Homeಚಳವಳಿಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಟಿಗೆ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಸ್ವರ ಭಾಸ್ಕರ್‌, ಜೋಯಾ ಅಖ್ತರ್ ಸೇರಿ ಹಲವರು ಬೆಂಬಲ ವ್ಯಕ್ತಪಡಿದ್ದಾರೆ.

- Advertisement -
- Advertisement -

ತಮ್ಮ ಮೇಲೆ ಕಳೆದ ಐದು ವರ್ಷಗಳ ಹಿಂದೆ ನಡೆದ ಲೈಂಗಿಕ ದೌರ್ಜನ್ಯವನ್ನು ನೆನಪಿಸಿಕೊಂಡಿರುವ ಬಹುಭಾಷಾ ನಟಿ ಭಾವನಾ ಮೆನನ್, ತಾವು ತಪ್ಪು ಮಾಡದಿದ್ದರೂ ಘಟನೆಯ ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ ಎಂದು ಕರಾಳ ಘಟನೆಯ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

2017 ರಲ್ಲಿ ದೇಶದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿ ನಟಿ ಭಾವನಾ ಮೆನನ್ ಅವರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ಕೃತ್ಯದಲ್ಲಿ ಮಲಯಾಳಂ ನಟ ದಿಲೀಪ್‌‌‌‌‌‌‌‌‌ ಪ್ರಮುಖ ಆರೋಪಿಯಾಗಿದ್ದಾರೆ. ಘಟನೆಗೆ ಐದು ವರ್ಷವಾದ ಹಿನ್ನೆಲೆ ಈ ವರ್ಷಗಳಲ್ಲಿ ತಾವು ಅನುಭವಿಸಿದ ತಳಮಳ, ಅವಮಾನ, ನೋವನ್ನು ನಟಿ ತಮ್ಮ Instagram ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಇದು ಸುಲಭದ ಪ್ರಯಾಣವಲ್ಲ, ಸಂತ್ರಸ್ತೆಯಿಂದ ಹಿಡಿದು ಗಟ್ಟಿಯಾಗಿ ನಿಲ್ಲುವ ಪ್ರಯಾಣ ಅಷ್ಟು ಸುಲಭವವಲ್ಲ. ಈ ಐದು ವರ್ಷಗಳಿಂದ, ನನ್ನ ಮೇಲೆ ನಡೆದ ಹಲ್ಲೆಯಿಂದಾಗಿ ದೇಶದಲ್ಲಿ ನನ್ನ ಹೆಸರು ಮತ್ತು ನನ್ನ ಗುರುತನ್ನು ಹತ್ತಿಕ್ಕಲಾಗಿದೆ” ಎಂದು ಭಾವನಾ ಬರೆದಿದ್ದಾರೆ.

ಇದನ್ನೂ ಓದಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

’ನಾನು ತಪ್ಪು ಮಾಡದಿದ್ದರೂ ಕೂಡ ನನ್ನನ್ನು ಮೌನವಾಗಿಸುವ, ಅವಮಾನಿಸುವ, ಎಲ್ಲರಿಂದ ಪ್ರತ್ಯೇಕಿಸುವ ಹಲವು ಪ್ರಯತ್ನಗಳು ನಡೆದಿವೆ. ಆದರೆ, ನನ್ನ ಧ್ವನಿಯನ್ನು ಜೀವಂತವಾಗಿಡುವಲ್ಲಿ ಹಲವರು ನನ್ನ ಜೊತೆಗೆ ನಿಂತಿದ್ದಾರೆ. ಈಗ ನನ್ನ ಬಗ್ಗೆ ಪರವಾಗಿ ಮಾತನಾಡುವ ಅನೇಕ ಧ್ವನಿಗಳಿವೆ. ನ್ಯಾಯದ ಹೋರಾಟದಲ್ಲಿ ನಾನು ಒಂಟಿಯಲ್ಲ’ ಎಂದಿದ್ದಾರೆ.

’ನ್ಯಾಯವು ಗೆಲ್ಲಲು, ತಪ್ಪಿತಸ್ಥರಿಗೆ ಶಿಕ್ಷೆಯಾಗಲು, ಬೇರೆ ಯಾರು ಮತ್ತೆ ಇಂತಹ ಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ನಾನು ನನ್ನ ಪ್ರಯಾಣವನ್ನು (ಹೋರಾಟವನ್ನು) ಮುಂದುವರೆಸುತ್ತೇನೆ. ಇಂತಹ ಸ್ಥಿತಿಯಲ್ಲಿ ನನ್ನ ಜೊತೆಗೆ ನಿಂತ ನಿಮಗೆ ನಿಮ್ಮ ಪ್ರೀತಿಗೆ ಹೃದಯಪೂರ್ವಕ ಧನ್ಯವಾದಗಳು” ಎಂದಿದ್ದಾರೆ.

