Homeಕರ್ನಾಟಕಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

ಮುಸ್ಲಿಂ ವೇ‍ಷ ಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು!

- Advertisement -
- Advertisement -

ಬೆಂಗಳೂರಿನಂತಹ ಮಹಾನಗರದಲ್ಲಿ ಕೋಟ್ಯಾಂತರ ಜನ ವಿವಿಧ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಮೂರು ಹೊತ್ತಿನ ತಮ್ಮ ಹೊಟ್ಟೆ ತುಂಬಿಕೊಳ್ಳಲು ಶ್ರಮ ಹಾಕಿ ದುಡಿಯುತ್ತಿದ್ದಾರೆ. ಇನ್ನು ವಿ‍ಶೇಷ ಚೇತನರೂ ಕೂಡ ಯಾವುದಾದರೊಂದು ಗೂಡಂಗಡಿಯನ್ನು ಹಾಕಿಕೊಂಡು, ಸಣ್ಣ ಪುಟ್ಟ ವ್ಯಾಪಾರ ಮಾಡಿಯೋ ಮತ್ತಾವುದೋ ರೀತಿಯಲ್ಲಿ ದುಡಿದು ತಮ್ಮ ಬದುಕು ಸಾಗಿಸುತ್ತಿದ್ದಾರೆ.

ಇನ್ನು ಕೆಲವು ವಯೋವೃದ್ದರು ದುಡಿಯಲು ಸಾದ್ಯವಾಗದೆ, ತಮ್ಮ ಮನೆಗಳಲ್ಲೂ ಸರಿಯಾದ ಹಾರೈಕೆ ಸಿಗದವರು ದೇವಸ್ಥಾನದ ಹತ್ತಿರವೊ, ಸಿಗ್ನಲ್ ಗಳಲ್ಲಿಯೋ ಬಿಕ್ಷಾಟನೆ ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ನಾವು ಇದನ್ನೆಲ್ಲಾ ಯಾಕೆ ಹೇಳ್ತಿದ್ದೀವಿ ಅನ್ಕೊಂಡ್ರಾ? ಅದಕ್ಕೆ ಕಾರಣ ಇದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೋ ಸಾಕಷ್ಟು ಹರಿದಾಡುತ್ತಿದೆ. ಅದೇನೆಂದರೆ ವ್ಯಕ್ತಿಯೊಬ್ಬ ಮುಸ್ಲಿಂ ವೇಷ ಧರಿಸಿ ಭಿಕ್ಷಾಟನೆ ಮಾಡುತ್ತಿದ್ದಾರೆ.. ಈ ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯು ತಾನೊಬ್ಬ ಮುಸ್ಲಿಂ ಅಂಗವಿಕಲ ವ್ಯಕ್ತಿ, ಒಂದು ಕೈ ಒಂದು ಕಾಲು ಇಲ್ಲ ಎಂದು ಹೇಳಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ. ಕೆಲವರು ಆತನಿಂದ ಮುಸ್ಲಿಂ ಸಮುದಾಯದ ಮೇಲೆ ತುಚ್ಛವಾಗಿ ಮಾತನಾಡಿರುತ್ತಾರೆ. ಆ ಅಂಗವಿಕಲ ವ್ಯಕ್ತಿಯ ಬಗ್ಗೆ ಅನುಮಾನಗೊಂಡ ಕೆಲವು ಸಾರ್ವಜನಿಕರು ಆತನನ್ನು ಪ್ರಶ್ನೆ ಮಾಡಲು ಮುಂದಾಗುತ್ತಾರೆ.. ಆಗ ಆತ ಅಂಗವಿಕಲನೇ ಅಲ್ಲಾ ಎಂದು ಗೊತ್ತಾಗುತ್ತದೆ.. ಆತನಿಗೆ ಕೈಯಿದ್ದರೂ ಇಲ್ಲದ ರೀತಿ ನಟಿಸುತ್ತಿರುವುದನ್ನು ತರಾಟೆಗೆ ತೆಗೆದುಕೊಂಡು ವಿಡಿಯೋ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆ ವಿಡಿಯೋ ವೈರಲ್ ಆದ ನಂತರ ಮತ್ತೊಬ್ಬ ಮುಸ್ಲಿಂ ವ್ಯಕ್ತಿಯು ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಆತ ಸರಿಯಾಗಿ ಪ್ರತಿಕ್ರಿಯಿಸದ ಕಾರಣ ಜೋರು ದ್ವನಿಯಲ್ಲಿ ಕೇಳಿದಾಗ,  ಅಂಗವಿಕಲನಂತೆ ನಟಿಸುತ್ತಿದ್ದ ವ್ಯಕ್ತಿಯು ತಾನು ರಾಜಸ್ಥಾನ ದಿಂದ ಬಂದಿದ್ದು ನನ್ನ ಹೆಸರು ಬಿರ್ಸು, ನಾನು ಮುಸ್ಲಿಂ ಅಲ್ಲಾ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು ಪ್ರಶ್ನಿಸುವ ಆ ವಿಡಿಯೋ ಸಹ ಎಲ್ಲಡೆ ವೈರಲ್ ಆಗತ್ತಿದೆ.

ಹೀಗೆ ಮುಸ್ಲಿಂ ಟೋಪಿ ಹಾಕಿಕೊಂಡು ಅಂಗವಿಕಲ ಎಂಬ ವೇಷ ಧರಿಸಿ ಭಿಕ್ಷೆ ಬೇಡುತ್ತಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಹಿಂದೂ, ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಸಹೋದರರಂತೆ ಜೀವಿಸುತ್ತಿದ್ದೇವೆ. ನೀವು ಯಾಕೆ ಈ ರೀತಿ ಮುಸ್ಲಿಂ ವೇಷ ಧರಿಸಿ ಅವರ ಮೇಲೆ ಕೆಟ್ಟ ಅಭಿಪ್ರಾಯ ಬರುವಂತೆ ಮಾಡುತ್ತಿದ್ದೀರಿ ಇದು ಸರಿಯಲ್ಲಾ ಎಂದು  ಕೆಲವು ವ್ಯಕ್ತಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯದ ಬಗ್ಗೆ ಈಗಾಗಲೇ ಸಾಕಷ್ಟು ತಪ್ಪು ಅಭಿಪ್ರಾಯಗಳು ಬರುವಂತಹ ಕಾರ್ಯಕ್ರಮಗಳನ್ನು ಕೆಲ ಬಲಪಂಥೀಯ ಟಿವಿ ಚಾನೆಲ್ ಗಳು ಕೊರೋನಾ ಸಮಯದಲ್ಲಿ ಮಾಡಿದ್ದವು. ಈಗ ಈ ರೀತಿಯ ಘಟನೆಗಳು ಮುಸ್ಲಿಂ ಸಮುದಾಯದಲ್ಲಿ ಮತ್ತಷ್ಟು ಬೇಸರಕ್ಕೆ ಕಾರಣವಾಗಿದೆ.


ಇದನ್ನು ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...