Homeಮುಖಪುಟಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

ಕಳೆದ ವರ್ಷವೇ ‘ದೀದಿ’ ಉದ್ಘಾಟಿಸಿದ್ದ ಆಸ್ಪತ್ರೆಯನ್ನು ಮತ್ತೆ ಉದ್ಘಾಟಿಸಿದ ‘ಮೋದಿ’: ಆರೋಪ

- Advertisement -
- Advertisement -

“ಕಳೆದ ವರ್ಷವೇ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (ಸಿಎನ್‌ಸಿಐ) ಎರಡನೇ ಕ್ಯಾಂಪಸ್ ಉದ್ಘಾಟಿಸಿದ್ದೆ. ಪ್ರಧಾನಿ ನರೇಂದ್ರ ಮೋದಿಯವರು ಅದನ್ನು ಮತ್ತೆ ಶುಕ್ರವಾರ ದೇಶಕ್ಕೆ ಸಮರ್ಪಿಸಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಪ್ರಧಾನಿಯವರು ಈ ಯೋಜನೆಯನ್ನು ವರ್ಚ್ಯೂವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದ್ದಾರೆ. ಸಾಂಕ್ರಾಮಿಕದ ಸಮಯದಲ್ಲಿ ಕೋವಿಡ್ ಕೇಂದ್ರದ ಅಗತ್ಯವಿದ್ದಾಗ ನಾವು ಅದನ್ನು ಈಗಾಗಲೇ ಉದ್ಘಾಟಿಸಿದ್ದೇವೆ ಎಂದು ನಾನು ಪ್ರಧಾನಿಗೆ ತಿಳಿಸಲು ಬಯಸುತ್ತೇನೆ. ಇದು ನಮಗೆ ಸಾಕಷ್ಟು ಸಹಾಯ ಮಾಡಿದೆ. ಈ ಸಂಸ್ಥೆಯು ರಾಜ್ಯ ಸರ್ಕಾರದೊಂದಿಗೆ ಸಂಬಂಧ ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ವರ್ಚ್ಯೂಯಲ್‌‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ರಾಜ್ಯವು 71 ಕೋಟಿ ರೂಪಾಯಿಗಳ ವೆಚ್ಚವನ್ನು ಭರಿಸುತ್ತದೆ. ಯೋಜನೆಗೆ ರಾಜ್ಯವು ಶೇ 25 ರಷ್ಟು ಹಣವನ್ನು ನೀಡುತ್ತಿದೆ ಎಂದು ತಿಳಿದಾಗ ಪ್ರಧಾನಿಯವರು ಸಂತೋಷಪಡುತ್ತಾರೆ. ಎರಡನೇ ಕ್ಯಾಂಪಸ್‌ಗಾಗಿ ನಾವು 11 ಎಕರೆ ಭೂಮಿಯನ್ನು ಸಿಎನ್‌ಸಿಐಗೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಕ್ಯಾಂಪಸ್ ಅನ್ನು ಉದ್ಘಾಟಿಸಿ ಅದನ್ನು ದೇಶದ ಜನರಿಗೆ ಅರ್ಪಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಮಮತಾ ಬ್ಯಾನರ್ಜಿಯವರು ಧನ್ಯವಾದ ಸಮರ್ಪಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಎರಡು ಬಾರಿ ಆಹ್ವಾನಿಸಿದ ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಮಮತಾ ಬ್ಯಾನರ್ಜಿ ತಿಳಿಸಿದರು.

ವಿವಿಧ ಇಲಾಖೆಗಳಲ್ಲಿ ಹಿರಿಯ ಸಲಹೆಗಾರರನ್ನು ತೊಡಗಿಸಿಕೊಳ್ಳುವ ತನ್ನ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿದ ಬ್ಯಾನರ್ಜಿ, ಈ ಕ್ರಮದ ಹಿಂದಿನ ಕಾರಣವನ್ನು ರಾಜ್ಯಪಾಲ ಜಗದೀಪ್ ಧಂಖರ್ ಪ್ರಶ್ನಿಸುತ್ತಿದ್ದಾರೆ ಎಂದು ಪ್ರಧಾನಿಯವರಲ್ಲಿ ದೂರಿದರು.

