Homeಚಳವಳಿಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ

- Advertisement -
- Advertisement -

ಚಂಪಾರಿಗೆ ಎಪ್ಪತ್ತು! ನಂಬುವುದೇ ಕಷ್ಟ. ಅವರ ಬಂಡಾಯ, ಕಿಲಾಡಿ ಮತ್ತು ಕಿಡಿಗೇಡಿತನಕ್ಕೆ ಎಪ್ಪತ್ತು  ತುಂಬಲು ಸಾಧ್ಯವಿಲ್ಲ, ಅದು ಬಂಡಾಯ ಮತ್ತು ನವ್ಯದ ನಡುಕಾಲದಲ್ಲೇ ನಿಂತಿರಬೇಕು ಅನ್ನಿಸಿತು. ಆದರೂ ಅವರನ್ನು ಮಾತನಾಡಿಸಿ ಒಂದು ಹಾರೈಕೆ ಮಾತೇಳುವುದು ನಮ್ಮ ಕರ್ತವ್ಯವಲ್ಲವೆ. ಫೋನ್  ಮಾಡಿದ್ರೆ ಸಿಕ್ಕೇಬಿಟ್ರು.

“ಹಲೋ ನಮಸ್ಕಾರ ಸಾರ್, ನಾನು ಯಾಹೂ”

“ಯಾಹು ಅಂದ್ರ ಗೌರಿ ಲಂಕೇಶದಾಗ ಬರೀತಿರಲ್ಲಿ ಅವರ ಹೌದಲ್ಲೋ ?

“ಹೌದು ಸಾರ್”.

“ನಿಮ್ಮ ಹೆಸರೇನ್ರಿ ?”

“ಯಾಹೂ ಅಂತ ಸಾರ್ ?

“ಅದು ಖರೇರಿ, ತಂದಿ ತಾಯಿ ಇಟ್ಟ ಹೆಸರಿಲ್ಲೇನು ?”

“ಅದು ಕರಿಯಕ್ಕೆ ಚನ್ನಾಗಿಲ್ಲ ಅಂತ ಗೌರಿಮೇಡಂ ಯಾಹೂ ಅಂತ ಇಟ್ಟವರೆ ಸಾ”,

“ಅಂಗೆನ ಯದಕ ಫೋನ್ ಮಾಡಿದಿರಿ ಹೇಳ್ರಲ್ಲ ?”

“ಯಪ್ಪತ್ತು ವರ್ಸಾಯ್ತಂತಲ್ಲ ಸಾರ್ ನಿಮಗೆ ?”

 “ಅನಂತಮೂರ್ತಿಗಾಗ್ಲೆ ಎಪ್ಪತ್ತಾರಾತು ಗೊತ್ತೇನ ?”

“ಅವು ಎಪ್ಪತ್ತಾರಕ್ಕಿಂತ್ಲೂ ಜಾಸ್ತಿಯಾದಂಗೆ ಕಣ್ತಾರೆ. ಆದ್ರೆ ನೀವು ಮಾತ್ರ ಇನ್ನು ಐವತ್ತಾರು ವರ್ಷದಂಗೆ ಕಾಣ್ತೀರಿ. ಇದರ ಗುಟ್ಟೇನು ಸಾರ್ ?

“ಇದರಾಗ ಗುಟ್ಟೇನು ಬಂತ್ರಿ, ನನ್ನ ಮಾತುಕತಿ, ಬರವಣಿಗೆ, ನಡವಳಿಕೆ ಇವೇನದಾವು ಇವುಕೂ, ನನ್ನ ವಯಸಿಗೂ ಸಂಬಂದಿಲ್ಲ, ನಮ್ಮ ದೇಶದಾಗ ಒಂದೊಂದು ವಯೋಮಾನಕ್ಕೆ ಒಂದೊಂದು ನಡವಳಿಕೆ ಇರಾಕೆ ಬೇಕು ಅಂತ ಹೇಳಿ ನಿಯಮ ಮಾಡ್ಕಾರ, ಅದನ್ನ ಮುರಕೊಂಡ ಹೋದ್ರೆ ನಾವು ಅರಾಮಿರತೇವಿ, ಅಷ್ಟ”.

“ನೀವೀಗ ಯಾವುದನ್ನು ಮುರದಿದ್ದಿರಿ ಸಾರ್ ?”

