Homeಚಳವಳಿಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

- Advertisement -
- Advertisement -

ಸಂಕ್ರಮಣಕ್ಕೆ ಮೂರು ದಿನದ ಮೊದಲು ಸಾಹಿತ್ಯ ಸಂಕ್ರಮಣ ಸರ್ಕಸ್ ಡೇರೆಯ ಊರುಗೋಲು ಕುಸಿದಿದೆ. ಈ ಸರ್ಕಸ್ ಡೇರೆಯಲ್ಲಿ ಹಲವು ವೇಷಗಳು ಪಾತ್ರಗಳಾಗಿ ಜೀವತಳೆದು ಕನ್ನಡ ಸಾಹಿತ್ಯ ಲೋಕದೊಳಗೆ ಲವಲವಿಕೆ ಸೃಷ್ಟಿಸಿದ್ದವು. ಕಾವ್ಯ, ನಾಟಕ, ಲಘುಧಾಟಿಯ ಸ್ವಗತಗಳು, ಹೋರಾಟದ ಹೆಜ್ಜೆಗಳು, ಆಗೀಗ ಕಚಗುಳಿ ಕೊಡುವ ಮೊನಚು ಮಾತಿನ ವ್ಯಂಗ್ಯ… ರಾಜಕೀಯ ಬದ್ಧತೆಯ ಸ್ಪಷ್ಟ ಕಲ್ಪನೆ ಸಂಕ್ರಮಣ ಸಾಹಿತ್ಯ ಪತ್ರಿಕೆಯ ಸೆಳೆತಗಳಾಗಿದ್ದವು. ಇದೆಲ್ಲದರ ಕೇಂದ್ರವೃತ್ತದ ಊರುಗೋಲು ಚಂಪಾ ಆಗಿದ್ದರು. ಭಾಷೆಯ ಸೊಗಸು ಆಡುವುದರಲ್ಲಷ್ಟೆ ಅಲ್ಲ ಬರೆಯುವುದರಲ್ಲೂ ಇದೆ ಎಂಬುದನ್ನ ಸಾಬೀತುಪಡಿಸಿದವರು.

ದೇಶ-ವಿದೇಶ ಸುತ್ತಿ ಬಂದರೂ, ಬೆಂಗಳೂರು ವಾಸದಲ್ಲಿದ್ದರು ಅವರ ಬಾಯೊಳಗೆ, ಬರಹದೊಳಗೆ ಹಾವೇರಿ ಹತ್ತಿಮತ್ತೂರಿನ ತಿರುಳ್ನುಡಿಯ ತೀಕ್ಷಣತೆಯನ್ನೇ ಉಳಿಸಿಕೊಂಡಿದ್ದರು. ಭಾಷೆಯನ್ನ ಕಾವ್ಯದ ಹಾಗೆ ಆಡುತ್ತಿದ್ದ ಚಂಪಾ ಅವರು ತಮ್ಮ ನಾಟಕ-ಕಾವ್ಯಗಳಲ್ಲಿ ಭಾಷೆಯ ವ್ಯಂಗ್ಯ, ದ್ವನಿ-ಕಾಕುಗಳನ್ನು ಸೊಗಸಾಗಿ ಹೆಣೆಯುತ್ತಿದ್ದರು. ಇಂದಿಗೂ ಅವರ ನಾಟಕಗಳ ದೊಡ್ಡ ಶಕ್ತಿ ಭಾಷೆಯೇ ಆಗಿದೆ. ಬೇರೆ ನಾಟಕಕಾರರು ಜಾನಪದ-ಪುರಾಣ-ಮಹಾಕಾವ್ಯಗಳೊಳಗೆ ಹೊಕ್ಕು ತಮ್ಮ ಅಭಿವ್ಯಕ್ತಿಗೆ ಪಾತ್ರಗಳನ್ನು, ಸನ್ನಿವೇಶ, ಸಂಗತಿ-ಸಂದರ್ಭಗಳನ್ನು ಹೆಕ್ಕಿ ತಂದರೆ ಚಂಪಾ ಮಾತ್ರ ಭಾಷೆಯೊಳಗೆ ಪಾತ್ರ-ನಾಟಕೀಯತೆಯನ್ನು ಹುಡುಕುತ್ತಿದ್ದರು. ಗೋಕರ್ಣದ ಗೌಡಶ್ಯಾನಿ ನಾಟಕವೊಂದನ್ನು ಹೊರತುಪಡಿಸಿ ಉಳಿದೆಲ್ಲ ನಾಟಕಗಳ ಸಂವೇದನೆ ಇರೋದೆ ಚಂಪಾ ಅವರ ಕ್ರಿಯಾಶೀಲತೆಗೆ ಕೈಗನ್ನಡಿ.

