Homeಮುಖಪುಟ‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

- Advertisement -
- Advertisement -

ಕಾಶ್ಮೀರದ ಪುಟ್ಟ ಬಾಲಕಿಯೊಬ್ಬರು ಮಾಧ್ಯಮ ವರದಿಗಾರ್ತಿಯಂತೆ ನಟಿಸಿ ತನ್ನ ಮನೆಯ ಸಮೀಪ ಇರುವ ರಸ್ತೆಗಳ ದುಸ್ಥಿತಿಯ ಬಗ್ಗೆ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನೆಟ್ಟಿಗರು ಬಾಲಕಿಯ ವರದಿಯ ಕವರೇಜ್‌ ಅನ್ನು ಶ್ಲಾಘಸಿದ್ದು ಮುಂದಿನ ಹದಿನೈದು ವರ್ಷಗಳ ನಂತರ ಅವರು ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕಾಣಿಸುವಂತಾಗಲಿ ಎಂದು ಹಾರೈಸಿದ್ದಾರೆ.

2:08 ಸೆಕೆಂಡಿನ ವಿಡಿಯೊ ಕಾಶ್ಮೀರದ್ದು ಎನ್ನಲಾಗಿದ್ದು, ವಿಡಿಯೊದಲ್ಲಿರುವ ಬಾಲಕಿಯ ಹೆಸರು ಮತ್ತು ಅವರ ವಾಸಸ್ಥಳದ ಬಗ್ಗೆಗಿನ ವರದಿಗಳು ಸಧ್ಯಕ್ಕೆ ಲಭ್ಯವಾಗಿಲ್ಲ.

ಇದನ್ನೂ ಓದಿ:ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ವೀಡಿಯೊದಲ್ಲಿ ಬಾಲಕಿಯು ರಸ್ತೆಯ ದುಸ್ಥಿತಿಯ ಬಗ್ಗೆ ದೂರುತ್ತಾ, ಇಂತಹ ರಸ್ತೆಯಿಂದಾಗಿ ತಮ್ಮ ಮನೆಗೆ ಅತಿಥಿಗಳು ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ವೀಡಿಯೊವನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿರುವಂತೆ ತೋರುತ್ತಿದೆ. ಬಾಲಕಿಯು ಕ್ಯಾಮರಾ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು “ಅಮ್ಮ” ಎಂದು ಸಂಬೋಧಿಸುವುದು ಕೂಡಾ ಕೇಳುತ್ತದೆ.

ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಹಿಮ ಸುರಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹವಾಮಾನ ವೈಪರೀತ್ಯಗಳು ಪರಿಸ್ಥಿತಿಯನ್ನು ಹೇಗೆ ಹದಗೆಡಿಸುತ್ತವೆ ಎಂಬುದನ್ನು ಬಾಲಕಿಯು ವಿವರಿಸುತ್ತಾ, ಸುತ್ತಲೂ ನಡೆದು ತೋರಿಸುತ್ತಾರೆ. “ಜನರು ಕಸವನ್ನು ರಸ್ತೆಗಳಲ್ಲೇ ಎಸೆಯುತ್ತಾರೆ ಮತ್ತು ಸ್ಥಳವು ಕೊಳಕಾಗಿದೆ ಎಂದು ಬೊಬ್ಬೆ ಹೊಡೆಯುತ್ತಾರೆ” ಎಂದು ಪುಟ್ಟ ಬಾಲಕಿಯು ಹೇಳುತ್ತಾರೆ.

ವಿಡಿಯೊ ಕೊನೆಯಲ್ಲಿ ವೀಕ್ಷಕರೊಂದಿಗೆ ಲೈಕ್ ಮಾಡಿ, ಶೇರ್ ಮಾಡಿ ಮತ್ತು ಚಂದಾದಾರರಾಗಿ ಎಂದು ಹೇಳುವ ಬಾಲಕಿಯು, ಮುಂದಿನ ವೀಡಿಯೊದಲ್ಲಿ ಮತ್ತೆ ಭೇಟಿಯಾಗುತ್ತೇನೆ ಎಂದು ಭರವಸೆ ನೀಡುತ್ತಾರೆ. ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ವಿಡಿಯೊವನ್ನು ಹಂಚಿಕೊಂಡಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ:ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಕಾಶ್ಮೀರದ ಅಧಿಕಾರಿಗಳಿಗೆ ವಿಡಿಯೊ ಮೂಲಕ ಮಕ್ಕಳು ಮನವಿ ಮಾಡಿದ್ದು ಇದುವೆ ಮೊದಲಲ್ಲ. ಆರು ವರ್ಷದ ಪುಟ್ಟ ಬಾಲಕಿಯ ವೀಡಿಯೊ ಕಳೆದ ವರ್ಷ ವೈರಲ್‌ ಆಗಿತ್ತು. ಅದರಲ್ಲಿ ಅವರು ಆನ್‌ಲೈನ್‌‌‌‌ ತರಗತಿಗಳ ಅವಧಿಯನ್ನು ಮಿತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದರು.

ಈ ವಿಡಿಯೊ ವೈರಲ್ ಆದ ನಂತರ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶಾಲಾ ವಿದ್ಯಾರ್ಥಿಗಳ ‘ಹೋಂ ವರ್ಕ್’ ಹೊರೆಯನ್ನು ಕಡಿಮೆ ಮಾಡಲು 48 ಗಂಟೆಗಳಲ್ಲಿ ನೀತಿಯನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದರು.

ಇದನ್ನೂ ಓದಿ:ಸಿಖ್ಖರ ವಿರುದ್ಧ ಕ್ಯಾಬಿನೆಟ್ ಸಮಿತಿ ಚರ್ಚಿಸುತ್ತಿದೆ ಎಂದು ಬಿಂಬಿಸಿ ನಕಲಿ ವಿಡಿಯೊ ವೈರಲ್‌; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...