“ಅರವತ್ತರ ಅರಳುಮರಳು ಮುರುದು ಹತ್ತು ವರ್ಸಾತು”

“ಈ ಎಪ್ಪತ್ತು ವರ್ಷದಲ್ಲಿ ಹಿಂತಿರುಗಿ ನೋಡಿದ್ರೆ ಏನನಸ್ತದೆ ಸಾರ್ ?

“ಭಾಳ ಮಂದಿ ಸಾವಿಗೆ ಸಂತಾಪ ಬರದೇನಿ, ಇನ್ನ ರಗಡ ಮಂದಿಗೆ ಬರಿಬೇಕಲ್ಲಪ್ಪಾ ಅನಸತೈತಿ.”

“ನೀವು ಸಂತಾಪ ಬರಿಯೋ ಮಂದಿ ಬಹಳ ಜನ ಉಳಿದಿಲ್ಲವಲ್ಲ ಸಾರ್ ?”

“ಏ, ಭಾಳ ಮಂದ್ಯದಾರ, ಪುರೋಹಿತರ ಪೈಕಿನ ಒಂದು ಡಜನ್ ಅದಾರ, ರಾಜಕಾರಣದಾಗ ಮೂರು ನಾಕು ಮಂದಿ ಆದಾರ, ಸಾಹಿತ್ಯ ಲೋಕದಾಗ ಆಯಸ್ಸು ಮುಗಿಸಿ ಹೋಗೋ ಮಂದಿಗಿಂತ ಲಬಕ್ಕನ ಹೋಗೋ ಮಂದಿ ಭಾಳದಾರ”.

“ಅದರಲ್ಲೂ ಬಂಡಾಯದೋರು ಬೇಗ ಹೋಗ್ತರಲ್ಲ ಸಾರ್ ?”

“ಹೌದ್ರಿ,  ನವೋದಯದವರು ಪಿಂಚಣಿ ತೊಗಂಡು ಆರಾಮವಾಗಿದ್ದಾರ. ನವ್ಯದವರು, ಬಂಡಾಯದವರು ಕೂಡೇ ಹೊಂಟ ಹೋದರ್‍ರಿ”.

“ಸಾಹಿತ್ಯ ಲೋಕದಲ್ಲಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಅಂತ ಕೆಲವು ಕಾಲಘಟ್ಟಗಳವಲ್ಲಾ ಸಾರ್, ನಿಮ್ಮ ಬರವಣಿಗೆ ಹೋರಾಟ, ಯಾವ ಘಟ್ಟದಲ್ಲಿ ತೀವ್ರವಾಗಿತ್ತು ಸಾರ್.

“ನೋಡಿ ಇವರೆ, ನಾವು ಯಾವ ಕಾಲಘಟ್ಟದಾಗೂ ಎರಡೂ ಕಾಲಿಟ್ಟವರಲ್ಲ. ಒಂದೊಂದೇ ಕಾಲಿಟ್ಟು ಹಿಂದ ತಗದೇವಿ”.

“ಯಾಕ್ ಸರ್ ?”

“ಯಾಕ್ ಅಂದ್ರ, ಒಂದು ಲೇಬಲ್ ಹಚಗೊಂಡು ಬರಿಯೂದಂದ್ರ ನನಗಾಗುದಿಲ್ರಿ,

ಮೊದಲಿಕ್ಕ ನವೋದಯದವರು ಬರಿಯಕ್ಕತ್ತಿದ್ರು. ಅವುರಿಗೆ ಆಗ ಲೇಬಲ್ ಇರಲಿಲ್ಲ. ಈ ನಮ್ಮ ಪಿತಾಮಹರಿಗೆ ಯಂಗೋ ಏನೋ ನವೋದಯದವರು ಅನ್ನೋ ಲೇಬಲ್ ಸಿಕ್ಕು ‘ಏ ನಮಗ ಲೇಬಲ್ ಸಿಕ್ತು’ ಅಂತೇಳಿ ಬರದು ಬರೆದು ಸುಸ್ತಾದರ್‍ರಿ.”

“ಆದ್ರು ಇವತ್ತಿಗೂ ಅವರನ್ನ ಓದಬವುದಲ್ಲ ಸಾರ್”…?