‘ಸರ್ ನಾಟಕಕಾರರಾಗಿ ನಿಮ್ಮ ಭಾಷೆ ಮತ್ತು ಅದರೊಳಗಿನ ನಾಟಕೀಯತೆ ನನಗೆ ಇಷ್ಟ’ ಎಂದೊಮ್ಮೆ ಅವರಿಗೆ ಹೇಳಿದಾಗ ನಗುತ್ತಲೇ…. ‘ನೀವು ನಾಟಕದವರು ಭಾಳ ಡಿಸ್ಟನ್ಸ್ ಮಾಡತಿರೆಪಾ… ಕೊರಿಯಾಗಿ ಉಳಿಸೀರಿ’ ಅಂತ ತಮ್ಮ ಯಾವತ್ತಿನ ಧಾಟಿಯೊಳಗ ಹೇಳಿದಾಗ ಯಾಕೋ ರಂಗಭೂಮಿಯವರ ಮ್ಯಾಲ ಅತೃಪ್ತರಾಗಿದಾರೆ ಅನಿಸಿತ್ತು. ಅವರ ಕುಂಟಕುಂಟ ಕುರುವತ್ತಿ ನಾಟಕವು ಕರ್ನಾಟಕ ರಂಗಭೂಮಿಯಲ್ಲಿ ಸಾವಿರಾರು ಪ್ರಯೋಗ ಕಂಡಿದೆ. ಅಪ್ಪ, ಕೊಡೆ, ಗುರ್ತಿನವರು, ಟಿಂಗರ ಬುಡ್ಡಣ್ಣ ನಾಟಕಗಳು ವಿಶಿಷ್ಟ ಶೈಲಿಯ ವಿನ್ಯಾಸ ಹೊಂದಿರುವ ನಾಟಕಗಳು. ಆದರೂ ಅವರು ತಮಗೆ ತಾವೇ ಕೊರಿ ಅಂದುಕೊಂಡದ್ದು ನನಗೆ ಯಾವತ್ತು ಕಾಡುತ್ತಿತ್ತು. ಫನ್ ಮಾಡುತ್ತಲೇ ಮಾತಿಗಾರಂಭಿಸಿ ಕಟ್ಟಕಡೆಯದ್ದೊಂದು ಕಡಕ್ ಫನ್ ಜೊತೆಗೆ ಮಾತು ಮುಗಿಸುತ್ತಿದ್ದ ಚಂಪಾ ಇಂದು ಎನ್ನುವುದನ್ನು ಗ್ರಹಿಸುತ್ತಿದ್ದ ರೀತಿ ಭಿನ್ನವಾಗಿರುತ್ತಿತ್ತು.

ನನಗೆ ಯಾವತ್ತೂ ನಿಮ್ಮ ನೆನಪೇ ಭಾಷೆ. ಆ ಭಾಷೆಯ ಬಂಧುಗಳು ನಾವು. ಅದಕ್ಕೂ ಮಿಗಿಲು ನಿಮ್ಮ ಬಂಡಾಯ ಪ್ರವೃತ್ತಿ ನನ್ನಂಥ ಅನೇಕರಿಗೆ ಮಾದರಿ. ನೀವೇ ಬರೆದಿದ್ದೀರಿ ಸರ್
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.

ನಿಮಗೆ ಬುದ್ದ ಬಸವ ಬಾಬಾಸಾಹೇಬ ನಮನಗಳು ಸರ್…

  • ಮಹಾದೇವ ಹಡಪದ ನಟುವರ

(ರಂಗಕರ್ಮಿಗಳು, ಆಟ-ಮಾಟ ಸಾಂಸ್ಕೃತಿಕ ಪಥ ಎಂಬ ನಾಟಕ ತಂಡವನ್ನು ಹುಟ್ಟು ಹಾಕಿ ಸಕ್ರಿಯವಾಗಿದ್ದಾರೆ.)


ಇದನ್ನೂ ಓದಿ; ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...