Homeಕರ್ನಾಟಕಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

- Advertisement -
- Advertisement -

ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ ಅವರ ಮೇಲೆ ಇದೇ ಗ್ರಾಮದ ನಿವಾಸಿಗಳಾದ ಸೃಶ್ಯ ಜಾತಿಯ ಬಸಪ್ಪ, ರೂಪಾ ಎಂಬವರು ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು

ಕೆ.ಆರ್‌.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 341, 323, 324, 504, 506, 354 (b) ಹಾಗೂ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಜನವರಿ 9, 2022ರಂದು ಘಟನೆ ನಡೆದಿದೆ. ಅಂದು ಚಲುವರಾಜು ಹಾಗೂ ಅವರ ಹೆಂಡತಿ ಚಂಪಕ ಬಿ.ಕೆ. ಅವರು ಬಳ್ಳೆಕೆರೆ ಗ್ರಾಮದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹೋಗಲೆಂದು ಗ್ರಾಮದ ಬಸಪ್ಪ ಅವರ ಅಂಗಡಿ ಮುಂದೆ ನಡೆದು ಹೋಗುತ್ತಿದ್ದರು. ಸ್ವಲ್ಪ ಅಂತರದಲ್ಲಿನ ಕಾಲುವೆಯ ಏರಿಯ ಮೇಲೆ ಹೋಗುತ್ತಿದ್ದಾಗ ಬಸಪ್ಪ ಮತ್ತು ಆತನ ಹೆಂಡತಿ ರೂಪಾ ಈ ದಲಿತ ದಂಪತಿಯ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ.

ಸಂತ್ರಸ್ತ ವ್ಯಕ್ತಿ ಚೆಲುವರಾಜು ದೂರು ನೀಡಿದ್ದು, “ನೀವು ಕೀಳು ಜಾತಿಯವರು. ನಮ್ಮ ಅಂಗಡಿಯ ಮುಂದೆ ಹೋದರೆ ಮೈಲಿಗೆಯಾಗುತ್ತದೆ. ಇಲ್ಲಿ ಹೋಗಬೇಡಿ ಎಂದು ಬಸಪ್ಪ ಮತ್ತು ರೂಪಾ ನಮ್ಮನ್ನು ಅಡ್ಡಗಟ್ಟಿದರು. ಅವ್ಯಾಚ್ಯ ಪದಗಳಿಂದ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು. ನನ್ನ ಹೆಂಡತಿಯನ್ನು ಅಶ್ಲೀಲವಾಗಿ ಬೈದರು. ನನ್ನ ಹೆಂಡತಿಯ ಜುಟ್ಟನ್ನು ಹಿಡಿದು ಎಳೆದಾಡಿ ಕಬ್ಬಿಣದ ಸಲಾಕೆಯಿಂದ ತಲೆಯ ಮೇಲೆ ಹೊಡೆದು ರಕ್ತ ಬರುವಂತೆ ಗಾಯಗೊಳಿಸಿದರು. ನಂತರ ಆಕೆಯ ಬಟ್ಟೆಯನ್ನು ಹರಿದುಹಾಕಿದ ಬಸಪ್ಪ ಅವಮಾನವನ್ನು ಮಾಡಿದ್ದಾನೆ” ಎಂದು ನೋವು ತೋಡಿಕೊಂಡಿದ್ದಾರೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

“ನನ್ನ ಹೆಂಡತಿಯನ್ನು ಬಿಡಿಸಿಕೊಳ್ಳಲು ಹೋದ ನನಗೂ ಬಸಪ್ಪನು ದೊಣ್ಣೆಯಿಂದ ಹೊಡೆದು ನನ್ನ ಅಂಗಿಯನ್ನು ಹರಿದುಹಾಕಿ ಕಾಲಿನಿಂದ ತುಳಿದನು. ನನ್ನ ಹೆಂಡತಿಯನ್ನು ಕೆಟ್ಟ ದೃಷ್ಟಿಯಿಂದ ನೋಡಿ ಬಸಪ್ಪ ಆಕೆಯನ್ನು ಎಳೆದಾಡಿ ಬಟ್ಟೆಯನ್ನು ಹರಿದುಹಾಕಿದ್ದಾನೆ. ಅಷ್ಟರಲ್ಲಿ ಗ್ರಾಮದ ಮುಖಂಡರು ಬಂದು ನಮ್ಮನ್ನು ರಕ್ಷಿಸಿದರು. ನನ್ನ ಹೆಂಡತಿಗೆ ಕೆ.ಆರ್‌.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ” ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.

