Homeಕರ್ನಾಟಕ‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

‘ತೇಜೋವಧೆ’: ಪವರ್‌‌ ಟಿವಿ ಮುಖ್ಯಸ್ಥನ ವಿರುದ್ದ ಪತ್ರಕರ್ತ ನವೀನ್‌ ಸೂರಿಂಜೆ ದೂರು

- Advertisement -
- Advertisement -

ಹಳೆಯ ಮತ್ತು ಸಂಬಂಧಪಡದ ಆಡಿಯೊಗಳನ್ನು ಎಡಿಟ್‌ ಮಾಡಿ ತಮ್ಮ ಚಾನೆಲ್‌ನಲ್ಲಿ ಪ್ರಸಾರ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ನವೀನ್‌ ಸೂರಿಂಜೆ ಅವರು ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ ಸೇರಿದಂತೆ ಇನ್ನೂ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.

ಬಿಟಿವಿಯ ಮಾಜಿ ಪತ್ರಕರ್ತನೊಬ್ಬ ಇತ್ತೀಚೆಗೆ ಲಂಚ ಪಡೆಯುವ ಸಮಯದಲ್ಲಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಪ್ರಕರಣದ ಹಿನ್ನಲೆಯಲ್ಲಿ ಪವರ್‌ ಟಿವಿ, ಮಾಧ್ಯಮಗಳಲ್ಲಿ ನಡೆಯುವ ಹಣದ ಅವ್ಯವಹಾರಗಳ ಬಗ್ಗೆ ವಿಶೇಷ ಕಾರ್ಯಕ್ರಮ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಬಿಟಿವಿ ಸಂಪಾದಕ ನವೀನ್ ಸೂರಿಂಜೆ ಅವರ ಬಗ್ಗೆಯೂ ಭ್ರಷ್ಟಾಚಾರದ ಆರೋಪವನ್ನು ಹೊರಿಸಲಾಗಿತ್ತು. ಜೊತೆಗೆ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೊವೊಂದನ್ನು ತೋರಿಸಿ, ನವೀನ್ ಸೂರಿಂಜೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಂಬಿಸಲಾಗಿದೆ.

ಇದನ್ನೂ ಓದಿ:ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

ಪವರ್‌ ಟಿವಿಯ ಈ ಎಲ್ಲಾ ಆರೋಪಗಳನ್ನು ವಿರೋಧಿಸಿರುವ ನವೀನ್‌‌ ಸೂರಿಂಜೆ, ಪವರ್‌ ಟಿವಿಯ ಮುಖ್ಯಸ್ಥ ರಾಕೇಶ್‌ ಶೆಟ್ಟಿ, ಸಂಪಾದಕೀಯ ಸಲಹೆಗಾರ ರವೀಂದ್ರ ರೇಷ್ಮೆ, ಸಹಸಂಪಾದಕ ರಾಘವ ಸೂರ್ಯ, ಅರುಣ್ ಭಗತ್ ಸಿಂಗ್, ಪ್ರಶಾಂತ್‌‌ ಬಿಸ್ಲೆರಿ ಮತ್ತು ಆಡಿಯೊದಲ್ಲಿ ಇರುವ ವ್ಯಕ್ತಿಯ ವಿರುದ್ದ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಅವರು, ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿಯನ್ನು ಮರಳು ಮಾಫಿಯಾ ಎಂದು ಉಲ್ಲೇಖಿಸಿದ್ದು, ಅವರು ಬಿಟಿವಿ ವಿರುದ್ಧ ಕೆಲವು ದಿನಗಳಿಂದ ಪಿತೂರಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ. ರಾಕೇಶ್‌ ಶೆಟ್ಟಿ ಮತ್ತು ಇತರರ ವಿರುದ್ದ ಬಿಟಿವಿ ಸಂಪಾದಕನಾಗಿ ತಾನು ದೂರು ನೀಡಿದ್ದು, ಈ ಹಿನ್ನಲೆಯಲ್ಲಿ IPC 419, 420 ಸೇರಿದಂತೆ ಇನ್ನಿತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ನವೀನ್ ಸೂರಿಂಜೆ ಪೊಲೀಸ್‌ ದೂರಿನಲ್ಲಿ ಹೇಳಿದ್ದಾರೆ.

