Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...