Homeಚಳವಳಿಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ

- Advertisement -
- Advertisement -

ಚಂಪಾರಿಗೆ ಎಪ್ಪತ್ತು! ನಂಬುವುದೇ ಕಷ್ಟ. ಅವರ ಬಂಡಾಯ, ಕಿಲಾಡಿ ಮತ್ತು ಕಿಡಿಗೇಡಿತನಕ್ಕೆ ಎಪ್ಪತ್ತು  ತುಂಬಲು ಸಾಧ್ಯವಿಲ್ಲ, ಅದು ಬಂಡಾಯ ಮತ್ತು ನವ್ಯದ ನಡುಕಾಲದಲ್ಲೇ ನಿಂತಿರಬೇಕು ಅನ್ನಿಸಿತು. ಆದರೂ ಅವರನ್ನು ಮಾತನಾಡಿಸಿ ಒಂದು ಹಾರೈಕೆ ಮಾತೇಳುವುದು ನಮ್ಮ ಕರ್ತವ್ಯವಲ್ಲವೆ. ಫೋನ್  ಮಾಡಿದ್ರೆ ಸಿಕ್ಕೇಬಿಟ್ರು.

“ಹಲೋ ನಮಸ್ಕಾರ ಸಾರ್, ನಾನು ಯಾಹೂ”

“ಯಾಹು ಅಂದ್ರ ಗೌರಿ ಲಂಕೇಶದಾಗ ಬರೀತಿರಲ್ಲಿ ಅವರ ಹೌದಲ್ಲೋ ?

“ಹೌದು ಸಾರ್”.

“ನಿಮ್ಮ ಹೆಸರೇನ್ರಿ ?”

“ಯಾಹೂ ಅಂತ ಸಾರ್ ?

“ಅದು ಖರೇರಿ, ತಂದಿ ತಾಯಿ ಇಟ್ಟ ಹೆಸರಿಲ್ಲೇನು ?”

“ಅದು ಕರಿಯಕ್ಕೆ ಚನ್ನಾಗಿಲ್ಲ ಅಂತ ಗೌರಿಮೇಡಂ ಯಾಹೂ ಅಂತ ಇಟ್ಟವರೆ ಸಾ”,

“ಅಂಗೆನ ಯದಕ ಫೋನ್ ಮಾಡಿದಿರಿ ಹೇಳ್ರಲ್ಲ ?”

“ಯಪ್ಪತ್ತು ವರ್ಸಾಯ್ತಂತಲ್ಲ ಸಾರ್ ನಿಮಗೆ ?”

 “ಅನಂತಮೂರ್ತಿಗಾಗ್ಲೆ ಎಪ್ಪತ್ತಾರಾತು ಗೊತ್ತೇನ ?”

“ಅವು ಎಪ್ಪತ್ತಾರಕ್ಕಿಂತ್ಲೂ ಜಾಸ್ತಿಯಾದಂಗೆ ಕಣ್ತಾರೆ. ಆದ್ರೆ ನೀವು ಮಾತ್ರ ಇನ್ನು ಐವತ್ತಾರು ವರ್ಷದಂಗೆ ಕಾಣ್ತೀರಿ. ಇದರ ಗುಟ್ಟೇನು ಸಾರ್ ?

“ಇದರಾಗ ಗುಟ್ಟೇನು ಬಂತ್ರಿ, ನನ್ನ ಮಾತುಕತಿ, ಬರವಣಿಗೆ, ನಡವಳಿಕೆ ಇವೇನದಾವು ಇವುಕೂ, ನನ್ನ ವಯಸಿಗೂ ಸಂಬಂದಿಲ್ಲ, ನಮ್ಮ ದೇಶದಾಗ ಒಂದೊಂದು ವಯೋಮಾನಕ್ಕೆ ಒಂದೊಂದು ನಡವಳಿಕೆ ಇರಾಕೆ ಬೇಕು ಅಂತ ಹೇಳಿ ನಿಯಮ ಮಾಡ್ಕಾರ, ಅದನ್ನ ಮುರಕೊಂಡ ಹೋದ್ರೆ ನಾವು ಅರಾಮಿರತೇವಿ, ಅಷ್ಟ”.

