Homeಕರ್ನಾಟಕನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

’ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಇವರು ಜನರಿಗೆ ಸೋಂಕು ಬರಿಸುತ್ತಿದ್ದಾರೆ’

- Advertisement -
- Advertisement -

“ರಾಜ್ಯ ಸರ್ಕಾರ ನನ್ನ ಮೇಲೆ ಹಾಗೂ ಪಕ್ಷದ ವಿರುದ್ಧ ದೊಡ್ಡ ಸಂಚು ರೂಪಿಸುತ್ತಿದೆ. ಏನಾದರೂ ಮಾಡಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದೆ. ಅದೇ ಅವರ ದೊಡ್ಡ ಕಾರ್ಯಕ್ರಮವಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

“ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಆದರೂ ನನ್ನ ಬಳಿಗೆ ಅಧಿಕಾರಿಯನ್ನು ಕಳುಹಿಸಿ ಸ್ಯಾಂಪಲ್ ಕಲೆಹಾಕಲು ಮುಂದಾದರು. ನಿನ್ನೆ ನನಗೆ ಪರೀಕ್ಷೆ ನಡೆಸಲು ಕಳುಹಿಸಿದ್ದ ಅಧಿಕಾರಿಗೂ ಕೊರೊನಾ ಪಾಸಿಟಿವ್ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ನಿಜವೋ ಗೊತ್ತಿಲ್ಲ. ನಾನು ಪ್ರಾಥಮಿಕ ಸಂಪರ್ಕಿತ ಎನ್ನುತ್ತಿದ್ದಾರೆ. ಆತನನ್ನು ನನ್ನ ಬಳಿ ಕಳುಹಿಸಿದ್ದು ಯಾರು..? ಯಾಕೆ ಕಳುಹಿಸಿದರು..?” ಎಂದು ಪ್ರಶ್ನಿಸಿದ್ದಾರೆ.

’ನಮ್ಮ ಮನೆಯಲ್ಲೇ ಡಜನ್ ವೈದ್ಯರಿದ್ದಾರೆ. ಅರ್ಧ ಡಜನ್ ವೈದ್ಯಕೀಯ ಕಾಲೇಜು ಮಾಲೀಕರಿದ್ದಾರೆ. ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಹೀಗಾಗಿ ಯಾವುದೇ ಪರೀಕ್ಷೆ ಅಗತ್ಯವಿಲ್ಲ ಎಂದು ಅಧಿಕಾರಿಯನ್ನು ವಾಪಸ್ ಕಳುಹಿಸಿದೆ” ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಳ ಬಿಜೆಪಿ ತಂತ್ರವಾಗಿದೆ ಎಂದು ಆರೋಪಿಸಿರುವ ಅವರು, “ವಿಮಾನ ನಿಲ್ದಾಣದಲ್ಲಿ ಬಂದವರನ್ನೆಲ್ಲಾ ಹಿಡಿದು ಸೋಂಕು ತಗುಲಿದೆ ಎಂದು ಹೇಳುತ್ತಿದ್ದಾರೆ. ಇದರಲ್ಲಿ ದೊಡ್ಡ ಷಡ್ಯಂತ್ರ ನಡೆಯುತ್ತಿದ್ದು, ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಜನರಿಗೆ ಇವರು ಸೋಂಕು ಬರಿಸುತ್ತಿದ್ದಾರೆ. ಸೋಂಕು ಸಂಖ್ಯೆ ಹೆಚ್ಚಳ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಯಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾತನೂರಿನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, “ಕೆಲ ದಿನಗಳ ಹಿಂದೆ ಗೃಹ ಸಚಿವರು ತಮ್ಮ ಊರಿನಲ್ಲಿ ಜಾತ್ರೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಪ್ರಕರಣ ದಾಖಲಾಗಿಲ್ಲ..? ಬಿಜೆಪಿ ನಾಯಕ ಗುತ್ತೆದಾರ್ ಅವರು ಸಾವಿರಾರು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಆದರೂ ಪ್ರಕರಣ ಯಾಕೆ ದಾಖಲಾಗಿಲ್ಲ..? ರಾಜಕೀಯ ಕಾರ್ಯದರ್ಶಿಯಾಗಿದ್ದ ರೇಣುಕಾಚಾರ್ಯ ಅವರು ನಿಯಮ ಉಲ್ಲಂಘಿಸಿದ್ದಾರೆ ” ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಾತನೂರಿನಲ್ಲಿ 30 ಜನರ ಮೇಲೆ ಕೇಸ್ ಹಾಕಿದ್ದಾರಂತೆ. ಇನ್ನಷ್ಟು ಜನರ ವಿವರಗಳನ್ನು ನಾನು ನೀಡುತ್ತೇನೆ. ಸಾವಿರಾರು ಜನ ಇದ್ದರಲ್ಲ ಅವರ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ..? ನಿನ್ನೆ 127 ತಾಲೂಕುಗಳಿಂದ ನಮಗೆ ಕರ್ಫ್ಯೂ ನಿಯಮ ಉಲ್ಲಂಘನೆ ಫೋಟೋ, ವಿಡಿಯೋಗಳು ಬಂದಿವೆ. ಎಲ್ಲಿಯೂ ನಿಯಮ ಪಾಲನೆ ಆಗಿಲ್ಲ. ಎಲ್ಲೆಡೆ ಓಡಾಟ ಮಾಡಲಾಗಿದೆ. ಇವರ ಮೇಲೂ ಕೇಸ್ ಹಾಕಿಲ್ಲ ಯಾಕೆ..?” ಎಂದು ಪ್ರಶ್ನಿಸಿದ್ದಾರೆ.

’ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಒಂದೇ. ನಾನು ಏನೇ ಮಾತನಾಡಿದರೂ ಬೇರೆ ರೀತಿ ಬಿಂಬಿತವಾಗುತ್ತಿದೆ. ನಾನು ಹೇಳುವುದೊಂದು ಇವರು ತೋರಿಸುವುದೊಂದು. ಹೀಗಾಗಿ ಮುಂದಿನ ಮೂರು ದಿನ ನಾನು ಮೌನ ವಹಿಸುತ್ತೇನೆ. ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...