Homeಕರ್ನಾಟಕನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

- Advertisement -
- Advertisement -

‘ವಿಜಯವಾಣಿ.ನೆಟ್‌‌’ ಎಂಬ ಕನ್ನಡದ ಸುದ್ದಿ ವೆಬ್‌ಸೈಟ್‌‌, ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರ ಬಗ್ಗೆಗಿನ ಸುದ್ದಿಯೊಂದಕ್ಕೆ ತೀರಾ ಅಸಂಬದ್ಧವಾದ ಹೆಡ್‌ಲೈ‌ನ್‌ ನೀಡಿ ‘ವಿಕೃತಿ’ ಮೆರೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಸುಕೇಶ್‌‌‌ ಚಂದ್ರಶೇಖರ್‌‌‌ ಅವರೊಂದಿಗೆ ಹಣ ವರ್ಗಾವಣೆ ಮಾಡಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ ಇತ್ತೀಚೆಗೆ ವಶಕ್ಕೆ ಪಡೆದುಕೊಂಡಿತ್ತು. ಜೊತೆಗೆ ದೇಶ ಬಿಟ್ಟು‌ ಹೊರ ಹೋಗದಂತೆ ನಟಿಗೆ ಸೂಚನೆ ಕೂಡಾ ನೀಡಿತ್ತು. ಈ ಮಧ್ಯೆ‌ ಸುಕೇಶ್‌ ಮತ್ತು ಜಾಕ್ವೆಲಿನ್ ಅವರ ಖಾಸಗಿಕ್ಷಣದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು.

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ: ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಶಕ್ಕೆ

ಇದರ ನಂತರ, ತನ್ನ ಖಾಸಗಿ ಕ್ಷಣದ ಚಿತ್ರಗಳನ್ನು ಪ್ರಸಾರ ಮಾಡದಂತೆ, ಈ ಹಿಂದೆ ಪತ್ರಕರ್ತೆ ಆಗಿಯೂ ಕೆಲಸ ನಿರ್ವಹಿಸಿದ್ದ ಜಾಕ್ವೆಲಿನ್ ಮಾಧ್ಯಮಗಳಿಗೆ ವಿನಂತಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿದ್ದರು.

ನಟಿಯ ಈ ಹೇಳಿಕೆಯ ಬಗ್ಗೆ ಅನೇಕ ಮಾಧ್ಯಮಗಳು ವರದಿ ಕೂಡಾ ಮಾಡಿದ್ದವು. ಅದರಂತೆ ಕನ್ನಡದ ಪತ್ರಿಕೆ ವಿಜಯವಾಣಿಯ ಆನ್‌ಲೈನ್ ರೂಪವಾದ, ‘ವಿಜಯವಾಣಿ.ನೆಟ್‌’ ಕೂಡಾ ಈ ಬಗ್ಗೆ ಸುದ್ದಿಯೊಂದನ್ನು ಜನವರಿ 9, 2022 ರಂದು ಮಾಡಿತ್ತು. ಜೊತೆಗೆ ತನ್ನದೆ ಸುದ್ದಿ ಜಾಲವಾದ ‘ದಿಗ್ವಿಜಯ ನ್ಯೂಸ್‌’ ನ ಫೇಸ್‌ಬುಕ್‌ ಪೇಜ್‌ನಲ್ಲೂ ಅದನ್ನು ಪ್ರಕಟಿಸಿತ್ತು.

ನಟಿಯ ಈ ಹೇಳಿಕೆಯ ಆಧಾರದಲ್ಲಿ ಸುದ್ದಿ ಪ್ರಕಟಿಸಿದ್ದ ‘ವಿಜಯವಾಣಿ.ನೆಟ್‌’ ಜಾಕ್ವೆಲಿನ್‌ ಹೇಳಿರದೇ ಇರುವ ವಾಕ್ಯವನ್ನು ಬಳಸಿ, ‘ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿ’ ಎಂದು ಹೆಡ್‌ಲೈನ್‌ನಲ್ಲೇ ನೇರವಾಗಿ ಬರೆದು ವಿಕೃತಿ ಮೆರೆದಿದೆ.

