Homeಕೊರೊನಾಓಮಿಕ್ರಾನ್ ಆತಂಕ: ಇಂದಿನಿಂದ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್

ಓಮಿಕ್ರಾನ್ ಆತಂಕ: ಇಂದಿನಿಂದ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತು ಓಮಿಕ್ರಾನ್ ರೂಪಾಂತಕ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಹಿರಿಯರಿಗೂ ಇಂದಿನಿಂದ (ಜ.10) ಮೂರನೇ ಲಸಿಕೆ ಅಥವಾ ಬೂಸ್ಟರ್‌ ಡೋಸ್ ನೀಡಲಾಗುತ್ತಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಿಸಿದ್ದರು.

ಇಂದಿನಿಂದ ಆರಂಭವಾಗುತ್ತಿರುವ ಲಸಿಕಾ ಅಭಿಯಾನದಲ್ಲಿ ಸುಮಾರು 5.75 ಕೋಟಿ ಜನರು ಮೂರನೇ ಡೋಸ್‌ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ. ಇದರಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 2.75 ಕೋಟಿ, 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು 2 ಕೋಟಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

ಮುನ್ನೆಚ್ಚರಿಕೆಯ ಲಸಿಕೆ ಡೋಸ್‌ಗಳಿಗೆ ನೋಂದಾಯಿಸಿಕೊಳ್ಳುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಅರ್ಹರು ನೇರವಾಗಿ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳಬಹುದು ಅಥವಾ ಯಾವುದೇ ಲಸಿಕೆ ಕೇಂದ್ರಕ್ಕೆ ತೆರಳಬಹುದು. ಇನ್ನು ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್‌ಗಳನ್ನು ನೀಡುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಇದನ್ನೂ ಓದಿ: ಉತ್ತರಾಖಂಡ ಕೊರೊನಾ ಆತಂಕ: ಜ.16 ರ ವರೆಗೆ ರಾಜಕೀಯ ರ್‍ಯಾಲಿ, ಶಾಲೆಗಳು ಬಂದ್

ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಇತರ ದೀರ್ಘಕಾಲದ ಕಾಯಿಲೆಗಳನ್ನು ಹೊಂದಿರುವ 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯ ಮೇರೆಗೆ “ಮುನ್ನೆಚ್ಚರಿಕೆ ಡೋಸ್” ಅನ್ನು ಪಡೆಯುವ ಆಯ್ಕೆಯನ್ನು ಹೊಂದಿರುತ್ತಾರೆ.

ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದ 9 ತಿಂಗಳ ನಂತರ ಮಾತ್ರ ಬೂಸ್ಟರ್ ಶಾಟ್‌ಗಳನ್ನು ಪಡೆಯಬಹುದು. ಮೊದಲು ತಾವು ಯಾವ ಎರಡು ಡೋಸ್ ಲಸಿಕೆ ಪಡೆದಿರುತ್ತಾರೋ ಅದೇ ಲಸಿಕೆಯನ್ನೆ ಮೂರನೇ ಡೋಸ್ ಆಗಿ ನೀಡಲಾಗುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಕೋವಿಶೀಲ್ಡ್. ಕೋವಾಕ್ಸಿನ್ ಪಡೆದವರಿಗೆ ಕೋವಾಕ್ಸಿನ್ ಲಸಿಕೆ ನೀಡಲಾಗುತ್ತದೆ.

“ದೇಶವನ್ನು ಸುರಕ್ಷಿತವಾಗಿಡುವಲ್ಲಿ ಕೊರೊನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರು ಭಾರಿ ಕೊಡುಗೆ ನೀಡಿದ್ದಾರೆ. ಆದ್ದರಿಂದ, ಮುನ್ನೆಚ್ಚರಿಕೆಯ ದೃಷ್ಟಿಯಿಂದ, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಡೋಸ್ ಅನ್ನು ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ” ಎಂದು ಪ್ರಧಾನಿ ಮೋದಿ ಡಿಸೆಂಬರ್ 25 ರಂದು ಹೇಳಿದ್ದರು.

ಆದರೆ ಈಗಾಗಲೇ, ಓಮಿಕ್ರಾನ್ ಮತ್ತು ಕೋವಿಡ್ ದೇಶದಲ್ಲಿ ಉಲ್ಬಣಗೊಂಡಿದ್ದು, ಅನೇಕ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಹಲವರು ಎರಡನೇ ಬಾರಿಗೆ ಕೊರೊನಾಗೆ ತುತ್ತಾಗಿದ್ದಾರೆ.


ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...