Homeಮುಖಪುಟಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ಅರೆಸ್ಟ್‌‌ ವಾರೆಂಟ್‌‌!

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನದಲ್ಲಿ ಅರೆಸ್ಟ್‌‌ ವಾರೆಂಟ್‌‌!

- Advertisement -
- Advertisement -

ಉತ್ತರ ಪ್ರದೇಶದ ಆದಿತ್ಯನಾಥ್ ಸರ್ಕಾರವನ್ನು ತೊರೆದು ಬಿಜೆಪಿಯಿಂದ ಹೊರ ನಡೆಯುವುದಾಗಿ ಹೇಳಿದ್ದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು, 2014 ರಲ್ಲಿ ಮಾಡಿದ್ದ ದ್ವೇಷದ ಭಾಷಣದ ಮೇಲೆ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದೇ ದಿನಕ್ಕೆ ಸುಲ್ತಾನ್‌ಪುರದಲ್ಲಿ ಅವರ ಬಂಧನಕ್ಕೆ ವಾರಂಟ್ ಹೊರಡಿಸಲಾಗಿದೆ.

ಈ ಪ್ರಕರಣದಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸ್ವಾಮಿ ಪ್ರಸಾದ್‌ ಅವರನ್ನು ಕೇಳಲಾಗಿತ್ತು, ಆದರೆ ಅವರು ಹಾಜರಾಗಿರಲಿಲ್ಲ. ಇದೀಗ ಪ್ರಕರಣದಲ್ಲಿ ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅವರನ್ನು ಈಗ ಕೇಳಲಾಗಿದೆ. ಪ್ರಕರಣದ ದಾಖಲಾಗಿದ್ದಾಗ ಅವರು ಮಾಯಾವತಿ ನಾಯಕತ್ವದ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ದಲ್ಲಿ ಇದ್ದರು.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ಮದುವೆಯ ಸಂದರ್ಭದಲ್ಲಿ ಗೌರಿ ಅಥವಾ ಗಣೇಶನನ್ನು ಪೂಜಿಸಬಾರದು. ಇದು ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದಾರಿತಪ್ಪಿಸಲು ಮತ್ತು ಗುಲಾಮರನ್ನಾಗಿ ಮಾಡಲು ಮೇಲ್ಜಾತಿಗಳ ಪಿತೂರಿಯಾಗಿದೆ ಎಂದು ಸ್ವಾಮಿ ಪ್ರಸಾದ್‌ ಅವರು ಸಭೆಯೊಂದರಲ್ಲಿ ಹೇಳಿದ್ದರು.

2016 ರಲ್ಲಿ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಹೊರಡಿಸಿದ್ದ ವಾರಂಟ್ ಅನ್ನು ತಡೆಹಿಡಿದಿತ್ತು. ಅಂದಿನಿಂದ ಈ ಪ್ರಕರಣದಲ್ಲಿ ಹಲವು ವಿಚಾರಣೆಗಳು ನಡೆದಿವೆ.

ಜನವರಿ 6 ರಂದು ಸುಲ್ತಾನ್‌ಪುರ ನ್ಯಾಯಾಲಯ ಜನವರಿ 12 ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿತ್ತು. ಅವರು ಇಂದು ಹಾಜರಾಗದೇ ಇದ್ದುದಕ್ಕೆ ಇಂದು ನ್ಯಾಯಾಲಯವು ಅವರ ವಾರೆಂಟ್‌ ಅನ್ನು ನವೀಕರಿಸಿದೆ.

ಇದನ್ನೂ ಓದಿ:ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಪ್ರತ್ಯೇಕ ಜೈಲು ಆವರಣ ನಿರ್ಮಿಸಿ: ರಾಜ್ಯಗಳಿಗೆ ಒಕ್ಕೂಟ ಸರ್ಕಾರ

ಹಿಂದುಳಿದ ಜಾತಿಯ ಪ್ರಬಲ ನಾಯಕರಾದ ಸ್ವಾಮಿ ಪ್ರಸಾದ್‌ ಅವರು ಉತ್ತರ ಪ್ರದೇಶವು ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಿಗೆ ಸರ್ಕಾರದಿಂದ ಹೊರನಡೆದು ಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ. ತಮ್ಮೊಂದಿಗೆ ಇನ್ನಷ್ಟು ಸಚಿವರು ಮತ್ತು ಶಾಸಕರನ್ನು ಕರೆದುಕೊಂಡು ಹೋಗುವುದಾಗಿ ಬೆದರಿಕೆ ಕೂಡಾ ಹಾಕಿದ್ದಾರೆ; ಇವರ ನಂತರ ಈಗಾಗಲೇ ಐವರು ರಾಜೀನಾಮೆ ನೀಡಿದ್ದಾರೆ.

ನನ್ನ ನಡೆಯು ಬಿಜೆಪಿಯಲ್ಲಿ ಭೂಕಂಪ ಉಂಟುಮಾಡಿದೆ ಎಂದು ಹೇಳಿರುವ ಅವರು, “ನಾನು ಸಚಿವ ಸ್ಥಾನವನ್ನು ಮಾತ್ರ ತ್ಯಜಿಸಿದ್ದೇನೆ. ಶೀಘ್ರದಲ್ಲೇ ಬಿಜೆಪಿಯನ್ನು ತೊರೆಯುತ್ತೇನೆ. ಸದ್ಯಕ್ಕೆ ನಾನು ಸಮಾಜವಾದಿ ಪಕ್ಷಕ್ಕೆ ಸೇರುತ್ತಿಲ್ಲ” ಎಂದು ಸ್ವಾಮಿ ಪ್ರಸಾದ್‌‌ ಹೇಳಿದ್ದು, ಶುಕ್ರವಾದಂದು ಈ ಬಗ್ಗೆ ಬಹಿರಂಗ ಪಡಿಸುವುದಾಗಿ ಹೇಳಿದ್ದಾರೆ.

‘‘ನಾನು ಬಿಜೆಪಿಯನ್ನು ತಿರಸ್ಕರಿಸಿದ್ದೇನೆ… ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’’ ಎಂದು ಅವರು ಘೋಷಿಸಿದ್ದಾರೆ.

ಸ್ವಾಮಿ ಪ್ರಸಾದ್‌ ಅವರು ಎರಡು ತಿಂಗಳ ಹಿಂದೆ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಆದಿತ್ಯನಾಥ್ ಅವರ ಕಾರ್ಯಶೈಲಿಯ ಬಗ್ಗೆ ದೂರು ನೀಡಿದ್ದರು ಎಂದು ವರದಿಯಾಗಿದೆ. ಆದರೆ ಕೇಂದ್ರ ನಾಯಕತ್ವವು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...