ಇಷ್ಟೇ ಅಲ್ಲದೆ, ಸುದ್ದಿಯ ಮೊದಲ ಪ್ಯಾರಾದಲ್ಲೂ, “ಕೋಟಿಗಟ್ಟಲೆ ಹಣವನ್ನು ಪಡೆದು ‘ತನ್ನದೆಲ್ಲಾ ಅರ್ಪಿಸಿಕೊಂಡಿರುವ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್’ ಈಗ ಭಾರಿ ಪೇಚಿಗೆ ಸಿಲುಕಿದ್ದಾರೆ” ಎಂದು ಬರೆದು ತನ್ನ ವಿಕೃತಿಯನ್ನು ಮತ್ತೇ ಪುನರಾವರ್ತಿಸಿದೆ. (ಇಡೀ ಸುದ್ದಿಯ ಆರ್ಕೈವ್‌ ಲಿಂಕ್ ಇಲ್ಲಿದೆ.)

ಇದನ್ನೂ ಓದಿ:200 ಕೋಟಿ ವಂಚನೆ ಪ್ರಕರಣ: ಬಾಲಿವುಡ್ ನಟಿ ನೋರಾ ಫತೇಹಿಗೆ ಸಮನ್ಸ್

ಸುದ್ದಿ ಜಾಲತಾಣಗಳು ತನ್ನ ಸುದ್ದಿಯನ್ನು ಓದುಗರನ್ನು ಸೆಳೆಯುವುದಕ್ಕಾಗಿ ಆಕರ್ಷಕ ಹೆಡ್‌ಲೈನ್‌ ನೀಡುವುದು ಸಾಮಾನ್ಯವಾಗಿದೆ. ಆದರೆ ವಿಜಯವಾಣಿ.ನೆಟ್‌ ಆಕರ್ಷಕ ಹೆಡ್‌ಲೈನ್‌ ಬರೆಯಲು ಹೋಗಿ ವಿಕೃತಿ ಮೆರೆದಿದೆ.

ವಿಜಯವಾಣಿ.ನೆಟ್‌‌ ಸುದ್ದಿಯ ಹೆಡ್‌ಲೈನ್‌

ವಿಜಯವಾಣಿ.ನೆಟ್‌‌ ತನ್ನ ಸುದ್ದಿಯ ಹೆಡ್‌ಲೈನ್‌ನಲ್ಲಿ, “ ‘ಅವ್ನು ಎಲ್ಲೆಲ್ಲೋ ಕಿಸ್‌ ಕೊಟ್ಟಿರೋ ದೃಶ್ಯ ಪ್ರಸಾರ ಮಾಡ್ಬೇಡಿ ಪ್ಲೀಸ್‌’ ಎಂದು ಹಣಕ್ಕಾಗಿ ಎಲ್ಲಾ ಅರ್ಪಿಸಿಕೊಂಡ ನಟಿಯ ಮನವಿ!” ಎಂದು ಬರೆದಿದೆ. ಆದರೆ ನಟಿ ತನ್ನ ಹೇಳಿಕೆಯಲ್ಲಿ ಎಲ್ಲೂ ಈ ರೀತಿಯಾಗಿ ಹೇಳಿಯೆ ಇಲ್ಲ.

ಇದನ್ನೂ ಓದಿ:ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ವಾಸ್ತವದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್‌‌ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದೇನು?

ದೇಶವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದ ನಟಿ, ‘‘ಈ ದೇಶ ಮತ್ತು ಇಲ್ಲಿನ ಜನರು ಯಾವಾಗಲೂ ನನಗೆ ಅಪಾರ ಪ್ರೀತಿ ಮತ್ತು ಗೌರವವನ್ನು ನೀಡಿದ್ದಾರೆ. ಇದರಲ್ಲಿ ನಾನು ಬಹಳಷ್ಟು ಕಲಿಯಲು ಸಹಾಯ ಮಾಡಿದ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ. ಸದ್ಯ ನಾನು ಬಹಳ ಕಷ್ಟದ ಸಮಯದಲ್ಲಿದ್ದೇನೆ. ಇದನ್ನೂ ನನ್ನ ಸ್ನೇಹಿತರು ಮತ್ತು ಅಭಿಮಾನಿಗಳು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನನಗೆ ಖಾತ್ರಿಯಿದೆ. ನನ್ನ ಗೌಪ್ಯತೆ ಮತ್ತು ವೈಯಕ್ತಿಕ ಬದುಕಿನ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸ್ನೇಹಿತರನ್ನು ವಿನಂತಿಸುತ್ತೇನೆ. ನೀವು ನಿಮ್ಮ ಪ್ರೀತಿಪಾತ್ರರಿಗೆ ಏನು ಮಾಡಲು ಬಯಸುವುಲ್ಲವೊ, ಹಾಗೆ ನನಗೂ ಮಾಡುವುದಿಲ್ಲ ಎಂಬ ನಂಬಿಕೆಯಿದೆ. ನ್ಯಾಯ ಮತ್ತು ಒಳ್ಳೆಯತನ ಮೇಲುಗೈ ಸಾಧಿಸುತ್ತದೆ ಎಂದು ಆಶಿಸುತ್ತೇನೆ. ಧನ್ಯವಾದಗಳು” ಎಂದು ಬರೆದಿದ್ದರು.

ನಟಿ ಜಾಕ್ವೆಲಿನ್ ಟ್ವೀಟ್

ಇದನ್ನೂ ಓದಿ:ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಸಾಮಾಜಿಕ ಜಾಲತಾಣದಲ್ಲಿ ಜಾಕ್ವೆಲಿನ್ ಅವರು, ನೀವು ನಿಮ್ಮ ಪ್ರೀತಿ ಪಾತ್ರರ ಖಾಸಗಿ ಚಿತ್ರಗಳನ್ನು ವೈರಲ್ ಮಾಡುವುದಿಲ್ಲವೋ, ಹಾಗೆಯೇ ನನ್ನ ಚಿತ್ರಗಳನ್ನೂ ವೈರಲ್ ಮಾಡಬೇಡಿ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ಮನವಿ ಮಾಡಿಕೊಂಡಿದ್ದರು.

ವಿಜಯವಾಣಿ.ನೆಟ್‌ ಸುದ್ದಿಯ ಈ ಹೆಡ್‌ಲೈನ್‌ಗೆ ಸಾಮಾಜಿಕ ಜಾಲತಣದಲ್ಲಿ ತೀವ್ರ ಆಕ್ರೋಶ ಕೂಡಾ ವ್ಯಕ್ತವಾಗಿದೆ.

ಪತ್ರಕರ್ತ ಅಲ್ಮೈಡಾ ಗ್ಲಾಡ್‌ಸನ್ ಅವರು, “ನ್ಯೂಸ್‌ ಡೆಸ್ಕ್‌ಗಳಲ್ಲಿ ಸ್ಯಾಡಿಸ್ಟ್‌ಗಳು, ಲಂಪಟರು, ಕಾಮುಕರು ತುಂಬಿದ್ದಾರೆ. ಇವರು ನಟಿಯ ಹೇಳಿಕೆಯನ್ನಷ್ಟೇ ತಿರುಚಿಲ್ಲ ಬದಲಾಗಿ ಕೊನೆಗೆ ತಮ್ಮ ಲಂಪಟತನದ ಪರಮಾವಧಿಯನ್ನು ತೋರಿಸಲು ‘ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿ’ ಎನ್ನುವ ಧೂರ್ತ ಹೇಳಿಕೆಯನ್ನೂ ಬರೆದು ಹಾಕಿದ್ದಾರೆ. ಇದರರ್ಥವೇನು? ಹಣಕ್ಕಾಗಿ ಎಲ್ಲವನ್ನೂ ಅರ್ಪಿಸಿಕೊಂಡ ನಟಿಯೆಂದರೆ ಏನು? ಈ ‘ಎಲ್ಲ’ದರ ಅರ್ಥವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...