “ಭಾರತ್‌ ಮಾತಾಕೀ ಜೈ” ಎಂದು ಮಾತು ಆರಂಭಿಸಿದರು. “ಇದೊಂದು ಐತಿಹಾಸಿಕ ಕಾರ್ಯಕ್ರಮ. ಮನುಷ್ಯ ಎಷ್ಟು ದಿನ ಇರುತ್ತಾನೋ ಹೇಳಲು ಆಗಲ್ಲ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ” ಎಂದರು.

“ನಮ್ಮ ಕಾಂಗ್ರೆಸ್ ನಾಯಕರಲ್ಲಿ ಹೋರಾಟ ರಕ್ತಗತವಾಗಿದೆ. ಈ ದೇಶದ ಏಕತೆ, ಸಮಗ್ರತೆಗಾಗಿ ಕಾಂಗ್ರೆಸ್ ಹೋರಾಡಿದೆ. ಕಾಂಗ್ರೆಸ್‌ ನಾಯಕರು ದೇಶಕ್ಕಾಗಿ ಬಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್‌ ಇತಿಹಾಸವೇ ದೇಶದ ಇತಿಹಾಸ. ಈ ಹೋರಾಟ ಅಧಿಕಾರಕ್ಕಾಗಿ ಅಲ್ಲ. ಬಡಜನರ ಅಭಿವೃದ್ಧಿಗಾಗಿ” ಎಂದು ತಿಳಿಸಿದರು.

ಈ ಹೋರಾಟಕ್ಕೆ ತೊಂದರೆ ಮಾಡಬೇಕೆಂದು ತೊಂದರೆ ಮಾಡುತ್ತಿದ್ದಾರೆ. ಅನೇಕ ರೀತಿಯಲ್ಲಿ ಟೀಕೆ-ಟಿಪ್ಪಣಿಯನ್ನು ನಮ್ಮ ನಡಿಗೆಗೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ನೀವು ರೈತರ ಮಕ್ಕಳು. ಈ ರಾಜ್ಯವನ್ನು ಪ್ರತಿನಿಧಿಸುತ್ತಿರಿ. ಆದರೆ ಹೋರಾಟವನ್ನು ಮುಗಿಸಬೇಕೆಂದು ನಿಷೇದಾಜ್ಞೆ ಜಾರಿ ಮಾಡಿದ್ದೀರಲ್ಲ, ಇಲ್ಲಿ ಭಾಗವಹಿಸಿರುವ ಧರ್ಮ ಪೀಠದ ಪ್ರತಿನಿಧಿಗಳನ್ನು, ಸಿದ್ದರಾಮಯ್ಯನವರನ್ನು, ಖರ್ಗೆಯವರನ್ನು, ನೂರು ಜನ ಶಾಸಕರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು.

ಇಲ್ಲಿ ಹಾರಾಡುತ್ತಿರುವ ಭಾರತದ ಧ್ವಜ, ಕರ್ನಾಟಕದ ಧ್ವಜ, ಕಾಂಗ್ರೆಸ್‌ ಧ್ವಜ, ಈ ಕಾವೇರಿ ನದಿಯ ಮೇಕೆದಾಟಿನ ಹೋರಾಟ ಧ್ವಜವನ್ನು ಮುಟ್ಟಲು ನಿಮ್ಮಿಂದ ಸಾಧ್ಯವಿಲ್ಲ. ಈ ನಡಿಗೆ ನಮ್ಮ ಪಕ್ಷಕ್ಕಲ್ಲ. ನೀರಿಗಾಗಿ. ಎರಡೂವರೆ ಕೋಟಿ ಜನರ ಬದುಕಿಗಾಗಿ ಎಂದು ಸ್ಪಷ್ಟಪಡಿಸಿದರು.

ಹೋರಾಟಕ್ಕೆ ಬೆಂಬಲ ಕೊಡಬೇಡಿ ಎಂದು ನಿಮಗೆ ಕರೆ ಮಾಡಿ ಯಾರಾದರೂ ಹೇಳಬಹುದು. ಹರಿಯೋ ನೀರನ್ನು, ಬೀಸೋ ಗಾಳಿಯನ್ನು, ಉರಿಯೋ ಸೂರ್ಯನನ್ನು ನಿಲ್ಲಿಸಲು ಸಾಧ್ಯವೇ? ಉರಿಯೋ ಸೂರ್ಯದ ಮಕ್ಕಳು ವೇದಿಕೆ ಮೇಲೆ ಕೂತಿದ್ದಾರೆ ಎಂದು ಗುಡುಗಿದರು.

