Homeಕರ್ನಾಟಕಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಹೆಚ್ಚುತ್ತಿರುವ ದಲಿತರ ಮೇಲಿನ ಹಲ್ಲೆ: ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ

ಸೂಚನೆ: ‘ಎಲ್ಲರ ಕನ್ನಡ’ ಚರ್‍ಚೆಯ ಬಾಗವಾಗಿ ಮಾಡಲಾದ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಮಂಡ್ಯ ಜಿಲ್ಲೆಯಲ್ಲಿ ದಲಿತರ ಮೇಲೆ ಹೆಚ್ಚಾಗುತ್ತಿರುವ ಹಲ್ಲೆಗಳನ್ನು ಕಂಡಿಸಿ, ಸವರ್‍ಣೀಯರ ದಬ್ಬಾಳಿಕೆಯನ್ನು ತಡೆಯಬೇಕೆಂದು ಆಗ್ರಹಿಸಿ ದಲಿತ ಮುಖಂಡರು ಕೆ.ಆರ್‌.ಪೇಟೆಯಲ್ಲಿ ಪ್ರತಿಬಟನೆ ನಡೆಸಿದ್ದಾರೆ.

ಕೆ.ಆರ್‌.ಪೇಟೆ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳ ಅವದಿಯಲ್ಲಿ ಎರಡು ಬಾರಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ನಡೆದಿವೆ. ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಲಾಗಿತ್ತು. ದೇವಾಲಯ ಪ್ರವೇಶಿಸಿದ್ದರಿಂದ ಸವರ್‍ಣೀಯರು ಹಲ್ಲೆ ನಡೆಸಿರುವುದಾಗಿ 27 ಜನರ ಮೇಲೆ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದಲ್ಲಿ ಹಲ್ಲೆ ನಡೆದಿದ್ದು ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಅಲ್ಲದೆ ದಲಿತರಿಗೆ ಕ್ಶೌರ ಮಾಡುವುದಿಲ್ಲ ಎಂದು ಸವಿತಾ ಸಮಾಜದ ವ್ಯಕ್ತಿಯೊಬ್ಬರು ಹೇಳುತ್ತಿರುವ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು.

ಪದೇ ಪದೇ ಇಂತಹ ಪ್ರಕರಣಗಳು ಜರುಗುತ್ತಿರುತ್ತಿರುವುದನ್ನು ದಲಿತ ಮುಕಂಡರು ಖಂಡಿಸಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಪ್ರವಾಸಿ ಮಂದಿರ ಬಳಿ ಸೇರಿ ಪ್ರತಿಬಟನೆ ನಡೆಸಿದ್ದಾರೆ.

ರಾಜ್ಯ ಮಾದಿಗ ಸಮಾಜ ಸಂಗಟನೆಯ ಕೆ.ಆರ್‌.ಪೇಟೆ ತಾಲೂಕು ಅದ್ಯಕ್ಷರಾದ ಹೊಸಹೊಳಲು ದೇವರಾಜು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದರೂ ಪೋಲೀಸ್ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಶಣೆ ಕೊಡುವುದರಲ್ಲಿ ವಿಪಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನಗಳಲ್ಲಿ ಅದಿಕಾರಿಗಳ ನಿರ್ಲಕ್ಶ್ಯ ಮುಂದುವರಿದರೆ ತಾಲ್ಲೂಕಿನ ಎಲ್ಲಾ ದಲಿತ ಸಂಗಟನೆಗಳ ಜೊತೆ ಸೇರಿ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಚಲವಾದಿ ಮಹಾಸಬಾದ ಜಿಲ್ಲಾದ್ಯಕ್ಷರಾದ ಮಾಂಬಳ್ಳಿ ಜಯರಾಂ ಮಾತನಾಡಿ, “ತಾಲ್ಲೂಕಿನ ಶೀಳನೆರೆ ಹೋಬಳಿ ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಯ ಮೇಲೆ ಸವರ್‍ಣೀಯ ಪುರುಷನು ತನ್ನ ಪತ್ನಿಯ ಜೊತೆ ಸೇರಿ ಕ್ಶುಲ್ಲಕ ಕಾರಣಕ್ಕಾಗಿ ಮಾರಣಾಂತಿಕ ಹಲ್ಲೆ ನಡೆಸಿದ್ದು, ತಪ್ಪಿತಸ್ತರನ್ನು ಕೂಡಲೇ ಬಂದಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂಬಕ್ಕೆ ಪೋಲೀಸ್ ಅದಿಕಾರಿಗಳು ರಕ್ಷಣೆ ನೀಡಬೇಕು” ಎಂದು ಆಗ್ರಹಿಸಿದರು.

