Homeಮುಖಪುಟ‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

- Advertisement -
- Advertisement -

ಕಾಶ್ಮೀರದ ಪುಟ್ಟ ಬಾಲಕಿಯೊಬ್ಬರು ಮಾಧ್ಯಮ ವರದಿಗಾರ್ತಿಯಂತೆ ನಟಿಸಿ ತನ್ನ ಮನೆಯ ಸಮೀಪ ಇರುವ ರಸ್ತೆಗಳ ದುಸ್ಥಿತಿಯ ಬಗ್ಗೆ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನೆಟ್ಟಿಗರು ಬಾಲಕಿಯ ವರದಿಯ ಕವರೇಜ್‌ ಅನ್ನು ಶ್ಲಾಘಸಿದ್ದು ಮುಂದಿನ ಹದಿನೈದು ವರ್ಷಗಳ ನಂತರ ಅವರು ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕಾಣಿಸುವಂತಾಗಲಿ ಎಂದು ಹಾರೈಸಿದ್ದಾರೆ.

2:08 ಸೆಕೆಂಡಿನ ವಿಡಿಯೊ ಕಾಶ್ಮೀರದ್ದು ಎನ್ನಲಾಗಿದ್ದು, ವಿಡಿಯೊದಲ್ಲಿರುವ ಬಾಲಕಿಯ ಹೆಸರು ಮತ್ತು ಅವರ ವಾಸಸ್ಥಳದ ಬಗ್ಗೆಗಿನ ವರದಿಗಳು ಸಧ್ಯಕ್ಕೆ ಲಭ್ಯವಾಗಿಲ್ಲ.

ಇದನ್ನೂ ಓದಿ:ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ವೀಡಿಯೊದಲ್ಲಿ ಬಾಲಕಿಯು ರಸ್ತೆಯ ದುಸ್ಥಿತಿಯ ಬಗ್ಗೆ ದೂರುತ್ತಾ, ಇಂತಹ ರಸ್ತೆಯಿಂದಾಗಿ ತಮ್ಮ ಮನೆಗೆ ಅತಿಥಿಗಳು ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ವೀಡಿಯೊವನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿರುವಂತೆ ತೋರುತ್ತಿದೆ. ಬಾಲಕಿಯು ಕ್ಯಾಮರಾ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು “ಅಮ್ಮ” ಎಂದು ಸಂಬೋಧಿಸುವುದು ಕೂಡಾ ಕೇಳುತ್ತದೆ.

ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಹಿಮ ಸುರಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹವಾಮಾನ ವೈಪರೀತ್ಯಗಳು ಪರಿಸ್ಥಿತಿಯನ್ನು ಹೇಗೆ ಹದಗೆಡಿಸುತ್ತವೆ ಎಂಬುದನ್ನು ಬಾಲಕಿಯು ವಿವರಿಸುತ್ತಾ, ಸುತ್ತಲೂ ನಡೆದು ತೋರಿಸುತ್ತಾರೆ. “ಜನರು ಕಸವನ್ನು ರಸ್ತೆಗಳಲ್ಲೇ ಎಸೆಯುತ್ತಾರೆ ಮತ್ತು ಸ್ಥಳವು ಕೊಳಕಾಗಿದೆ ಎಂದು ಬೊಬ್ಬೆ ಹೊಡೆಯುತ್ತಾರೆ” ಎಂದು ಪುಟ್ಟ ಬಾಲಕಿಯು ಹೇಳುತ್ತಾರೆ.

ವಿಡಿಯೊ ಕೊನೆಯಲ್ಲಿ ವೀಕ್ಷಕರೊಂದಿಗೆ ಲೈಕ್ ಮಾಡಿ, ಶೇರ್ ಮಾಡಿ ಮತ್ತು ಚಂದಾದಾರರಾಗಿ ಎಂದು ಹೇಳುವ ಬಾಲಕಿಯು, ಮುಂದಿನ ವೀಡಿಯೊದಲ್ಲಿ ಮತ್ತೆ ಭೇಟಿಯಾಗುತ್ತೇನೆ ಎಂದು ಭರವಸೆ ನೀಡುತ್ತಾರೆ. ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ವಿಡಿಯೊವನ್ನು ಹಂಚಿಕೊಂಡಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ:ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಕಾಶ್ಮೀರದ ಅಧಿಕಾರಿಗಳಿಗೆ ವಿಡಿಯೊ ಮೂಲಕ ಮಕ್ಕಳು ಮನವಿ ಮಾಡಿದ್ದು ಇದುವೆ ಮೊದಲಲ್ಲ. ಆರು ವರ್ಷದ ಪುಟ್ಟ ಬಾಲಕಿಯ ವೀಡಿಯೊ ಕಳೆದ ವರ್ಷ ವೈರಲ್‌ ಆಗಿತ್ತು. ಅದರಲ್ಲಿ ಅವರು ಆನ್‌ಲೈನ್‌‌‌‌ ತರಗತಿಗಳ ಅವಧಿಯನ್ನು ಮಿತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದರು.

ಈ ವಿಡಿಯೊ ವೈರಲ್ ಆದ ನಂತರ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶಾಲಾ ವಿದ್ಯಾರ್ಥಿಗಳ ‘ಹೋಂ ವರ್ಕ್’ ಹೊರೆಯನ್ನು ಕಡಿಮೆ ಮಾಡಲು 48 ಗಂಟೆಗಳಲ್ಲಿ ನೀತಿಯನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದರು.

ಇದನ್ನೂ ಓದಿ:ಸಿಖ್ಖರ ವಿರುದ್ಧ ಕ್ಯಾಬಿನೆಟ್ ಸಮಿತಿ ಚರ್ಚಿಸುತ್ತಿದೆ ಎಂದು ಬಿಂಬಿಸಿ ನಕಲಿ ವಿಡಿಯೊ ವೈರಲ್‌; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...