Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...