“ನೀವೀಗ ಯಾವುದನ್ನು ಮುರದಿದ್ದಿರಿ ಸಾರ್ ?”

“ಅರವತ್ತರ ಅರಳುಮರಳು ಮುರುದು ಹತ್ತು ವರ್ಸಾತು”

“ಈ ಎಪ್ಪತ್ತು ವರ್ಷದಲ್ಲಿ ಹಿಂತಿರುಗಿ ನೋಡಿದ್ರೆ ಏನನಸ್ತದೆ ಸಾರ್ ?

“ಭಾಳ ಮಂದಿ ಸಾವಿಗೆ ಸಂತಾಪ ಬರದೇನಿ, ಇನ್ನ ರಗಡ ಮಂದಿಗೆ ಬರಿಬೇಕಲ್ಲಪ್ಪಾ ಅನಸತೈತಿ.”

“ನೀವು ಸಂತಾಪ ಬರಿಯೋ ಮಂದಿ ಬಹಳ ಜನ ಉಳಿದಿಲ್ಲವಲ್ಲ ಸಾರ್ ?”

“ಏ, ಭಾಳ ಮಂದ್ಯದಾರ, ಪುರೋಹಿತರ ಪೈಕಿನ ಒಂದು ಡಜನ್ ಅದಾರ, ರಾಜಕಾರಣದಾಗ ಮೂರು ನಾಕು ಮಂದಿ ಆದಾರ, ಸಾಹಿತ್ಯ ಲೋಕದಾಗ ಆಯಸ್ಸು ಮುಗಿಸಿ ಹೋಗೋ ಮಂದಿಗಿಂತ ಲಬಕ್ಕನ ಹೋಗೋ ಮಂದಿ ಭಾಳದಾರ”.

“ಅದರಲ್ಲೂ ಬಂಡಾಯದೋರು ಬೇಗ ಹೋಗ್ತರಲ್ಲ ಸಾರ್ ?”

“ಹೌದ್ರಿ,  ನವೋದಯದವರು ಪಿಂಚಣಿ ತೊಗಂಡು ಆರಾಮವಾಗಿದ್ದಾರ. ನವ್ಯದವರು, ಬಂಡಾಯದವರು ಕೂಡೇ ಹೊಂಟ ಹೋದರ್‍ರಿ”.

“ಸಾಹಿತ್ಯ ಲೋಕದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಅಂತ ಕೆಲವು ಕಾಲಘಟ್ಟಗಳವಲ್ಲಾ ಸಾರ್, ನಿಮ್ಮ ಬರವಣಿಗೆ ಹೋರಾಟ, ಯಾವ ಘಟ್ಟದಲ್ಲಿ ತೀವ್ರವಾಗಿತ್ತು ಸಾರ್.

“ನೋಡಿ ಇವರೆ, ನಾವು ಯಾವ ಕಾಲಘಟ್ಟದಾಗೂ ಎರಡೂ ಕಾಲಿಟ್ಟವರಲ್ಲ. ಒಂದೊಂದೇ ಕಾಲಿಟ್ಟು ಹಿಂದ ತಗದೇವಿ”.

“ಯಾಕ್ ಸರ್ ?”

“ಯಾಕ್ ಅಂದ್ರ, ಒಂದು ಲೇಬಲ್ ಹಚಗೊಂಡು ಬರಿಯೂದಂದ್ರ ನನಗಾಗುದಿಲ್ರಿ,

ಮೊದಲಿಕ್ಕ ನವೋದಯದವರು ಬರಿಯಕ್ಕತ್ತಿದ್ರು. ಅವುರಿಗೆ ಆಗ ಲೇಬಲ್ ಇರಲಿಲ್ಲ. ಈ ನಮ್ಮ ಪಿತಾಮಹರಿಗೆ ಯಂಗೋ ಏನೋ ನವೋದಯದವರು ಅನ್ನೋ ಲೇಬಲ್ ಸಿಕ್ಕು ‘ಏ ನಮಗ ಲೇಬಲ್ ಸಿಕ್ತು’ ಅಂತೇಳಿ ಬರದು ಬರೆದು ಸುಸ್ತಾದರ್‍ರಿ.”

