Homeಮುಖಪುಟ‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

‘ಪುಟ್ಟ ವರದಿಗಾರ್ತಿ!’: ಬಾಲಕಿಯ ವಿಡಿಯೊ ಕವರೇಜ್‌ಗೆ ನೆಟ್ಟಿಗರು ಫಿದಾ

- Advertisement -
- Advertisement -

ಕಾಶ್ಮೀರದ ಪುಟ್ಟ ಬಾಲಕಿಯೊಬ್ಬರು ಮಾಧ್ಯಮ ವರದಿಗಾರ್ತಿಯಂತೆ ನಟಿಸಿ ತನ್ನ ಮನೆಯ ಸಮೀಪ ಇರುವ ರಸ್ತೆಗಳ ದುಸ್ಥಿತಿಯ ಬಗ್ಗೆ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನೆಟ್ಟಿಗರು ಬಾಲಕಿಯ ವರದಿಯ ಕವರೇಜ್‌ ಅನ್ನು ಶ್ಲಾಘಸಿದ್ದು ಮುಂದಿನ ಹದಿನೈದು ವರ್ಷಗಳ ನಂತರ ಅವರು ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕಾಣಿಸುವಂತಾಗಲಿ ಎಂದು ಹಾರೈಸಿದ್ದಾರೆ.

2:08 ಸೆಕೆಂಡಿನ ವಿಡಿಯೊ ಕಾಶ್ಮೀರದ್ದು ಎನ್ನಲಾಗಿದ್ದು, ವಿಡಿಯೊದಲ್ಲಿರುವ ಬಾಲಕಿಯ ಹೆಸರು ಮತ್ತು ಅವರ ವಾಸಸ್ಥಳದ ಬಗ್ಗೆಗಿನ ವರದಿಗಳು ಸಧ್ಯಕ್ಕೆ ಲಭ್ಯವಾಗಿಲ್ಲ.

ಇದನ್ನೂ ಓದಿ:ನನಗಾಗಿ ಜೋರಾಗಿ ಚಪ್ಪಾಳೆ ಹೊಡೆಯಿರಿ ಎಂದು ಕೇಳಿಕೊಂಡ ಬಿಜೆಪಿ ಎಂಪಿ, ನಿರಾಕರಿಸಿದ ರೈತರು: ವಿಡಿಯೋ ವೈರಲ್

ವೀಡಿಯೊದಲ್ಲಿ ಬಾಲಕಿಯು ರಸ್ತೆಯ ದುಸ್ಥಿತಿಯ ಬಗ್ಗೆ ದೂರುತ್ತಾ, ಇಂತಹ ರಸ್ತೆಯಿಂದಾಗಿ ತಮ್ಮ ಮನೆಗೆ ಅತಿಥಿಗಳು ಬರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ವೀಡಿಯೊವನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಿರುವಂತೆ ತೋರುತ್ತಿದೆ. ಬಾಲಕಿಯು ಕ್ಯಾಮರಾ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು “ಅಮ್ಮ” ಎಂದು ಸಂಬೋಧಿಸುವುದು ಕೂಡಾ ಕೇಳುತ್ತದೆ.

ಕಾಶ್ಮೀರದಲ್ಲಿ ಭಾರೀ ಮಳೆ ಮತ್ತು ಹಿಮ ಸುರಿದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಹವಾಮಾನ ವೈಪರೀತ್ಯಗಳು ಪರಿಸ್ಥಿತಿಯನ್ನು ಹೇಗೆ ಹದಗೆಡಿಸುತ್ತವೆ ಎಂಬುದನ್ನು ಬಾಲಕಿಯು ವಿವರಿಸುತ್ತಾ, ಸುತ್ತಲೂ ನಡೆದು ತೋರಿಸುತ್ತಾರೆ. “ಜನರು ಕಸವನ್ನು ರಸ್ತೆಗಳಲ್ಲೇ ಎಸೆಯುತ್ತಾರೆ ಮತ್ತು ಸ್ಥಳವು ಕೊಳಕಾಗಿದೆ ಎಂದು ಬೊಬ್ಬೆ ಹೊಡೆಯುತ್ತಾರೆ” ಎಂದು ಪುಟ್ಟ ಬಾಲಕಿಯು ಹೇಳುತ್ತಾರೆ.

ವಿಡಿಯೊ ಕೊನೆಯಲ್ಲಿ ವೀಕ್ಷಕರೊಂದಿಗೆ ಲೈಕ್ ಮಾಡಿ, ಶೇರ್ ಮಾಡಿ ಮತ್ತು ಚಂದಾದಾರರಾಗಿ ಎಂದು ಹೇಳುವ ಬಾಲಕಿಯು, ಮುಂದಿನ ವೀಡಿಯೊದಲ್ಲಿ ಮತ್ತೆ ಭೇಟಿಯಾಗುತ್ತೇನೆ ಎಂದು ಭರವಸೆ ನೀಡುತ್ತಾರೆ. ಟ್ವಿಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ವಿಡಿಯೊವನ್ನು ಹಂಚಿಕೊಂಡಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ಇದನ್ನೂ ಓದಿ:ಸ್ಮಶಾನಕ್ಕಾಗಿ ಹಾಡಿ ಜನರ ಆಗ್ರಹ: ಶವ ಇಟ್ಟು ಪ್ರತಿಭಟನೆ; ವಿಡಿಯೊ ವೈರಲ್‌‌

ಕಾಶ್ಮೀರದ ಅಧಿಕಾರಿಗಳಿಗೆ ವಿಡಿಯೊ ಮೂಲಕ ಮಕ್ಕಳು ಮನವಿ ಮಾಡಿದ್ದು ಇದುವೆ ಮೊದಲಲ್ಲ. ಆರು ವರ್ಷದ ಪುಟ್ಟ ಬಾಲಕಿಯ ವೀಡಿಯೊ ಕಳೆದ ವರ್ಷ ವೈರಲ್‌ ಆಗಿತ್ತು. ಅದರಲ್ಲಿ ಅವರು ಆನ್‌ಲೈನ್‌‌‌‌ ತರಗತಿಗಳ ಅವಧಿಯನ್ನು ಮಿತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದರು.

ಈ ವಿಡಿಯೊ ವೈರಲ್ ಆದ ನಂತರ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶಾಲಾ ವಿದ್ಯಾರ್ಥಿಗಳ ‘ಹೋಂ ವರ್ಕ್’ ಹೊರೆಯನ್ನು ಕಡಿಮೆ ಮಾಡಲು 48 ಗಂಟೆಗಳಲ್ಲಿ ನೀತಿಯನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದ್ದರು.

ಇದನ್ನೂ ಓದಿ:ಸಿಖ್ಖರ ವಿರುದ್ಧ ಕ್ಯಾಬಿನೆಟ್ ಸಮಿತಿ ಚರ್ಚಿಸುತ್ತಿದೆ ಎಂದು ಬಿಂಬಿಸಿ ನಕಲಿ ವಿಡಿಯೊ ವೈರಲ್‌; FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...