ಸಾಧುಕೋಕಿಲ ಅವರ ತಂಡವು ಮೇಕೆದಾಟು ಕಾವೇರಿ ಗೀತೆಯನ್ನು ಹಾಡಿತು. “ಹರಿಯುತಿಹಳು ನಮಗಾಗಿ. ಹೆಜ್ಜೆ ಹಾಕುತ್ತೇವೆ ನಾವು, ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿಗಾಗಿ ಹೆಜ್ಜೆ. ನಮ್ಮ ನೀರಿಗಾಗಿ ಹೆಜ್ಜೆ. ನಾಡಿಗಾಗಿ ಹೆಜ್ಜೆ. ನಾಡ ಜನತೆಗಾಗಿ ಹೆಜ್ಜೆ. ಹೆಜ್ಜೆ ಹಾಕುತ್ತೇವೆ ನಾವು ಹೆಜ್ಜೆ. ಕಾವೇರಿ ತಾಯಿಗಾಗಿ ಹೆಜ್ಜೆ” ಎಂದು ಸಾಧು ಕೋಕಿಲ ತಂಡ ಹಾಡಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಕಲಾವಿದ ಸಾಧು ಕೋಕಿಲ, “ನಾವು ಕಲಾವಿದರು. ಎಲ್ಲ ಕಡೆಗೂ ಸಲ್ಲುತ್ತಾರೆ. ಇದು ಪಕ್ಷದ ಕೆಲಸವಲ್ಲ. ನಮ್ಮ ಕೆಲಸ. ಮುಂದಿನ ಪೀಳಿಗೆಯ ಕೆಲಸ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ನಮ್ಮ ನೀರು ನಮ್ಮ ಹಕ್ಕು. ಈ ಕಾರ್ಯಕ್ರಮ ಮುಗಿಯುದಿಲ್ಲ. ಅಣೆಕಟ್ಟು ಕಟ್ಟುವವರೆಗೂ ಕಾರ್ಯಕ್ರಮವನ್ನು ನಡೆಸಲೇಬೇಕು” ಎಂದರು.

ಕಾಂಗ್ರೆಸ್ ನಾಯಕಿ ಜಯಮಾಲ ಮಾತನಾಡಿ, “ನಿದ್ದೆ ಬಂದಂತೆ ನಟಿಸುತ್ತಿರುವವರನ್ನು ಎಬ್ಬಿಸಲು ಸಾಧ್ಯವಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಮಾಡಿದ್ದೇವೆ” ಎಂದರು. ಕರ್ನಾಟಕ ಚಲನಚಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ.ಗೋವಿಂದ್, ನಟ ದುನಿಯಾ ವಿಜಯ್‌ ಭಾಗಿಯಾಗಿ ಚಿತ್ರರಂಗದ ಪರ ಬೆಂಬಲ ಸೂಚಿಸಿದರು.

ವೇದಿಕೆ ಕಾರ್ಯಕ್ರಮದ ನಿರೂಪಣೆಯನ್ನು ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ ಮಾಡಿದರು. ಸ್ವಾಗತ ಹಾಗೂ ಪ್ರಸ್ತಾವಿಕ ಭಾಷಣವನ್ನು ಡಿ.ಕೆ.ಸುರೇಶ್‌ ಮಾಡಿದರು. ಕೆಪಿಸಿಸಿ ಮಾಜಿ ಅಧ್ಯಕ್ಷರಾದ, ಆರ್‌.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್‌‌, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಪಾಟೀಲ್‌, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್‌.ಮುನಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್‌, ಕಾಂಗ್ರೆಸ್ ನಾಯಕರಾದ ರಾಮಲಿಂಗರೆಡ್ಡಿ, ಸಲೀಂ ಮಹಮದ್, ಈಶ್ವರ್‌ ಖಂಡ್ರೆ, ಹರಿಪ್ರಸಾದ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾರ್ಜ್, ಮೋಟಮ್ಮ, ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ರಮೇಶ್‌ಕುಮಾರ್‌, ಲಕ್ಷ್ಮಿ ಹೆಬ್ಬಾಳ್ಕರ್‌ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...