ಇದರಿಂದ ರಾಕೇಶ್‌ ಶೆಟ್ಟಿ ಹತಾಶೆಗೆ ಒಳಗಾಗಿ, ತನ್ನ ವಿರುದ್ದ ವೃತ್ತಿಪರ ಟ್ಯ್ರಾಪ್ ಆರೋಪಿ ಅರುಣ್‌ ಭಗತ್‌ ಸಿಂಗ್‌, ಪತ್ರಕರ್ತ ರವೀಂದ್ರ ರೇಷ್ಮೆ, ಪ್ರಶಾಂತ್‌ ಬಿಸ್ಲೆರಿ ಎಂಬವರು ಸೇರಿಕೊಂಡು ಎಡಿಟೆಡ್‌ ಆಡಿಯೊ ಪ್ರಸಾರ ಮಾಡಿದ್ದಾರೆ ಎಂದು ನವೀನ್‌ ಸೂರಿಂಜೆ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್‌ ಟಿವಿ ಪ್ರಸಾರ ಮಾಡಿರುವ ಆಡಿಯೊ ಬಹುಶಃ ವರ್ಷಗಳ ಹಿಂದೆಯೆ ತಾನು ಮಾತನಾಡಿರುವ ಬಿಡಿ ಬಿಡಿ ಆಡಿಯೊ ಆಗಿರಬಹುದು ಎಂದು ನವೀನ್ ಸೂರಿಂಜೆ ಹೇಳಿದ್ದು, ಅದನ್ನು ಒಟ್ಟು ಸೇರಿಸಿ ಟಿವಿಯಲ್ಲಿ ಪ್ರಸಾರ ಮಾಡಿ ತನ್ನ ಮಾನಹಾನಿ ಮಾಡಲಾಗಿದೆ ಎಂದು ಸೂರಿಂಜೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಸೂರಿಂಜ್, “ನಾನು ಪಾರದರ್ಶಕ ಪತ್ರಿಕೋದ್ಯಮ ಮಾಡುತ್ತಿರುವವನು. ನನ್ನ ಸಂಪಾದನೆ ಎಷ್ಟು ಎಂದು ಮೊದಲ ಬಾರಿಗೆ ವೆಬ್‌ಸೈಟ್‌ನಲ್ಲಿ ಘೋಷಿಸಿದ ಪತ್ರಕರ್ತ. ನಾನು ಈಗಲೂ ಕಚೇರಿಯ ಸಂಬಳವನ್ನಷ್ಟೇ ನೆಚ್ಚಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

“ತಾಲೂಕು ವರದಿಗಾರ ಹುದ್ದೆಯಿಂದ ಹಿಡಿದು ಸಂಪಾದಕನ ಹುದ್ದೆಯವರೆಗೆ ಈವರೆಗೂ ಲಂಚ ತೆಗೆದುಕೊಂಡಿಲ್ಲ. ಯಾವ ರಾಜಕಾರಣಿ, ಉದ್ಯಮಿಯ ಮನೆಯಲ್ಲಿ ಊಟ ಮಾಡಿಲ್ಲ, ಪಾರ್ಟಿಗಳಲ್ಲಿ ಭಾಗಿಯಾಗಿಲ್ಲ. ನನ್ನ ವೈಯುಕ್ತಿಕ ವಿಷಯಗಳಿಗೆ ರಾಜಕಾರಣಿಗಳ ಸಹಾಯ ಪಡೆದಿಲ್ಲ. ಯಾವುದೇ ರಾಜಕಾರಣಿ ಮತ್ತು ಉದ್ಯಮಿಗಳನ್ನು ನನ್ನ ಖಾಸಗಿ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಲಾಭ ಪಡೆದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

