Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹಿಂದೂಯೇತರರನ್ನು ದೂರವಿಡಿ ಎಂದು ಪೋಸ್ಟರ್‌ ಹಾಕುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಐವರ ವಿರುದ್ಧ ವಾರಣಾಸಿ ಪೊಲೀಸರು ಜನವರಿ 9ರಂದು ಎಫ್‌ಐಆರ್‌‌ ದಾಖಲಿಸಿದ್ದಾರೆ.

ವಾರಣಾಸಿಯ ವಿವಿಧ ಘಾಟ್‌ಗಳಲ್ಲಿ ಹಿಂದೂಯೇತರರನ್ನು ದೂರವಿಡುವಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಈ ಕುರಿತು ಇಲ್ಲಿನ ಭೇಲುಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಸದಸ್ಯರು ವಾರಣಾಸಿಯ ಘಾಟ್‌ಗಳ ಸುತ್ತಲೂ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅದರಲ್ಲಿ ಹಿಂದೂಯೇತರರು ವಾರಣಾಸಿಯಲ್ಲಿ ಗಂಗಾನದಿಯ ದಂಡೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು. ಈ ಪೋಸ್ಟರ್‌ಗಳನ್ನು ಹಾಕುತ್ತಿರುವ ಫೋಟೋಗಳು, ವೀಡಿಯೊಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಐವರು ಆರೋಪಿಗಳಲ್ಲಿ ಇಬ್ಬರು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸೇರಿದವರು. ಅವರೇ ಈ ಕುರಿತು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬಿಬ್ಬರನ್ನು ರಾಜನ್ ಗುಪ್ತಾ, ನಿಖಿಲ್ ತ್ರಿಪಾಠಿ “ರುದ್ರ” ಎಂದು ಪೊಲೀಸರು ಗುರುತಿಸಿದ್ದಾರೆ.

ವಿಎಚ್‌ಪಿಯ ವಾರಣಾಸಿ ವಿಭಾಗದ ಕಾರ್ಯದರ್ಶಿ ರಾಜನ್ ಗುಪ್ತಾ ಅವರು ವೀಡಿಯೊವೊಂದರಲ್ಲಿ, “ಈ ಪೋಸ್ಟರ್‌ಗಳು ಮನವಿಯಲ್ಲ, ಆದರೆ ಸನಾತನ ಧರ್ಮವನ್ನು ಅನುಸರಿಸದವರಿಗೆ ಎಚ್ಚರಿಕೆ” ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇಲ್ಲಿನ ಘಾಟ್‌ಗಳು, ಕಾಶಿಯ ದೇವಾಲಯಗಳನ್ನು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸಂಕೇತಗಳೆಂದು ಕರೆದಿರುವ ಗುಪ್ತಾ, ಇತರರು ಇಲ್ಲಿಂದ ದೂರವಿರಬೇಕು ಎಂದು ಹೇಳುತ್ತಾರೆ. “ಈ ಸ್ಥಳಗಳಿಗೆ ಭೇಟಿ ನೀಡುವವರು ಹಿಂದೂ ಧರ್ಮದಲ್ಲಿ ನಂಬಿಕೆ ಹೊಂದಿದ್ದರೆ, ಅವರಿಗೆ ಸ್ವಾಗತವಿದೆ. ಇಲ್ಲದಿದ್ದರೆ ನಾವು ಅವರನ್ನು ನಮ್ಮ ಪವಿತ್ರ ಸ್ಥಳಗಳಿಂದ ವಾಪಸ್‌ ಕಳುಹಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಬಜರಂಗದಳದ ವಾರಣಾಸಿ ಸಂಯೋಜಕ, ನಿಖಿಲ್ ತ್ರಿಪಾಠಿ ‘ರುದ್ರ’ ಮಾತನಾಡಿ, “ಗಂಗಾ ನದಿ ನಮ್ಮ ತಾಯಿ, ಇದು ಪಿಕ್ನಿಕ್ ಸ್ಪಾಟ್ ಅಲ್ಲ. ಗಂಗೆಯನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸುವವರು ಅದರಿಂದ ದೂರವಿರಬೇಕು. ಅವರಾಗಿಯೇ ಇದನ್ನು ಪಾಲಿಸದಿದ್ದರೆ ಬಜರಂಗದಳ ಈ ಕೆಲಸವನ್ನು ಮಾಡಿಸುತ್ತದೆ” ಎಂದಿದ್ದಾರೆ.

ಇಬ್ಬರನ್ನು ಸಂಘಟನೆಗಳಿಂದ ತೆಗೆದುಹಾಕಲಾಗಿದೆ ಎಂದು ವಿಎಚ್‌ಪಿ ಭಾನುವಾರ ಹೇಳಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ್) ಪ್ರವೀಣ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ಭಾಗಿಯಾಗಿರುವ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಗುಪ್ತಾ ಮತ್ತು ತ್ರಿಪಾಠಿ ಅವರನ್ನು ಸಂಘಟನೆಗಳಿಂದ ಹೊರಹಾಕಲಾಗಿದೆ. ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ವಿಎಚ್‌ಪಿಯ ಕಾಶಿ (ವಾರಣಾಸಿ) ಪ್ರಾಂತ ಮಂತ್ರಿ ಆನಂದ್ ಸಿಂಗ್ ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕ ರಾಘವೇಂದ್ರ ಚೌಬೆ ಅವರು ‘ದಿ ವೈರ್‌’ನೊಂದಿಗೆ ಮಾತನಾಡಿ, “ಕಾಂಗ್ರೆಸ್‌ ಪಕ್ಷವು ಬಲಪಂಥೀಯರ ದುಷ್ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಪಟ್ಟಣದಲ್ಲಿ ಕೇಸರಿ ವಸ್ತ್ರಧಾರಿ ಯುವಕರು ಆರಂಭಿಸಿರುವ ದ್ವೇಷ ಅಭಿಯಾನದ ಕುರಿತು ಇಲ್ಲಿನ ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಗಂಗಾ ಮತ್ತು ಅದರ ಘಾಟ್‌ಗಳು ಎಂದಿಗೂ ಒಂದು ಧರ್ಮದ ಅನುಯಾಯಿಗಳಿಗೆ ಸೇರಿಲ್ಲ” ಎಂದು ಹಿರಿಯ ಪತ್ರಕರ್ತ ವಿಜಯ್ ವಿನೀತ್ ದೂರವಾಣಿಯಲ್ಲಿ ದಿ ವೈರ್‌ಗೆ ತಿಳಿಸಿದ್ದಾರೆ.

ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಗಂಗಾ ಸ್ನಾನದ ನಂತರ ಹೇಗೆ ನಮಾಜ್ ಮಾಡುತ್ತಿದ್ದರು ಎಂಬುದರ ಕುರಿತು ಹಿರಿಯ ಪತ್ರರ್ಕರು ವಿವರಿಸಿದ್ದಾರೆ. ರಾಜಕೀಯಕ್ಕಾಗಿ ಜನರನ್ನು ವಿಭಜಿಸಲು ಯತ್ನಿಸುತ್ತಿರುವ ಶಕ್ತಿಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘಟನೆ ನಡೆದಿದೆ.


ಇದನ್ನೂ ಓದಿರಿ: ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...