“ನೀವು (ಮೋದಿ) ನಮಗೆ ಹೊರಗಿನಿಂದ ಜನರನ್ನು ನೇಮಿಸಲು ಸಲಹೆಗಳನ್ನು ನೀಡಿದ್ದೀರಿ. ನಾವು ಅದನ್ನು ಅನುಸರಿಸಿದ್ದೇವೆ. ಆದರೆ ಈ ನಿರ್ಧಾರ ಏಕೆ ತೆಗೆದುಕೊಂಡಿದ್ದೀರಿ ಎಂದು ರಾಜ್ಯಪಾಲರು ನನ್ನನ್ನು ಪ್ರಶ್ನಿಸಿದ್ದಾರೆ. ನಾವು ಪ್ರಧಾನಿಯವರ ಸಲಹೆಯನ್ನು ಅನುಸರಿಸಿದ್ದೇವೆ ಎಂಬ ಸುಳಿವು ಇಲ್ಲ. ರಾಜಕೀಯ ದೃಷ್ಟಿಕೋನ ಏನೇ ಇರಲಿ, ಆದರೆ ನಾವು ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ನಾವು ಅದನ್ನು 99ರಷ್ಟು ಪ್ರತಿಶತ ಅನುಸರಿಸಲು ಪ್ರಯತ್ನಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸುವಂತೆ ಬ್ಯಾನರ್ಜಿಯವರು ಪ್ರಧಾನಿಯವರಲ್ಲಿ ಮನವಿ ಮಾಡಿದರು. “ವೈದ್ಯರ ಕೊರತೆಯಿದೆ. ಜನಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸೀಟುಗಳ ಕೋಟಾವನ್ನು ಹೆಚ್ಚಿಸಬೇಕು. 75 ವೈದ್ಯರು ಕೋವಿಡ್‌ನಿಂದ ಬಳಲುತ್ತಿರುವ ಒಂದು ಆಸ್ಪತ್ರೆಯಿದೆ. ರೋಗಿಗಳ ಚಿಕಿತ್ಸೆಯನ್ನು ಹೇಗೆ ಕೈಗೊಳ್ಳಲಾಗುತ್ತದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಕೋವಿಡ್ ನಿಯಂತ್ರಣಾ ಲಸಿಕೆಯನ್ನು ನೀಡುವಲ್ಲಿ ಪಶ್ಚಿಮ ಬಂಗಾಳವು ದೇಶದಲ್ಲಿ ನಂ. 1 ಸ್ಥಾನದಲ್ಲಿದೆ. ರಾಜ್ಯದಲ್ಲಿ ಯಾವುದೇ ರೀತಿಯಲ್ಲಿಯೂ ಲಸಿಕೆ ವ್ಯರ್ಥವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾಗಿ ನ್ಯಾಷನಲ್‌ ಹೆರಾಲ್ಡ್‌ ವರದಿ ಮಾಡಿದೆ.

ನಮ್ಮ ದೇಶಕ್ಕೆ ಕೆಟ್ಟ ಹೆಸರು ಬರದಂತೆ ನಾವು (ರಾಜ್ಯ ಸರ್ಕಾರ) ನಮ್ಮ ಕೆಲಸಗಳ ಮೂಲಕ ಖಚಿತಪಡಿಸಿಕೊಂಡಿದ್ದೇವೆ. ಸ್ವಾಸ್ಥ್ಯ ಸತಿ (ಆರೋಗ್ಯ ವಿಮಾ ಯೋಜನೆ) ಥರದ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಡಯಾಲಿಸಿಸ್ ಕೇಂದ್ರಗಳನ್ನು ಪ್ರಾರಂಭಿಸಿದ್ದೇವೆ. ಜನರು ಔಷಧಿಗಳ ಮೇಲೆ ಶೇಕಡಾ 40ರಷ್ಟು ರಿಯಾಯಿತಿಗಳನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಎಲ್ಲೆಡೆ ಕೊರೊನಾ ನಿರ್ಬಂಧ ಹೇರಲು ಸಾಧ್ಯವಿಲ್ಲ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...