Homeಚಳವಳಿಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ

- Advertisement -
- Advertisement -

ಚಂಪಾರಿಗೆ ಎಪ್ಪತ್ತು! ನಂಬುವುದೇ ಕಷ್ಟ. ಅವರ ಬಂಡಾಯ, ಕಿಲಾಡಿ ಮತ್ತು ಕಿಡಿಗೇಡಿತನಕ್ಕೆ ಎಪ್ಪತ್ತು  ತುಂಬಲು ಸಾಧ್ಯವಿಲ್ಲ, ಅದು ಬಂಡಾಯ ಮತ್ತು ನವ್ಯದ ನಡುಕಾಲದಲ್ಲೇ ನಿಂತಿರಬೇಕು ಅನ್ನಿಸಿತು. ಆದರೂ ಅವರನ್ನು ಮಾತನಾಡಿಸಿ ಒಂದು ಹಾರೈಕೆ ಮಾತೇಳುವುದು ನಮ್ಮ ಕರ್ತವ್ಯವಲ್ಲವೆ. ಫೋನ್  ಮಾಡಿದ್ರೆ ಸಿಕ್ಕೇಬಿಟ್ರು.

“ಹಲೋ ನಮಸ್ಕಾರ ಸಾರ್, ನಾನು ಯಾಹೂ”

“ಯಾಹು ಅಂದ್ರ ಗೌರಿ ಲಂಕೇಶದಾಗ ಬರೀತಿರಲ್ಲಿ ಅವರ ಹೌದಲ್ಲೋ ?

“ಹೌದು ಸಾರ್”.

“ನಿಮ್ಮ ಹೆಸರೇನ್ರಿ ?”

“ಯಾಹೂ ಅಂತ ಸಾರ್ ?

“ಅದು ಖರೇರಿ, ತಂದಿ ತಾಯಿ ಇಟ್ಟ ಹೆಸರಿಲ್ಲೇನು ?”

“ಅದು ಕರಿಯಕ್ಕೆ ಚನ್ನಾಗಿಲ್ಲ ಅಂತ ಗೌರಿಮೇಡಂ ಯಾಹೂ ಅಂತ ಇಟ್ಟವರೆ ಸಾ”,

“ಅಂಗೆನ ಯದಕ ಫೋನ್ ಮಾಡಿದಿರಿ ಹೇಳ್ರಲ್ಲ ?”

“ಯಪ್ಪತ್ತು ವರ್ಸಾಯ್ತಂತಲ್ಲ ಸಾರ್ ನಿಮಗೆ ?”

 “ಅನಂತಮೂರ್ತಿಗಾಗ್ಲೆ ಎಪ್ಪತ್ತಾರಾತು ಗೊತ್ತೇನ ?”

“ಅವು ಎಪ್ಪತ್ತಾರಕ್ಕಿಂತ್ಲೂ ಜಾಸ್ತಿಯಾದಂಗೆ ಕಣ್ತಾರೆ. ಆದ್ರೆ ನೀವು ಮಾತ್ರ ಇನ್ನು ಐವತ್ತಾರು ವರ್ಷದಂಗೆ ಕಾಣ್ತೀರಿ. ಇದರ ಗುಟ್ಟೇನು ಸಾರ್ ?

“ಇದರಾಗ ಗುಟ್ಟೇನು ಬಂತ್ರಿ, ನನ್ನ ಮಾತುಕತಿ, ಬರವಣಿಗೆ, ನಡವಳಿಕೆ ಇವೇನದಾವು ಇವುಕೂ, ನನ್ನ ವಯಸಿಗೂ ಸಂಬಂದಿಲ್ಲ, ನಮ್ಮ ದೇಶದಾಗ ಒಂದೊಂದು ವಯೋಮಾನಕ್ಕೆ ಒಂದೊಂದು ನಡವಳಿಕೆ ಇರಾಕೆ ಬೇಕು ಅಂತ ಹೇಳಿ ನಿಯಮ ಮಾಡ್ಕಾರ, ಅದನ್ನ ಮುರಕೊಂಡ ಹೋದ್ರೆ ನಾವು ಅರಾಮಿರತೇವಿ, ಅಷ್ಟ”.