“ಕೆಲವು ಮಂದಿನ್ನ ಓದಬವುದು ಅಷ್ಟರಿ, ಇನ್ನ ಕೆಲವು ಮಂದಿ ಪುಸ್ತಕ ತೊಗಂಡು ಸಂತಾಪ ಸೂಚನೆ ಮಾಡಿ ಮುಂದೆ ಹೋಗಬಹುದು”.

“ಆ ತರ ಬರದಿರೋರು ಪ್ರಗತಿಶೀಲರಲ್ಲವ ಸಾರ್ ?”

“ಪ್ರಗತಿಶೀಲರು ಬರಕೊಂಡ್ ಬದುತ್ತೇವಿ ಅಂತ ಹೊಂಟರ್‍ರಿ. ಅದಕ ಅಂಗ ಬರದಾರ, ಪಾಪ ಮೊದಲಕ್ಕ ತಮ್ಮ ಸುತ್ತಮುತ್ತ ಕಾಣೋ ಸಮಾಜ ಕುರುತು ಬರದ್ರು. ಅದು ಖಾಲಿ ಆತು. ಅನಂತರ ಗಟಾರ ಜೀವನ ಬರಿಬೇಕು ಅಂತ ಹೊಂಟರ್‍ರಿ, ಅನುಭವದ ಸಲುವಾಗಿ ಗಟಾರಕ್ಕೋದ್ರು, ವಳ್ಳಿ ಬರಲಿಲ್ಲವರು. ‘ಏ ಇಲ್ಲಿ ಭಾಳ ಅರಾಮೈತ’ ಅಂತ ಅಲ್ಲೇ ಉಳುದ್ರು. “ಅಲ್ಲಿಂದ ಅಂಗೇ ಹೊಂಟೋದರಲ್ಲ?”

“ಹೌದ್ರಿ, ಇನ್ನ ನವ್ಯದವರಿಗೆ ಅನಾಥ ಪ್ರಜ್ಞೆ ಅಮರಿಕೊಂಡು ಏನು ನೋಡಿದ್ರೂ ಚಂದ ಕಾಣಿರಲಿಲ್ಲ ಅವರಿಗೆ. ಆದ್ರಿಂದ ಒಳಗೋದ್ರು. ವಳ್ಳಿ ಬರಲಿಲ್ಲವರು. ನಾವೊಂದಿಷ್ಟು ಮಂದಿ ಹೊರಬಂದು ಬಂಡಾಯದ ಕಡೆ ಹೊಂಟವಿ”.

“ಅಂಗಾದ್ರೆ ನಿಮ್ಮ ಬಂಡಾಯ ಮಧ್ಯಂತರದ್ದ ಸಾರ್ ?”

“ಇಲ್ರೀ, ಬಂಡಾಯ ನನ್ನ ಮನೋಧರ್ಮ, ನಾ ಪೆನ್ನ ತೊಗಂಡ ಕೂಡಲೇ ಹೊರಬಂದಿದ್ದೇ ಬಂಡಾಯ, ಧಾರವಾಡದಾಗ ಬೇಂದ್ರೆ, ಜೋಶಿ ಮತ್ತವರ ಬಳಗ, ಅನಂತರ ಸಿ.ಪ. ಶೆಟ್ಟಿ, ಗಿರಡ್ಡಿ, ಮಾಕು, ದೇಕು, ಗೋಕಾಕ್ ಇವರ ವಿರುದ್ಧ ನನ್ನ ಬಂಡಾಯ ಎಂದೂ ಇದ್ದದ್ದೆ. ಅದಕ ನೋಡ್ರಿ ಎಮರ್ಜೆನ್ಸಿಲಿ ನಾ ಒಬ್ಬವನೇ ಜೇಲಿಗೆ ಹೋದದ್ದು “.

“ಆಗ ಇಡೀ ಧಾರವಾಡ ಖುಷಿಪಡ್ತಾಂತಲ್ಲಾ ಸಾರ್?”

“ನಾ ಹೊರಬಂದಾಗ ಅಷ್ಟೇ ಬೇಸರಾತು ಅವರಿಗೆ”.

“ಜೈಲಲ್ಲಿ ನೀವು ಆರೆಸೆನ್ಸಿನವರ ಜೊತೆಗಿದ್ರಂತೆ ?”

