Homeಮುಖಪುಟಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವಾರ ಬಂದನಕ್ಕೊಳಗಾಗಿದ್ದ ಪತ್ರಕರ್‍ತ ಸಜಾದ್ ಗುಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾಶ್ಮೀರ ಪ್ರೆಸ್ ಕ್ಲಬ್ ಸೋಮವಾರ ಆಗ್ರಹಿಸಿದೆ. ಗುಲ್ ಅವರ ವಿರುದ್ದದ ಎಲ್ಲಾ ಪ್ರಕರಣಗಳನ್ನು ಕೈಬಿಡುವಂತೆ ಅದಿಕಾರಿಗಳಲ್ಲಿ ಪ್ರೆಸ್‌ ಕ್ಲಬ್‌ ಒತ್ತಾಯಿಸಿದೆ.

ಶ್ರೀನಗರದಲ್ಲಿ ಗುಂಡಿನ ಚಕಮಕಿಯಲ್ಲಿ ತಮ್ಮ ಸಂಬಂದಿಕರು ಸಾವನ್ನಪ್ಪಿದ ನಂತರ ಕುಟುಂಬವೊಂದು ಬಾರತ ವಿರೋದಿ ಗೋಶಣೆಗಳನ್ನು ಕೂಗಿತ್ತು. ಅದರ ವೀಡಿಯೊವನ್ನು ‘ಕಾಶ್ಮೀರ ವಾಲ್ಲಾ’ದಲ್ಲಿ ಉದ್ಯೋಗದಲ್ಲಿರುವ ಪತ್ರಕರ್‍ತ ಗುಲ್ ಪೋಸ್ಟ್‌ ಮಾಡಿದ್ದರು. ನಂತರ ಅವರನ್ನು ಬಂದಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ (ಜನವರಿ 3) ಬದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ‌ಹತ್ಯೆಯಾದ ವ್ಯಕ್ತಿಯು ಶಂಕಿತ ಲಶ್ಕರ್-ಎ-ತೊಯ್ಬಾದ ಉಗ್ರನೆಂದು ಪೊಲೀಸರು ತಿಳಿಸಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ಹತ್ಯೆಯ ವಿರುದ್ದ ನಡೆದ ಪ್ರತಿಬಟನೆಯ ವಿಡಿಯೊವನ್ನು ಗುಲ್‌ ಪೋಸ್ಟ್‌ ಮಾಡಿದ್ದರು.

ಗುಲ್ ವಿರುದ್ದ ಬಾರತೀಯ ದಂಡ ಸಂಹಿತೆಯ ಸೆಕ್ಶನ್ 120ಬಿ (ಅಪರಾದದ ಪಿತೂರಿ), 153ಬಿ (ಆರೋಪಗಳು, ರಾಶ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಉಂಟುಮಾಡುವುದು), 505ಬಿ (ಸಾರ್ವಜನಿಕರಿಗೆ ಬಯ ಅತವಾ ಎಚ್ಚರಿಕೆ) ಅಡಿಯಲ್ಲಿ ಪ್ರಕರಣ ದಾಕಲಿಸಲಾಗಿದೆ.

ಕಾಶ್ಮೀರ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ, “ಗುಲ್ ಬಂದನದಿಂದ ವಿಚಲಿತವಾಗುವಂತಾಗಿದೆ. ಕಾಶ್ಮೀರದಲ್ಲಿ ಪತ್ರಿಕೋದ್ಯಮವನ್ನು ಅಪರಾದೀಕರಿಸುವ ಗುರಿಯನ್ನು ಈ ಬಂದನವು ಹೊಂದಿದೆ” ಎಂದು ಅಬಿಪ್ರಾಯಪಟ್ಟಿದೆ.