“ನೀವೀಗ ಯಾವುದನ್ನು ಮುರದಿದ್ದಿರಿ ಸಾರ್ ?”

“ಅರವತ್ತರ ಅರಳುಮರಳು ಮುರುದು ಹತ್ತು ವರ್ಸಾತು”

“ಈ ಎಪ್ಪತ್ತು ವರ್ಷದಲ್ಲಿ ಹಿಂತಿರುಗಿ ನೋಡಿದ್ರೆ ಏನನಸ್ತದೆ ಸಾರ್ ?

“ಭಾಳ ಮಂದಿ ಸಾವಿಗೆ ಸಂತಾಪ ಬರದೇನಿ, ಇನ್ನ ರಗಡ ಮಂದಿಗೆ ಬರಿಬೇಕಲ್ಲಪ್ಪಾ ಅನಸತೈತಿ.”

“ನೀವು ಸಂತಾಪ ಬರಿಯೋ ಮಂದಿ ಬಹಳ ಜನ ಉಳಿದಿಲ್ಲವಲ್ಲ ಸಾರ್ ?”

“ಏ, ಭಾಳ ಮಂದ್ಯದಾರ, ಪುರೋಹಿತರ ಪೈಕಿನ ಒಂದು ಡಜನ್ ಅದಾರ, ರಾಜಕಾರಣದಾಗ ಮೂರು ನಾಕು ಮಂದಿ ಆದಾರ, ಸಾಹಿತ್ಯ ಲೋಕದಾಗ ಆಯಸ್ಸು ಮುಗಿಸಿ ಹೋಗೋ ಮಂದಿಗಿಂತ ಲಬಕ್ಕನ ಹೋಗೋ ಮಂದಿ ಭಾಳದಾರ”.

“ಅದರಲ್ಲೂ ಬಂಡಾಯದೋರು ಬೇಗ ಹೋಗ್ತರಲ್ಲ ಸಾರ್ ?”

“ಹೌದ್ರಿ,  ನವೋದಯದವರು ಪಿಂಚಣಿ ತೊಗಂಡು ಆರಾಮವಾಗಿದ್ದಾರ. ನವ್ಯದವರು, ಬಂಡಾಯದವರು ಕೂಡೇ ಹೊಂಟ ಹೋದರ್‍ರಿ”.

“ಸಾಹಿತ್ಯ ಲೋಕದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಅಂತ ಕೆಲವು ಕಾಲಘಟ್ಟಗಳವಲ್ಲಾ ಸಾರ್, ನಿಮ್ಮ ಬರವಣಿಗೆ ಹೋರಾಟ, ಯಾವ ಘಟ್ಟದಲ್ಲಿ ತೀವ್ರವಾಗಿತ್ತು ಸಾರ್.

“ನೋಡಿ ಇವರೆ, ನಾವು ಯಾವ ಕಾಲಘಟ್ಟದಾಗೂ ಎರಡೂ ಕಾಲಿಟ್ಟವರಲ್ಲ. ಒಂದೊಂದೇ ಕಾಲಿಟ್ಟು ಹಿಂದ ತಗದೇವಿ”.

“ಯಾಕ್ ಸರ್ ?”

“ಯಾಕ್ ಅಂದ್ರ, ಒಂದು ಲೇಬಲ್ ಹಚಗೊಂಡು ಬರಿಯೂದಂದ್ರ ನನಗಾಗುದಿಲ್ರಿ,

ಮೊದಲಿಕ್ಕ ನವೋದಯದವರು ಬರಿಯಕ್ಕತ್ತಿದ್ರು. ಅವುರಿಗೆ ಆಗ ಲೇಬಲ್ ಇರಲಿಲ್ಲ. ಈ ನಮ್ಮ ಪಿತಾಮಹರಿಗೆ ಯಂಗೋ ಏನೋ ನವೋದಯದವರು ಅನ್ನೋ ಲೇಬಲ್ ಸಿಕ್ಕು ‘ಏ ನಮಗ ಲೇಬಲ್ ಸಿಕ್ತು’ ಅಂತೇಳಿ ಬರದು ಬರೆದು ಸುಸ್ತಾದರ್‍ರಿ.”

