Homeಕರ್ನಾಟಕಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು.

- Advertisement -
- Advertisement -

ದಕ್ಷಿಣ ಕನ್ನಡದ ಮದುಮಗನನ್ನು ಟ್ರೋಲ್‌‌‌‌ ಮಾಡಬೇಕು ಎಂದು ಆತನ ಸ್ನೇಹಿತರು ಮಾಡಿರುವ ತಮಾಷೆಯ ಘಟನೆಯ ವಿಡಿಯೋ ವೈರಲ್ ಆದ ನಂತರ ಕೊರಗಜ್ಜನ ವೇಷ ಹಾಕಿ ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಅದು ಕೊರಗಜ್ಜನ ವೇಷವಲ್ಲ ಎಂದು ಪ್ರತಿಕ್ರಿಯಿಸಿದ್ದ ಮದುಮಗ ಕ್ಷಮೆ ಕೂಡ ಕೇಳಿದ್ದರು. ಆದರೂ ಪ್ರಕರಣ ಕೊನೆಗೊಂಡಿಲ್ಲ. ಜನವರಿ 10ರ ಸೋಮವಾರ ರಾತ್ರಿ ಮದುಮಗನ ಇಬ್ಬರು ಗೆಳೆಯರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲದ ಕಡಂಬು ನಿವಾಸಿ ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನರವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಮದುಮಗ ಉಮರುಲ್ ಭಾಷಿತ್ ಮತ್ತು ಇತರ ಹಲವರ ವಿರುದ್ಧ ಕಲಂ 153ಎ, 295 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರು ತನಿಖೆಗಾಗಿ ಠಾಣಾ ಎಸ್.ಐ.ಗಳಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಸಂಜೀವ ಪುರುಷರವರ ನೇತೃತ್ವದಲ್ಲಿ ಎರಡು ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಬಿಸಿದ್ದರು. ಮಂಗಲ್ಪಡಿ ನಿವಾಸಿ, ಪುತ್ತೂರು ಫಾತಿಮಾ ಬಟ್ಟೆ ಅಂಗಡಿಯ ಮಾಲಕ ಅಹ್ಮದ್ ಮುಜಿತಾಬು (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಬಂಧಿಸದ್ದಿದ್ದಲ್ಲಿ ಮಂಗಳವಾರ ಹಿಂದೂ ಜಾಗರಣ ವೇದಿಕೆ ವತಿಯಿಂದ ವಿಟ್ಲ ಬಂದ್ ಆಚರಿಸಲಾಗುವುದು ಎಂದು ಕರೆ ನೀಡಲಾಗಿತ್ತು. ಅದಕ್ಕೂ ಮುನ್ನವೇ ಸೋಮವಾರ ರಾತ್ರಿಯೇ ಮದುಮಗನ ಇಬ್ಬರು ಸ್ನೇಹಿತರನ್ನು ಬಂಧಿಸಲಾಗಿದೆ. ಆದರೂ ಇಂದು ಕೆಲವು ಅಂಗಡಿಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ನೀಡಲಾಗಿದೆ ಎಂದು ವರದಿಯಾಗಿದೆ.

ಘಟನೆಯ ವಿವರ

ದಕ್ಷಿಣ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಕೊಲ್ನಾಡು ಗ್ರಾಮದ ಸಾಲೆತ್ತೂರು ಬಳಿಯ ಯುವತಿಯ ಮದುವೆ ನೆರೆಯ ಕಾಸರಗೋಡು ಜಿಲ್ಲೆಯ ಉಪ್ಪಳದ ಯುವಕನೊಂದಿಗೆ ಬುಧವಾರ ನಡೆದಿತ್ತು. ಮದುವೆಯ ಮುಂದುವರೆದ ಕಾರ್ಯಕ್ರಮವಾಗಿ ಮದುವೆಯಂದೆ ರಾತ್ರಿ ಮದುಮಗನ ಸ್ನೇಹಿತರಿಗೆ ವಧುವಿನ ಕಡೆಯವರು ಔತಣಕೂಟ(ತಾಳ)ವನ್ನು ಏರ್ಪಡಿಸಿದ್ದರು. ಅದರಂತೆ ಅಂದೇ ರಾತ್ರಿ ಉಪ್ಪಳದಿಂದ ಮದುಮಗ ಮತ್ತು ಅವರ ಸ್ನೇಹಿತರು ಆಗಮಿಸಿದ್ದರು. ಈ ವೇಳೆ ಮದುಮಗನ ಸ್ನೇಹಿತರು ಮದುಮಗನನ್ನು ತಮಾಷೆ ಮಾಡುವ ಉದ್ದೇಶದಿಂದ, ಆತನಿಗೆ ಹರಿದ ಟಿಶರ್ಟ್ ಧರಿಸುವಂತೆ ಮಾಡಿ, ತಲೆಗೆ ಮಟ್ಟಳೆ ಹಾಕಿ, ಸೊಂಟದ ಸುತ್ತ ಒಂದಷ್ಟು ಸೊಪ್ಪುಗಳನ್ನು ಸುತ್ತಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಬಣ್ಣ ಎರಚಿ ಹಾಡು ಹಾಡಿ ಖುಷಿ ಪಟ್ಟಿದ್ದರು.