ಕೆ.ಆರ್‌.ಪೇಟೆ ತಾಲ್ಲೂಕು ಡಾ.ಜಗಜೀವನರಾಂ ಸಂಗಟನೆಗಳ ಒಕ್ಕೂಟದ ಅದ್ಯಕ್ಷರಾದ ಹೊಸಹೊಳಲು ಪುಟ್ಟರಾಜು ಮಾತನಾಡಿ, “ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ದಲಿತರನ್ನು ಕೀಳಾಗಿ ನೋಡುತ್ತಿದ್ದಾರೆ. ನಾವು ಸಹ ಮನುಷ್ಯರಲ್ಲವೇ?” ಎಂದು ಪ್ರಶ್ನಿಸಿದರು.

“ನಮಗೂ ಹೋರಾಟ ನಡೆಸುವ ಶಕ್ತಿ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಬರೆದಿರುವ ಸಂವಿದಾನದ ಮೇಲೆ ಗೌರವವಿರುವುದರಿಂದ ನಾವು ಯಾರ ಮೇಲೂ ದಬ್ಬಾಳಿಕೆ ಮಾಡದೇ ನ್ಯಾಯಯುತವಾಗಿ ನಡೆದುಕೊಳ್ಳುತ್ತಿದ್ದೇವೆ. ಆದ್ದರಿಂದ ಒಂದು ತಿಂಗಳಿಗೊಮ್ಮೆಯಾದರೂ ದಲಿತರ ಕುಂದುಕೊರತೆಗಳನ್ನು ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಬೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕು” ಎಂದು ಆಗ್ರಹಿಸಿದರು.

ಇದೇ ಸಂದರ್ಬದಲ್ಲಿ ಕೆ.ಆರ್‌.ಪೇಟೆ ತಾಲೂಕು ದಲಿತ ಸಂಗಟನೆಯ ಸದಸ್ಯರು, ತಾಲೂಕು ಆಡಳಿತ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಬದಲ್ಲಿ ತಾ.ಪಂ.ಮಾಜಿ ಅದ್ಯಕ್ಷರಾದ ಸೋಮಯ್ಯ, ಕೂಡಲಕುಪ್ಪೆ ರಾಜಯ್ಯ, ಕಜಾಂಚಿ ಪುಟ್ಟರಾಜು, ತಾ.ಸಂ. ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾದ್ಯಕ್ಷರಾದ ಮೋಹನ್, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್, ಗ್ರಾ.ಪಂ. ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕು ದಲಿತ ಸಂಗಟನೆಯ ನೂರಾರು ಸದಸ್ಯರು ಪ್ರತಿಬಟನೆಯಲ್ಲಿ ಪಾಲ್ಗೊಂಡಿದ್ದರು.


ಇದನ್ನೂ ಓದಿರಿ: ಜಮ್ಮು-ಕಾಶ್ಮೀರ: ಪತ್ರಕರ್‍ತ ಗುಲ್‌ ಬಿಡುಗಡೆಗೆ ಪ್ರೆಸ್‌ ಕ್ಲಬ್‌ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಲ್ಲರ ಕನ್ನಡದಲ್ಲಿ, ಮೊದಲ ಹಂತದಲ್ಲಿ,
    ೧) ಋ,ಐ,ಔ,ಃಃ
    ೨) ಮಹಾಪ್ರಾಣಗಳು
    ೩) ಙ,ಞ,ಷ
    ಬಳಸಬಾರದು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...