Homeಮುಖಪುಟಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನ: ಗೂಗಲ್ ಡೂಡಲ್ ಗೌರವ

ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಖ್ ಜನ್ಮದಿನ: ಗೂಗಲ್ ಡೂಡಲ್ ಗೌರವ

- Advertisement -
- Advertisement -

ಇಂದು ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ, ಶಿಕ್ಷಣ ತಜ್ಞೆ ಫಾತಿಮಾ ಶೇಖ್ ಅವರ ಜನ್ಮದಿನ. ಸ್ತ್ರೀವಾದಿ ನಾಯಕಿ ಶೇಖ್ ಅವರ ನೆನಪಿನಲ್ಲಿ ಗೂಗಲ್ ಡೂಡಲ್ ರಚಿಸುವ ಮೂಲಕ ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗೌರವಿಸಲಾಗಿದೆ.

ಫಾತಿಮಾ ಶೇಖ್ ಅವರು ಸಮಾಜ ಸುಧಾರಕರಾಗಿದ್ದ ಜ್ಯೋತಿ ಬಾ ಫುಲೆ ಮತ್ತು ಸಾವಿತ್ರಿ ಬಾ ಫುಲೆಯೊಂದಿಗೆ ಸೇರಿ 1848ರಲ್ಲಿ ಸ್ಥಳೀಯ ಗ್ರಂಥಾಲಯವನ್ನು ಸ್ಥಾಪಿಸಿದ್ದರು. ಇದು ಭಾರತದಲ್ಲಿ ಬಾಲಕಿಯರಿಗಾಗಿ ಆರಂಭವಾದ ಮೊದಲ ಶಾಲೆಗಳಲ್ಲಿ ಒಂದಾಗಿದೆ.

ಫಾತಿಮಾ ಶೇಖ್‌ ಅವರು 1831 ಜನವರಿ 9ರಂದು ಪುಣೆಯಲ್ಲಿ ಜನಿಸಿದರು. ತನ್ನ ಸಹೋದರ ಉಸ್ಮಾನ್‌ನೊಂದಿಗೆ ವಾಸಿಸುತ್ತಿದ್ದರು. ದಲಿತರಿಗೆ ಶಿಕ್ಷಣ ನೀಡಲು ಪ್ರಯತ್ನಿಸಿದ್ದಕ್ಕಾಗಿ ಫುಲೆ ದಂಪತಿಗಳನ್ನು ಮನೆಯಿಂದ ಹೊರಹಾಕಿದಾಗ ಅವರಿಗೆ ಫಾತಿಮಾ ಶೇಖ್‌ ತಮ್ಮ ಮನೆಯಲ್ಲಿ ಇರಲು ಅನುವು ಮಾಡಿಕೊಟ್ಟಿದ್ದರು. ಶೇಖ್‌ ಅವರ ಮನೆಯಲ್ಲಿಯೇ ಸ್ಥಳೀಯ ಗ್ರಂಥಾಲಯವನ್ನು ತೆರೆಯಲಾಯಿತು. ಅಲ್ಲಿ ಸಾವಿತ್ರಿ ಬಾಯಿ ಫುಲೆ ಮತ್ತು ಫಾತಿಮಾ ಶೇಖ್‌ ದಲಿತ ಮತ್ತು ಮುಸ್ಲಿಂ ಮಹಿಳೆಯರು ಮತ್ತು ಮಕ್ಕಳಿಗೆ ಶಿಕ್ಷಣ ನೀಡಲು ಆರಂಭಿಸಿದರು.

ತನ್ನ ಸಮುದಾಯದವರಿಗೆ ದೀನದಲಿತರಿಗೆ ಸ್ಥಳೀಯ ಗ್ರಂಥಾಲಯದಲ್ಲಿ ಕಲಿಯಲು ಮನೆ ಮನೆಗೆ ಹೋಗಿ ಜನರನ್ನು ಕರೆತಂದರು. ಸತ್ಯಶೋಧಕ್ ಆಂದೋಲನದಲ್ಲಿ ತೊಡಗಿಸಿಕೊಂಡವರನ್ನು ಅವಮಾನಿಸಲು ಪ್ರಯತ್ನಿಸಿದ ಪ್ರಬಲ ವರ್ಗಗಳಿಂದ ದೊಡ್ಡ ಪ್ರತಿರೋಧವನ್ನು ಎದುರಿಸಿದರು. ಎಷ್ಟೆ ಅಡ್ಡಿ ಆತಂಕಗಳು ಎದುರಾದರೂ ಶೇಖ್ ಮತ್ತು ಅವರ ಸ್ನೇಹಿತರು ಸಮಾನತೆಗಾಗಿ ಹೋರಾಡುವ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಿದ್ದರು.

ಭಾರತ ಸರ್ಕಾರವು 2014 ರಲ್ಲಿ ಫಾತಿಮಾ ಶೇಖ್ ಅವರ ಸಾಧನೆಗಳನ್ನು ಗುರುತಿಸಿ ಉರ್ದು ಪಠ್ಯಪುಸ್ತಕಗಳಲ್ಲಿ ಇವರ ಕುರಿತು ವಿಶೇಷ ಪರಿಚಯ ನೀಡುವ ಮೂಲಕ ಇವರ ಸಾಧನೆಗಳ ಮೇಲೆ ಬೆಳಕು ಚೆಲ್ಲಿದೆ.


ಇದನ್ನೂ ಓದಿ; ನೊಂದವರ ಘನತೆಗೆ ಮಾರ್ಗ ತೋರಿದ ಸಾವಿತ್ರಿಬಾಯಿ ಫುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...