Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹಿಂದೂಯೇತರರನ್ನು ದೂರವಿಡಿ ಎಂದು ಪೋಸ್ಟರ್‌ ಹಾಕುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಐವರ ವಿರುದ್ಧ ವಾರಣಾಸಿ ಪೊಲೀಸರು ಜನವರಿ 9ರಂದು ಎಫ್‌ಐಆರ್‌‌ ದಾಖಲಿಸಿದ್ದಾರೆ.

ವಾರಣಾಸಿಯ ವಿವಿಧ ಘಾಟ್‌ಗಳಲ್ಲಿ ಹಿಂದೂಯೇತರರನ್ನು ದೂರವಿಡುವಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಈ ಕುರಿತು ಇಲ್ಲಿನ ಭೇಲುಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಸದಸ್ಯರು ವಾರಣಾಸಿಯ ಘಾಟ್‌ಗಳ ಸುತ್ತಲೂ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅದರಲ್ಲಿ ಹಿಂದೂಯೇತರರು ವಾರಣಾಸಿಯಲ್ಲಿ ಗಂಗಾನದಿಯ ದಂಡೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು. ಈ ಪೋಸ್ಟರ್‌ಗಳನ್ನು ಹಾಕುತ್ತಿರುವ ಫೋಟೋಗಳು, ವೀಡಿಯೊಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಐವರು ಆರೋಪಿಗಳಲ್ಲಿ ಇಬ್ಬರು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸೇರಿದವರು. ಅವರೇ ಈ ಕುರಿತು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬಿಬ್ಬರನ್ನು ರಾಜನ್ ಗುಪ್ತಾ, ನಿಖಿಲ್ ತ್ರಿಪಾಠಿ “ರುದ್ರ” ಎಂದು ಪೊಲೀಸರು ಗುರುತಿಸಿದ್ದಾರೆ.

ವಿಎಚ್‌ಪಿಯ ವಾರಣಾಸಿ ವಿಭಾಗದ ಕಾರ್ಯದರ್ಶಿ ರಾಜನ್ ಗುಪ್ತಾ ಅವರು ವೀಡಿಯೊವೊಂದರಲ್ಲಿ, “ಈ ಪೋಸ್ಟರ್‌ಗಳು ಮನವಿಯಲ್ಲ, ಆದರೆ ಸನಾತನ ಧರ್ಮವನ್ನು ಅನುಸರಿಸದವರಿಗೆ ಎಚ್ಚರಿಕೆ” ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇಲ್ಲಿನ ಘಾಟ್‌ಗಳು, ಕಾಶಿಯ ದೇವಾಲಯಗಳನ್ನು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸಂಕೇತಗಳೆಂದು ಕರೆದಿರುವ ಗುಪ್ತಾ, ಇತರರು ಇಲ್ಲಿಂದ ದೂರವಿರಬೇಕು ಎಂದು ಹೇಳುತ್ತಾರೆ. “ಈ ಸ್ಥಳಗಳಿಗೆ ಭೇಟಿ ನೀಡುವವರು ಹಿಂದೂ ಧರ್ಮದಲ್ಲಿ ನಂಬಿಕೆ ಹೊಂದಿದ್ದರೆ, ಅವರಿಗೆ ಸ್ವಾಗತವಿದೆ. ಇಲ್ಲದಿದ್ದರೆ ನಾವು ಅವರನ್ನು ನಮ್ಮ ಪವಿತ್ರ ಸ್ಥಳಗಳಿಂದ ವಾಪಸ್‌ ಕಳುಹಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಬಜರಂಗದಳದ ವಾರಣಾಸಿ ಸಂಯೋಜಕ, ನಿಖಿಲ್ ತ್ರಿಪಾಠಿ ‘ರುದ್ರ’ ಮಾತನಾಡಿ, “ಗಂಗಾ ನದಿ ನಮ್ಮ ತಾಯಿ, ಇದು ಪಿಕ್ನಿಕ್ ಸ್ಪಾಟ್ ಅಲ್ಲ. ಗಂಗೆಯನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸುವವರು ಅದರಿಂದ ದೂರವಿರಬೇಕು. ಅವರಾಗಿಯೇ ಇದನ್ನು ಪಾಲಿಸದಿದ್ದರೆ ಬಜರಂಗದಳ ಈ ಕೆಲಸವನ್ನು ಮಾಡಿಸುತ್ತದೆ” ಎಂದಿದ್ದಾರೆ.

ಇಬ್ಬರನ್ನು ಸಂಘಟನೆಗಳಿಂದ ತೆಗೆದುಹಾಕಲಾಗಿದೆ ಎಂದು ವಿಎಚ್‌ಪಿ ಭಾನುವಾರ ಹೇಳಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ್) ಪ್ರವೀಣ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ಭಾಗಿಯಾಗಿರುವ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಗುಪ್ತಾ ಮತ್ತು ತ್ರಿಪಾಠಿ ಅವರನ್ನು ಸಂಘಟನೆಗಳಿಂದ ಹೊರಹಾಕಲಾಗಿದೆ. ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ವಿಎಚ್‌ಪಿಯ ಕಾಶಿ (ವಾರಣಾಸಿ) ಪ್ರಾಂತ ಮಂತ್ರಿ ಆನಂದ್ ಸಿಂಗ್ ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕ ರಾಘವೇಂದ್ರ ಚೌಬೆ ಅವರು ‘ದಿ ವೈರ್‌’ನೊಂದಿಗೆ ಮಾತನಾಡಿ, “ಕಾಂಗ್ರೆಸ್‌ ಪಕ್ಷವು ಬಲಪಂಥೀಯರ ದುಷ್ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಪಟ್ಟಣದಲ್ಲಿ ಕೇಸರಿ ವಸ್ತ್ರಧಾರಿ ಯುವಕರು ಆರಂಭಿಸಿರುವ ದ್ವೇಷ ಅಭಿಯಾನದ ಕುರಿತು ಇಲ್ಲಿನ ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಗಂಗಾ ಮತ್ತು ಅದರ ಘಾಟ್‌ಗಳು ಎಂದಿಗೂ ಒಂದು ಧರ್ಮದ ಅನುಯಾಯಿಗಳಿಗೆ ಸೇರಿಲ್ಲ” ಎಂದು ಹಿರಿಯ ಪತ್ರಕರ್ತ ವಿಜಯ್ ವಿನೀತ್ ದೂರವಾಣಿಯಲ್ಲಿ ದಿ ವೈರ್‌ಗೆ ತಿಳಿಸಿದ್ದಾರೆ.

ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಗಂಗಾ ಸ್ನಾನದ ನಂತರ ಹೇಗೆ ನಮಾಜ್ ಮಾಡುತ್ತಿದ್ದರು ಎಂಬುದರ ಕುರಿತು ಹಿರಿಯ ಪತ್ರರ್ಕರು ವಿವರಿಸಿದ್ದಾರೆ. ರಾಜಕೀಯಕ್ಕಾಗಿ ಜನರನ್ನು ವಿಭಜಿಸಲು ಯತ್ನಿಸುತ್ತಿರುವ ಶಕ್ತಿಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘಟನೆ ನಡೆದಿದೆ.


ಇದನ್ನೂ ಓದಿರಿ: ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...