ಇದರ ನಂತರ, ವಧುವಿನ ಕಡೆಯವರ ಔತಣಕೂಟದಲ್ಲಿ ಭಾಗವಹಿಸಿ, ಆಹಾರವನ್ನು ಸ್ವೀಕರಿಸಿ ಅವರು ತೆರಳಿದ್ದರು. ಆದರೆ, ಮದುಮಗನನ್ನು ತಮಾಷೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕ ಈ ವಿಡಿಯೊವನ್ನು ತುಳುನಾಡಿನಲ್ಲಿ ಆರಾಧಿಸುವ ‘ಕೊರಗಜ್ಜ’ ಎಂಬ ದೈವಕ್ಕೆ ಅವಮಾನ ಮಾಡಲಾಗಿದೆ ಎಂದು ಬಲಪಂಥೀಯರು ವೈರಲ್ ಮಾಡಿದ್ದರು.


ಇದನ್ನೂ ಓದಿ: ಮಂಗಳೂರು: ಕೊರಗಜ್ಜನಿಗೆ ಅವಮಾನ ಎಂಬ ಘಟನೆಯ ಸುತ್ತ ನಡೆದಿದ್ದೇನು? ಕೋಮು ಆಯಾಮ ಪಡೆದಿದ್ದೇಕೆ?


ಕೊರಗಜ್ಜನಿಗೆ ಅವಮಾನ ಮಾಡಿಲ್ಲ

ಕೊರಗ ಸಮುದಾಯದ ಮುಖಂಡ ಮತ್ತಾಡಿ ಅವರು ಮಾತನಾಡಿ, “ಘಟನೆಯ ಬಗೆಗಿನ ವಿವಾದಾತ್ಮಕ ವಿಡಿಯೊದಲ್ಲಿ ಮದುಮಗನ ವೇಷವನ್ನು ನೋಡಿದೆ. ಅದು ಕೊರಗಜ್ಜನ ವೇಷ ಎಂದು ಹೇಳಲು ಸಾಧ್ಯವಿಲ್ಲ. ಅದರಲ್ಲಿ ಮದುಮಗನ ತಲೆಗೆ ಮುಟ್ಟಾಳೆ (ಅಡಿಕೆ ಗರಿಯಿಂದ ಮಾಡಿರುವ ತಲೆಗೆ ಧರಿಸುವ ವಸ್ತು) ಹಾಕಿದ್ದರು, ಟೀಶರ್ಟ್ ಧರಿಸಿದ್ದರು ಮತ್ತು ಮುಖಕ್ಕೆ ಕಪ್ಪು ಬಣ್ಣ ಬಳಿದಿದ್ದರು. ಕಪ್ಪು ಬಣ್ಣ ಹಾಕಿದ ಕೂಡಲೇ ಅದು ಕೊರಗರನ್ನು ಅವಮಾನಿಸಿದ ಹಾಗೆ ಹಾಗಲ್ಲ. ಕಪ್ಪು ಬಣ್ಣದವರು ಕೊರಗರು ಮಾತ್ರ ಅಲ್ಲ, ಎಲ್ಲಾ ಸಮುದಾಯದಲ್ಲೂ ಇದ್ದಾರೆ” ಎಂದು ಹೇಳಿದ್ದಾರೆ.

ಕೊರಗ ಅಭಿವೃದ್ದಿ ಸಂಘದ ಮಾಜಿ ಅಧ್ಯಕ್ಷೆಯಾಗಿರುವ ಸುಶೀಲಾ ನಾಡಾರವರು ಮಾತನಾಡಿ “ಕೊರಗ ವೇಷವನ್ನು ಹಾಕುವುದು ಮತ್ತು ಈ ವೇಷ ಹಾಕಿ ಸಮುದಾಯವನ್ನು ಕೀಳು ಮಟ್ಟದಲ್ಲಿ ಬಿಂಬಿಸುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ. ಆದರೆ, ಈ ರೀತಿಯ ಕಾನೂನು ಇದ್ದು ಕೂಡಾ ಕೊರಗ ವೇಷ ಹಾಕುವುದು ಮುಂದುವರೆಯುತ್ತಲೇ ಇದೆ. ನಿಜವಾಗಿಯೂ ಕೊರಗರ ಬಗ್ಗೆ ಕಾಳಜಿ ಇರುವವರಾದರೆ, ಮೊನ್ನೆ ಕೋಟದಲ್ಲಿ ಕೊರಗರ ಮೇಲೆ ನಡೆದ ದಾಳಿಯ ಬಗ್ಗೆ ಧ್ವನಿ ಎತ್ತುತ್ತಿದ್ದರು. ಆದರೆ ಇಂದು ಕೊರಗಜ್ಜನಿಗೆ ಅವಮಾನ ಆಗಿದೆ ಎಂದು ಗಲಾಟೆ ಮಾಡುತ್ತಿರುವವರು ಯಾರೂ ಅಂದು ಮಾತಾಡಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಕೊರಗಜ್ಜನಿಗೆ ಅವಮಾನ ಮಾಡಲಾಗಿದೆ ಎನ್ನುವ ಸಂಘ ಪರಿವಾರ ಕೊರಗರ ಮೇಲೆ ಲಾಠಿ ಚಾರ್ಜ್ ಆದಾಗ ಎಲ್ಲಿತ್ತು?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...