“ಆದ್ರು ಇವತ್ತಿಗೂ ಅವರನ್ನ ಓದಬವುದಲ್ಲ ಸಾರ್”…?

“ಕೆಲವು ಮಂದಿನ್ನ ಓದಬವುದು ಅಷ್ಟರಿ, ಇನ್ನ ಕೆಲವು ಮಂದಿ ಪುಸ್ತಕ ತೊಗಂಡು ಸಂತಾಪ ಸೂಚನೆ ಮಾಡಿ ಮುಂದೆ ಹೋಗಬಹುದು”.

“ಆ ತರ ಬರದಿರೋರು ಪ್ರಗತಿಶೀಲರಲ್ಲವ ಸಾರ್ ?”

“ಪ್ರಗತಿಶೀಲರು ಬರಕೊಂಡ್ ಬದುತ್ತೇವಿ ಅಂತ ಹೊಂಟರ್‍ರಿ. ಅದಕ ಅಂಗ ಬರದಾರ, ಪಾಪ ಮೊದಲಕ್ಕ ತಮ್ಮ ಸುತ್ತಮುತ್ತ ಕಾಣೋ ಸಮಾಜ ಕುರುತು ಬರದ್ರು. ಅದು ಖಾಲಿ ಆತು. ಅನಂತರ ಗಟಾರ ಜೀವನ ಬರಿಬೇಕು ಅಂತ ಹೊಂಟರ್‍ರಿ, ಅನುಭವದ ಸಲುವಾಗಿ ಗಟಾರಕ್ಕೋದ್ರು, ವಳ್ಳಿ ಬರಲಿಲ್ಲವರು. ‘ಏ ಇಲ್ಲಿ ಭಾಳ ಅರಾಮೈತ’ ಅಂತ ಅಲ್ಲೇ ಉಳುದ್ರು. “ಅಲ್ಲಿಂದ ಅಂಗೇ ಹೊಂಟೋದರಲ್ಲ?”

“ಹೌದ್ರಿ, ಇನ್ನ ನವ್ಯದವರಿಗೆ ಅನಾಥ ಪ್ರಜ್ಞೆ ಅಮರಿಕೊಂಡು ಏನು ನೋಡಿದ್ರೂ ಚಂದ ಕಾಣಿರಲಿಲ್ಲ ಅವರಿಗೆ. ಆದ್ರಿಂದ ಒಳಗೋದ್ರು. ವಳ್ಳಿ ಬರಲಿಲ್ಲವರು. ನಾವೊಂದಿಷ್ಟು ಮಂದಿ ಹೊರಬಂದು ಬಂಡಾಯದ ಕಡೆ ಹೊಂಟವಿ”.

“ಅಂಗಾದ್ರೆ ನಿಮ್ಮ ಬಂಡಾಯ ಮಧ್ಯಂತರದ್ದ ಸಾರ್ ?”

“ಇಲ್ರೀ, ಬಂಡಾಯ ನನ್ನ ಮನೋಧರ್ಮ, ನಾ ಪೆನ್ನ ತೊಗಂಡ ಕೂಡಲೇ ಹೊರಬಂದಿದ್ದೇ ಬಂಡಾಯ, ಧಾರವಾಡದಾಗ ಬೇಂದ್ರೆ, ಜೋಶಿ ಮತ್ತವರ ಬಳಗ, ಅನಂತರ ಸಿ.ಪ. ಶೆಟ್ಟಿ, ಗಿರಡ್ಡಿ, ಮಾಕು, ದೇಕು, ಗೋಕಾಕ್ ಇವರ ವಿರುದ್ಧ ನನ್ನ ಬಂಡಾಯ ಎಂದೂ ಇದ್ದದ್ದೆ. ಅದಕ ನೋಡ್ರಿ ಎಮರ್ಜೆನ್ಸಿಲಿ ನಾ ಒಬ್ಬವನೇ ಜೇಲಿಗೆ ಹೋದದ್ದು “.

“ಆಗ ಇಡೀ ಧಾರವಾಡ ಖುಷಿಪಡ್ತಾಂತಲ್ಲಾ ಸಾರ್?”