ಕಾಶ್ಮೀರದಲ್ಲಿ ಪತ್ರಕರ್‍ತರ ಮೇಲೆ ಪೊಲೀಸರಿಂದಾಗುತ್ತಿರುವ ಕಿರುಕುಳ, ಕಾನೂನು ಕ್ರಮಗಳ ಕುರಿತು ಪತ್ರಕರ್‍ತರು ಆತಂಕ ವ್ಯಕ್ತಪಡಿಸಿದ್ದಾರೆ. ಮಾದ್ಯಮದ ಪ್ರತಿನಿದಿಗಳಿಗೆ ಬೆದರಿಕೆ, ಸಮನ್ಸ್ ನೀಡಲಾಗುತ್ತಿದೆ ಎಂಬ ಆಕ್ಶೇಪಗಳು ಬಂದಿವೆ.

2019ರಲ್ಲಿ ಸಂವಿದಾನದ 370ನೇ ವಿದಿಯನ್ನು ಕೇಂದ್ರ ಸರ್ಕಾರ ರದ್ದುಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ರಕರ್‍ತರು ಹೆಚ್ಚಿನ ಬೆದರಿಕೆ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಶದಿಂದ ಗುಲ್ ಅವರು ಅನೇಕ ಸಂದರ್ಬಗಳಲ್ಲಿ ಪೊಲೀಸರ ಕ್ರಮಗಳನ್ನು ಎದುರಿಸಿದ್ದಾರೆ ಎಂದು ವರದಿಗಳಾಗಿವೆ.

2021ರ ಪೆಬ್ರವರಿ 9ರಂದು ದಿ ಕಾಶ್ಮೀರ್ ವಾಲಾಗೆ ಬರೆದ ಲೇಖನದ ಕಾರಣಕ್ಕಾಗಿ “ಗಲಬೆ, ಅತಿಕ್ರಮಣ ಮತ್ತು ಹಲ್ಲೆ” ಆರೋಪವನ್ನು ಗುಲ್‌ ಮೇಲೆ ಹೊರಿಸಲಾಗಿದೆ ಎಂದು ವರದಿಯಾಗಿದೆ. ತಹಸೀಲ್ದಾರ್ ಹಾಜಿನ್ ಗುಲಾಮ್ ಮೊಹಮ್ಮದ್ ಬಟ್ ಅವರು ತೆರವು ಕಾರ್ಯಾಚರಣೆ ನಡೆಸಿ ಕಿರುಕುಳ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಬಂಡಿಪೋರಾದ ಗ್ರಾಮಸ್ಥರು ಆರೋಪಿಸಿದ್ದರು. ಈ ವರದಿಯನ್ನು ಗುಲ್‌ ಮಾಡಿದ್ದರು.

ವರದಿ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗೆ ಸಂಬಂದಿಸಿದಂತೆ ವಿಚಾರಣೆಗಾಗಿ ಬಂಡಿಪೋರಾ ಜಿಲ್ಲೆಯ ಹಾಜಿನ್ ಪೊಲೀಸ್ ಟಾಣೆಗೆ ಗುಲ್ ಅವರನ್ನು ಕರೆಸಲಾಗಿತ್ತು.

ಮೌಂಟೇನ್ ಇಂಕ್ ಮ್ಯಾಗಜೀನ್‌ನಲ್ಲಿ ಪ್ರಕಟವಾದ ವರದಿಯು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ 25 ವರ್ಷದ ವ್ಯಕ್ತಿಯ ಕುರಿತ್ತಾಗಿತ್ತು. ಇಮ್ತಿಯಾಜ್ ಅಹ್ಮದ್ ಕಕ್ರೂ ನಿರಪರಾದಿಯಾಗಿದ್ದು, ‘ನಕಲಿ ಎನ್ಕೌಂಟರ್’ನಲ್ಲಿ ಅವರನ್ನು ಪೊಲೀಸರು ಕೊಂದಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದನ್ನು ಗುಲ್‌ ವರದಿ ಮಾಡಿದ್ದರು.


ಇದನ್ನೂ ಓದಿರಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...