“ಆದ್ರು ಇವತ್ತಿಗೂ ಅವರನ್ನ ಓದಬವುದಲ್ಲ ಸಾರ್”…?

“ಕೆಲವು ಮಂದಿನ್ನ ಓದಬವುದು ಅಷ್ಟರಿ, ಇನ್ನ ಕೆಲವು ಮಂದಿ ಪುಸ್ತಕ ತೊಗಂಡು ಸಂತಾಪ ಸೂಚನೆ ಮಾಡಿ ಮುಂದೆ ಹೋಗಬಹುದು”.

“ಆ ತರ ಬರದಿರೋರು ಪ್ರಗತಿಶೀಲರಲ್ಲವ ಸಾರ್ ?”

“ಪ್ರಗತಿಶೀಲರು ಬರಕೊಂಡ್ ಬದುತ್ತೇವಿ ಅಂತ ಹೊಂಟರ್‍ರಿ. ಅದಕ ಅಂಗ ಬರದಾರ, ಪಾಪ ಮೊದಲಕ್ಕ ತಮ್ಮ ಸುತ್ತಮುತ್ತ ಕಾಣೋ ಸಮಾಜ ಕುರುತು ಬರದ್ರು. ಅದು ಖಾಲಿ ಆತು. ಅನಂತರ ಗಟಾರ ಜೀವನ ಬರಿಬೇಕು ಅಂತ ಹೊಂಟರ್‍ರಿ, ಅನುಭವದ ಸಲುವಾಗಿ ಗಟಾರಕ್ಕೋದ್ರು, ವಳ್ಳಿ ಬರಲಿಲ್ಲವರು. ‘ಏ ಇಲ್ಲಿ ಭಾಳ ಅರಾಮೈತ’ ಅಂತ ಅಲ್ಲೇ ಉಳುದ್ರು. “ಅಲ್ಲಿಂದ ಅಂಗೇ ಹೊಂಟೋದರಲ್ಲ?”

“ಹೌದ್ರಿ, ಇನ್ನ ನವ್ಯದವರಿಗೆ ಅನಾಥ ಪ್ರಜ್ಞೆ ಅಮರಿಕೊಂಡು ಏನು ನೋಡಿದ್ರೂ ಚಂದ ಕಾಣಿರಲಿಲ್ಲ ಅವರಿಗೆ. ಆದ್ರಿಂದ ಒಳಗೋದ್ರು. ವಳ್ಳಿ ಬರಲಿಲ್ಲವರು. ನಾವೊಂದಿಷ್ಟು ಮಂದಿ ಹೊರಬಂದು ಬಂಡಾಯದ ಕಡೆ ಹೊಂಟವಿ”.

“ಅಂಗಾದ್ರೆ ನಿಮ್ಮ ಬಂಡಾಯ ಮಧ್ಯಂತರದ್ದ ಸಾರ್ ?”

“ಇಲ್ರೀ, ಬಂಡಾಯ ನನ್ನ ಮನೋಧರ್ಮ, ನಾ ಪೆನ್ನ ತೊಗಂಡ ಕೂಡಲೇ ಹೊರಬಂದಿದ್ದೇ ಬಂಡಾಯ, ಧಾರವಾಡದಾಗ ಬೇಂದ್ರೆ, ಜೋಶಿ ಮತ್ತವರ ಬಳಗ, ಅನಂತರ ಸಿ.ಪ. ಶೆಟ್ಟಿ, ಗಿರಡ್ಡಿ, ಮಾಕು, ದೇಕು, ಗೋಕಾಕ್ ಇವರ ವಿರುದ್ಧ ನನ್ನ ಬಂಡಾಯ ಎಂದೂ ಇದ್ದದ್ದೆ. ಅದಕ ನೋಡ್ರಿ ಎಮರ್ಜೆನ್ಸಿಲಿ ನಾ ಒಬ್ಬವನೇ ಜೇಲಿಗೆ ಹೋದದ್ದು “.

“ಆಗ ಇಡೀ ಧಾರವಾಡ ಖುಷಿಪಡ್ತಾಂತಲ್ಲಾ ಸಾರ್?”