ನಟಿ ಭಾವನಾ ಮೆನನ್ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಲವು ನಟ ನಟಿಯರು ಶೇರ್‌ ಮಾಡಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಧೀರ ಭಗತ್ ರಾಯ್‌’ ಮೂಲಕ ಮೀಸಲು ಕ್ಷೇತ್ರದ ರಾಜಕೀಯ ಕಥೆಯನ್ನು ಹೇಳಲು ಹೊರಟಿರುವ ನಿರ್ದೇಶಕ ಕರ್ಣನ್

ಕಲಾವಿದರಾದ ತೋವಿನೋ ಥಾಮಸ್, ಮಂಜು ವಾರಿಯರ್, ಪೃಥ್ವಿರಾಜ್ ಸುಕುಮಾರನ್, ಚಿನ್ಮಯಿ, ಗೀತು ಮೋಹನ್ ದಾಸ್, ಪಾರ್ವತಿ ತಿರುವೋತ್, ಅನ್ನಾ ಬೆನ್ ಮುಂತಾದ ಅನೇಕ ಸೆಲೆಬ್ರಿಟಿಗಳು ಭಾವನಾ ಧೈರ್ಯವನ್ನು ತೋರಿಸಿದ್ದಕ್ಕಾಗಿ ಮತ್ತು ಈ ವಿಷಯದ ಬಗ್ಗೆ ಮಾತನಾಡಿದ್ದಕ್ಕಾಗಿ ಶ್ಲಾಘಿಸಿದರು. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಭಾವನಾ ಅವರ ಪೋಸ್ಟ್‌ಗಳನ್ನು ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ನಟಿ ಪಾರ್ವತಿ ತಿರುವೋತ್ ಅವರನ್ನು ನಿರಂತರ ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಬಾಲಿವುಡ್ ಚಿತ್ರರಂಗ ಕೂಡ ಭಾವನಾಗೆ ಬೆಂಬಲ ನೀಡಿದೆ. ನಿರ್ಮಾಪಕಿ ಮತ್ತು ಲೇಖಕಿ ಜೋಯಾ ಅಖ್ತರ್ ಕೂಡ ಭಾವನಾ ಅವರ ಪೋಸ್ಟ್ ಅನ್ನು ತಮ್ಮ Instagram ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮೋರ್‌ ಪವರ್‌ ಟು ಯು ಎಂದು ಬರೆದಿದ್ದಾರೆ. ನಟಿಯರಾದ ರಿಚಾ ಚಡ್ಡಾ ಮತ್ತು ಸ್ವರಾ ಭಾಸ್ಕರ್ ಅವರು ಭಾವನಾ ಅವರ ಪೋಸ್ಟ್ ಅನ್ನು ರಿಟ್ವೀಟ್ ಮಾಡಿ ತಮ್ಮ ಬೆಂಬಲ ನೀಡಿದ್ದಾರೆ.

ಘಟನೆಯ ಹಿನ್ನೆಲೆ:

ಫೆಬ್ರವರಿ 17, 2017 ರಂದು ತ್ರಿಶೂರ್‌ನಿಂದ ಚಲನಚಿತ್ರವೊಂದರ ಶೂಟಿಂಗ್‌ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ನಟಿ ಭಾವನಾ ಅವರನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪಹರಿಸಲಾಗಿತ್ತು. ಒಂದು ಗ್ಯಾಂಗ್ ಆಕೆಯನ್ನು ಬಲವಂತವಾಗಿ ಕಾರನ್ನು ಹತ್ತಿಸಿ ಎರಡು ಗಂಟೆಗಳ ಕಾಲ ವಾಹನದೊಳಗೆ ಕಿರುಕುಳ ನೀಡಿತ್ತು. ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಪ್ರಮುಖ ಆರೋಪಿ ಎಂದು ಆರೋಪಿಸಲಾಗಿತ್ತು. ನಟಿ ನೀಡಿದ್ದ ದೂರಿನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

Actress assault: As Dileep approaches SC, Kerala govt must clarify this  question - The Week
ನಟ ದಿಲೀಪ್

ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ನಟ ದಿಲೀಪ್ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖಾಧಿಕಾರಿ ನೀಡಿದ ದೂರಿನ ಮೇರೆಗೆ ಅಪರಾಧ ವಿಭಾಗದ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸ ಎಫ್‌ಐಆರ್‌ನಲ್ಲಿ ನಟ ದಿಲೀಪ್, ಸೋದರ ಮಾವ ಟಿಎನ್ ಸೂರಜ್, ದಿಲೀಪ್ ಅವರ ಸಹೋದರ ಅನೂಪ್, ಒಬ್ಬ ವಿಐಪಿ ಮತ್ತು ಇತರ ಇಬ್ಬರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹೊಸ ತನಿಖಾ ತಂಡವನ್ನು ರಚಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದಿಲೀಪ್ ಜೊತೆಗೆ ಅವರ ಕಿರಿಯ ಸಹೋದರ ಪಿ. ಶಿವಕುಮಾರ್ ಮತ್ತು ಸೋದರ ಮಾವ ಟಿಎನ್ ಸೂರಜ್ ಸಹ ಅದೇ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬಹುಭಾಷಾ ನಟಿ ಭಾವನ ಕನ್ನಡದಲ್ಲಿ ಜಾಕಿ, ಟಗರು, ವಿಷ್ಣುವರ್ಧನ, ಭಜರಂಗಿ-2, ಯಾರೇ ಕೂಗಾಡಲಿ, ಟೋಪಿವಾಲಾ, ಬಚ್ಚನ್, ಮುಕುಂದ ಮುರಾರಿ, ಚೌಕ, 99 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ನೀರಿಗಾಗಿ 40 ಅಡಿ ಆಳದ ನದಿಯನ್ನು ಮರದ ದಿಮ್ಮಿ ಸಹಾಯದಿಂದ ದಾಟುತ್ತಿದ್ದ ಆದಿವಾಸಿ ಮಹಿಳೆಯರು, ಎಚ್ಚೆತ್ತ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...