Homeಚಳವಳಿಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು,...

ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

- Advertisement -
- Advertisement -

ಕುಡಿಯುವ ನೀರಿಗಾಗಿ 25 ಅಗಲ ಮತ್ತು 40 ಅಡಿ ಆಳದ ನದಿಯ ಮೇಲೆ ಒಂದೆರಡು ಮರದ ದಿಮ್ಮಿಗಳನ್ನು ಇರಿಸಿ ತಲೆಯ ಮೇಲೆ ನೀರಿನ ಬಿಂದಿಗೆ ಹೊತ್ತು ಪ್ರಾಣ ಭಯದಲ್ಲಿ ನದಿ ದಾಟುತ್ತಿದ್ದ ಮಹಾರಾಷ್ಟ್ರದ ಬುಡಕಟ್ಟು ಮಹಿಳೆಯರ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ತ್ರಯಂಬಕೇಶ್ವರದ ಖರ್ಖೇತ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರ್ವಪಾಡಾದಲ್ಲಿ ಬುಡಕಟ್ಟು ಮಹಿಳೆಯರ ಈ ಚಿತ್ರಗಳು ವೈರಲ್‌ ಆದ ಬಳಿಕ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿದ್ದವು. ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸಿದೆ.

ಖಾರ್ಖೇತ್ ಗ್ರಾಮ ಪಂಚಾಯಿತಿಯಲ್ಲಿ 25 ಬುಡಕಟ್ಟು ಹಾಡಿಗಳಿದ್ದು, ಇವುಗಳಲ್ಲಿ 300 ಕ್ಕೂ ಹೆಚ್ಚು ಜನರು ವಾಸವಿದ್ದಾರೆ. ಪ್ರತಿ ದಿನ ಕುಡಿಯುವ ನೀರಿಗಾಗಿ ನದಿಯ ಮೇಲೆ ಹಾಕಲಾಗಿರುವ ಕಂಬದ ಸಹಾಯದಿಂದ 40 ಅಡಿ ಆಳದ ಹಳ್ಳವನ್ನು ದಾಟಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ತಲುಪಬೇಕಾಗಿತ್ತು.

ಇದನ್ನೂ ಓದಿ: ಲಿಂಗ ತಾರತಮ್ಯ ಹೋಗಲಾಡಿಸುವ ಕ್ರಮ: ಸರ್‌, ಮೇಡಂ ಸಂಬೋಧನೆ ಬಿಟ್ಟ ಕೇರಳದ ಶಾಲೆ

पीने के पानी की खातिर रोज मौत को चकमा देती हैं ये आदिवासी महिलाएं -  Navbharat Times

ಗ್ರಾಮದ ನಿವಾಸಿ ಲಕ್ಷ್ಮಣ ದಹವಾಡ ಮಾತನಾಡಿ, “ತಮ್ಮ ಗ್ರಾಮಕ್ಕೆ ಸರ್ಕಾರದ ಹಲವು ಯೋಜನೆಗಳು ಬಂದಿವೆ, ಆದರೆ ಒಂದೇ ಒಂದು ಯೋಜನೆ ಗಿರಿಜನರಿಗೆ ತಲುಪಿಲ್ಲ. ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು, ಆದರೆ ಅದನ್ನು ಪಡೆಯುವ ಭಾಗ್ಯ ಕೂಡ ನಮಗಿಲ್ಲ. ಹಾಡಿಯ ಬಳಿ ನದಿ ಇದೆ. ಆದರೆ ಶುದ್ಧ ನೀರಿನ ಕೊರತೆಯಿಂದ ಮಹಿಳೆಯರು ಹೊರ ಹೋಗಬೇಕಾಗಿದೆ. ತಮ್ಮ ಜೀವ ಭಯದಲ್ಲೇ ಈ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ’ ಎಂದಿದ್ದಾರೆ.

ಈ ಚಿತ್ರಗಳು ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಎಚ್ಚೆತ್ತುಕೊಂಡ ಪರಿಸರ ಸಚಿವ ಆದಿತ್ಯ ಠಾಕ್ರೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬಳಿಕ ನಾಸಿಕ್ ಮತ್ತು ಮುಂಬೈ ಅಧಿಕಾರಿಗಳು ಎರಡು ದಿನಗಳಲ್ಲಿ ನದಿಗೆ ಕಬ್ಬಿಣದ ಸೇತುವೆ ಅಳವಡಿಸುವ ಕಾಮಗಾರಿ ಆರಂಭಿಸಿದ್ದು, ಕೆಲಸ ಮುಗಿಸಿದೆ. ಇದು ಸ್ಥಳೀಯರಲ್ಲಿ ಕೊಂಚ ನೆಮ್ಮದಿಗೆ ಕಾರಣವಾಗಿದೆ.

ಸುದ್ದಿ ಗಮನಿಸಿರುವ ಶಿವಸೇನೆಯ ಸಂಸದ ಹೇಮಂತ್ ಗೋಡ್ಸೆ, ಖರ್ಖೇತ್ಬುಡಕಟ್ಟು ಸಮುದಾಯದ ಮನೆಗಳಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ ಭರವಸೆ ನೀಡಿದ್ದಾರೆ. ಆದರೆ, ಒಂದು ಸೇತುವೆ ನಿರ್ಮಾಣವಾಗಲು ಇಷ್ಟು ವರ್ಷಗಳ ಕಾಯಬೇಕಾದ ಜನ ಮನೆಗೆ ಪೈಪ್‌ಲೈನ್‌ನಲ್ಲಿ ನೀರು ಬರಲು ಎಷ್ಟು ವರ್ಷಗಳು ಕಾಯಬೇಕೋ ಎಂದು ಪ್ರಶ್ನಿಸಿದ್ದಾರೆ.

ಈ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯೊಂದೆ ಅಲ್ಲದೆ ರಸ್ತೆ ಕೂಡ ಇಲ್ಲ. ಮಕ್ಕಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಈ ಮರದ ದಿಮ್ಮಿಯ ಸಹಾಯದಿಂದ ನದಿ ದಾಟಿ ವಿದ್ಯಾಭ್ಯಾಸಕ್ಕೆ ಹೋಗುತ್ತಾರೆ. ನದಿಯ ಪಕ್ಕದಲ್ಲಿ ಕೃಷಿ ಭೂಮಿ ಇದೆ, ಆದರೆ ವಿದ್ಯುತ್ ಇಲ್ಲದ ಕಾರಣ ಮೋಟಾರ್ ಬಳಸಿ ನೀರು ಎತ್ತಲು ಸಾಧ್ಯವಾಗುತ್ತಿಲ್ಲ. ಮಳೆಯ ನೀರಲ್ಲೇ ಕೃಷಿ ಮಾಡುಲಾಗುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.


ಇದನ್ನೂ ಓದಿ: ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಪೋಸ್ಟ್‌ಕಾರ್ಡ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...