“ನಾ ಹೊರಬಂದಾಗ ಅಷ್ಟೇ ಬೇಸರಾತು ಅವರಿಗೆ”.

“ಜೈಲಲ್ಲಿ ನೀವು ಆರೆಸೆನ್ಸಿನವರ ಜೊತೆಗಿದ್ರಂತೆ ?”

“ಜೈಲಂದ್ರ ಮುಗಿತಲ್ರೀ ಅದು ಪಬ್ಲಿಕ್ ಪಡಖಾನಿ ಇದ್ದಂಗ, ಅಲ್ಲಿಗೆ ದರವೊಬ್ಬರೂ ಬರತಾರ, ಅಂಗ ಚೆಡ್ಡಿ ಹುಡ್ರು ಬಂದಿದ್ದು, ಕೆಲವುರು ನಾ ಆರೆಸ್ಸೆಸ್ಸಲ್ಲ ಅಂತ ಅಳಾಕತ್ತಿದ್ರು.”

“ಆದ್ರಿವತ್ತು ಯಂಗೆ ನಗ್ತಾರೆ ನೋಡಿ ಸಾರ್”

“ಇಲ್ಲಿ ಯಾರ ನಗೂನೂ ಶಾಶ್ವತ ಅಲ್ಲರೀ. ಒಂದು ಕಾಲಕ್ಕೆ ಕಾಂಗ್ರೆಸ್‌ನವರು ಅಂದ್ರೆ ಮಂದಿ ಹೆದರುತಿದ್ದರು. ಆದ್ರ ಇವತ್ತು ಕಾಂಗ್ರೆಸ್ಸಿನವರು ಅಂದ್ರೆ ಒಂದೀಟು ಡುಬ್ಬು ಕೆರೆದು ಹೋಕ್ಯೇನಾ ಅನ್ನಂಗಾಗೇರೆ. ಅಂಗ ಈ ಚೆಡ್ಡಿಗಳ ನಗು ಎಡೂರಪ್ಪ ಲಗಾಟ ಹೊಡೆದ ನಂತರ ಹಿಂಗೇ ಇರುತ್ತೆ ಅಂತ ಹೇಳಾಕ ಬರೂದಿಲ್ಲ”.

“ಇದೊಂತರ ಹತಾಶೆ ಮುಚ್ಚಿಡೋ ಅಭಿಪ್ರಾಯದಂಗೆ ಇದೆಯಲ್ಲ ಸಾರ್”.

“ಹತಾಶ ಅನ್ನದು ನನ್ನ ಸನೇಕ ಸುಳೆದಿಲ್ಲರಿ. ಹತಾಶ ಏನಾರ ನನಗೆ ಇದ್ದಿದ್ರೆ ನನ್ನ ಅರವತ್ತನೇ ವರ್ಷದ ಅದ್ದೂರಿಯಿಂದೆ ಆಚರಿಸೊ ಏರ್ಪಾಡು ಮಾಡತಿದ್ವೆ. “

“ಹೌದ ಸಾರ್?”

“ಹೌದ್ರಿ, ನನಗೆ ಕೆಲವರ ನೋಡಿದ ಕೂಡ್ಳೆ ಬ್ಯಾಟ್ರಿ ಚಾರ್ಜಾಕ್ಕಿತಿ. ಚಡ್ಡಿಗಳ ನೋಡಿದ್ರೆ, ಪುರೋಹಿತರ ನೋಡಿದ್ರೆ, ಪೊಲೀಸರ ನೋಡಿದ್ರೆ, ಇನ್ನು ಕೆಲವರದಾರ ಅವರನ್ನ ನೋಡಿದ್ರೆ, ಅವರ ಬರದದ್ದನ್ನ ಓದಿದ್ರೆ ನನ್ನ ಬ್ಯಾಟರಿ ಚಾರ್ಜ್ ! ಅದಕ ನೋಡ್ರಿ ನನಗೆ ಎಪ್ಪತ್ತಾದದ್ದು ನನಗೇ ಗುರುತಾಗಲಿಲ್ಲ”.

  • ಬಿ. ಚಂದ್ರೇಗೌಡ

(ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ)


ಇದನ್ನೂ ಓದಿ; ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...