Homeಮುಖಪುಟ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಬಿಬಿಸಿ’ ನಡೆಸಿದ ಸಂದರ್ಶನದ ಮೇಳೆ ಸಿಟ್ಟಾದ ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಸಂದರ್ಶಕರನ್ನೇ ಒಂದು ಗುಂಪಿನ ಏಜೆಂಟ್‌ ಎಂದು ಮೂದಲಿಸಿದ್ದಾರೆ. (ವಿಡಿಯೊ ನೋಡಿ)

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಬಿಬಿಸಿ ಸಂದರ್ಶನವನ್ನು ಮೊಟುಕುಗೊಳಿಸಿ ಸಂದರ್ಶನದ ದೃಶ್ಯಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿರುವ ಘಟನೆ ನಡೆದಿದೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿಯಾಗಿ ಮಾಡಲಾದ ದ್ವೇಷ ಭಾಷಣಗಳ ಕುರಿತ ಪ್ರಶ್ನೆಗಳಿಗೆ ಕೋಪಗೊಂಡ ಕೇಶವ್‌ ಪ್ರಸಾದ್‌, ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸಂದರ್ಶನದ ದೃಶ್ಯಗಳನ್ನು ಅಳಿಸಲು ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಮೌರ್ಯ ಅವರು ನಂತರದಲ್ಲಿ ಪ್ರತಿಕ್ರಿಯಿಸಿದ್ದು ಈ ಘಟನೆಯನ್ನು “ದುರದೃಷ್ಟಕರ ಘಟನೆ” ಎಂದು ಕರೆದ್ದಾರೆ.

ಧಾರ್ಮಿಕ ಸಮಾವೇಶದ ದ್ವೇಷ ಭಾಷಣಗಳ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪಕ್ಷದ ನಾಯಕರು ಮೌನ ತಾಳಿರುವುದನ್ನು ಮೌರ್ಯ ಅವರಲ್ಲಿ ಬಿಬಿಸಿ ಸಂದರ್ಶಕರು ಪ್ರಶ್ನಿಸುತ್ತಾರೆ.

ನಾಯಕರು ಇಂತಹ ಘೋಷಣೆಗಳ ವಿರುದ್ಧ ಮಾತನಾಡುವ ಮೂಲಕ ಜನರಿಗೆ ಧೈರ್ಯ ತುಂಬಬೇಕೇ ಎಂದು ಕೇಳಿದಾಗ ಮೌರ್ಯ ಅವರು ಪ್ರತಿಕ್ರಿಯಿಸಿ, “ನಾವು ನಮ್ಮನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಅಭಿವೃದ್ಧಿ ಮತ್ತು ಬೆಂಬಲ) ನಲ್ಲಿ ನಂಬಿಕೆ ಹೊಂದಿದ್ದೇವೆ. ತಮ್ಮ ವಿಚಾರಗಳನ್ನು ಹೇಳುವುದಕ್ಕೆ ಧಾರ್ಮಿಕ ಮುಖಂಡರಿಗೆ ಹಕ್ಕು ಇದೆ” ಎನ್ನುತ್ತಾರೆ.

ಮುಂದುವರಿದು, “ಹಿಂದೂ ಧಾರ್ಮಿಕ ಮುಖಂಡರನ್ನು ಮಾತ್ರ ಯಾಕೆ ಎತ್ತಿ ತೋರಿಸುತ್ತೀರಿ” ಎಂದು ಉಪಮುಖ್ಯಮಂತ್ರಿ ಸಂದರ್ಶಕರಲ್ಲಿ ಪ್ರಶ್ನಿಸುತ್ತಾರೆ.

“ಹಿಂದೂ ನಾಯಕರ ಬಗ್ಗೆ ಮಾತ್ರ ಏಕೆ ಕೇಳುತ್ತಿದ್ದೀರಿ? ಇತರ ಧಾರ್ಮಿಕ ಮುಖಂಡರು ಮಾಡಿದ ಕಮೆಂಟ್‌ಗಳ ಬಗ್ಗೆ ಯಾಕೆ ಮಾತನಾಡಲ್ಲ? 370ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಎಷ್ಟು ಮಂದಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾಯಿತು, ನೀವು ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ? ಧರ್ಮ ಸಂಸದ್ ಬಿಜೆಪಿ ಕಾರ್ಯಕ್ರಮವಲ್ಲ, ಧಾರ್ಮಿಕ ಮುಖಂಡರದ್ದು’’ ಎಂದು ತಿಳಿಸುತ್ತಾರೆ.

