Homeಮುಖಪುಟಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಇಂದು ಬೆಳಿಗ್ಗೆಯಷ್ಟೇ ಸಚಿವರೊಬ್ಬರು ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದರು

- Advertisement -
- Advertisement -

ಫೆಬ್ರವರಿ ತಿಂಗಳಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ, ಆಡಳಿತರೂಢ ಬಿಜೆಪಿಯ ಇಬ್ಬರು ಶಾಸಕರು ಒಂದೇ ದಿನದಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಪಕ್ಷವು ತೀವ್ರ ಮುಖಭಂಗ ಅನುಭವಿಸಿದೆ. ರಾಜೀನಾಮೆ ನೀಡಿರುವವರಲ್ಲಿ, ಪ್ರವೀಣ್ ಜಾಂತ್ಯೆ ಅವರು ಮೇಮ್‌ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರೆ, ಮೈಕೆಲ್ ಲೋಬೋ ಅವರು ಕ್ಯಾಲಂಗುಟ್ ಕ್ಷೇತ್ರದ ಪ್ರತಿನಿಧಿಯಾಗಿದ್ದರು. ಸಚಿವರೂ ಆಗಿರುವ ಲೋಬೋ ಇಂದು ಬೆಳಿಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಲೋಬೋ ಅವರು, “ನಾನು ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಮುಂದಕ್ಕೆ ಯಾವ ಹೆಜ್ಜೆ ಇಡಬೇಕೆಂದು ನೋಡುತ್ತೇನೆ. ಇತರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ. ಪಕ್ಷವು ನಮ್ಮನ್ನು ನೋಡುವ ರೀತಿಯಿಂದ ನಾನು ಅಸಮಾಧಾನಗೊಂಡಿದ್ದು, ಪಕ್ಷದ ಕಾರ್ಯಕರ್ತರು ಅತೃಪ್ತರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಗೋವಾ ಬಿಜೆಪಿಯಲ್ಲಿ, ಮನೋಹರ್ ಪರಿಕ್ಕರ್ ಅವರ ಪರಂಪರೆಯನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದನ್ನು ನಾನು ನೋಡುತ್ತಿಲ್ಲ. ಅವರನ್ನು ಬೆಂಬಲಿಸಿದ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಬದಿಗೆ ತಳ್ಳಿದೆ” ಎಂದು ಅವರು ಹೇಳಿದ್ದಾರೆ.

ಮೇಮ್ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರವೀಣ್ ಜಾಂತ್ಯೆ, 1991 ರಿಂದ 1996 ರವರೆಗೆ ಉತ್ತರ ಗೋವಾದಿಂದ ಕಾಂಗ್ರೆಸ್ ಸಂಸದರಾಗಿದ್ದ ಹರೀಶ್ ಜಾಂತ್ಯೆ ಅವರ ಮಗ. 2012 ರ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ 2017 ರ ಚುನಾವಣೆಗೆ ಮುಂಚಿತವಾಗಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಪರಿಕ್ಕರ್ ಅವರ ಆಶ್ವಾಸನೆಗಳ ಆಧಾರದ ಮೇಲೆ ನಾನು ಬಿಜೆಪಿಗೆ ಸೇರ್ಪಡೆಗೊಂಡಿದ್ದೆ, ಆದರೆ ಬಿಜೆಪಿಯು ಅಂದಿನ ಪಕ್ಷವಾಗಿ ಉಳಿದಿಲ್ಲ ಎಂದು ಪ್ರವೀಣ್ ಜಾಂತ್ಯೆ ಹೇಳಿದ್ದಾರೆ. ಗಣಿಗಾರಿಕೆಯನ್ನು ಪುನರಾರಂಭಿಸುವಲ್ಲಿ ಮತ್ತು ತನ್ನ ಕ್ಷೇತ್ರದಲ್ಲಿ ಉದ್ಯೋಗಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲಾಗಿದ್ದು, “ನಾನು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಗೆ ಸೇರುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇತ್ತೀಚಿನ ವಾರಗಳಲ್ಲಿ ನಾಲ್ವರು ಶಾಸಕರು ಬಿಜೆಪಿ ತೊರೆದಿದ್ದು, ಲೋಬೋ ಅವರು ಪ್ರತಿಪಕ್ಷ ಕಾಂಗ್ರೆಸ್‌ಗೆ ಸೇರುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಲೋಬೋ ಬಿಜೆಪಿಯನ್ನು ತೊರೆದ ಮೂರನೇ ಕ್ರಿಶ್ಚಿಯನ್‌ ಶಾಸಕರಾಗಿದ್ದಾರೆ. ಈ ಹಿಂದೆ ಅಲೀನಾ ಸಲ್ಡಾನ್ಹಾ ಮತ್ತು ಕಾರ್ಲೋಸ್ ಅಲ್ಮೇಡಾ ಬಿಜೆಪಿಯನ್ನು ತೊರೆದಿದ್ದರು. ಸಲ್ಡಾನ್ಹಾ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದರೆ, ಅಲ್ಮೇಡಾ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ರಾಜ್ಯದ ಜನಸಂಖ್ಯೆಯಲ್ಲಿ ಕ್ರಿಶ್ಚಿಯನ್ನರು 25% ಕ್ಕಿಂತ ಹೆಚ್ಚಾಗಿದ್ದಾರೆ. ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಪಕ್ಷ ತೊರೆದವರ ವಿರುದ್ಧ ವಾಗ್ದಾಳಿ ನಡೆಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, “ಬಿಜೆಪಿ ದೊಡ್ಡ ಕುಟುಂಬವಾಗಿದ್ದು, ಮಾತೃಭೂಮಿಗೆ ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸುತ್ತಿದೆ. ಕೆಲವು ಪಕ್ಷಾಂತರಗಳು, ದುರಾಶೆ ಮತ್ತು ವೈಯಕ್ತಿಕ ಹಿತಾಸಕ್ತಿಗಳ ಕಾರ್ಯಸೂಚಿಯನ್ನು ಪೂರೈಸಲು ನಮ್ಮ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...