Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...