ಕೆ.ಆರ್‌.ಪೇಟೆಯಲ್ಲಿ ಹೆಚ್ಚುತ್ತಿರುವ ದಲಿತ ದೌರ್ಜನ್ಯ

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಪದೇ ಪದೇ ಜಾತಿ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಲೇ ಇವೆ. ಇತ್ತೀಚೆಗೆ ಇಲ್ಲಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆಗಳಾಗಿದ್ದವು. ದಲಿತರು ದೇವಾಲಯ ಪ್ರವೇಶಿಸಿದ್ದಕ್ಕೆ ಸಂಬಂಧಿಸಿದಂತೆ ಸ್ಪಶ್ಯ ಜಾತಿಯವರು ಹಲ್ಲೆ ನಡೆಸಿದ್ದರು. 27 ಮಂದಿಯ ಮೇಲೆ ಪ್ರಕರಣ ದಾಖಲಾಗಿತ್ತು.

ಘಟನೆಯ ಬಳಿಕ ರಾಜೀ ಸಂಧಾನ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನವೂ ನಡೆದಿತ್ತು. ಒಂದು ತಿಂಗಳ ಅವಧಿಯೊಳಗೆ ಮತ್ತೊಂದು ಜಾತಿ ದೌರ್ಜನ್ಯ ಪ್ರಕರಣ ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇಲ್ಲಿ ಸ್ಪಶ್ಯ ಅನ್ನೋದರ ಬದಲು ಅವರು ಯಾವ ಜಾತಿ ಅನ್ನೋದನ್ನ ತಿಳಿಸಿಬಿಡಿ… ಮುಂದಿನ ದಿನಗಳಲ್ಲಿ ತಮ್ಮ ಜಾತಿಯ ಮಾನ ಹೋಗುತ್ತದೆ ಅನ್ನೋ ಕಾರಣಕ್ಕಾದರೂ ಸ್ವಲ್ಪ ಈ ರೀತಿಯ ಘಟನೆಗಳು ಕಡಿಮೆಯಾಗಬಹುದು.. ಇಂತಹ ಜಾತಿ- ಮತಗಳ ಹುಚ್ಚು ಹಿಡಿದವರಿಗೆ ಅವರ ಹಾದಿಯಲ್ಲೇ ಅವರಿಗೆ ಬುದ್ಧಿ ಕಲಿಸಬೇಕು….

  2. ಮಂಡ್ಯ ಜಿಲ್ಲೆಯ ನ್ನು ಇನ್ನೂ ,ಮುಂದೆ ಜಾತಿ ದೌರ್ಜನ್ಯ ದ ಜಿಲ್ಲೆ ಎಂದರೆ ತಪ್ಪಾಗಲಾರದು, ಅಲ್ಲಿಯ ಜಾತಿ ತಾರತಮ್ಯ ನೋಡಿದರೆ ಅಲ್ಲಿಯ ಜನರು ಹೊಟ್ಟೆಗೆ ಅನ್ನದ ಬದಲು ನಾಯಿಯ ಮಲ ತಿಂದು ಬದುಕುತ್ತಿದ್ದಾರೆ ಎಂದು ಅನಿಸುತಿದೆ ಈ ಮಾತು ಜಾತಿ ತಾರತಮ್ಯ ಮಾಡುವವರಿಗೆ ಅನ್ವಯಿಸುತ್ತದೆ .

  3. ಜಾತ್ಯತೀತ ಪರಿಕಲ್ಪನೆಯ ಭಾರತದಲ್ಲಿ ಈ ಶತಮಾನದಲ್ಲಾದರೂ ಈ ದರಿದ್ರದ ಜಾತಿಯ ಕೊಚ್ಚೆ ಕೊಚ್ಚಿಹೋಗಲಿ.
    ಅನೇಕ ಅನಕ್ಷರಸ್ಥರೇ ಇಂತಹ ಜಾತಿ ಎಬೋಲಾದಿಂದ ಬಳಲುತ್ತಿದ್ದಾರೆ ಎನ್ನುವುದು ಮತ್ತೂ ವಿಪರ್ಯಾಸದ ಸಂಗತಿ.

  4. ಇಂತಹ ವಿಷಯಗಳು ಸಮಾಜಕ್ಕೆ ಮಾರಕ ಪೊಲೀಸ್ ವ್ಯವಸ್ಥೆ ಸರಿಯಾಗಿ ಕೆಲಸ ನಿರ್ವಹಿಸಿ ತಾಲ್ಲೂಕು ಜಿಲ್ಲಾಡಳಿತಗಳು ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿದರೆ ಎಲ್ಲಾ ಸರಿ ಹೋಗತ್ತೆ

  5. ಈ ಜನಕ್ಕೆ ಬುದ್ಧಿ ಜೀವಿಗಳು ಅಲ್ಲದೆ ಬುದ್ಧ ಬಸವ ರಂಹ ತತ್ವ ಉಪದೇಶ ಗಳು ಕಲ್ಲು ಬಂಡೆಗಳ ಮನಸ್ಸಿಗಳಿಗೆ ,ಹೃದಯಗಳಿಗೆ ತಟ್ಟುವುದಿಲ್ಲ ಇಲ್ಲಿ ಯೆ ಶಿಲೆಯಾಗಿ ಉಳಿದು ಕೂತು ಕೂಳುತ್ತಾರೊ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...