“ಜೈಲಂದ್ರ ಮುಗಿತಲ್ರೀ ಅದು ಪಬ್ಲಿಕ್ ಪಡಖಾನಿ ಇದ್ದಂಗ, ಅಲ್ಲಿಗೆ ದರವೊಬ್ಬರೂ ಬರತಾರ, ಅಂಗ ಚೆಡ್ಡಿ ಹುಡ್ರು ಬಂದಿದ್ದು, ಕೆಲವುರು ನಾ ಆರೆಸ್ಸೆಸ್ಸಲ್ಲ ಅಂತ ಅಳಾಕತ್ತಿದ್ರು.”

“ಆದ್ರಿವತ್ತು ಯಂಗೆ ನಗ್ತಾರೆ ನೋಡಿ ಸಾರ್”

“ಇಲ್ಲಿ ಯಾರ ನಗೂನೂ ಶಾಶ್ವತ ಅಲ್ಲರೀ. ಒಂದು ಕಾಲಕ್ಕೆ ಕಾಂಗ್ರೆಸ್‌ನವರು ಅಂದ್ರೆ ಮಂದಿ ಹೆದರುತಿದ್ದರು. ಆದ್ರ ಇವತ್ತು ಕಾಂಗ್ರೆಸ್ಸಿನವರು ಅಂದ್ರೆ ಒಂದೀಟು ಡುಬ್ಬು ಕೆರೆದು ಹೋಕ್ಯೇನಾ ಅನ್ನಂಗಾಗೇರೆ. ಅಂಗ ಈ ಚೆಡ್ಡಿಗಳ ನಗು ಎಡೂರಪ್ಪ ಲಗಾಟ ಹೊಡೆದ ನಂತರ ಹಿಂಗೇ ಇರುತ್ತೆ ಅಂತ ಹೇಳಾಕ ಬರೂದಿಲ್ಲ”.

“ಇದೊಂತರ ಹತಾಶೆ ಮುಚ್ಚಿಡೋ ಅಭಿಪ್ರಾಯದಂಗೆ ಇದೆಯಲ್ಲ ಸಾರ್”.

“ಹತಾಶ ಅನ್ನದು ನನ್ನ ಸನೇಕ ಸುಳೆದಿಲ್ಲರಿ. ಹತಾಶ ಏನಾರ ನನಗೆ ಇದ್ದಿದ್ರೆ ನನ್ನ ಅರವತ್ತನೇ ವರ್ಷದ ಅದ್ದೂರಿಯಿಂದೆ ಆಚರಿಸೊ ಏರ್ಪಾಡು ಮಾಡತಿದ್ವೆ. “

“ಹೌದ ಸಾರ್?”

“ಹೌದ್ರಿ, ನನಗೆ ಕೆಲವರ ನೋಡಿದ ಕೂಡ್ಳೆ ಬ್ಯಾಟ್ರಿ ಚಾರ್ಜಾಕ್ಕಿತಿ. ಚಡ್ಡಿಗಳ ನೋಡಿದ್ರೆ, ಪುರೋಹಿತರ ನೋಡಿದ್ರೆ, ಪೊಲೀಸರ ನೋಡಿದ್ರೆ, ಇನ್ನು ಕೆಲವರದಾರ ಅವರನ್ನ ನೋಡಿದ್ರೆ, ಅವರ ಬರದದ್ದನ್ನ ಓದಿದ್ರೆ ನನ್ನ ಬ್ಯಾಟರಿ ಚಾರ್ಜ್ ! ಅದಕ ನೋಡ್ರಿ ನನಗೆ ಎಪ್ಪತ್ತಾದದ್ದು ನನಗೇ ಗುರುತಾಗಲಿಲ್ಲ”.

  • ಬಿ. ಚಂದ್ರೇಗೌಡ

(ಚಂಪಾರವರಿಗೆ 70 ವರ್ಷ ತುಂಬಿದ ಸಂದರ್ಭದಲ್ಲಿ ಬಿ.ಚಂದ್ರೇಗೌಡರು ಬರೆದ ಯಾಹೂ ಲೇಖನ)


ಇದನ್ನೂ ಓದಿ; ಇಲ್ಲೇ ಇದ್ದೀರಿ ನಮ್ಮ ನೆನಪಿನ ಗುದ್ದಿನೊಳಗೆ: ಚಂಪಾರವರಿಗೆ ನುಡಿನಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...