“ನಾ ಹೊರಬಂದಾಗ ಅಷ್ಟೇ ಬೇಸರಾತು ಅವರಿಗೆ”.

“ಜೈಲಲ್ಲಿ ನೀವು ಆರೆಸೆನ್ಸಿನವರ ಜೊತೆಗಿದ್ರಂತೆ ?”

“ಜೈಲಂದ್ರ ಮುಗಿತಲ್ರೀ ಅದು ಪಬ್ಲಿಕ್ ಪಡಖಾನಿ ಇದ್ದಂಗ, ಅಲ್ಲಿಗೆ ದರವೊಬ್ಬರೂ ಬರತಾರ, ಅಂಗ ಚೆಡ್ಡಿ ಹುಡ್ರು ಬಂದಿದ್ದು, ಕೆಲವುರು ನಾ ಆರೆಸ್ಸೆಸ್ಸಲ್ಲ ಅಂತ ಅಳಾಕತ್ತಿದ್ರು.”

“ಆದ್ರಿವತ್ತು ಯಂಗೆ ನಗ್ತಾರೆ ನೋಡಿ ಸಾರ್”

“ಇಲ್ಲಿ ಯಾರ ನಗೂನೂ ಶಾಶ್ವತ ಅಲ್ಲರೀ. ಒಂದು ಕಾಲಕ್ಕೆ ಕಾಂಗ್ರೆಸ್‌ನವರು ಅಂದ್ರೆ ಮಂದಿ ಹೆದರುತಿದ್ದರು. ಆದ್ರ ಇವತ್ತು ಕಾಂಗ್ರೆಸ್ಸಿನವರು ಅಂದ್ರೆ ಒಂದೀಟು ಡುಬ್ಬು ಕೆರೆದು ಹೋಕ್ಯೇನಾ ಅನ್ನಂಗಾಗೇರೆ. ಅಂಗ ಈ ಚೆಡ್ಡಿಗಳ ನಗು ಎಡೂರಪ್ಪ ಲಗಾಟ ಹೊಡೆದ ನಂತರ ಹಿಂಗೇ ಇರುತ್ತೆ ಅಂತ ಹೇಳಾಕ ಬರೂದಿಲ್ಲ”.

“ಇದೊಂತರ ಹತಾಶೆ ಮುಚ್ಚಿಡೋ ಅಭಿಪ್ರಾಯದಂಗೆ ಇದೆಯಲ್ಲ ಸಾರ್”.

“ಹತಾಶ ಅನ್ನದು ನನ್ನ ಸನೇಕ ಸುಳೆದಿಲ್ಲರಿ. ಹತಾಶ ಏನಾರ ನನಗೆ ಇದ್ದಿದ್ರೆ ನನ್ನ ಅರವತ್ತನೇ ವರ್ಷದ ಅದ್ದೂರಿಯಿಂದೆ ಆಚರಿಸೊ ಏರ್ಪಾಡು ಮಾಡತಿದ್ವೆ. “

“ಹೌದ ಸಾರ್?”

“ಹೌದ್ರಿ, ನನಗೆ ಕೆಲವರ ನೋಡಿದ ಕೂಡ್ಳೆ ಬ್ಯಾಟ್ರಿ ಚಾರ್ಜಾಕ್ಕಿತಿ. ಚಡ್ಡಿಗಳ ನೋಡಿದ್ರೆ, ಪುರೋಹಿತರ ನೋಡಿದ್ರೆ, ಪೊಲೀಸರ ನೋಡಿದ್ರೆ, ಇನ್ನು ಕೆಲವರದಾರ ಅವರನ್ನ ನೋಡಿದ್ರೆ, ಅವರ ಬರದದ್ದನ್ನ ಓದಿದ್ರೆ ನನ್ನ ಬ್ಯಾಟರಿ ಚಾರ್ಜ್ ! ಅದಕ ನೋಡ್ರಿ ನನಗೆ ಎಪ್ಪತ್ತಾದದ್ದು ನನಗೇ ಗುರುತಾಗಲಿಲ್ಲ”.

  • ಬಿ. ಚಂದ್ರೇಗೌಡ

(ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ)


ಇದನ್ನೂ ಓದಿ; ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...