“ನನ್ನ ಸಂಸ್ಥೆಯ ಸಂಬಂಧದ ಅಧಿಕೃತ ಹಣಕಾಸು ವ್ಯವಹಾರಗಳನ್ನು ಹಲವರ ಜೊತೆ ಹುದ್ದೆಯ ಕಾರಣಕ್ಕಾಗಿ ಅಧಿಕೃತವಾಗಿ ಮಾತನಾಡಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯ ಅಧಿಕೃತ ಹಣಕಾಸು ವ್ಯವಹಾರಗಳಲ್ಲಿ ನನ್ನ ಭಾಗಿದಾರಿಕೆಯ ಅಗತ್ಯವಿದ್ದಾಗ ಆ ಕರ್ತವ್ಯ ಮಾಡುವುದು ಅನಿವಾರ್ಯ. ನಾನು ವರ್ಷಗಳ ಹಿಂದೆ ಯಾರ ಜೊತೆಯೋ ಮೂರ್ನಾಲ್ಕು ಬಾರಿ ಮಾತನಾಡಿದ್ದ ಫೋನ್ ಕರೆಯನ್ನು ಎಡಿಟ್ ಮಾಡಿ ಅದನ್ನೆಲ್ಲಾ ಜೋಡಿಸಿ ಒಂದು ಫೋನ್ ಕರೆ ಎಂದು ಬಿಂಬಿಸಿ ನನ್ನ ಆಡಿಯೋವನ್ನು ಪ್ರಸಾರ ಮಾಡಲಾಗಿದೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

“ಈವರೆಗೂ ವೈಯುಕ್ತಿಕವಾಗಿ ಯಾವುದೇ ರೀತಿಯಲ್ಲಿ ನನ್ನ ಸಿದ್ದಾಂತದಲ್ಲಿ ರಾಜಿಯಾಗಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಬೇಕಾಗುವಷ್ಟು ಮಾತ್ರವಲ್ಲದೆ ಸಾಕು ಸಾಕಾಗುವಷ್ಟು ವೇತನವನ್ನು ನಾನು ಪಡೆಯುತ್ತಿದ್ದೇನೆ” ಎಂದು ನವೀನ್ ಸೂರಿಂಜೆ ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿರುವ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ, “ಅವರು ಮಾತನಾಡಿರುವುದು ಸೇರಿದಂತೆ ಎಲ್ಲಾ ದಾಖಲೆಗಳು ನಮ್ಮಲ್ಲಿ ಇವೆ. ನಾವು ಯಾವುದನ್ನೂ ಎಡಿಟ್‌ ಮಾಡಿಲ್ಲ. ಮೂಲ ದಾಖಲೆಗಳನ್ನು ಇಟ್ಟುಕೊಂಡು ನಾವು ಮಾತನಾಡಿದ್ದೇವೆ, ಈ ಬಗ್ಗೆ ಮೂಲ ದಾಖಲೆಗಳನ್ನು ಪೊಲೀಸರು ಕೇಳುತ್ತಾರೆ ಎಂಬ ವಿವೇಚನೆ ನಮಗೂ ಇದೆ. ನಮ್ಮಲ್ಲಿರುವ ಎಲ್ಲಾ ದಾಖಲೆಗಳನ್ನು ಪೊಲೀಸ್ ಠಾಣೆಗೆ ದಾಖಲು ಮಾಡುತ್ತೇವೆ. ಅವರ ಜೊತೆ ನಮಗೆ ಯಾವುದೆ ವೈಯಕ್ತಿಕ ದ್ವೇಷ ಇಲ್ಲ, ನನಗೆ ನವೀನ್‌ ಸೂರಿಂಜೆ ಯಾರು ಎಂದೇ ಗೊತ್ತಿಲ್ಲ. ಅನ್ಯಾಯ ಆದವರು ಬಂದು, ಈ ಬಗ್ಗೆ ದಾಖಲೆ ಕೊಟ್ಟಿದ್ದಾರೆ. ಬೇಕಿದ್ದರೆ ನವೀನ್ ಸೂರಿಂಜೆಗೂ ಈ ಬಗ್ಗೆ ಒಂದು ಪ್ರತಿಯನ್ನು ಕೊಡುವ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...