Homeಚಳವಳಿಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

- Advertisement -
- Advertisement -

ಗಣಿಗಾರಿಕೆ ವಿರೋಧಿ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ 28 ವರ್ಷದ ಹಿಡ್ಮೆ ಮಾರ್ಖಂ ಅವರನ್ನು ಬಿಡುಗಡೆಗೊಳಿಸುವಂತೆ ಪೋಸ್ಟ್‌ಕಾರ್ಡ್ ಅಭಿಯಾನವನ್ನು ಟ್ವಿಟರ್‌ನಲ್ಲಿ ಪ್ರಾರಂಭಿಸಲಾಗಿದೆ.

ಬುಡಕಟ್ಟು ಸಮುದಾಯದ ಹೋರಾಟಗಾರ್ತಿಯನ್ನು ಬಂಧಿಸಿರುವ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಜಗದಲ್‌ಪುರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಪೋಸ್ಟ್‌ಕಾರ್ಡ್ ಕಳುಹಿಸಲು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ನೆಟ್ಟಿಗರಿಗೆ ಮನವಿ ಮಾಡಲಾಗುತ್ತಿದೆ.

ದಕ್ಷಿಣ ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಬರ್ಗಮ್ ಗ್ರಾಮದ 28 ವರ್ಷದ ಹೋರಾಟಗಾರ್ತಿಯನ್ನು ಕಳೆದ ವರ್ಷ ಮಾರ್ಚ್ 9 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸ್ಮರಣಾರ್ಥ ನಡೆದ ಕಾರ್ಯಕ್ರಮವೊಂದರಲ್ಲಿ ಬಂಧಿಸಲಾಗಿತ್ತು. ದಂತೇವಾಡದ ಸಮೇಲಿ ಗ್ರಾಮದಲ್ಲಿ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅರೆಸೇನಾಪಡೆ, ಸ್ಥಳೀಯ ಪೊಲೀಸರು ಮತ್ತು ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಅಧಿಕಾರಿಗಳ ದೊಡ್ಡ ಗುಂಪು ಮಾರ್ಖಂ ಅವರನ್ನು ಕರೆದೊಯ್ದರು.

ಆದರೆ ಇದು ಅಪಹರಣ ಎಂದು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಆರೋಪಿಸಿತ್ತು. ಆದರೆ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ತರುವಾಯ ಅವರ ಮೇಲೆ UAPA ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಇದನ್ನೂ ಓದಿ: ಛತ್ತಿಸ್‌ಗಢ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಒತ್ತಾಯ: ಸಿಎಂ ಗೆ ಪತ್ರ

ಹಿಡ್ಮೆ ಮಾರ್ಖಂ ಅವರು ಸಂಘರ್ಷ ಪೀಡಿತ ಬಸ್ತಾರ್ ಪ್ರದೇಶದಲ್ಲಿ ಆದಿವಾಸಿಗಳ ಹಕ್ಕುಗಳಿಗಾಗಿ ದೀರ್ಘಕಾಲ ಹೋರಾಡುತ್ತಿದ್ದಾರೆ. ಸ್ಥಳೀಯ ಪೋಲೀಸರು, ಅರೆಸೇನಾ ಪಡೆಗಳು ಮತ್ತು ಈ ಪ್ರದೇಶದ ಮಾವೋವಾದಿಗಳು ಎಲ್ಲರ ವಿರುದ್ಧ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು.

‘ಜೈಲ್‌ ಬಂದಿ ರಿಹೈ ಸಮಿತಿ’ಯ ಕನ್ವೀನರ್ ಆಗಿರುವ ಹಿಡ್ಮೆ ಮಾರ್ಖಂ ರಾಜ್ಯಪಾಲರು, ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ, ಕಲೆಕ್ಟರ್ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ, ಜೈಲುಗಳು ಮತ್ತು ಪೊಲೀಸ್ ಶಿಬಿರಗಳಲ್ಲಿ ಬಂಧಿಸಲ್ಪಟ್ಟ ಮತ್ತು ಶಿಕ್ಷೆಗೊಳಗಾದ ಅಮಾಯಕ ಆದಿವಾಸಿಗಳ ಬಿಡುಗಡೆಗಾಗಿ ಹಲವಾರು ಹೋರಾಟವನ್ನು ನಡೆಸಿದ್ದಾರೆ.

Image

ಈ ಪೋಸ್ಟ್‌ಕಾರ್ಡ್ ಅಭಿಯಾನವು ಜಗದಲ್‌ಪುರ ಜೈಲು ಅಧಿಕಾರಿಗಳಿಗೆ ಪತ್ರ ಬರೆಯಲು ಮತ್ತು ಹಿಡ್ಮೆ ಮಾರ್ಖಂ ಅವರ ಬಂಧನದ ವಿರುದ್ಧ ಒಗ್ಗಟ್ಟನ್ನು ಪ್ರದರ್ಶಿಸಲು ಮನವಿ ಮಾಡಿದೆ.


ಇದನ್ನೂ ಓದಿ: ಭೀಮಾ ಕೊರೆಗಾಂವ್‌: ಫೆಬ್ರವರಿ 5 ರವರೆಗೆ ಹೋರಾಟಗಾರ ವರವರ ರಾವ್ ಅವರ ಜಾಮೀನು ಅವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...