“ಸ್ವಾಮೀಜಿಗಳು ನಂಬಿದ್ದನ್ನು ಹೇಳಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರೂ ಇದ್ದಾರೆ. ಅವರ ಬಗ್ಗೆಯೂ ಮಾತನಾಡಿ” ಎಂದು ಉಪಮುಖ್ಯಮಂತ್ರಿ ಒತ್ತಾಯಿಸುತ್ತಾರೆ.

ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿ, “ಇಂತಹ ಭಾಷಣಗಳು ಚುನಾವಣೆಗೆ ಮುನ್ನ ವಾತಾವರಣವನ್ನು ಹಾಳುಮಾಡುತ್ತವೆಯಲ್ಲ?” ಎಂದು ಸಂದರ್ಶಕರು ಎಂದು ಕೇಳುತ್ತಾರೆ. ಜೊತೆಗೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಕೂಗಲಾದ ಘೋಷಣೆಗಳ ಆಧಾರದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿರುವುದರ ಕುರಿತೂ ಅವರು ಕೇಳುತ್ತಾರೆ.

“ದೇಶದ್ರೋಹ ಬೇರೆ ವಿಷಯ. ಆದರೆ ಇದು ಧರ್ಮ ಸಂಸದ್. ಆಗ ನಾವು ಹೇಳಬಹುದು- ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸೂರ್ಯ ನಮಸ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲ” ಎಂದು ಮೌರ್ಯ ಉತ್ತರಿಸುತ್ತಾರೆ.

ವಿವಾದಾತ್ಮಕ ಧಾರ್ಮಿಕ ಸಮಾವೇಶದಲ್ಲಿ ಎದ್ದಿರುವ ನರಮೇಧದ ಕರೆಗಳ ಬಗ್ಗೆ ಕೇಳಿದಾಗ ಡಿಸಿಎಂ ಸಿಟ್ಟಿಗೆದ್ದರು. “ನೀವು ಯಾವ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ನನಗೆ ತಿಳಿದಿಲ್ಲ, ನೀವು ಚುನಾವಣೆಯ ಬಗ್ಗೆ ಕೇಳುತ್ತೀರಾ? ನೀವು ಪತ್ರಕರ್ತರಂತೆ ಮಾತನಾಡುತ್ತಿಲ್ಲ. ನೀವು ನಿರ್ದಿಷ್ಟ ಗುಂಪಿನ ಏಜೆಂಟರಂತೆ ಮಾತನಾಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಮೈಕ್‌ ಕಿತ್ತೆಸೆಯುತ್ತಾರೆ.

ಉತ್ತರ ಪ್ರದೇಶ ಮತ್ತು ಇನ್ನೂ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯು ಧರ್ಮ ಸಂಸದ್ ಬಗೆಗಿನ ಪ್ರಶ್ನೆಗಳನ್ನು ಎದುರಿಸುತ್ತಿದೆ. ಧರ್ಮ ಸಂಸತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಧಾರ್ಮಿಕ ಮುಖಂಡರು, ಹಿಂಸಾಚಾರ ಮತ್ತು ನರಮೇಧಕ್ಕೆ ಕರೆಗಳನ್ನು ನೀಡುತ್ತಾರೆ. ಈ ಧಾರ್ಮಿಕ ಮುಖಂಡರು ಆಡಳಿತ ಪಕ್ಷದೊಂದಿಗೆ ಒಡನಾಟದಲ್ಲಿದ್ದಾರೆ.

ಪ್ರೀಮಿಯರ್ ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ದ್ವೇಷ ಭಾಷಣಗಳ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಮೌನವು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮ ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುತ್ತದೆ. ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಮ್ಮನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಬಹಿರಂಗ ಪತ್ರದಲ್ಲಿ ಕೋರಲಾಗಿದೆ.


ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...